Homeಕರ್ನಾಟಕಮುಂಡಗೋಡ: ಅಶುದ್ದ ನೀರು-ಊಟದಿಂದ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ- ಪಾಲಕರಲ್ಲಿ ಆತಂಕ

ಮುಂಡಗೋಡ: ಅಶುದ್ದ ನೀರು-ಊಟದಿಂದ ಮೊರಾರ್ಜಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ- ಪಾಲಕರಲ್ಲಿ ಆತಂಕ

- Advertisement -
- Advertisement -

ಮುಂಡಗೋಡದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅನೈರ್ಮಲ್ಯ, ಅಶುದ್ದ ಊಟ ಮತ್ತು ನೀರಿನಿಂದ ವಿದ್ಯಾರ್ಥಿಗಳ ಆರೋಗ್ಯ ಕೆಡುವ ಭಯ ಮೂಡಿದೆಯೆಂದು ಪಾಲಕರು ತಹಶೀಲ್ದಾರ್‌ಗೆ ದೂರು ಕೊಟ್ಟ ದಿನದ ರಾತ್ರಿಯೇ 9 ವಿದ್ಯಾರ್ಥಿಗಳು ವಾಂತಿ ತಲೆ ನೋವು, ಹೊಟ್ಟೆ ನೋವು ಬಾಧಿಸಿ ಆಸ್ಪತ್ರೆಗೆ ದಾಖಲಾಗಬೇಕಾದ ಘಟನೆ ನಡೆದಿದೆ. ಸಂಭವನೀಯ ಅನಾಹುತದಿಂದ ವಿದ್ಯಾರ್ಥಿಗಳು ಪಾರಾಗಿ ಮನೆ ಸೇರಿದ್ದಾರಾದರೂ ಶಾಲೆಯ ಅವ್ಯವಸ್ಥೆ ಬಗ್ಗೆ ಆತಂಕ, ಆಕ್ರೋಶ ಭರಿತ ಟೀಕೆ-ಟಿಪ್ಪಣಿ ವ್ಯಕ್ತವಾಗುತ್ತಿದೆ.

ಶುಕ್ರವಾರ ರಾತ್ರಿ ವಿದ್ಯಾರ್ಥಿಗಳು ಊಟ ಮುಗಿಸಿ ತಮ್ಮ ತಮ್ಮ ಕೊಠಡಿ ಸೇರಿಕೊಂಡಿದ್ದರು. ಆಗ ಇದ್ದಕ್ಕಿದ್ದಂತೆಯೆ 7 ಮತ್ತು 8ನೇ ತರಗತಿಗೆ ಸೇರಿದ ಓರ್ವ ಹುಡುಗ ಹಾಗು 8 ಹುಡುಗಿಯರಿಗೆ ವಾಂತಿ ಶುರುವಾಗಿದೆ. ಇನ್ನು ಕೆಲವರು ಹೊಟ್ಟೆ ನೋವು ಮತ್ತು ತಲೆ ನೋವಿನಿಂದ ಬಳಲತೊಡಗಿದರು. ಹಾಸ್ಟೇಲ್ ನರ್ಸ್ ರಾತ್ರಿಯೇ ಸರ್ಕಾರಿ ಆಸ್ಪತ್ರೆಗೆ 9 ವಿದ್ಯಾರ್ಥಿಗಳನ್ನು ದಾಖಲಿಸಿದ್ದಾರೆ. ಇವರಲ್ಲಿ 8 ವಿದ್ಯಾರ್ಥಿಗಳು ಗುಣಮುಖರಾಗಿ ಹಾಸ್ಟೇಲ್ ಸೇರಿದರೆ, ಒಬ್ಬ ವಿದ್ಯಾರ್ಥಿನಿ ಮಾತ್ರ ಹೆಚ್ಚು ಅಸ್ವಸ್ಥಳಾಗಿದ್ದರಿಂದ ಶನಿವಾರ ಸಂಜೆ ತನಕವೂ ಆಸ್ಪತ್ರೆಯಲ್ಲೆ ಇರಬೇಕಾಯಿತು.

ಕಲುಷಿತ ಆಹಾರದಿಂದ ತಮ್ಮ ಮಕ್ಕಳ ಆರೋಗ್ಯ ಹದಗೆಟ್ಟಿದೆಯೆಂದು ಪಾಲಕರು ಆಕ್ರೋಶಿತರಾಗಿದ್ದರು. ಪಾಲಕರ ಈ ಅನುಮಾನಕ್ಕೂ ಕಾರಣವಿತ್ತು. ಕೆಲ ದಿನಗಳ ಹಿಂದೆ ವಿದ್ಯಾರ್ಥಿಗಳಿಗೆ ಕೊಟ್ಟ ಊಟದಲ್ಲಿ ಹುಳುಗಳು ಕಂಡುಬಂದಿತ್ತು. ಈ ಕುರಿತು ತಹಶೀಲ್ದಾರ್‌ರಿಗೆ ದೂರು ಸಹ ನೀಡಲಾಗಿತ್ತು. ಆಹಾರ ಪದಾರ್ಥ ಸರಿಯಾಗಿ ಶುಚಿಗೊಳಿಸದೆ ಅಡಿಗೆ ತಯಾರಿಸದ್ದರಿಂದ ಹುಳುಗಳು ಊಟದಲ್ಲಿ ಬರಲು ಕಾಣವಾಗಿತ್ತೆಂದು ವಾರ್ಡನ್ ಹೇಳಿದ್ದರು.

ಆದರೆ ಈ ಬಾರಿ ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಲು ಕಲುಷಿತ ನೀರು ಕಾರಣವಾಗಿತ್ತು. ಶಾಲೆಯ ಕುಡಿಯುವ ನೀರನ್ನು ಶುದ್ದ ಮಾಡಲೆಂದು ಟ್ಯಾಂಕಿಗೆ ಬೆರೆಸಿದ ಕ್ಲೋರಿನ್‌ನಿಂದ ಸಮಸ್ಯೆಯಾಗಿದೆಯೆಂದು ತಾಲ್ಲೂಕು ಆಸ್ಪತ್ರೆ ಆಡಳಿತಾಧಿಕಾರಿ ಡಾ. ಎಚ್.ಎಫ್.ಇಂಗಳೆೆ ತಿಳಿಸಿದ್ದಾರೆ. ಮಿತಿ ಮೀರಿ ಕ್ಲೋರಿನ್ ಬೆರೆಸಿದ್ದು ಅಥವಾ ಕ್ಲೋರಿನ್ ಪರಿಣಾಮ ಕಡಿಮೆಯಾಗಿ ಕುಡಿಯಲು ಯೋಗ್ಯವಾಗುವ ಮೊದಲೆ ಹೊಣೆಗೇಡಿತನದಿಂದ ವಿದ್ಯಾಥಿಗಳಿಗೆ ನೀಡಿದ್ದರಿಂದ ಆರೋಗ್ಯ ಹದಗೆಟ್ಟಿದೆಯೆನ್ನಲಾಗಿದೆ.

ಶುದ್ದ ಕುಡಿಯುವ ನೀರಿನ ಘಟಕ ಶಾಲೆಗೆ ಮಂಜೂರಾಗಿ ಹಲವು ದಿನವಾಗಿದ್ದರೂ ಅದಿನ್ನು ಸ್ಥಾಪಿಸಲಾಗಿಲ್ಲ. ಘಟಕಕ್ಕೆ ಬೇಕಾದ ಸಾಮಗ್ರಿಗಳು ಬಂದಿವೆ. ಆದರೆ ಅದನ್ನು ಜೋಡಿಸಲಾಗಿಲ್ಲ. ಹೀಗಾಗಿ ಮಕ್ಕಳು ಶುದ್ದ ನೀರಿನಿಂದ ವಂಚಿತರಾಗಿ ಕಷ್ಟ ಎದುರಿಸುವಂತಾಗಿದೆಯೆಂದು ಪಾಲಕರು ಹೇಳುತ್ತಾರೆ. ಈ ಸಲ ಬಟ್ಟೆ, ಪುಸ್ತಕ ವಿತರಣೆಯಾಗಿಲ್ಲವೆಂದು ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಶಿಕ್ಷಕರಿಗೆ ಮಕ್ಕಳ ಬಗ್ಗೆ ಕಾಳಜಿಯಿಲ್ಲವೆಂದು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದು, 9 ವಿದ್ಯಾರ್ಥಿಗಳು ಅಸ್ವಸ್ಥರಾದಾಗ ಆಸ್ಪತ್ರೆ ಸೇರಿಸಲು ನರ್ಸ್‌ಗೆ ಯಾವ ಶಿಕ್ಷಕರೂ ನೆರವಿಗೆ ಬರಲಿಲ್ಲವೆಂದು ಹೇಳಿದ್ದಾರೆ. ಶಾಲೆಯ ಹಿಂಬದಿಯ ವಸತಿ ಗ್ರಹದಲ್ಲೆ ಇದ್ದರು ಶಿಕ್ಷರು ಉದಾಸೀನ ತೋರಿಸಿದ್ದು ಅಮಾನವೀಯವೆಂದು ಪಾಲಕರು ಹೇಳುತ್ತಿದ್ದಾರೆ.


ಇದನ್ನೂ ಓದಿ: ’ಸಂಗೀತ ಕದನವನ್ನು ತಪ್ಪಿಸುತ್ತದೆ, ಸರಿಗಮಪಕ್ಕೆ ಬೇಗ ಬಂದು ಸೇರಿಕೊಳ್ಳುತ್ತೇನೆ’: ಡಾ. ಹಂಸಲೇಖ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...