Homeಮುಖಪುಟಮುಂಗೆರ್‌ ಘರ್ಷಣೆ: ’ಜನರಲ್ ಡಯರ್ ಆಗಲು ಆದೇಶ ನೀಡಿದವರ್‍ಯಾರು?' ತೇಜಸ್ವಿ ಆಕ್ರೋಶ

ಮುಂಗೆರ್‌ ಘರ್ಷಣೆ: ’ಜನರಲ್ ಡಯರ್ ಆಗಲು ಆದೇಶ ನೀಡಿದವರ್‍ಯಾರು?’ ತೇಜಸ್ವಿ ಆಕ್ರೋಶ

ದುರ್ಗಾ ಮೂರ್ತಿ ವಿಸರ್ಜನೆಯ ಗುಂಪು ಘರ್ಷಣೆಯಲ್ಲಿ ಜನರಲ್ ಡಯರ್ ಆಗಲು ಪೊಲೀಸರಿಗೆ ಆದೇಶ ನೀಡಿದವರು ಯಾರು? ಎಂದು ತೇಜಸ್ವಿ ಯಾದವ್ ವಾಗ್ದಾಳಿ ನಡೆಸಿದ್ದಾರೆ.

- Advertisement -
- Advertisement -

ನಿನ್ನೆ ಬಿಹಾರದ ಮುಂಗೆರ್‌ನಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಪೊಲೀಸರು ಮತ್ತು ಜನ ಸಮೂಹದ ನಡುವೆ ನಡೆದಿದ್ದ ಗುಂಪು ಘರ್ಷಣೆ ಬಗ್ಗೆ ರಾಷ್ಟ್ರೀಯ ಜನತಾದಳದ ತೇಜಸ್ವಿ ಯಾದವ್ ಅವರು ಬಿಹಾರದ ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಗುಂಪು ಘರ್ಷಣೆಯಲ್ಲಿ ಬುಲೆಟ್ ತಾಗಿ 18 ವರ್ಷದ ಯುವಕ ಸಾವನ್ನಪ್ಪಿದ್ದಾರೆ. 20 ಮಂದಿ ಪೊಲೀಸರು ಸೇರಿದಂತೆ 27 ಜನರು ಗಾಯಗೊಂಡಿದ್ದಾರೆ. ಘರ್ಷಣೆಯಲ್ಲಿ ಕೆಲವರು ಬಂದೂಕುಗಳನ್ನು ಬಳಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.

ಮುಂಗೆರ್‌ ಘರ್ಷಣೆ ಕ್ರೂರ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ನಿರ್ವಹಿಸದ ರಾಜ್ಯ ಸರ್ಕಾರದ ಒಟ್ಟು ಅಸಮರ್ಥತೆಗೆ ಹಿಡಿದ ಕನ್ನಡಿ ಎಂದು ಆರ್‌ಜೆಡಿ-ಕಾಂಗ್ರೆಸ್ ಮತ್ತು ಎಡ ಪಕ್ಷಗಳನ್ನು ಒಳಗೊಂಡ ಪ್ರತಿಪಕ್ಷ ಗ್ರ್ಯಾಂಡ್ ಅಲೈಯನ್ಸ್ ವಾಗ್ದಾಳಿ ನಡೆಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ನಿತೀಶ್ ಕುಮಾರ್ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಗ್ರ್ಯಾಂಡ್ ಅಲೈಯನ್ಸ್ ನಾಯಕರು ಒತ್ತಾಯಿಸಿದ್ದಾರೆ. “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಸಂಪೂರ್ಣ ವೈಫಲ್ಯ ಇರುವುದರಿಂದ ಈ ಸರ್ಕಾರವನ್ನು ಪ್ರಧಾನಿ ತಕ್ಷಣ ವಜಾಗೊಳಿಸಬೇಕೆಂದು ನಾವು ಬಯಸುತ್ತೇವೆ” ಎಂದು ಜಿಎ ನಾಯಕರು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ ದುರ್ಗಾ ಮೂರ್ತಿ ವಿಸರ್ಜನೆಯಲ್ಲಿ ಗಲಾಟೆ, ಪೊಲೀಸರಿಂದ ಅಮಾನವೀಯ ದಾಳಿ: ಓರ್ವ ಬಲಿ, 27 ಮಂದಿಗೆ ಗಾಯ

ಪಾಟ್ನಾದಲ್ಲಿ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರತಿಪಕ್ಷದ ನಾಯಕ ತೇಜಶ್ವಿ ಯಾದವ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸಿಂಗ್ ಸುರ್ಜೆವಾಲಾ ಮತ್ತು ಸಿಪಿಐ-ಎಂಎಲ್ (ಲಿಬರೇಶನ್) ಹಿರಿಯ ಮುಖಂಡ ಕವಿತಾ ಕೃಷ್ಣನ್ ಸೇರಿದಂತೆ ಎಡ ಮುಖಂಡರು ಮುಂಗೆರ್ ಘಟನೆಯನ್ನು ಖಂಡಿಸಿದ್ದಾರೆ.

“ಗುಂಡಿನ ದಾಳಿ ನಡೆಯುತ್ತಿರುವಾಗ ಗೃಹ ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಏನು ಮಾಡುತ್ತಿದ್ದರು? ಮುಂಗೆರ್‌ನಲ್ಲಿ ಜನರಲ್ ಡಯರ್ ಆಗಲು ಪೊಲೀಸರಿಗೆ ಆದೇಶ ನೀಡಿದವರು ಯಾರು? ” ಎಂದು ತೇಜಸ್ವಿ ಯಾದವ್ ವಾಗ್ದಾಳಿ ನಡೆಸಿದ್ದಾರೆ.

ಈ ಮೂಲಕ ಏಪ್ರಿಲ್ 13, 1919 ರ ಕುಖ್ಯಾತ ಜಲಿಯನ್ ವಾಲಾ ಬಾಗ್ ಹತ್ಯಾಕಾಂಡಕ್ಕೆ ಮುಂಗೆರ್ ಘಟನೆಯನ್ನು ಹೋಲಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಲಿಪಿ ಸಿಂಗ್ ಅವರನ್ನು ಜಲಿಯನ್ ವಾಲಾ ಬಾಗ್‌ ಹತ್ಯಾಕಾಂಡದ ಜನರಲ್ ಡಯರ್ ಅವರೊಂದಿಗೆ ಹೋಲಿಸಿದ್ದಾರೆ.

ದುರ್ಗಾ ಪೂಜಾ ಸಂಘಟಕರು ದುರ್ಗಾ ಮೂರ್ತಿ ವಿಸರ್ಜನೆಗೆ ತೆರಳುವ ಸಂದರ್ಭದಲ್ಲಿ ಜೋರಾಗಿ ಡಿಜೆ ಸಂಗೀತ ಹಾಕಲಾಗಿತ್ತು. ರಾತ್ರಿ 11.50 ರ ಸುಮಾರಿಗೆ ಪೊಲೀಸ್ ಅಧಿಕಾರಿಗಳು ವಿಗ್ರಹಗಳನ್ನು ಹೆಗಲ ಮೇಲೆ ಹೊತ್ತುಕೊಂಡಿದ್ದ ನಾಲ್ವರನ್ನು ಥಳಿಸಿದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಘರ್ಷಣೆ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರು.

ಇಂದು ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದೆ. ಈ ನಡುವೆ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಹಂತದ ಚುನಾವಣಾ ಅಭಿಯಾನಕ್ಕಾಗಿ ಪ್ರಧಾನಿ ಮೋದಿ ದರ್ಬಂಗಾ, ಮುಜಾರ್ಫಪುರ ಮತ್ತು ಪಾಟ್ನಾದಲ್ಲಿ ಮೂರು ರ್‍ಯಾಲಿ ನಡೆಸಲು ಮುಂದಾಗಿದ್ದಾರೆ.


ಇದನ್ನೂ ಓದಿ: ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿಕೂಟದ ಪಕ್ಷಗಳಿಂದ ಪ್ರತ್ಯೇಕ ಜಾಹೀರಾತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...