Homeಮುಖಪುಟಬಿಜೆಪಿ ಆಗ್ರಹದ ಬಳಿಕ ಮುನಾವರ್‌ ಫಾರೂಖಿಯ ಮತ್ತೊಂದು ಕಾರ್ಯಕ್ರಮ ರದ್ದು

ಬಿಜೆಪಿ ಆಗ್ರಹದ ಬಳಿಕ ಮುನಾವರ್‌ ಫಾರೂಖಿಯ ಮತ್ತೊಂದು ಕಾರ್ಯಕ್ರಮ ರದ್ದು

- Advertisement -
- Advertisement -

ಹೊಸದಿಲ್ಲಿ: ಡಿಸೆಂಬರ್ 19ರಂದು ಗುರ್ಗಾಂವ್ ಕಾಮಿಡಿ ಫೆಸ್ಟಿವಲ್‌ನಲ್ಲಿ ನಿಗದಿಯಾಗಿದ್ದ ಹಾಸ್ಯನಟ ಮುನಾವರ್‌ ಫಾರೂಖಿ ಅವರ ಕಾರ್ಯಕ್ರಮವನ್ನು ಸಂಘಟಕರು ರದ್ದುಗೊಳಿಸಲಾಗಿದೆ.

ಫಾರೂಖಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಹಲವಾರು ಕರೆಗಳು ಬಂದ ಬಳಿಕ ಕ್ರಮ ಜರುಗಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಫಾರೂಖಿಯವರು ವೇದಿಕೆಗೆ ಬರದಂತೆ ತಡೆಯಲು ಹರಿಯಾಣದ ಬಿಜೆಪಿ ಐಟಿ ಸೆಲ್ ಮುಖ್ಯಸ್ಥರು ಪೊಲೀಸರನ್ನು ಸಂಪರ್ಕಿಸಿ ಒತ್ತಾಯಿಸಿದ ಬಳಿಕ ಈ ನಿರ್ಧಾರ ಹೊರಬಿದ್ದಿದೆ. ಎಸಿಪಿ (ಸೋಹ್ನಾ) ಅವರಿಗೆ ನೀಡಿದ ದೂರಿನಲ್ಲಿ ಬಿಜೆಪಿಯ ಮುಖಂಡ ಅರುಣ್ ಯಾದವ್, ಫಾರೂಖಿ ಹಿಂದೂ ದೇವರು ಮತ್ತು ದೇವತೆಗಳನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾರ್ಯಕ್ರಮದ ಸಂಘಟಕರಾದ ಎಂಟರ್‌ಟೈನ್‌ಮೆಂಟ್ ಫ್ಯಾಕ್ಟರಿ (TEF), ಫಾರೂಖಿ ಹೆಸರನ್ನು ಕೈಬಿಡಲಾಗಿದೆ ಎಂದು ಟೈಮ್ಸ್‌ ಆಫ್‌ ಇಂಡಿಯಾಕ್ಕೆ ತಿಳಿಸಿದೆ.

ಪ್ರದರ್ಶನಕ್ಕೆ ಅಡ್ಡಿಯಾಗಲಿದೆ ಎಂದು ಸಂಘಟಕರಿಗೆ ಕರೆಗಳು ಬಂದಿದ್ದು, ನಂತರ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಮೂಲಗಳು ಪತ್ರಿಕೆಗೆ ತಿಳಿಸಿವೆ. “ಮುನಾವರ್ ಅವರನ್ನು ಡ್ರಾಪ್ ಮಾಡುವಂತೆ ನಿನ್ನೆಯಿಂದ (ಭಾನುವಾರ) ನಮಗೆ ಹಲವು ಕರೆಗಳು ಬಂದಿದ್ದವು. ನಮ್ಮ ಕೆಲಸ ಜನರನ್ನು ರಂಜಿಸುವುದು ಮತ್ತು ನಾವು ಯಾವುದೇ ವಿವಾದವನ್ನು ಬಯಸುವುದಿಲ್ಲ. ಆದ್ದರಿಂದ, ಸಾರ್ವಜನಿಕರನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ” ಎಂದು ಕಾರ್ಯಕ್ರಮ ಸಂಘಟಕ ಮುಬಿನ್ ಟಿಸೇಕರ್ ಟೈಮ್ಸ್‌ ಆಫ್‌ ಇಂಡಿಯಾಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಫಾರೂಖಿ ಅವರ ಕಾರ್ಯಕ್ರಮವು ಸೆಕ್ಟರ್ 68ರ ಗುರುಗ್ರಾಮ್‌ನ ಏರಿಯಾ ಮಾಲ್‌ನಲ್ಲಿ ನಡೆಯಬೇಕಿತ್ತು. ಕಳೆದ ವಾರ, ಫಾರೂಖಿಯವರನ್ನು “ವಿವಾದಾತ್ಮಕ ವ್ಯಕ್ತಿ” ಎಂದು ಕರೆದು “ಕಾನೂನು ಮತ್ತು ಸುವ್ಯವಸ್ಥೆ” ನೆಪದಲ್ಲಿ ಪೊಲೀಸರು ಸಂಘಟಕರಿಗೆ ಪತ್ರ ಬರೆದ ನಂತರ ಬೆಂಗಳೂರಿನಲ್ಲಿ ಕಾರ್ಯಕ್ರಮ ರದ್ದುಗೊಳಿಸಲಾಯಿತು. ನಂತರ, ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಫಾರೂಖಿ, ‘ನಫ್ರತ್ ಜೀತ್ ಗೈ, ಆರ್ಟಿಸ್ಟ್ ಹಾರ್ ಗಯಾ (ದ್ವೇಷ ಗೆದ್ದಿದೆ, ಕಲಾವಿದ ಸೋತಿದ್ದಾನೆ). ನಾನು ಮುಗಿಸಿದ್ದೇನೆ! ವಿದಾಯ” ಎಂದು ಬರೆದುಕೊಂಡಿದ್ದರು.

ಬಿಜೆಪಿ ಶಾಸಕಿ ಮಾಲಿನಿ ಸಿಂಗ್ ಗೌಡ್ ಅವರ ಪುತ್ರ ಏಕಲವ್ಯ ಸಿಂಗ್ ಗೌಡ್ ನೀಡಿದ ದೂರಿನ ಮೇರೆಗೆ ಜನವರಿ 1ರಂದು ಇಂದೋರ್‌ನ ಕೆಫೆಯಲ್ಲಿ ಫಾರೂಖಿಯವರನ್ನು ಬಂಧಿಸಲಾಗಿತ್ತು. ದೂರುದಾರರು ‘ಹಿಂದೂ ರಕ್ಷಕ ಸಂಘಟನೆ’ ಎಂಬುದರ ಮುಖ್ಯಸ್ಥರಾಗಿದ್ದರು.

ಫಾರೂಖಿ ಅವರು ತಮ್ಮ ಕಾರ್ಯಕ್ರಮದ ಪೂರ್ವಾಭ್ಯಾಸದ ಸಮಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ, ಹಿಂದೂ ದೇವರುಗಳು ವಿರುದ್ಧ ಹಾಸ್ಯ ಮಾಡಿದ್ದಾರೆ ಎಂದು ಗೌಡ್ ಆರೋಪಿಸಿದ್ದರು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ಪೊಲೀಸರು ಫಾರೂಖಿ ವಿರುದ್ಧ ಐಪಿಸಿ ಸೆಕ್ಷನ್ 295ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

“ಇದು ಫಾರೂಖಿ ಅವರ ವಾಕ್ ಸ್ವಾತಂತ್ರ್ಯದ ಮೇಲೆ ಮಾತ್ರವಲ್ಲ, ಎಲ್ಲ ಹಾಸ್ಯ ಕಲಾವಿದರ ಸ್ವಾತಂತ್ರ್ಯದ ಮೇಲೆ ನಡೆದ ನೇರ ದಾಳಿಯಾಗಿದೆ” ಎಂದು ಸುಪ್ರೀಂ ಕೋರ್ಟ್ ವಕೀಲ ವೃಂದಾ ಗ್ರೋವರ್ ಆರೋಪಿಸಿದ್ದಾರೆ.

ಫಾರೂಖಿ ಜಾಮೀನು ಅರ್ಜಿಯನ್ನು ಇಂದೋರ್ ಸೆಷನ್ಸ್ ನ್ಯಾಯಾಲಯವು ಎರಡು ಬಾರಿ ತಿರಸ್ಕರಿಸಿತು. ಅಂತಿಮವಾಗಿ ಫೆಬ್ರವರಿ 7ರಂದು, ಅಂದರೆ ಬಂಧಿಸಲ್ಪಟ್ಟ 36 ದಿನಗಳ ನಂತರ ಮಧ್ಯಂತರ ಜಾಮೀನು ನೀಡಲಾಯಿತು.

ಮುಂಬೈನಲ್ಲಿ ಕಾರ್ಯಕ್ರಮ ರದ್ದುಗೊಳಿಸಿದ ನಂತರ, ಫಾರೂಖಿ NDTV ಜೊತೆಗೆ ಮಾತನಾಡುತ್ತಾ, “ನನಗೆ ಪ್ರತಿದಿನ 50 ಬೆದರಿಕೆ ಕರೆಗಳು ಬರುತ್ತವೆ, ನಾನು ನನ್ನ ಸಿಮ್ ಕಾರ್ಡ್ ಅನ್ನು ಮೂರು ಬಾರಿ ಬದಲಾಯಿಸಬೇಕಾಯಿತು. ನನ್ನ ಮೊಬೈಲ್‌ ನಂಬರ್‌‌ ಸೋರಿಕೆಯಾದಾಗ, ಜನರು ಕರೆ ಮಾಡಿ ನನ್ನನ್ನು ನಿಂದಿಸುತ್ತಾರೆ. ನನ್ನ ವಿಷಯದಲ್ಲಿ, ಅವರು ನನ್ನ ಧರ್ಮವನ್ನು ಬಳಸುತ್ತಾರೆ” ಎಂದು ಆರೋಪಿಸಿದ್ದರು.


ತಪ್ಪದೇ ಓದಿರಿ: ಮುನವ್ವರ್ ಫಾರೂಕಿ ಮತ್ತು ಮಾಬ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...