Homeಮುಖಪುಟಮುಂಗೆರ್‌ ಘರ್ಷಣೆ: ’ಜನರಲ್ ಡಯರ್ ಆಗಲು ಆದೇಶ ನೀಡಿದವರ್‍ಯಾರು?' ತೇಜಸ್ವಿ ಆಕ್ರೋಶ

ಮುಂಗೆರ್‌ ಘರ್ಷಣೆ: ’ಜನರಲ್ ಡಯರ್ ಆಗಲು ಆದೇಶ ನೀಡಿದವರ್‍ಯಾರು?’ ತೇಜಸ್ವಿ ಆಕ್ರೋಶ

ದುರ್ಗಾ ಮೂರ್ತಿ ವಿಸರ್ಜನೆಯ ಗುಂಪು ಘರ್ಷಣೆಯಲ್ಲಿ ಜನರಲ್ ಡಯರ್ ಆಗಲು ಪೊಲೀಸರಿಗೆ ಆದೇಶ ನೀಡಿದವರು ಯಾರು? ಎಂದು ತೇಜಸ್ವಿ ಯಾದವ್ ವಾಗ್ದಾಳಿ ನಡೆಸಿದ್ದಾರೆ.

- Advertisement -
- Advertisement -

ನಿನ್ನೆ ಬಿಹಾರದ ಮುಂಗೆರ್‌ನಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಪೊಲೀಸರು ಮತ್ತು ಜನ ಸಮೂಹದ ನಡುವೆ ನಡೆದಿದ್ದ ಗುಂಪು ಘರ್ಷಣೆ ಬಗ್ಗೆ ರಾಷ್ಟ್ರೀಯ ಜನತಾದಳದ ತೇಜಸ್ವಿ ಯಾದವ್ ಅವರು ಬಿಹಾರದ ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಗುಂಪು ಘರ್ಷಣೆಯಲ್ಲಿ ಬುಲೆಟ್ ತಾಗಿ 18 ವರ್ಷದ ಯುವಕ ಸಾವನ್ನಪ್ಪಿದ್ದಾರೆ. 20 ಮಂದಿ ಪೊಲೀಸರು ಸೇರಿದಂತೆ 27 ಜನರು ಗಾಯಗೊಂಡಿದ್ದಾರೆ. ಘರ್ಷಣೆಯಲ್ಲಿ ಕೆಲವರು ಬಂದೂಕುಗಳನ್ನು ಬಳಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.

ಮುಂಗೆರ್‌ ಘರ್ಷಣೆ ಕ್ರೂರ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ನಿರ್ವಹಿಸದ ರಾಜ್ಯ ಸರ್ಕಾರದ ಒಟ್ಟು ಅಸಮರ್ಥತೆಗೆ ಹಿಡಿದ ಕನ್ನಡಿ ಎಂದು ಆರ್‌ಜೆಡಿ-ಕಾಂಗ್ರೆಸ್ ಮತ್ತು ಎಡ ಪಕ್ಷಗಳನ್ನು ಒಳಗೊಂಡ ಪ್ರತಿಪಕ್ಷ ಗ್ರ್ಯಾಂಡ್ ಅಲೈಯನ್ಸ್ ವಾಗ್ದಾಳಿ ನಡೆಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ನಿತೀಶ್ ಕುಮಾರ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಗ್ರ್ಯಾಂಡ್ ಅಲೈಯನ್ಸ್ ನಾಯಕರು ಒತ್ತಾಯಿಸಿದ್ದಾರೆ. “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಸಂಪೂರ್ಣ ವೈಫಲ್ಯ ಇರುವುದರಿಂದ ಈ ಸರ್ಕಾರವನ್ನು ಪ್ರಧಾನಿ ತಕ್ಷಣ ವಜಾಗೊಳಿಸಬೇಕೆಂದು ನಾವು ಬಯಸುತ್ತೇವೆ” ಎಂದು ಜಿಎ ನಾಯಕರು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ದುರ್ಗಾ ಮೂರ್ತಿ ವಿಸರ್ಜನೆಯಲ್ಲಿ ಗಲಾಟೆ, ಪೊಲೀಸರಿಂದ ಅಮಾನವೀಯ ದಾಳಿ: ಓರ್ವ ಬಲಿ, 27 ಮಂದಿಗೆ ಗಾಯ

ಪಾಟ್ನಾದಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರತಿಪಕ್ಷದ ನಾಯಕ ತೇಜಶ್ವಿ ಯಾದವ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೆವಾಲಾ ಮತ್ತು ಸಿಪಿಐ-ಎಂಎಲ್ (ಲಿಬರೇಶನ್) ಹಿರಿಯ ಮುಖಂಡ ಕವಿತಾ ಕೃಷ್ಣನ್ ಸೇರಿದಂತೆ ಎಡ ಮುಖಂಡರು ಮುಂಗೆರ್ ಘಟನೆಯನ್ನು ಖಂಡಿಸಿದ್ದಾರೆ.

“ಗುಂಡಿನ ದಾಳಿ ನಡೆಯುತ್ತಿರುವಾಗ ಗೃಹ ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಏನು ಮಾಡುತ್ತಿದ್ದರು? ಮುಂಗೆರ್‌ನಲ್ಲಿ ಜನರಲ್ ಡಯರ್ ಆಗಲು ಪೊಲೀಸರಿಗೆ ಆದೇಶ ನೀಡಿದವರು ಯಾರು? ” ಎಂದು ತೇಜಸ್ವಿ ಯಾದವ್ ವಾಗ್ದಾಳಿ ನಡೆಸಿದ್ದಾರೆ.

ಈ ಮೂಲಕ ಏಪ್ರಿಲ್ 13, 1919 ರ ಕುಖ್ಯಾತ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡಕ್ಕೆ ಮುಂಗೆರ್ ಘಟನೆಯನ್ನು ಹೋಲಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಲಿಪಿ ಸಿಂಗ್ ಅವರನ್ನು ಜಲಿಯನ್ ವಾಲಾ ಬಾಗ್‌ ಹತ್ಯಾಕಾಂಡದ ಜನರಲ್ ಡಯರ್ ಅವರೊಂದಿಗೆ ಹೋಲಿಸಿದ್ದಾರೆ.

ದುರ್ಗಾ ಪೂಜಾ ಸಂಘಟಕರು ದುರ್ಗಾ ಮೂರ್ತಿ ವಿಸರ್ಜನೆಗೆ ತೆರಳುವ ಸಂದರ್ಭದಲ್ಲಿ ಜೋರಾಗಿ ಡಿಜೆ ಸಂಗೀತ ಹಾಕಲಾಗಿತ್ತು. ರಾತ್ರಿ 11.50 ರ ಸುಮಾರಿಗೆ ಪೊಲೀಸ್ ಅಧಿಕಾರಿಗಳು ವಿಗ್ರಹಗಳನ್ನು ಹೆಗಲ ಮೇಲೆ ಹೊತ್ತುಕೊಂಡಿದ್ದ ನಾಲ್ವರನ್ನು ಥಳಿಸಿದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಘರ್ಷಣೆ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರು.

ಇಂದು ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದೆ. ಈ ನಡುವೆ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಹಂತದ ಚುನಾವಣಾ ಅಭಿಯಾನಕ್ಕಾಗಿ ಪ್ರಧಾನಿ ಮೋದಿ ದರ್ಬಂಗಾ, ಮುಜಾರ್ಫಪುರ ಮತ್ತು ಪಾಟ್ನಾದಲ್ಲಿ ಮೂರು ರ್‍ಯಾಲಿ ನಡೆಸಲು ಮುಂದಾಗಿದ್ದಾರೆ.


ಇದನ್ನೂ ಓದಿ: ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿಕೂಟದ ಪಕ್ಷಗಳಿಂದ ಪ್ರತ್ಯೇಕ ಜಾಹೀರಾತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...