Homeಕರ್ನಾಟಕಮುಂಡಗೋಡ: ಅಶುದ್ದ ನೀರು-ಊಟದಿಂದ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ- ಪಾಲಕರಲ್ಲಿ ಆತಂಕ

ಮುಂಡಗೋಡ: ಅಶುದ್ದ ನೀರು-ಊಟದಿಂದ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ- ಪಾಲಕರಲ್ಲಿ ಆತಂಕ

- Advertisement -
- Advertisement -

ಮುಂಡಗೋಡದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅನೈರ್ಮಲ್ಯ, ಅಶುದ್ದ ಊಟ ಮತ್ತು ನೀರಿನಿಂದ ವಿದ್ಯಾರ್ಥಿಗಳ ಆರೋಗ್ಯ ಕೆಡುವ ಭಯ ಮೂಡಿದೆಯೆಂದು ಪಾಲಕರು ತಹಶೀಲ್ದಾರ್‌ಗೆ ದೂರು ಕೊಟ್ಟ ದಿನದ ರಾತ್ರಿಯೇ 9 ವಿದ್ಯಾರ್ಥಿಗಳು ವಾಂತಿ ತಲೆ ನೋವು, ಹೊಟ್ಟೆ ನೋವು ಬಾಧಿಸಿ ಆಸ್ಪತ್ರೆಗೆ ದಾಖಲಾಗಬೇಕಾದ ಘಟನೆ ನಡೆದಿದೆ. ಸಂಭವನೀಯ ಅನಾಹುತದಿಂದ ವಿದ್ಯಾರ್ಥಿಗಳು ಪಾರಾಗಿ ಮನೆ ಸೇರಿದ್ದಾರಾದರೂ ಶಾಲೆಯ ಅವ್ಯವಸ್ಥೆ ಬಗ್ಗೆ ಆತಂಕ, ಆಕ್ರೋಶ ಭರಿತ ಟೀಕೆ-ಟಿಪ್ಪಣಿ ವ್ಯಕ್ತವಾಗುತ್ತಿದೆ.

ಶುಕ್ರವಾರ ರಾತ್ರಿ ವಿದ್ಯಾರ್ಥಿಗಳು ಊಟ ಮುಗಿಸಿ ತಮ್ಮ ತಮ್ಮ ಕೊಠಡಿ ಸೇರಿಕೊಂಡಿದ್ದರು. ಆಗ ಇದ್ದಕ್ಕಿದ್ದಂತೆಯೆ 7 ಮತ್ತು 8ನೇ ತರಗತಿಗೆ ಸೇರಿದ ಓರ್ವ ಹುಡುಗ ಹಾಗು 8 ಹುಡುಗಿಯರಿಗೆ ವಾಂತಿ ಶುರುವಾಗಿದೆ. ಇನ್ನು ಕೆಲವರು ಹೊಟ್ಟೆ ನೋವು ಮತ್ತು ತಲೆ ನೋವಿನಿಂದ ಬಳಲತೊಡಗಿದರು. ಹಾಸ್ಟೇಲ್ ನರ್ಸ್ ರಾತ್ರಿಯೇ ಸರ್ಕಾರಿ ಆಸ್ಪತ್ರೆಗೆ 9 ವಿದ್ಯಾರ್ಥಿಗಳನ್ನು ದಾಖಲಿಸಿದ್ದಾರೆ. ಇವರಲ್ಲಿ 8 ವಿದ್ಯಾರ್ಥಿಗಳು ಗುಣಮುಖರಾಗಿ ಹಾಸ್ಟೇಲ್ ಸೇರಿದರೆ, ಒಬ್ಬ ವಿದ್ಯಾರ್ಥಿನಿ ಮಾತ್ರ ಹೆಚ್ಚು ಅಸ್ವಸ್ಥಳಾಗಿದ್ದರಿಂದ ಶನಿವಾರ ಸಂಜೆ ತನಕವೂ ಆಸ್ಪತ್ರೆಯಲ್ಲೆ ಇರಬೇಕಾಯಿತು.

ಕಲುಷಿತ ಆಹಾರದಿಂದ ತಮ್ಮ ಮಕ್ಕಳ ಆರೋಗ್ಯ ಹದಗೆಟ್ಟಿದೆಯೆಂದು ಪಾಲಕರು ಆಕ್ರೋಶಿತರಾಗಿದ್ದರು. ಪಾಲಕರ ಈ ಅನುಮಾನಕ್ಕೂ ಕಾರಣವಿತ್ತು. ಕೆಲ ದಿನಗಳ ಹಿಂದೆ ವಿದ್ಯಾರ್ಥಿಗಳಿಗೆ ಕೊಟ್ಟ ಊಟದಲ್ಲಿ ಹುಳುಗಳು ಕಂಡುಬಂದಿತ್ತು. ಈ ಕುರಿತು ತಹಶೀಲ್ದಾರ್‌ರಿಗೆ ದೂರು ಸಹ ನೀಡಲಾಗಿತ್ತು. ಆಹಾರ ಪದಾರ್ಥ ಸರಿಯಾಗಿ ಶುಚಿಗೊಳಿಸದೆ ಅಡಿಗೆ ತಯಾರಿಸದ್ದರಿಂದ ಹುಳುಗಳು ಊಟದಲ್ಲಿ ಬರಲು ಕಾಣವಾಗಿತ್ತೆಂದು ವಾರ್ಡನ್ ಹೇಳಿದ್ದರು.

ಆದರೆ ಈ ಬಾರಿ ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಲು ಕಲುಷಿತ ನೀರು ಕಾರಣವಾಗಿತ್ತು. ಶಾಲೆಯ ಕುಡಿಯುವ ನೀರನ್ನು ಶುದ್ದ ಮಾಡಲೆಂದು ಟ್ಯಾಂಕಿಗೆ ಬೆರೆಸಿದ ಕ್ಲೋರಿನ್‌ನಿಂದ ಸಮಸ್ಯೆಯಾಗಿದೆಯೆಂದು ತಾಲ್ಲೂಕು ಆಸ್ಪತ್ರೆ ಆಡಳಿತಾಧಿಕಾರಿ ಡಾ. ಎಚ್.ಎಫ್.ಇಂಗಳೆೆ ತಿಳಿಸಿದ್ದಾರೆ. ಮಿತಿ ಮೀರಿ ಕ್ಲೋರಿನ್ ಬೆರೆಸಿದ್ದು ಅಥವಾ ಕ್ಲೋರಿನ್ ಪರಿಣಾಮ ಕಡಿಮೆಯಾಗಿ ಕುಡಿಯಲು ಯೋಗ್ಯವಾಗುವ ಮೊದಲೆ ಹೊಣೆಗೇಡಿತನದಿಂದ ವಿದ್ಯಾಥಿಗಳಿಗೆ ನೀಡಿದ್ದರಿಂದ ಆರೋಗ್ಯ ಹದಗೆಟ್ಟಿದೆಯೆನ್ನಲಾಗಿದೆ.

ಶುದ್ದ ಕುಡಿಯುವ ನೀರಿನ ಘಟಕ ಶಾಲೆಗೆ ಮಂಜೂರಾಗಿ ಹಲವು ದಿನವಾಗಿದ್ದರೂ ಅದಿನ್ನು ಸ್ಥಾಪಿಸಲಾಗಿಲ್ಲ. ಘಟಕಕ್ಕೆ ಬೇಕಾದ ಸಾಮಗ್ರಿಗಳು ಬಂದಿವೆ. ಆದರೆ ಅದನ್ನು ಜೋಡಿಸಲಾಗಿಲ್ಲ. ಹೀಗಾಗಿ ಮಕ್ಕಳು ಶುದ್ದ ನೀರಿನಿಂದ ವಂಚಿತರಾಗಿ ಕಷ್ಟ ಎದುರಿಸುವಂತಾಗಿದೆಯೆಂದು ಪಾಲಕರು ಹೇಳುತ್ತಾರೆ. ಈ ಸಲ ಬಟ್ಟೆ, ಪುಸ್ತಕ ವಿತರಣೆಯಾಗಿಲ್ಲವೆಂದು ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಶಿಕ್ಷಕರಿಗೆ ಮಕ್ಕಳ ಬಗ್ಗೆ ಕಾಳಜಿಯಿಲ್ಲವೆಂದು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದು, 9 ವಿದ್ಯಾರ್ಥಿಗಳು ಅಸ್ವಸ್ಥರಾದಾಗ ಆಸ್ಪತ್ರೆ ಸೇರಿಸಲು ನರ್ಸ್‌ಗೆ ಯಾವ ಶಿಕ್ಷಕರೂ ನೆರವಿಗೆ ಬರಲಿಲ್ಲವೆಂದು ಹೇಳಿದ್ದಾರೆ. ಶಾಲೆಯ ಹಿಂಬದಿಯ ವಸತಿ ಗ್ರಹದಲ್ಲೆ ಇದ್ದರು ಶಿಕ್ಷರು ಉದಾಸೀನ ತೋರಿಸಿದ್ದು ಅಮಾನವೀಯವೆಂದು ಪಾಲಕರು ಹೇಳುತ್ತಿದ್ದಾರೆ.


ಇದನ್ನೂ ಓದಿ: ’ಸಂಗೀತ ಕದನವನ್ನು ತಪ್ಪಿಸುತ್ತದೆ, ಸರಿಗಮಪಕ್ಕೆ ಬೇಗ ಬಂದು ಸೇರಿಕೊಳ್ಳುತ್ತೇನೆ’: ಡಾ. ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...