Homeಕರ್ನಾಟಕಮುಂಡಗೋಡ: ಅಶುದ್ದ ನೀರು-ಊಟದಿಂದ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ- ಪಾಲಕರಲ್ಲಿ ಆತಂಕ

ಮುಂಡಗೋಡ: ಅಶುದ್ದ ನೀರು-ಊಟದಿಂದ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ- ಪಾಲಕರಲ್ಲಿ ಆತಂಕ

- Advertisement -
- Advertisement -

ಮುಂಡಗೋಡದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅನೈರ್ಮಲ್ಯ, ಅಶುದ್ದ ಊಟ ಮತ್ತು ನೀರಿನಿಂದ ವಿದ್ಯಾರ್ಥಿಗಳ ಆರೋಗ್ಯ ಕೆಡುವ ಭಯ ಮೂಡಿದೆಯೆಂದು ಪಾಲಕರು ತಹಶೀಲ್ದಾರ್‌ಗೆ ದೂರು ಕೊಟ್ಟ ದಿನದ ರಾತ್ರಿಯೇ 9 ವಿದ್ಯಾರ್ಥಿಗಳು ವಾಂತಿ ತಲೆ ನೋವು, ಹೊಟ್ಟೆ ನೋವು ಬಾಧಿಸಿ ಆಸ್ಪತ್ರೆಗೆ ದಾಖಲಾಗಬೇಕಾದ ಘಟನೆ ನಡೆದಿದೆ. ಸಂಭವನೀಯ ಅನಾಹುತದಿಂದ ವಿದ್ಯಾರ್ಥಿಗಳು ಪಾರಾಗಿ ಮನೆ ಸೇರಿದ್ದಾರಾದರೂ ಶಾಲೆಯ ಅವ್ಯವಸ್ಥೆ ಬಗ್ಗೆ ಆತಂಕ, ಆಕ್ರೋಶ ಭರಿತ ಟೀಕೆ-ಟಿಪ್ಪಣಿ ವ್ಯಕ್ತವಾಗುತ್ತಿದೆ.

ಶುಕ್ರವಾರ ರಾತ್ರಿ ವಿದ್ಯಾರ್ಥಿಗಳು ಊಟ ಮುಗಿಸಿ ತಮ್ಮ ತಮ್ಮ ಕೊಠಡಿ ಸೇರಿಕೊಂಡಿದ್ದರು. ಆಗ ಇದ್ದಕ್ಕಿದ್ದಂತೆಯೆ 7 ಮತ್ತು 8ನೇ ತರಗತಿಗೆ ಸೇರಿದ ಓರ್ವ ಹುಡುಗ ಹಾಗು 8 ಹುಡುಗಿಯರಿಗೆ ವಾಂತಿ ಶುರುವಾಗಿದೆ. ಇನ್ನು ಕೆಲವರು ಹೊಟ್ಟೆ ನೋವು ಮತ್ತು ತಲೆ ನೋವಿನಿಂದ ಬಳಲತೊಡಗಿದರು. ಹಾಸ್ಟೇಲ್ ನರ್ಸ್ ರಾತ್ರಿಯೇ ಸರ್ಕಾರಿ ಆಸ್ಪತ್ರೆಗೆ 9 ವಿದ್ಯಾರ್ಥಿಗಳನ್ನು ದಾಖಲಿಸಿದ್ದಾರೆ. ಇವರಲ್ಲಿ 8 ವಿದ್ಯಾರ್ಥಿಗಳು ಗುಣಮುಖರಾಗಿ ಹಾಸ್ಟೇಲ್ ಸೇರಿದರೆ, ಒಬ್ಬ ವಿದ್ಯಾರ್ಥಿನಿ ಮಾತ್ರ ಹೆಚ್ಚು ಅಸ್ವಸ್ಥಳಾಗಿದ್ದರಿಂದ ಶನಿವಾರ ಸಂಜೆ ತನಕವೂ ಆಸ್ಪತ್ರೆಯಲ್ಲೆ ಇರಬೇಕಾಯಿತು.

ಕಲುಷಿತ ಆಹಾರದಿಂದ ತಮ್ಮ ಮಕ್ಕಳ ಆರೋಗ್ಯ ಹದಗೆಟ್ಟಿದೆಯೆಂದು ಪಾಲಕರು ಆಕ್ರೋಶಿತರಾಗಿದ್ದರು. ಪಾಲಕರ ಈ ಅನುಮಾನಕ್ಕೂ ಕಾರಣವಿತ್ತು. ಕೆಲ ದಿನಗಳ ಹಿಂದೆ ವಿದ್ಯಾರ್ಥಿಗಳಿಗೆ ಕೊಟ್ಟ ಊಟದಲ್ಲಿ ಹುಳುಗಳು ಕಂಡುಬಂದಿತ್ತು. ಈ ಕುರಿತು ತಹಶೀಲ್ದಾರ್‌ರಿಗೆ ದೂರು ಸಹ ನೀಡಲಾಗಿತ್ತು. ಆಹಾರ ಪದಾರ್ಥ ಸರಿಯಾಗಿ ಶುಚಿಗೊಳಿಸದೆ ಅಡಿಗೆ ತಯಾರಿಸದ್ದರಿಂದ ಹುಳುಗಳು ಊಟದಲ್ಲಿ ಬರಲು ಕಾಣವಾಗಿತ್ತೆಂದು ವಾರ್ಡನ್ ಹೇಳಿದ್ದರು.

ಆದರೆ ಈ ಬಾರಿ ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಲು ಕಲುಷಿತ ನೀರು ಕಾರಣವಾಗಿತ್ತು. ಶಾಲೆಯ ಕುಡಿಯುವ ನೀರನ್ನು ಶುದ್ದ ಮಾಡಲೆಂದು ಟ್ಯಾಂಕಿಗೆ ಬೆರೆಸಿದ ಕ್ಲೋರಿನ್‌ನಿಂದ ಸಮಸ್ಯೆಯಾಗಿದೆಯೆಂದು ತಾಲ್ಲೂಕು ಆಸ್ಪತ್ರೆ ಆಡಳಿತಾಧಿಕಾರಿ ಡಾ. ಎಚ್.ಎಫ್.ಇಂಗಳೆೆ ತಿಳಿಸಿದ್ದಾರೆ. ಮಿತಿ ಮೀರಿ ಕ್ಲೋರಿನ್ ಬೆರೆಸಿದ್ದು ಅಥವಾ ಕ್ಲೋರಿನ್ ಪರಿಣಾಮ ಕಡಿಮೆಯಾಗಿ ಕುಡಿಯಲು ಯೋಗ್ಯವಾಗುವ ಮೊದಲೆ ಹೊಣೆಗೇಡಿತನದಿಂದ ವಿದ್ಯಾಥಿಗಳಿಗೆ ನೀಡಿದ್ದರಿಂದ ಆರೋಗ್ಯ ಹದಗೆಟ್ಟಿದೆಯೆನ್ನಲಾಗಿದೆ.

ಶುದ್ದ ಕುಡಿಯುವ ನೀರಿನ ಘಟಕ ಶಾಲೆಗೆ ಮಂಜೂರಾಗಿ ಹಲವು ದಿನವಾಗಿದ್ದರೂ ಅದಿನ್ನು ಸ್ಥಾಪಿಸಲಾಗಿಲ್ಲ. ಘಟಕಕ್ಕೆ ಬೇಕಾದ ಸಾಮಗ್ರಿಗಳು ಬಂದಿವೆ. ಆದರೆ ಅದನ್ನು ಜೋಡಿಸಲಾಗಿಲ್ಲ. ಹೀಗಾಗಿ ಮಕ್ಕಳು ಶುದ್ದ ನೀರಿನಿಂದ ವಂಚಿತರಾಗಿ ಕಷ್ಟ ಎದುರಿಸುವಂತಾಗಿದೆಯೆಂದು ಪಾಲಕರು ಹೇಳುತ್ತಾರೆ. ಈ ಸಲ ಬಟ್ಟೆ, ಪುಸ್ತಕ ವಿತರಣೆಯಾಗಿಲ್ಲವೆಂದು ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಶಿಕ್ಷಕರಿಗೆ ಮಕ್ಕಳ ಬಗ್ಗೆ ಕಾಳಜಿಯಿಲ್ಲವೆಂದು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದು, 9 ವಿದ್ಯಾರ್ಥಿಗಳು ಅಸ್ವಸ್ಥರಾದಾಗ ಆಸ್ಪತ್ರೆ ಸೇರಿಸಲು ನರ್ಸ್‌ಗೆ ಯಾವ ಶಿಕ್ಷಕರೂ ನೆರವಿಗೆ ಬರಲಿಲ್ಲವೆಂದು ಹೇಳಿದ್ದಾರೆ. ಶಾಲೆಯ ಹಿಂಬದಿಯ ವಸತಿ ಗ್ರಹದಲ್ಲೆ ಇದ್ದರು ಶಿಕ್ಷರು ಉದಾಸೀನ ತೋರಿಸಿದ್ದು ಅಮಾನವೀಯವೆಂದು ಪಾಲಕರು ಹೇಳುತ್ತಿದ್ದಾರೆ.


ಇದನ್ನೂ ಓದಿ: ’ಸಂಗೀತ ಕದನವನ್ನು ತಪ್ಪಿಸುತ್ತದೆ, ಸರಿಗಮಪಕ್ಕೆ ಬೇಗ ಬಂದು ಸೇರಿಕೊಳ್ಳುತ್ತೇನೆ’: ಡಾ. ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...