Homeಮುಖಪುಟಬಿಜೆಪಿ ಆಗ್ರಹದ ಬಳಿಕ ಮುನಾವರ್‌ ಫಾರೂಖಿಯ ಮತ್ತೊಂದು ಕಾರ್ಯಕ್ರಮ ರದ್ದು

ಬಿಜೆಪಿ ಆಗ್ರಹದ ಬಳಿಕ ಮುನಾವರ್‌ ಫಾರೂಖಿಯ ಮತ್ತೊಂದು ಕಾರ್ಯಕ್ರಮ ರದ್ದು

- Advertisement -
- Advertisement -

ಹೊಸದಿಲ್ಲಿ: ಡಿಸೆಂಬರ್ 19ರಂದು ಗುರ್ಗಾಂವ್ ಕಾಮಿಡಿ ಫೆಸ್ಟಿವಲ್‌ನಲ್ಲಿ ನಿಗದಿಯಾಗಿದ್ದ ಹಾಸ್ಯನಟ ಮುನಾವರ್‌ ಫಾರೂಖಿ ಅವರ ಕಾರ್ಯಕ್ರಮವನ್ನು ಸಂಘಟಕರು ರದ್ದುಗೊಳಿಸಲಾಗಿದೆ.

ಫಾರೂಖಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಹಲವಾರು ಕರೆಗಳು ಬಂದ ಬಳಿಕ ಕ್ರಮ ಜರುಗಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಫಾರೂಖಿಯವರು ವೇದಿಕೆಗೆ ಬರದಂತೆ ತಡೆಯಲು ಹರಿಯಾಣದ ಬಿಜೆಪಿ ಐಟಿ ಸೆಲ್ ಮುಖ್ಯಸ್ಥರು ಪೊಲೀಸರನ್ನು ಸಂಪರ್ಕಿಸಿ ಒತ್ತಾಯಿಸಿದ ಬಳಿಕ ಈ ನಿರ್ಧಾರ ಹೊರಬಿದ್ದಿದೆ. ಎಸಿಪಿ (ಸೋಹ್ನಾ) ಅವರಿಗೆ ನೀಡಿದ ದೂರಿನಲ್ಲಿ ಬಿಜೆಪಿಯ ಮುಖಂಡ ಅರುಣ್ ಯಾದವ್, ಫಾರೂಖಿ ಹಿಂದೂ ದೇವರು ಮತ್ತು ದೇವತೆಗಳನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾರ್ಯಕ್ರಮದ ಸಂಘಟಕರಾದ ಎಂಟರ್‌ಟೈನ್‌ಮೆಂಟ್ ಫ್ಯಾಕ್ಟರಿ (TEF), ಫಾರೂಖಿ ಹೆಸರನ್ನು ಕೈಬಿಡಲಾಗಿದೆ ಎಂದು ಟೈಮ್ಸ್‌ ಆಫ್‌ ಇಂಡಿಯಾಕ್ಕೆ ತಿಳಿಸಿದೆ.

ಪ್ರದರ್ಶನಕ್ಕೆ ಅಡ್ಡಿಯಾಗಲಿದೆ ಎಂದು ಸಂಘಟಕರಿಗೆ ಕರೆಗಳು ಬಂದಿದ್ದು, ನಂತರ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಮೂಲಗಳು ಪತ್ರಿಕೆಗೆ ತಿಳಿಸಿವೆ. “ಮುನಾವರ್ ಅವರನ್ನು ಡ್ರಾಪ್ ಮಾಡುವಂತೆ ನಿನ್ನೆಯಿಂದ (ಭಾನುವಾರ) ನಮಗೆ ಹಲವು ಕರೆಗಳು ಬಂದಿದ್ದವು. ನಮ್ಮ ಕೆಲಸ ಜನರನ್ನು ರಂಜಿಸುವುದು ಮತ್ತು ನಾವು ಯಾವುದೇ ವಿವಾದವನ್ನು ಬಯಸುವುದಿಲ್ಲ. ಆದ್ದರಿಂದ, ಸಾರ್ವಜನಿಕರನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ” ಎಂದು ಕಾರ್ಯಕ್ರಮ ಸಂಘಟಕ ಮುಬಿನ್ ಟಿಸೇಕರ್ ಟೈಮ್ಸ್‌ ಆಫ್‌ ಇಂಡಿಯಾಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಫಾರೂಖಿ ಅವರ ಕಾರ್ಯಕ್ರಮವು ಸೆಕ್ಟರ್ 68ರ ಗುರುಗ್ರಾಮ್‌ನ ಏರಿಯಾ ಮಾಲ್‌ನಲ್ಲಿ ನಡೆಯಬೇಕಿತ್ತು. ಕಳೆದ ವಾರ, ಫಾರೂಖಿಯವರನ್ನು “ವಿವಾದಾತ್ಮಕ ವ್ಯಕ್ತಿ” ಎಂದು ಕರೆದು “ಕಾನೂನು ಮತ್ತು ಸುವ್ಯವಸ್ಥೆ” ನೆಪದಲ್ಲಿ ಪೊಲೀಸರು ಸಂಘಟಕರಿಗೆ ಪತ್ರ ಬರೆದ ನಂತರ ಬೆಂಗಳೂರಿನಲ್ಲಿ ಕಾರ್ಯಕ್ರಮ ರದ್ದುಗೊಳಿಸಲಾಯಿತು. ನಂತರ, ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಫಾರೂಖಿ, ‘ನಫ್ರತ್ ಜೀತ್ ಗೈ, ಆರ್ಟಿಸ್ಟ್ ಹಾರ್ ಗಯಾ (ದ್ವೇಷ ಗೆದ್ದಿದೆ, ಕಲಾವಿದ ಸೋತಿದ್ದಾನೆ). ನಾನು ಮುಗಿಸಿದ್ದೇನೆ! ವಿದಾಯ” ಎಂದು ಬರೆದುಕೊಂಡಿದ್ದರು.

ಬಿಜೆಪಿ ಶಾಸಕಿ ಮಾಲಿನಿ ಸಿಂಗ್ ಗೌಡ್ ಅವರ ಪುತ್ರ ಏಕಲವ್ಯ ಸಿಂಗ್ ಗೌಡ್ ನೀಡಿದ ದೂರಿನ ಮೇರೆಗೆ ಜನವರಿ 1ರಂದು ಇಂದೋರ್‌ನ ಕೆಫೆಯಲ್ಲಿ ಫಾರೂಖಿಯವರನ್ನು ಬಂಧಿಸಲಾಗಿತ್ತು. ದೂರುದಾರರು ‘ಹಿಂದೂ ರಕ್ಷಕ ಸಂಘಟನೆ’ ಎಂಬುದರ ಮುಖ್ಯಸ್ಥರಾಗಿದ್ದರು.

ಫಾರೂಖಿ ಅವರು ತಮ್ಮ ಕಾರ್ಯಕ್ರಮದ ಪೂರ್ವಾಭ್ಯಾಸದ ಸಮಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ, ಹಿಂದೂ ದೇವರುಗಳು ವಿರುದ್ಧ ಹಾಸ್ಯ ಮಾಡಿದ್ದಾರೆ ಎಂದು ಗೌಡ್ ಆರೋಪಿಸಿದ್ದರು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ಪೊಲೀಸರು ಫಾರೂಖಿ ವಿರುದ್ಧ ಐಪಿಸಿ ಸೆಕ್ಷನ್ 295ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

“ಇದು ಫಾರೂಖಿ ಅವರ ವಾಕ್ ಸ್ವಾತಂತ್ರ್ಯದ ಮೇಲೆ ಮಾತ್ರವಲ್ಲ, ಎಲ್ಲ ಹಾಸ್ಯ ಕಲಾವಿದರ ಸ್ವಾತಂತ್ರ್ಯದ ಮೇಲೆ ನಡೆದ ನೇರ ದಾಳಿಯಾಗಿದೆ” ಎಂದು ಸುಪ್ರೀಂ ಕೋರ್ಟ್ ವಕೀಲ ವೃಂದಾ ಗ್ರೋವರ್ ಆರೋಪಿಸಿದ್ದಾರೆ.

ಫಾರೂಖಿ ಜಾಮೀನು ಅರ್ಜಿಯನ್ನು ಇಂದೋರ್ ಸೆಷನ್ಸ್ ನ್ಯಾಯಾಲಯವು ಎರಡು ಬಾರಿ ತಿರಸ್ಕರಿಸಿತು. ಅಂತಿಮವಾಗಿ ಫೆಬ್ರವರಿ 7ರಂದು, ಅಂದರೆ ಬಂಧಿಸಲ್ಪಟ್ಟ 36 ದಿನಗಳ ನಂತರ ಮಧ್ಯಂತರ ಜಾಮೀನು ನೀಡಲಾಯಿತು.

ಮುಂಬೈನಲ್ಲಿ ಕಾರ್ಯಕ್ರಮ ರದ್ದುಗೊಳಿಸಿದ ನಂತರ, ಫಾರೂಖಿ NDTV ಜೊತೆಗೆ ಮಾತನಾಡುತ್ತಾ, “ನನಗೆ ಪ್ರತಿದಿನ 50 ಬೆದರಿಕೆ ಕರೆಗಳು ಬರುತ್ತವೆ, ನಾನು ನನ್ನ ಸಿಮ್ ಕಾರ್ಡ್ ಅನ್ನು ಮೂರು ಬಾರಿ ಬದಲಾಯಿಸಬೇಕಾಯಿತು. ನನ್ನ ಮೊಬೈಲ್‌ ನಂಬರ್‌‌ ಸೋರಿಕೆಯಾದಾಗ, ಜನರು ಕರೆ ಮಾಡಿ ನನ್ನನ್ನು ನಿಂದಿಸುತ್ತಾರೆ. ನನ್ನ ವಿಷಯದಲ್ಲಿ, ಅವರು ನನ್ನ ಧರ್ಮವನ್ನು ಬಳಸುತ್ತಾರೆ” ಎಂದು ಆರೋಪಿಸಿದ್ದರು.


ತಪ್ಪದೇ ಓದಿರಿ: ಮುನವ್ವರ್ ಫಾರೂಕಿ ಮತ್ತು ಮಾಬ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...