Homeಮುಖಪುಟಮುನವ್ವರ್ ಫಾರೂಕಿ ಮತ್ತು ಮಾಬ್

ಮುನವ್ವರ್ ಫಾರೂಕಿ ಮತ್ತು ಮಾಬ್

- Advertisement -
- Advertisement -

ಇಂಗ್ಲೀಷಿನಲ್ಲಿ ಮಾಬ್ ಎಂಬ ಪದವಿದೆ; ಮಾಬ್ ಎಂದರೆ ಕೇವಲ ಜನಸಮೂಹವಲ್ಲ, ಯಾವುದೋ ಒಂದು ದುಷ್ಕೃತ್ಯವನ್ನು ಮಾಡಲು ಅಣಿಯಾಗಿರುವ ಜನರ ಗುಂಪನ್ನು ಮಾಬ್ ಎಂದು ಕರೆಯಲಾಗುತ್ತೆ. ಮಾಬ್ ಮೆಂಟಾಲಿಟಿ ಎಂಬ ಪದವೂ ಬಳಕೆಯಲ್ಲಿದೆ. ಈ ಮಾಬ್ ಒಂದೆಡೆ ಸೇರಿಕೊಂಡಾಗ, ಅಷ್ಟೇನು ಕೆಟ್ಟವರಲ್ಲದಿದ್ದರೂ, ಊಹಿಸಲಾಗದಷ್ಟು ಕೆಟ್ಟ ಕೆಲಸ ಮಾಡುವ ಸಾಮರ್ಥ್ಯ ಬಂದುಬಿಡುತ್ತೆ. ಅದನ್ನು ಮಾಬ್ ಮೆಂಟಾಲಿಟಿ ಎಂದು ಕರಯುತ್ತಾರೆ. ಈ ಮಾಬ್ ಈಗ ಕೇವಲ ದೈಹಿಕವಾಗಿ ಒಂದೆಡೆ ಸೇರಬೇಕಿಲ್ಲ, ಸಾಮಾಜಿಕ ಜಾಲತಾಣಗಳ ಮೂಲಕವೂ, ಒಂದೇ ಉದ್ದೇಶದಿಂದ ಒಂದು ವರ್ಚುವಲ್ ಜಾಗದಲ್ಲಿ ಸೇರಿ ತಮ್ಮ ಉದ್ದೇಶವನ್ನು ಈಡೇರಿಸಿಕೊಳ್ಳಬಲ್ಲರು.

ಮೊನ್ನೆ ಭಾನುವಾರ 28ನೇ ತಾರೀಕಿನಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಒಂದು ಸ್ಟ್ಯಾಂಡ್‌ಅಪ್ ಕಾಮೆಡಿ ಶೋಅನ್ನು ರದ್ದುಗೊಳಿಸಲಾಯಿತು. ಸುಮಾರು 600 ಜನರು ಮುಂಗಡವಾಗಿ ಟಿಕೆಟ್ ಖರೀದಿಸಿಟ್ಟಿದ್ದರು. ಅದೇ ದಿನ ಬೆಳಗ್ಗೆ ಅಶೋಕನಗರದ ಪೊಲೀಸರು ಆಯೋಜಕರಿಗೆ ಪತ್ರಬರೆದು, ಅದರಲ್ಲಿ ಹಾಸ್ಯಗಾರ ಮುನವ್ವರ್ ಫಾರೂಕಿ ಅವರ ಮೇಲೆ ಪ್ರಕರಣ ನಡೆಯುತ್ತಿವೆಯೆಂದೂ, ಅವರು ವಿವಾದಾತ್ಮಕವಾದ ಕಾಮೆಡಿ ಮಾಡುತ್ತಾರೆಂದೂ, ಅವರ ಕಾರ್ಯಕ್ರಮದಿಂದ ಶಾಂತಿ ಭಂಗ ಆಗಬಹುದು ಎಂಬ ಕಾರಣಕ್ಕೆ ಶೋ ರದ್ದುಪಡಿಸಬೇಕು ಎಂದು ’ವಿನಮ್ರ’ವಾಗಿ ಸೂಚಿಸಿದ್ದರು. ಶೋ ರದ್ದಾಯಿತು. ’ಒಬ್ಬ ಕಲಾವಿದ ಸೋತ, ದ್ವೇಷ ಗೆದ್ದಿತು. ಸಾಕೀಗ, ಅಂತಿಮ ವಿದಾಯ’ ಎಂದು ಟ್ವೀಟ್ ಮಾಡಿದ ಆ ಕಲಾವಿದ.

ಈ ಕಾಮೆಡಿಯನ್, ಹಾಸ್ಯ, ವ್ಯಂಗ್ಯ ಎಂದರೆ ಏಕಿಷ್ಟು ಅಸಹನೆ? ಹ್ಮೂ, ನಮಿಷ್ಟ ಇಲ್ಲಪಾ, ನೀವು ಮಾಡಿಕೊಳ್ಳಿ, ನಾವು ನೋಡಲ್ಲ ಎಂದು ಹೇಳಬಹುದಲ್ಲವಾ? ಇತ್ತೀಚಿಗೆ ವೀರ್ ದಾಸ ಎಂಬ ಹಾಸ್ಯಗಾರ ಅಮೆರಿಕದ ವಾಶಿಂಗ್ಟನ್‌ನಲ್ಲಿರುವ ಕೆನಡಿ ಸೆಂಟರ್‌ನಲ್ಲಿ ’ಎರಡು ಭಾರತ’ ಎಂಬ ಪದ್ಯ ಓದಿದ್ದು, ಎಲ್ಲೆಡೆ ಪ್ರಸಾರವಾಯಿತು. ಅದನ್ನೂ ಸಹಿಸಿಕೊಳ್ಳಲಾಗಲಿಲ್ಲ ನಮಗೆ. ದಾಸ್ ನಿನ್ನೆ ಭಾರತಕ್ಕೆ ಮರಳಿ ಅಂತಾರಾಷ್ಟ್ರೀಯ ನಿಲ್ದಾಣದಲ್ಲಿ ಬಂದಿಳಿದಾಗ, ’ಎರಡರಲ್ಲಿ ಯಾವ ಭಾರತಕ್ಕೆ ಮರಳಿದ್ದೀಯ?’ ಎಂದು ಕೇಳಿ ಪೀಡಿಸಲಾಯಿತು. ನಮ್ಮಲ್ಲಿಯ ವ್ಯಂಗಚಿತ್ರಕಾರರು ಎದುರಿಸುವ ಪಾಡೂ ಇಂಥದ್ದೇ. ಎಂಥೆಂಥ ಟೀಕೆಗಳಿಗೆ ಸುಮ್ಮನಿರುವ ಮಾಬ್‌ಗಳು ವ್ಯಂಗ್ಯಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸುತ್ತಾರೆ. ಬಹುಶಃ ವ್ಯಂಗ ಬೇಗನೇ ತಟ್ಟುತ್ತಿರಬಹುದು, ವಿಮರ್ಶೆಯ ಒಂದು ಬರಹ ಅರ್ಥಮಾಡಿಕೊಳ್ಳುವುದು ಕಷ್ಟವಲ್ಲವೇ.

ಈ ಪಟ್ಟಿ ತುಂಬಾ ಉದ್ದವಿದೆ. ಪತ್ರಕರ್ತರಾದ ರವೀಶ್ ಕುಮಾರ್, ರಾಣಾ ಅಯೂಬ್, ಪುಣ್ಯಪ್ರಸೂನ್ ವಾಜಪಯಿ ಮುಂತಾದವರು ಆನ್‌ಲೈನ್ ಟ್ರಾಲ್‌ನಲ್ಲಿ ಎದುರಿಸುವ ಮಾನಸಿಕ ದಾಳಿ ಅಷ್ಟಿಷ್ಟಿಲ್ಲ. ಟ್ರಾಲ್‌ಗಳ ಈ ದಾಳಿಗೆ ಬೇಸತ್ತು ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಬರೆಯುವುದನ್ನು ಬಿಟ್ಟಿದ್ದಾರೆ. ಇನ್ನೂ ಕೆಲವರು ಗಟ್ಟಿಯಾಗಿ ಎದುರಿಸುತ್ತಿದ್ದಾರೆ.

ಧ್ವನಿಗಳನ್ನು ಹತ್ತಿಕ್ಕುವ ಕೆಲಸವನ್ನು ಈ ಮಾಬ್‌ಗಳಿಗೆ ಮಾತ್ರ ಬಿಟ್ಟಿಲ್ಲ. ರೈತ ಚಳವಳಿಯ ಬಗ್ಗೆ ಒಂದು ವೆಬಿನಾರ್ ಮಾಡಿದಾಗ, ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದಕ್ಕಾಗಿ, ಬೆಂಗಳೂರಿನ ಪರಿಸರವಾದಿ 21 ವಯಸ್ಸಿನ ದಿಶಾ ರವಿಯನ್ನು ಬಂಧಿಸಲಾಯಿತು. ದೆಹಲಿ ಪೊಲೀಸರು ಅವಳ ಮೇಲೆ ದೇಶದ್ರೋಹದ ಪ್ರಕರಣ ಜಡಿದರು. ಸಿಎಎ ವಿರೋಧಿ ಆಂದೋಲನ ನಡೆಯುತ್ತಿದ್ದ ಸಮಯದಲ್ಲಿ ನಟಿ ದೀಪಿಕಾ ಪಡುಕೊಣೆ ದೆಹಲಿಯ ಜೆಎನ್‌ಯುನಲ್ಲಿ ನಡೆಯುತ್ತಿದ್ದ ಒಂದು ಸಭೆಗೆ ಹಾಜರಾದರು ಎಂಬ ಕಾರಣಕ್ಕೆ ಅವರ ಮೇಲೆ ಆರೋಪ ಹೊರಿಸಿ, ವಿಚಾರಣೆ ನಡೆಸಿ ಪೀಡಿಸಲಾಯಿತು. ಇಂಥದ್ದೇನಾದರೂ ಮಾಡೀರಿ ಜೋಕೆ ಎಂಬ ಸಂದೇಶವನ್ನು ರವಾನಿಸಲಾಯಿತು. ಇನ್ನೂ ಹಲವಾರು ಕಾರ್ಯಕರ್ತರನ್ನು ಗಂಭೀರ ಪ್ರಕರಣ ದಾಖಲಿಸಿ, ವಿಚಾರಣೆ ಕೂಡ ಶುರು ಮಾಡದೇ ಬಂಧನದಲ್ಲಿಟ್ಟು ಕೊಳೆಸುತ್ತಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ.

ಆದರೆ ಈಗ ನಾವು ಚರ್ಚಿಸುತ್ತಿರುವುದು ಈ ಮಾಬ್‌ಗಳ ಬಗ್ಗೆ. ಮುಂದೊಂದು ದಿನ ಮಾಬ್‌ಗಳೇ ನಮ್ಮನ್ನು ರೂಲ್ ಮಾಡಲಿದ್ದಾರೆಯೇ? ಬೆಂಗಳೂರಿನಲ್ಲಿ ಮುನವ್ವರ್ ಫಾರೂಕಿಯ ಕಾರ್ಯಕ್ರಮ ರದ್ದುಗೊಳಿಸಲಾಯಿತು. ಗುಜರಾತಿನ ಹಲವಾರು ಪಟ್ಟಣಗಳಲ್ಲಿ ಬೀದಿಬದಿ ಮಾಂಸಾಹಾರ ಮಾರಾಟ ಮಾಡುವಂತಿಲ್ಲ ಎಂದು ಫರ್ಮಾನು ಹೊರಡಿಸಲಾಗಿದೆ. ಹಬ್ಬದ ದಿನಗಳಲ್ಲಿ ಮಾಂಸದ ಅಂಗಡಿಗಳನ್ನು ಮುಚ್ಚಿಸಲಾಗಿದೆ. ವಿಧಾನಸೌಧದ ಅಧಿವೇಶನದ ವೇಳೆ ಬೆಳಗಾವಿಯಲ್ಲಿ ಚರ್ಚ್‌ಗಳು ಪ್ರಾರ್ಥನೆ ನಡೆಸಬಾರದೆಂದು ಪೊಲೀಸರು ಸೂಚಿಸಿದ್ದರು, ಯಾರದೋ ಜನ್ಮದಿನದಂದು ಮಾಂಸಾಹಾರ ಮಾರಾಟ ಮಾಡಬಾರದೆಂದು ಜಿಲ್ಲಾಧಿಕಾರಿಗಳಿಂದ ಸುತ್ತೋಲೆ ಹೋಗುತ್ತಿವೆ. ಗುಡಗಾಂವ ಅಂದರೆ ಈಗಿನ ಗುರುಗ್ರಾಮದಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸುವಂತಿಲ್ಲ ಎಂದು ಆದೇಶ ಹೊರಡಿಸಲಾಯಿತು. ಅಂದಹಾಗೆ, ಕಳೆದ ತಿಂಗಳು, ಪತ್ರಕರ್ತರ ಒಂದು ಪ್ರಶ್ನೆಗೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ’ಸಮಾಜದಲ್ಲಿ ಹಲವಾರು ಭಾವನೆಗಳಿವೆ, ಆ ಭಾವನೆಗಳಿಗೆ ಧಕ್ಕೆ ಬರದ ರೀತಿಯಲ್ಲಿ ನಡಕೊಳ್ಳಬೇಕಾಗ್ತದೆ, ಆ ಭಾವನೆಗಳಿಗೆ ಧಕ್ಕೆಯಾದಾಗ ಆಕ್ಷನ್ ರಿಯಾಕ್ಷನ್ ಆಗ್ತವೆ..’ ಎಂದು ಮಾತನಾಡಿ, ಸಮಾಜದಲ್ಲಿ ನೈತಿಕತೆ ಇಲ್ಲದಿದ್ದರೆ ಹೇಗೆ ಎಂದರು. ಹಾಗೂ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ, ’ದೇಶದಲ್ಲಿ ಹಿಂದೂಗಳ ಬೆಳವಣಿಗೆಯ ವಿರುದ್ಧ ಅಸಹನೆ ಬೆಳೆಯುತ್ತಿದೆ, ಅದು ನಮ್ಮ ಸಹನೆಯ ದೌರ್ಭಾಗ್ಯ’ ಎಂದು ’ಇದಕ್ಕೆ ಸರಕಾರ ಎಷ್ಟು ಸಾಧ್ಯವೋ ಅಷ್ಟು ಕಡಿವಾಣ ಹಾಕಬೇಕು, ಹಾಗೆಂದು ಜನರ ವಿರೋಧಗಳನ್ನು ನೇರವಾಗಿ ಕಾನೂನು ಮೂಲಕ ಹತ್ತಿಕ್ಕುವುದು ಸರಿಯಲ್ಲ’ ಎಂದರು. ನಿರ್ದಿಷ್ಟವಾಗಿ ಏನನ್ನು ಹತ್ತಿಕ್ಕಬೇಕು, ಯಾವ ಅಸಹನೆ, ಯಾಕೆ ಹತ್ತಿಕ್ಕಬೇಕು, ಸರಕಾರವಲ್ಲದಿದ್ದರೆ ಮತ್ಯಾರು ಹತ್ತಿಕ್ಕಬೇಕು ಎಂಬೆಲ್ಲ ಪ್ರಶ್ನೆಗಳಿಗೆ ಉತ್ತರ ಹೇಳಲಿಲ್ಲ, ಆ ಪ್ರಶ್ನೆ ಕೇಳಲು ಅವಕಾಶವೂ ಇಲ್ಲದೇ ಇರಬಹುದು.

ಇಂತಹ ನೂರಾರು ಉದಾಹರಣೆಗಳನ್ನು ನೀಡಬಹುದು. ಇದು ಕೇವಲ ಧಾರ್ಮಿಕತೆ ಮತ್ತು ಆಹಾರಕ್ಕೆ ಮೀಸಲಾಗಿಲ್ಲ, ಜೀವನಶೈಲಿಗೂ ವಿರೋಧ, ನಿರ್ಬಂಧನೆಗಳು ಕಾಣಿಸಿಕೊಂಡಿವೆ. ಮಂಗಳೂರಿನ ಪಬ್ ದಾಳಿ ಮರೆಯಲು ಸಾಧ್ಯವೇ? ಮಹಾರಾಷ್ಟ್ರದ ಮತ್ತು ಕರ್ನಾಟಕದ ಕೆಲವು ಚಿಂತಕರನ್ನು ಅವರ ಚಿಂತನೆಗಳ ಕಾರಣಕ್ಕಾಗಿಯೇ ಕೊಲೆ ಮಾಡಲಾಯಿತು? ಹೌದು, ಇವೆಲ್ಲವುಗಳನ್ನೂ ಒಂದು ಮಾಬ್ ಸೇರಿಯೇ ಮಾಡಿತು ಎಂದು ಹೇಳಲು ಆಗುವುದಿಲ್ಲ. ಆದರೆ ಅಲ್ಲಿ ಚಲಾವಣೆ ಆಗಿದ್ದು ಮಾಬ್‌ಗಳ ಉದ್ದೇಶ. ತಮಗಿಷ್ಟವಿಲ್ಲದ್ದು ಯಾವುದೂ ಆಗಬಾರದು ಎಂಬುದೇ ಇವರ ಆಶಯ; ಅಂದಹಾಗೆ ಯಾರಿವರು? ಸಾಧಾರಣವಾಗಿ ಅಂತಹ ಆಶಯ ಎಲ್ಲರಲ್ಲಿಯೂ ಇರುತ್ತವೆ, ಆದರೆ ಎಲ್ಲರ ಉದ್ದೇಶವೂ ಈಡೇರುವುದಿಲ್ಲ. ಇವರುಗಳ ಉದ್ದೇಶ ಈಡೇರುವುದು ಶುರುವಾಗಿದ್ದು ಇತ್ತೀಚೆಗೆಯೇ. ಜನ ಹೀಗರಬೇಕು ಹಾಗಿರಬೇಕು ಎಂಬ ಇವರ ಗುಪ್ತ ಆಸೆಗೆ ರೆಕ್ಕೆಪುಕ್ಕ ಬಂದಿವೆ. ಅವುಗಳನ್ನು ಈಗ ಚಲಾಯಿಸುತ್ತಿದ್ದಾರೆ. ಜನರು ಮಾತನಾಡುವುದು ಇವರಿಗೆ ಇಷ್ಟವಾಗುವುದಿಲ್ಲ, ಪ್ರಶ್ನೆ ಕೇಳಿದರೆ ಇವರಿಗೆ ಇಷ್ಟವಾಗುವುದಿಲ್ಲ, ಅವರಿಗೆ ಬೇಕಾದ ಆಹಾರ ಸೇವಿಸಿದರೂ ಇವರಿಗೆ ಇಷ್ಟವಾಗುವುದಿಲ್ಲ, ಒಬ್ಬರಿಗೆ ಪುಸ್ತಕ ಓದಿದರೆ ಆಗುವುದಿಲ್ಲ, ತಮ್ಮತಮ್ಮ ಬಾಳಸಂಗಾತಿಯ ಆಯ್ಕೆ ಮಾಡುವುದು ಇವರು ಸಹಿಸುವುದಿಲ್ಲ, ಇವರಿಗೆ ಇಷ್ಟವಾಗದ ಬಟ್ಟೆ ತೊಟ್ಟರೆ ಸಹಿಸುವುದಿಲ್ಲ, ಎಲ್ಲವೂ ತಮ್ಮ ಮೂಗಿನ ನೇರಕ್ಕೆ ನಡೆಯಬೇಕು, ಎಲ್ಲವೂ ತಮ್ಮ ನಿಯಂತ್ರಣದಲ್ಲಿರಬೇಕು ಎಂಬುದು ಇವರ ಮಹದಾಸೆ. ಲೈಂಗಿಕ ಸ್ವಾತಂತ್ರ್ಯ ಬಿಡಿ, ಲೈಂಗಿಕತೆಯ ಮಾತೂ ಇವರಿಗೆ ವರ್ಜ್ಯ. ಇವರೆಂದೂ ತಮ್ಮ ಉದ್ದೇಶಗಳಿಗೆ, ತಮ್ಮ ದ್ವೇಷಕ್ಕೆ ನಿಜವಾದ ಕಾರಣ ಏನು ಎಂದು ಕೇಳಿಕೊಳ್ಳುವುದಿಲ್ಲ. ತಾವೂ ಸ್ವತಂತ್ರರಾಗಿರಬಹುದು ಎಂಬುದು ಇವರಿಗೆ ಹೊಳೆಯುವುದಿಲ್ಲ, ತಮ್ಮೊಳಗೆ ಹುದುಗಿರುವ ಅಸೂಯೆಯನ್ನು ಇವರು ಬಗೆಹರಿಸುವುದಿಲ್ಲ. ವೈವಿಧ್ಯತೆ ಇವರಿಗೆ ತಿಳಿಯುವುದಿಲ್ಲ, ಹಿಂಸೆ ಉನ್ಮಾದ ನೀಡುತ್ತೆ.

ಈಗ ಇವರಿಗೆ ಅಂದರೆ ಮಾಬ್‌ಗಳಿಗೆ ನಿಧಾನವಾಗಿ ಹೆಚ್ಚೆಚ್ಚು ಅಧಿಕಾರ ಸಿಗುತ್ತಿದೆ. ಬೆಂಗಳೂರಿನಂತಹ, ಸಹಿಷ್ಣುತೆಗೆ ಹೆಸರಾದ, ಬಲವಾದ ಪ್ರಗತಿಪರ, ಲೇಖಕರ, ಚಿಂತಕರ, ಹೋರಾಟಗಾರರ ತವರಾದ ಈ ಊರಿನಲ್ಲಿಯೂ ಈ ಮಾಬ್‌ಗಳು ಹೇಳಿದಂತೆ ಅಧಿಕಾರಶಾಹಿ ವರ್ತಿಸುವುದು ಕಾಣಿಸುತ್ತಿದೆ. ಎಚ್ಚೆತ್ತುಕೊಳ್ಳುವರೆ ನಮ್ಮ ಬೆಂಗಳೂರಿಗರು? ಸಮಸ್ಯೆಯ ಮೂಲಕ್ಕೆ ಹೋಗಿ, ಅದನ್ನು ಬಗೆಹರಿಸುವ ಪ್ರಯತ್ನ ಮಾಡುವರೆ? ಬೆಂಗಳೂರಿನ ವೈವಿಧ್ಯತೆಯನ್ನು ಕಾಪಾಡುವ ದೀರ್ಘ ಕಾಲಿಕ ಮಿಷನ್ ಕೈಗೊತ್ತಿಕೊಳ್ಳುವರೆ? ಪ್ರಯತ್ನಗಳಂತೂ ನಡೆದಿವೆ. ಮುಂದೇನಾಗುತ್ತೆ ನೋಡಬೇಕು, ನಮ್ಮ ಜವಾಬ್ದಾರಿ ಏನೆಂದು ಗುರುತಿಸಿಕೊಂಡು, ನಿಭಾಯಿಸುವುದು ಎಲ್ಲರ ಕರ್ತವ್ಯ.

ಪೋಸ್ಟ್‌ಸ್ಕ್ರಿಪ್ಟ್: ಒಬ್ಬ ವಿಜ್ಞಾನಿ ಅಧಿಕಾರಕ್ಕೆ ಬಂದರೆ ವೈಜ್ಞಾನಿಕ ವಲಯದವರು ಸಹಜವಾಗಿಯೇ ಖುಷಿಯಾಗುತ್ತಾರೆ, ವೈಜ್ಞಾನಿಕ ಪ್ರತಿಪಾದನೆಗಳನ್ನು ಗಟ್ಟಿಯಾಗಿ ಮಾಡತೊಡಗುತ್ತಾರೆ, ಒಬ್ಬ ನಿಜವಾದ ಕಲಾವಿದ, ಲೇಖಕಿ ಅಧಿಕಾರಕ್ಕೆ ಬಂದರೆ, ಆ ಕ್ಷೇತ್ರದವರಿಗೆ ಬಲತುಂಬಿದಂತಾಗುತ್ತೆ, ತಮ್ಮ ಕೆಲಸಗಳನ್ನು ಹುರುಪಿನಿಂದ ಮಾಡತೊಡಗುತ್ತಾರೆ. ಇದು ಸಹಜ ಪ್ರಕ್ರಿಯೆ. ಇಂದು ಈ ಮಾಬ್‌ಗೆ ಹುರುಪು ತುಂಬಲಾಗಿದೆ; ಕಾರಣ ಸ್ಪಷ್ಟ. ಇದನ್ನು ಎದುರಿಸಲು ಹೊಸದೊಂದು ರಾಜಕೀಯ ಶಕ್ತಿ ಉದಯವಾಗಲಿದೆಯೇ ಎಂಬುದೇ
ನಮ್ಮೆದುರಿಗಿರುವ ಪ್ರಶ್ನೆ.


  • ರಾಜಶೇಖರ ಅಕ್ಕಿ, ಸಿನಿಮಾ ಉತ್ಸಾಹಿ ಮತ್ತು ಸಾಮಾಜಿಕ ಕಾರ್ಯಕರ್ತ

ಇದನ್ನೂ ಓದಿ: ನಾಯಕತ್ವ ವ್ಯಕ್ತಿಯೊಬ್ಬರ ‘ದೈವಿಕ ಹಕ್ಕಲ್ಲ’: ರಾಹುಲ್ ಗಾಂಧಿ ವಿರುದ್ದ ಪ್ರಶಾಂತ್‌ ಕಿಶೋರ್‌ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...