Homeಕರ್ನಾಟಕಮುಂಡಗೋಡ: ಅಶುದ್ದ ನೀರು-ಊಟದಿಂದ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ- ಪಾಲಕರಲ್ಲಿ ಆತಂಕ

ಮುಂಡಗೋಡ: ಅಶುದ್ದ ನೀರು-ಊಟದಿಂದ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ- ಪಾಲಕರಲ್ಲಿ ಆತಂಕ

- Advertisement -
- Advertisement -

ಮುಂಡಗೋಡದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅನೈರ್ಮಲ್ಯ, ಅಶುದ್ದ ಊಟ ಮತ್ತು ನೀರಿನಿಂದ ವಿದ್ಯಾರ್ಥಿಗಳ ಆರೋಗ್ಯ ಕೆಡುವ ಭಯ ಮೂಡಿದೆಯೆಂದು ಪಾಲಕರು ತಹಶೀಲ್ದಾರ್‌ಗೆ ದೂರು ಕೊಟ್ಟ ದಿನದ ರಾತ್ರಿಯೇ 9 ವಿದ್ಯಾರ್ಥಿಗಳು ವಾಂತಿ ತಲೆ ನೋವು, ಹೊಟ್ಟೆ ನೋವು ಬಾಧಿಸಿ ಆಸ್ಪತ್ರೆಗೆ ದಾಖಲಾಗಬೇಕಾದ ಘಟನೆ ನಡೆದಿದೆ. ಸಂಭವನೀಯ ಅನಾಹುತದಿಂದ ವಿದ್ಯಾರ್ಥಿಗಳು ಪಾರಾಗಿ ಮನೆ ಸೇರಿದ್ದಾರಾದರೂ ಶಾಲೆಯ ಅವ್ಯವಸ್ಥೆ ಬಗ್ಗೆ ಆತಂಕ, ಆಕ್ರೋಶ ಭರಿತ ಟೀಕೆ-ಟಿಪ್ಪಣಿ ವ್ಯಕ್ತವಾಗುತ್ತಿದೆ.

ಶುಕ್ರವಾರ ರಾತ್ರಿ ವಿದ್ಯಾರ್ಥಿಗಳು ಊಟ ಮುಗಿಸಿ ತಮ್ಮ ತಮ್ಮ ಕೊಠಡಿ ಸೇರಿಕೊಂಡಿದ್ದರು. ಆಗ ಇದ್ದಕ್ಕಿದ್ದಂತೆಯೆ 7 ಮತ್ತು 8ನೇ ತರಗತಿಗೆ ಸೇರಿದ ಓರ್ವ ಹುಡುಗ ಹಾಗು 8 ಹುಡುಗಿಯರಿಗೆ ವಾಂತಿ ಶುರುವಾಗಿದೆ. ಇನ್ನು ಕೆಲವರು ಹೊಟ್ಟೆ ನೋವು ಮತ್ತು ತಲೆ ನೋವಿನಿಂದ ಬಳಲತೊಡಗಿದರು. ಹಾಸ್ಟೇಲ್ ನರ್ಸ್ ರಾತ್ರಿಯೇ ಸರ್ಕಾರಿ ಆಸ್ಪತ್ರೆಗೆ 9 ವಿದ್ಯಾರ್ಥಿಗಳನ್ನು ದಾಖಲಿಸಿದ್ದಾರೆ. ಇವರಲ್ಲಿ 8 ವಿದ್ಯಾರ್ಥಿಗಳು ಗುಣಮುಖರಾಗಿ ಹಾಸ್ಟೇಲ್ ಸೇರಿದರೆ, ಒಬ್ಬ ವಿದ್ಯಾರ್ಥಿನಿ ಮಾತ್ರ ಹೆಚ್ಚು ಅಸ್ವಸ್ಥಳಾಗಿದ್ದರಿಂದ ಶನಿವಾರ ಸಂಜೆ ತನಕವೂ ಆಸ್ಪತ್ರೆಯಲ್ಲೆ ಇರಬೇಕಾಯಿತು.

ಕಲುಷಿತ ಆಹಾರದಿಂದ ತಮ್ಮ ಮಕ್ಕಳ ಆರೋಗ್ಯ ಹದಗೆಟ್ಟಿದೆಯೆಂದು ಪಾಲಕರು ಆಕ್ರೋಶಿತರಾಗಿದ್ದರು. ಪಾಲಕರ ಈ ಅನುಮಾನಕ್ಕೂ ಕಾರಣವಿತ್ತು. ಕೆಲ ದಿನಗಳ ಹಿಂದೆ ವಿದ್ಯಾರ್ಥಿಗಳಿಗೆ ಕೊಟ್ಟ ಊಟದಲ್ಲಿ ಹುಳುಗಳು ಕಂಡುಬಂದಿತ್ತು. ಈ ಕುರಿತು ತಹಶೀಲ್ದಾರ್‌ರಿಗೆ ದೂರು ಸಹ ನೀಡಲಾಗಿತ್ತು. ಆಹಾರ ಪದಾರ್ಥ ಸರಿಯಾಗಿ ಶುಚಿಗೊಳಿಸದೆ ಅಡಿಗೆ ತಯಾರಿಸದ್ದರಿಂದ ಹುಳುಗಳು ಊಟದಲ್ಲಿ ಬರಲು ಕಾಣವಾಗಿತ್ತೆಂದು ವಾರ್ಡನ್ ಹೇಳಿದ್ದರು.

ಆದರೆ ಈ ಬಾರಿ ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಲು ಕಲುಷಿತ ನೀರು ಕಾರಣವಾಗಿತ್ತು. ಶಾಲೆಯ ಕುಡಿಯುವ ನೀರನ್ನು ಶುದ್ದ ಮಾಡಲೆಂದು ಟ್ಯಾಂಕಿಗೆ ಬೆರೆಸಿದ ಕ್ಲೋರಿನ್‌ನಿಂದ ಸಮಸ್ಯೆಯಾಗಿದೆಯೆಂದು ತಾಲ್ಲೂಕು ಆಸ್ಪತ್ರೆ ಆಡಳಿತಾಧಿಕಾರಿ ಡಾ. ಎಚ್.ಎಫ್.ಇಂಗಳೆೆ ತಿಳಿಸಿದ್ದಾರೆ. ಮಿತಿ ಮೀರಿ ಕ್ಲೋರಿನ್ ಬೆರೆಸಿದ್ದು ಅಥವಾ ಕ್ಲೋರಿನ್ ಪರಿಣಾಮ ಕಡಿಮೆಯಾಗಿ ಕುಡಿಯಲು ಯೋಗ್ಯವಾಗುವ ಮೊದಲೆ ಹೊಣೆಗೇಡಿತನದಿಂದ ವಿದ್ಯಾಥಿಗಳಿಗೆ ನೀಡಿದ್ದರಿಂದ ಆರೋಗ್ಯ ಹದಗೆಟ್ಟಿದೆಯೆನ್ನಲಾಗಿದೆ.

ಶುದ್ದ ಕುಡಿಯುವ ನೀರಿನ ಘಟಕ ಶಾಲೆಗೆ ಮಂಜೂರಾಗಿ ಹಲವು ದಿನವಾಗಿದ್ದರೂ ಅದಿನ್ನು ಸ್ಥಾಪಿಸಲಾಗಿಲ್ಲ. ಘಟಕಕ್ಕೆ ಬೇಕಾದ ಸಾಮಗ್ರಿಗಳು ಬಂದಿವೆ. ಆದರೆ ಅದನ್ನು ಜೋಡಿಸಲಾಗಿಲ್ಲ. ಹೀಗಾಗಿ ಮಕ್ಕಳು ಶುದ್ದ ನೀರಿನಿಂದ ವಂಚಿತರಾಗಿ ಕಷ್ಟ ಎದುರಿಸುವಂತಾಗಿದೆಯೆಂದು ಪಾಲಕರು ಹೇಳುತ್ತಾರೆ. ಈ ಸಲ ಬಟ್ಟೆ, ಪುಸ್ತಕ ವಿತರಣೆಯಾಗಿಲ್ಲವೆಂದು ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಶಿಕ್ಷಕರಿಗೆ ಮಕ್ಕಳ ಬಗ್ಗೆ ಕಾಳಜಿಯಿಲ್ಲವೆಂದು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದು, 9 ವಿದ್ಯಾರ್ಥಿಗಳು ಅಸ್ವಸ್ಥರಾದಾಗ ಆಸ್ಪತ್ರೆ ಸೇರಿಸಲು ನರ್ಸ್‌ಗೆ ಯಾವ ಶಿಕ್ಷಕರೂ ನೆರವಿಗೆ ಬರಲಿಲ್ಲವೆಂದು ಹೇಳಿದ್ದಾರೆ. ಶಾಲೆಯ ಹಿಂಬದಿಯ ವಸತಿ ಗ್ರಹದಲ್ಲೆ ಇದ್ದರು ಶಿಕ್ಷರು ಉದಾಸೀನ ತೋರಿಸಿದ್ದು ಅಮಾನವೀಯವೆಂದು ಪಾಲಕರು ಹೇಳುತ್ತಿದ್ದಾರೆ.


ಇದನ್ನೂ ಓದಿ: ’ಸಂಗೀತ ಕದನವನ್ನು ತಪ್ಪಿಸುತ್ತದೆ, ಸರಿಗಮಪಕ್ಕೆ ಬೇಗ ಬಂದು ಸೇರಿಕೊಳ್ಳುತ್ತೇನೆ’: ಡಾ. ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...