Homeಮುಖಪುಟಮುನಂಬಂ ಭೂ ವಿವಾದ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇರಳ ವಕ್ಫ್ ಸಂರಕ್ಷಣಾ ವೇದಿಕೆ

ಮುನಂಬಂ ಭೂ ವಿವಾದ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇರಳ ವಕ್ಫ್ ಸಂರಕ್ಷಣಾ ವೇದಿಕೆ

- Advertisement -
- Advertisement -

ಮುನಂಬಂ ವಕ್ಫ್ ಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಕೇರಳ ವಕ್ಫ್ ಸಂರಕ್ಷಣಾ ವೇದಿಕೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಮುನಂಬಮ್‌ನಲ್ಲಿರುವ ಆಸ್ತಿಯನ್ನು ವಕ್ಫ್ ಎಂದು ಘೋಷಿಸಿದ ನಂತರ ತೆರವು ಎದುರಿಸುತ್ತಿರುವ ಸುಮಾರು 600 ಕುಟುಂಬಗಳ ಹಕ್ಕುಗಳನ್ನು ಪರಿಶೀಲಿಸಲು ರಾಜ್ಯ ಸರ್ಕಾರ ರಚಿಸಿದ್ದ ತನಿಖಾ ಆಯೋಗವನ್ನು ಎತ್ತಿಹಿಡಿದ ಕೇರಳ ಹೈಕೋರ್ಟ್‌ನ ತೀರ್ಪನ್ನು ಕೇರಳ ವಕ್ಫ್ ಸಂರಕ್ಷಣಾ ವೇದಿಕೆ ಪ್ರಶ್ನಿಸಿದೆ.

ವಿವಾದಕ್ಕೆ ಪರಿಹಾರಗಳನ್ನು ಶಿಫಾರಸು ಮಾಡಲು ನಿವೃತ್ತ ನ್ಯಾಯಮೂರ್ತಿ ಸಿ.ಎನ್. ರಾಮಚಂದ್ರನ್ ನಾಯರ್ ನೇತೃತ್ವದ ತನಿಖಾ ಆಯೋಗವನ್ನು ರಚಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ್ದ ಏಕಸದಸ್ಯ ನ್ಯಾಯಾಧೀಶರ ಆದೇಶವನ್ನು ಅಕ್ಟೋಬರ್ 10ರಂದು, ಹೈಕೋರ್ಟ್‌ನ ವಿಭಾಗೀಯ ಪೀಠ ರದ್ದುಗೊಳಿಸಿತ್ತು. ಈ ಮೂಲಕ ರಾಜ್ಯ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿತ್ತು.

ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾದ ವಿಶೇಷ ರಜಾ ಅವಧಿಯ ಅರ್ಜಿಯಲ್ಲಿ ಕೇರಳ ವಕ್ಫ್ ಸಂರಕ್ಷಣಾ ವೇದಿಕೆಯು, ವಕ್ಫ್ ನ್ಯಾಯಮಂಡಳಿಯ ಮುಂದೆ ವಿಚಾರಣೆಗಳು ಬಾಕಿ ಇವೆ ಎಂಬ ಅಂಶವನ್ನು ನಿರ್ಲಕ್ಷಿಸುವ ಮೂಲಕ ವಿಭಾಗೀಯ ಪೀಠವು ತನ್ನ ಅಧಿಕಾರ ವ್ಯಾಪ್ತಿಯನ್ನು ಉಲ್ಲಂಘಿಸಿದೆ ಎಂದು ವಾದಿಸಿದೆ. ತನಿಖಾ ಆಯೋಗದ ಪರ ಆದೇಶ ನೀಡುವ ಮೂಲಕ ಸರ್ಕಾರದ ಅತಿಕ್ರಮಣವನ್ನು ಕಾನೂನುಬದ್ಧಗೊಳಿಸಿದೆ ಮತ್ತು ವಿಚಾರಣೆಯ ವಿಷಯವೇ ಆಗಿರದ ವಿವಾದಿತ ಆಸ್ತಿಯ ಸ್ವರೂಪದ ಬಗ್ಗೆ ಹೈಕೋರ್ಟ್ ತನ್ನ ತೀರ್ಪಿನಲ್ಲಿ ಅನಗತ್ಯವಾಗಿ ತನ್ನ ಅಭಿಪ್ರಾಯವನ್ನು ಅಥವಾ ಸ್ಥಿರೀಕರಣಗಳನ್ನು ನೀಡಿದೆ ಎಂದಿದೆ.

ಈ ವಿವಾದವು ಮುನಂಬಮ್‌ನಲ್ಲಿರುವ ವಕ್ಫ್‌ ಭೂಮಿಗೆ ಸಂಬಂಧಿಸಿದೆ. ಮೂಲತಃ 404.76 ಎಕರೆಗಳಷ್ಟು ವಿಸ್ತೀರ್ಣ ಹೊಂದಿದ್ದ ವಿವಾದಿತ ಭೂಮಿ, ಸಮುದ್ರ ಕೊರೆತದಿಂದಾಗಿ ಈಗ ಸುಮಾರು 135.11 ಎಕರೆಗಳಿಗೆ ಇಳಿದಿದೆ.

1950ರಲ್ಲಿ, ಸಿದ್ದಿಕ್ ಸೇಠ್ ಎಂಬುವವರು ಈ ಭೂಮಿಯನ್ನು ಫಾರೂಕ್ ಕಾಲೇಜಿಗೆ ದಾನವಾಗಿ ನೀಡಿದ್ದರು. ಆದರೆ, ಈಗ ಆ ಭೂಮಿ ಹಲವಾರು ಜನರಿಗೆ ನೆಲೆಯಾಗಿದ್ದು, ಈ ಜನರು ಭೂಮಿಯನ್ನು ಅತಿಕ್ರಮಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇದು ಕಾಲೇಜು ಮತ್ತು ದೀರ್ಘಕಾಲದಿಂದ ಅಲ್ಲಿ ವಾಸಿಸುತ್ತಿದ್ದವರ ನಡುವೆ ಕಾನೂನು ಹೋರಾಟಕ್ಕೆ ಕಾರಣವಾಗಿದೆ.

ಈ ನಡುವೆ, ಕಾಲೇಜು ಭೂಮಿಯ ಕೆಲವು ಭಾಗಗಳನ್ನು ಅಲ್ಲಿನ ನಿವಾಸಿಗಳಿಗೆ ಮಾರಾಟ ಮಾಡಲಾಗಿದೆ. ಮಾರಾಟದ ವೇಳೆ ಆಸ್ತಿ ವಕ್ಫ್ ಭೂಮಿ ಎಂದು ನಮೂದಿಸಲು ವಿಫಲವಾಗಿದೆ ಎಂದು ಹೇಳಲಾಗ್ತಿದೆ.

2019ರಲ್ಲಿ, ಕೇರಳ ವಕ್ಫ್ ಮಂಡಳಿ (ಕೆಡಬ್ಲ್ಯುಬಿ) ಭೂಮಿಯನ್ನು ವಕ್ಫ್ ಆಸ್ತಿಯಾಗಿ ಔಪಚಾರಿಕವಾಗಿ ನೋಂದಾಯಿಸಿದೆ. ಇದರಿಂದಾಗಿ ಹಿಂದಿನ ಮಾರಾಟಗಳು ಅನೂರ್ಜಿತಗೊಂಡಿವೆ. ಆ ಬಳಿಕ ವಕ್ಫ್‌ ಭೂಮಿಯಿಂದ ತೆರವುಗೊಳಿಸುವ ಆತಂಕ ಎದುರಿಸುತ್ತಿರುವ ಜನರು ಕಾನೂನು ಮತ್ತು ಕಾನೂನೇತರ ಹೋರಾಟಗಳನ್ನು ನಡೆಸುತ್ತಿದ್ದಾರೆ.

ಮುನಂಬಂ ಭೂಮಿಯನ್ನು ವಕ್ಫ್ ಎಂದು ವರ್ಗೀಕರಿಸುವ ಕೆಡಬ್ಲ್ಯೂಬಿ ನಿರ್ಧಾರವನ್ನು ಪ್ರಶ್ನಿಸಿ ಕೋಝಿಕ್ಕೋಡ್‌ನಲ್ಲಿರುವ ವಕ್ಫ್ ನ್ಯಾಯಮಂಡಳಿಯ ಮುಂದೆ ಮೇಲ್ಮನವಿ ಸಲ್ಲಿಸಲಾಗಿದೆ.

ಈ ನಡುವೆ, ಸುಮಾರು 600 ಕುಟುಂಬಗಳಿಂದ ಹೆಚ್ಚುತ್ತಿರುವ ಪ್ರತಿಭಟನೆಗಳಿಗೆ ಪ್ರತಿಕ್ರಿಯೆಯಾಗಿ, ಕೇರಳ ಸರ್ಕಾರವು ಪರಿಹಾರಗಳನ್ನು ಶಿಫಾರಸು ಮಾಡಲು ನಿವೃತ್ತ ನ್ಯಾಯಮೂರ್ತಿ ಸಿ.ಎನ್. ರಾಮಚಂದ್ರನ್ ನಾಯರ್ ನೇತೃತ್ವದಲ್ಲಿ 2024ರ ನವೆಂಬರ್‌ನಲ್ಲಿ ತನಿಖಾ ಆಯೋಗವನ್ನು ನೇಮಿಸಿದೆ.

ಇದನ್ನು ಕೇರಳ ವಕ್ಫ್ ಸಂರಕ್ಷಣಾ ಸಮಿತಿಯ ಸದಸ್ಯರು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಅವರು ಕಾನೂನಿನ ಹೊರಗಿನ ವಕ್ಫ್ ಆಸ್ತಿಗಳನ್ನು ತನಿಖೆ ಮಾಡಲು ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ವಾದಿಸಿದ್ದರು.

ಈ ವರ್ಷದ ಮಾರ್ಚ್‌ನಲ್ಲಿ ಏಕ ಸದಸ್ಯ ನ್ಯಾಯಾಧೀಶರು ಆಯೋಗದ ನೇಮಕ ಆದೇಶವನ್ನು ರದ್ದುಗೊಳಿಸಿ, ಅಂತಹ ಆಯೋಗವು 1995 ರ ವಕ್ಫ್ ಕಾಯ್ದೆಯಡಿಯಲ್ಲಿ ಈಗಾಗಲೇ ನಿರ್ಣಯಿಸಲಾದ ಅಥವಾ ಬಾಕಿ ಇರುವ ವಿಷಯಗಳಲ್ಲಿ ಮಧ್ಯಪ್ರವೇಶಿಸಲು ಕಾನೂನು ಅಧಿಕಾರವನ್ನು ಹೊಂದಿಲ್ಲ ಎಂದು ತೀರ್ಪು ನೀಡಿದ್ದರು.

ಆದರೆ, ಅಕ್ಟೋಬರ್‌ನಲ್ಲಿ ವಿಭಾಗೀಯ ಪೀಠವು ಏಕ ಸದಸ್ಯ ನ್ಯಾಯಾಧೀಶರ ತೀರ್ಪಿನ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಅಂಗೀಕರಿಸಿದೆ. ಮುನಂಬಮ್‌ನಲ್ಲಿರುವ ವಿವಾದಿತ ಆಸ್ತಿಯನ್ನು ವಕ್ಫ್ ಎಂದು ಘೋಷಿಸುವ ಕೆಡಬ್ಲ್ಯೂಬಿಯ 2019 ರ ನಿರ್ಧಾರವು ಕಾನೂನುಬಾಹಿರವಾಗಿದೆ ಎಂದು ಹೇಳಿದೆ.

ವಿಭಾಗೀಯ ಪೀಠವು ಕೆಡಬ್ಲ್ಯೂಬಿಯ ನಿರ್ಧಾರವನ್ನು ರದ್ದುಗೊಳಿಸಿಲ್ಲ. ಆದರೆ, ಆಸ್ತಿಯನ್ನು ಫಾರೂಕ್ ಕಾಲೇಜಿಗೆ ನೀಡಿದ 1950ರ ಪತ್ರವು ವಕ್ಫ್ ಪತ್ರವಲ್ಲ, ಉಡುಗೊರೆ ಪತ್ರವಾಗಿದೆ ಎಂದು ತೀರ್ಪು ನೀಡಿದೆ. ಭೂಮಿಯನ್ನು ವಕ್ಫ್ ಎಂದು ಅಧಿಸೂಚನೆ ಮಾಡುವುದು ಕೆಡಬ್ಲ್ಯೂಬಿಯ ಭೂಕಬಳಿಕೆ ತಂತ್ರವಲ್ಲದೆ ಬೇರೇನೂ ಅಲ್ಲ ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...