Homeಮುಖಪುಟಬಿಜೆಪಿ ಆಗ್ರಹದ ಬಳಿಕ ಮುನಾವರ್‌ ಫಾರೂಖಿಯ ಮತ್ತೊಂದು ಕಾರ್ಯಕ್ರಮ ರದ್ದು

ಬಿಜೆಪಿ ಆಗ್ರಹದ ಬಳಿಕ ಮುನಾವರ್‌ ಫಾರೂಖಿಯ ಮತ್ತೊಂದು ಕಾರ್ಯಕ್ರಮ ರದ್ದು

- Advertisement -
- Advertisement -

ಹೊಸದಿಲ್ಲಿ: ಡಿಸೆಂಬರ್ 19ರಂದು ಗುರ್ಗಾಂವ್ ಕಾಮಿಡಿ ಫೆಸ್ಟಿವಲ್‌ನಲ್ಲಿ ನಿಗದಿಯಾಗಿದ್ದ ಹಾಸ್ಯನಟ ಮುನಾವರ್‌ ಫಾರೂಖಿ ಅವರ ಕಾರ್ಯಕ್ರಮವನ್ನು ಸಂಘಟಕರು ರದ್ದುಗೊಳಿಸಲಾಗಿದೆ.

ಫಾರೂಖಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಹಲವಾರು ಕರೆಗಳು ಬಂದ ಬಳಿಕ ಕ್ರಮ ಜರುಗಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಫಾರೂಖಿಯವರು ವೇದಿಕೆಗೆ ಬರದಂತೆ ತಡೆಯಲು ಹರಿಯಾಣದ ಬಿಜೆಪಿ ಐಟಿ ಸೆಲ್ ಮುಖ್ಯಸ್ಥರು ಪೊಲೀಸರನ್ನು ಸಂಪರ್ಕಿಸಿ ಒತ್ತಾಯಿಸಿದ ಬಳಿಕ ಈ ನಿರ್ಧಾರ ಹೊರಬಿದ್ದಿದೆ. ಎಸಿಪಿ (ಸೋಹ್ನಾ) ಅವರಿಗೆ ನೀಡಿದ ದೂರಿನಲ್ಲಿ ಬಿಜೆಪಿಯ ಮುಖಂಡ ಅರುಣ್ ಯಾದವ್, ಫಾರೂಖಿ ಹಿಂದೂ ದೇವರು ಮತ್ತು ದೇವತೆಗಳನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾರ್ಯಕ್ರಮದ ಸಂಘಟಕರಾದ ಎಂಟರ್‌ಟೈನ್‌ಮೆಂಟ್ ಫ್ಯಾಕ್ಟರಿ (TEF), ಫಾರೂಖಿ ಹೆಸರನ್ನು ಕೈಬಿಡಲಾಗಿದೆ ಎಂದು ಟೈಮ್ಸ್‌ ಆಫ್‌ ಇಂಡಿಯಾಕ್ಕೆ ತಿಳಿಸಿದೆ.

ಪ್ರದರ್ಶನಕ್ಕೆ ಅಡ್ಡಿಯಾಗಲಿದೆ ಎಂದು ಸಂಘಟಕರಿಗೆ ಕರೆಗಳು ಬಂದಿದ್ದು, ನಂತರ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಮೂಲಗಳು ಪತ್ರಿಕೆಗೆ ತಿಳಿಸಿವೆ. “ಮುನಾವರ್ ಅವರನ್ನು ಡ್ರಾಪ್ ಮಾಡುವಂತೆ ನಿನ್ನೆಯಿಂದ (ಭಾನುವಾರ) ನಮಗೆ ಹಲವು ಕರೆಗಳು ಬಂದಿದ್ದವು. ನಮ್ಮ ಕೆಲಸ ಜನರನ್ನು ರಂಜಿಸುವುದು ಮತ್ತು ನಾವು ಯಾವುದೇ ವಿವಾದವನ್ನು ಬಯಸುವುದಿಲ್ಲ. ಆದ್ದರಿಂದ, ಸಾರ್ವಜನಿಕರನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ” ಎಂದು ಕಾರ್ಯಕ್ರಮ ಸಂಘಟಕ ಮುಬಿನ್ ಟಿಸೇಕರ್ ಟೈಮ್ಸ್‌ ಆಫ್‌ ಇಂಡಿಯಾಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಫಾರೂಖಿ ಅವರ ಕಾರ್ಯಕ್ರಮವು ಸೆಕ್ಟರ್ 68ರ ಗುರುಗ್ರಾಮ್‌ನ ಏರಿಯಾ ಮಾಲ್‌ನಲ್ಲಿ ನಡೆಯಬೇಕಿತ್ತು. ಕಳೆದ ವಾರ, ಫಾರೂಖಿಯವರನ್ನು “ವಿವಾದಾತ್ಮಕ ವ್ಯಕ್ತಿ” ಎಂದು ಕರೆದು “ಕಾನೂನು ಮತ್ತು ಸುವ್ಯವಸ್ಥೆ” ನೆಪದಲ್ಲಿ ಪೊಲೀಸರು ಸಂಘಟಕರಿಗೆ ಪತ್ರ ಬರೆದ ನಂತರ ಬೆಂಗಳೂರಿನಲ್ಲಿ ಕಾರ್ಯಕ್ರಮ ರದ್ದುಗೊಳಿಸಲಾಯಿತು. ನಂತರ, ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಫಾರೂಖಿ, ‘ನಫ್ರತ್ ಜೀತ್ ಗೈ, ಆರ್ಟಿಸ್ಟ್ ಹಾರ್ ಗಯಾ (ದ್ವೇಷ ಗೆದ್ದಿದೆ, ಕಲಾವಿದ ಸೋತಿದ್ದಾನೆ). ನಾನು ಮುಗಿಸಿದ್ದೇನೆ! ವಿದಾಯ” ಎಂದು ಬರೆದುಕೊಂಡಿದ್ದರು.

ಬಿಜೆಪಿ ಶಾಸಕಿ ಮಾಲಿನಿ ಸಿಂಗ್ ಗೌಡ್ ಅವರ ಪುತ್ರ ಏಕಲವ್ಯ ಸಿಂಗ್ ಗೌಡ್ ನೀಡಿದ ದೂರಿನ ಮೇರೆಗೆ ಜನವರಿ 1ರಂದು ಇಂದೋರ್‌ನ ಕೆಫೆಯಲ್ಲಿ ಫಾರೂಖಿಯವರನ್ನು ಬಂಧಿಸಲಾಗಿತ್ತು. ದೂರುದಾರರು ‘ಹಿಂದೂ ರಕ್ಷಕ ಸಂಘಟನೆ’ ಎಂಬುದರ ಮುಖ್ಯಸ್ಥರಾಗಿದ್ದರು.

ಫಾರೂಖಿ ಅವರು ತಮ್ಮ ಕಾರ್ಯಕ್ರಮದ ಪೂರ್ವಾಭ್ಯಾಸದ ಸಮಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ, ಹಿಂದೂ ದೇವರುಗಳು ವಿರುದ್ಧ ಹಾಸ್ಯ ಮಾಡಿದ್ದಾರೆ ಎಂದು ಗೌಡ್ ಆರೋಪಿಸಿದ್ದರು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ಪೊಲೀಸರು ಫಾರೂಖಿ ವಿರುದ್ಧ ಐಪಿಸಿ ಸೆಕ್ಷನ್ 295ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

“ಇದು ಫಾರೂಖಿ ಅವರ ವಾಕ್ ಸ್ವಾತಂತ್ರ್ಯದ ಮೇಲೆ ಮಾತ್ರವಲ್ಲ, ಎಲ್ಲ ಹಾಸ್ಯ ಕಲಾವಿದರ ಸ್ವಾತಂತ್ರ್ಯದ ಮೇಲೆ ನಡೆದ ನೇರ ದಾಳಿಯಾಗಿದೆ” ಎಂದು ಸುಪ್ರೀಂ ಕೋರ್ಟ್ ವಕೀಲ ವೃಂದಾ ಗ್ರೋವರ್ ಆರೋಪಿಸಿದ್ದಾರೆ.

ಫಾರೂಖಿ ಜಾಮೀನು ಅರ್ಜಿಯನ್ನು ಇಂದೋರ್ ಸೆಷನ್ಸ್ ನ್ಯಾಯಾಲಯವು ಎರಡು ಬಾರಿ ತಿರಸ್ಕರಿಸಿತು. ಅಂತಿಮವಾಗಿ ಫೆಬ್ರವರಿ 7ರಂದು, ಅಂದರೆ ಬಂಧಿಸಲ್ಪಟ್ಟ 36 ದಿನಗಳ ನಂತರ ಮಧ್ಯಂತರ ಜಾಮೀನು ನೀಡಲಾಯಿತು.

ಮುಂಬೈನಲ್ಲಿ ಕಾರ್ಯಕ್ರಮ ರದ್ದುಗೊಳಿಸಿದ ನಂತರ, ಫಾರೂಖಿ NDTV ಜೊತೆಗೆ ಮಾತನಾಡುತ್ತಾ, “ನನಗೆ ಪ್ರತಿದಿನ 50 ಬೆದರಿಕೆ ಕರೆಗಳು ಬರುತ್ತವೆ, ನಾನು ನನ್ನ ಸಿಮ್ ಕಾರ್ಡ್ ಅನ್ನು ಮೂರು ಬಾರಿ ಬದಲಾಯಿಸಬೇಕಾಯಿತು. ನನ್ನ ಮೊಬೈಲ್‌ ನಂಬರ್‌‌ ಸೋರಿಕೆಯಾದಾಗ, ಜನರು ಕರೆ ಮಾಡಿ ನನ್ನನ್ನು ನಿಂದಿಸುತ್ತಾರೆ. ನನ್ನ ವಿಷಯದಲ್ಲಿ, ಅವರು ನನ್ನ ಧರ್ಮವನ್ನು ಬಳಸುತ್ತಾರೆ” ಎಂದು ಆರೋಪಿಸಿದ್ದರು.


ತಪ್ಪದೇ ಓದಿರಿ: ಮುನವ್ವರ್ ಫಾರೂಕಿ ಮತ್ತು ಮಾಬ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...