Homeಮುಖಪುಟಬಿಜೆಪಿ ಆಗ್ರಹದ ಬಳಿಕ ಮುನಾವರ್‌ ಫಾರೂಖಿಯ ಮತ್ತೊಂದು ಕಾರ್ಯಕ್ರಮ ರದ್ದು

ಬಿಜೆಪಿ ಆಗ್ರಹದ ಬಳಿಕ ಮುನಾವರ್‌ ಫಾರೂಖಿಯ ಮತ್ತೊಂದು ಕಾರ್ಯಕ್ರಮ ರದ್ದು

- Advertisement -
- Advertisement -

ಹೊಸದಿಲ್ಲಿ: ಡಿಸೆಂಬರ್ 19ರಂದು ಗುರ್ಗಾಂವ್ ಕಾಮಿಡಿ ಫೆಸ್ಟಿವಲ್‌ನಲ್ಲಿ ನಿಗದಿಯಾಗಿದ್ದ ಹಾಸ್ಯನಟ ಮುನಾವರ್‌ ಫಾರೂಖಿ ಅವರ ಕಾರ್ಯಕ್ರಮವನ್ನು ಸಂಘಟಕರು ರದ್ದುಗೊಳಿಸಲಾಗಿದೆ.

ಫಾರೂಖಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ಹಲವಾರು ಕರೆಗಳು ಬಂದ ಬಳಿಕ ಕ್ರಮ ಜರುಗಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಫಾರೂಖಿಯವರು ವೇದಿಕೆಗೆ ಬರದಂತೆ ತಡೆಯಲು ಹರಿಯಾಣದ ಬಿಜೆಪಿ ಐಟಿ ಸೆಲ್ ಮುಖ್ಯಸ್ಥರು ಪೊಲೀಸರನ್ನು ಸಂಪರ್ಕಿಸಿ ಒತ್ತಾಯಿಸಿದ ಬಳಿಕ ಈ ನಿರ್ಧಾರ ಹೊರಬಿದ್ದಿದೆ. ಎಸಿಪಿ (ಸೋಹ್ನಾ) ಅವರಿಗೆ ನೀಡಿದ ದೂರಿನಲ್ಲಿ ಬಿಜೆಪಿಯ ಮುಖಂಡ ಅರುಣ್ ಯಾದವ್, ಫಾರೂಖಿ ಹಿಂದೂ ದೇವರು ಮತ್ತು ದೇವತೆಗಳನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾರ್ಯಕ್ರಮದ ಸಂಘಟಕರಾದ ಎಂಟರ್‌ಟೈನ್‌ಮೆಂಟ್ ಫ್ಯಾಕ್ಟರಿ (TEF), ಫಾರೂಖಿ ಹೆಸರನ್ನು ಕೈಬಿಡಲಾಗಿದೆ ಎಂದು ಟೈಮ್ಸ್‌ ಆಫ್‌ ಇಂಡಿಯಾಕ್ಕೆ ತಿಳಿಸಿದೆ.

ಪ್ರದರ್ಶನಕ್ಕೆ ಅಡ್ಡಿಯಾಗಲಿದೆ ಎಂದು ಸಂಘಟಕರಿಗೆ ಕರೆಗಳು ಬಂದಿದ್ದು, ನಂತರ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಮೂಲಗಳು ಪತ್ರಿಕೆಗೆ ತಿಳಿಸಿವೆ. “ಮುನಾವರ್ ಅವರನ್ನು ಡ್ರಾಪ್ ಮಾಡುವಂತೆ ನಿನ್ನೆಯಿಂದ (ಭಾನುವಾರ) ನಮಗೆ ಹಲವು ಕರೆಗಳು ಬಂದಿದ್ದವು. ನಮ್ಮ ಕೆಲಸ ಜನರನ್ನು ರಂಜಿಸುವುದು ಮತ್ತು ನಾವು ಯಾವುದೇ ವಿವಾದವನ್ನು ಬಯಸುವುದಿಲ್ಲ. ಆದ್ದರಿಂದ, ಸಾರ್ವಜನಿಕರನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ” ಎಂದು ಕಾರ್ಯಕ್ರಮ ಸಂಘಟಕ ಮುಬಿನ್ ಟಿಸೇಕರ್ ಟೈಮ್ಸ್‌ ಆಫ್‌ ಇಂಡಿಯಾಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಫಾರೂಖಿ ಅವರ ಕಾರ್ಯಕ್ರಮವು ಸೆಕ್ಟರ್ 68ರ ಗುರುಗ್ರಾಮ್‌ನ ಏರಿಯಾ ಮಾಲ್‌ನಲ್ಲಿ ನಡೆಯಬೇಕಿತ್ತು. ಕಳೆದ ವಾರ, ಫಾರೂಖಿಯವರನ್ನು “ವಿವಾದಾತ್ಮಕ ವ್ಯಕ್ತಿ” ಎಂದು ಕರೆದು “ಕಾನೂನು ಮತ್ತು ಸುವ್ಯವಸ್ಥೆ” ನೆಪದಲ್ಲಿ ಪೊಲೀಸರು ಸಂಘಟಕರಿಗೆ ಪತ್ರ ಬರೆದ ನಂತರ ಬೆಂಗಳೂರಿನಲ್ಲಿ ಕಾರ್ಯಕ್ರಮ ರದ್ದುಗೊಳಿಸಲಾಯಿತು. ನಂತರ, ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಫಾರೂಖಿ, ‘ನಫ್ರತ್ ಜೀತ್ ಗೈ, ಆರ್ಟಿಸ್ಟ್ ಹಾರ್ ಗಯಾ (ದ್ವೇಷ ಗೆದ್ದಿದೆ, ಕಲಾವಿದ ಸೋತಿದ್ದಾನೆ). ನಾನು ಮುಗಿಸಿದ್ದೇನೆ! ವಿದಾಯ” ಎಂದು ಬರೆದುಕೊಂಡಿದ್ದರು.

ಬಿಜೆಪಿ ಶಾಸಕಿ ಮಾಲಿನಿ ಸಿಂಗ್ ಗೌಡ್ ಅವರ ಪುತ್ರ ಏಕಲವ್ಯ ಸಿಂಗ್ ಗೌಡ್ ನೀಡಿದ ದೂರಿನ ಮೇರೆಗೆ ಜನವರಿ 1ರಂದು ಇಂದೋರ್‌ನ ಕೆಫೆಯಲ್ಲಿ ಫಾರೂಖಿಯವರನ್ನು ಬಂಧಿಸಲಾಗಿತ್ತು. ದೂರುದಾರರು ‘ಹಿಂದೂ ರಕ್ಷಕ ಸಂಘಟನೆ’ ಎಂಬುದರ ಮುಖ್ಯಸ್ಥರಾಗಿದ್ದರು.

ಫಾರೂಖಿ ಅವರು ತಮ್ಮ ಕಾರ್ಯಕ್ರಮದ ಪೂರ್ವಾಭ್ಯಾಸದ ಸಮಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ, ಹಿಂದೂ ದೇವರುಗಳು ವಿರುದ್ಧ ಹಾಸ್ಯ ಮಾಡಿದ್ದಾರೆ ಎಂದು ಗೌಡ್ ಆರೋಪಿಸಿದ್ದರು. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ಪೊಲೀಸರು ಫಾರೂಖಿ ವಿರುದ್ಧ ಐಪಿಸಿ ಸೆಕ್ಷನ್ 295ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

“ಇದು ಫಾರೂಖಿ ಅವರ ವಾಕ್ ಸ್ವಾತಂತ್ರ್ಯದ ಮೇಲೆ ಮಾತ್ರವಲ್ಲ, ಎಲ್ಲ ಹಾಸ್ಯ ಕಲಾವಿದರ ಸ್ವಾತಂತ್ರ್ಯದ ಮೇಲೆ ನಡೆದ ನೇರ ದಾಳಿಯಾಗಿದೆ” ಎಂದು ಸುಪ್ರೀಂ ಕೋರ್ಟ್ ವಕೀಲ ವೃಂದಾ ಗ್ರೋವರ್ ಆರೋಪಿಸಿದ್ದಾರೆ.

ಫಾರೂಖಿ ಜಾಮೀನು ಅರ್ಜಿಯನ್ನು ಇಂದೋರ್ ಸೆಷನ್ಸ್ ನ್ಯಾಯಾಲಯವು ಎರಡು ಬಾರಿ ತಿರಸ್ಕರಿಸಿತು. ಅಂತಿಮವಾಗಿ ಫೆಬ್ರವರಿ 7ರಂದು, ಅಂದರೆ ಬಂಧಿಸಲ್ಪಟ್ಟ 36 ದಿನಗಳ ನಂತರ ಮಧ್ಯಂತರ ಜಾಮೀನು ನೀಡಲಾಯಿತು.

ಮುಂಬೈನಲ್ಲಿ ಕಾರ್ಯಕ್ರಮ ರದ್ದುಗೊಳಿಸಿದ ನಂತರ, ಫಾರೂಖಿ NDTV ಜೊತೆಗೆ ಮಾತನಾಡುತ್ತಾ, “ನನಗೆ ಪ್ರತಿದಿನ 50 ಬೆದರಿಕೆ ಕರೆಗಳು ಬರುತ್ತವೆ, ನಾನು ನನ್ನ ಸಿಮ್ ಕಾರ್ಡ್ ಅನ್ನು ಮೂರು ಬಾರಿ ಬದಲಾಯಿಸಬೇಕಾಯಿತು. ನನ್ನ ಮೊಬೈಲ್‌ ನಂಬರ್‌‌ ಸೋರಿಕೆಯಾದಾಗ, ಜನರು ಕರೆ ಮಾಡಿ ನನ್ನನ್ನು ನಿಂದಿಸುತ್ತಾರೆ. ನನ್ನ ವಿಷಯದಲ್ಲಿ, ಅವರು ನನ್ನ ಧರ್ಮವನ್ನು ಬಳಸುತ್ತಾರೆ” ಎಂದು ಆರೋಪಿಸಿದ್ದರು.


ತಪ್ಪದೇ ಓದಿರಿ: ಮುನವ್ವರ್ ಫಾರೂಕಿ ಮತ್ತು ಮಾಬ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...