Homeಕರ್ನಾಟಕಪೌರಾಯುಕ್ತೆಗೆ ಧಮ್ಕಿ ಪ್ರಕರಣ : ಕರ್ನಾಟಕ-ಕೇರಳ ಗಡಿಯಲ್ಲಿ ರಾಜೀವ್‌ ಗೌಡ ಬಂಧನ; ಆಶ್ರಯ ಕೊಟ್ಟ ಮಂಗಳೂರಿನ...

ಪೌರಾಯುಕ್ತೆಗೆ ಧಮ್ಕಿ ಪ್ರಕರಣ : ಕರ್ನಾಟಕ-ಕೇರಳ ಗಡಿಯಲ್ಲಿ ರಾಜೀವ್‌ ಗೌಡ ಬಂಧನ; ಆಶ್ರಯ ಕೊಟ್ಟ ಮಂಗಳೂರಿನ ಉದ್ಯಮಿ ವಶಕ್ಕೆ

- Advertisement -
- Advertisement -

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಜಿ. ಅಮೃತಗೌಡ ಅವರಿಗೆ ದೂರವಾಣಿ ಮೂಲಕ ಧಮ್ಕಿ ಹಾಕಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ರಾಜೀವ್‌ ಗೌಡ ಅವರನ್ನು ಪೊಲೀಸರು ಸೋಮವಾರ (ಜ.26) ಕರ್ನಾಟಕ-ಕೇರಳ ಗಡಿ ಸಮೀಪ ಕೇರಳ ರಾಜ್ಯದ ವ್ಯಾಪ್ತಿಯಲ್ಲಿ ಬಂಧಿಸಿದ್ದಾರೆ.

ರಾಜೀವ್‌ ಗೌಡ ಅವರು ಕಳೆದ 12-13 ದಿನಗಳಿಂದ ತಲೆಮರೆಸಿಕೊಂಡಿದ್ದರು. ಎಫ್‌ಐಆರ್‌ ರದ್ದತಿ ಮತ್ತು ನಿರೀಕ್ಷಣಾ ಜಾಮೀನು ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಜನವರಿ 22ರಂದು ಹೈಕೋರ್ಟ್ ತಿರಸ್ಕರಿಸಿತ್ತು. ಅಲ್ಲದೆ, ಜನವರಿ 24ರಂದು ಅವರನ್ನು ಕೆಪಿಸಿಸಿ ಶಿಸ್ತುಸಮಿತಿ ಕಾಂಗ್ರೆಸ್‌ ಪಕ್ಷದಿಂದ ಅಮಾನತು ಮಾಡಿತ್ತು. ಇದಕ್ಕೂ ಮುನ್ನ ರಾಜೀವ್‌ಗೌಡ ಕೆಪಿಸಿಸಿ ಸಂಯೋಜಕರಾಗಿದ್ದರು.

ರಾಜೀವ್ ಗೌಡ ಅವರನ್ನು ಕೇರಳ ಗಡಿ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕುಶಾಲ್ ಚೌಕ್ಸೆ ಸೋಮವಾರ (ಜ.26) ದೃಢಪಡಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಮಂಗಳವಾರ (ಜ.27) ಹಂಚಿಕೊಳ್ಳುವುದಾಗಿ ಹೇಳಿದ್ದಾರೆ.

ಕೇರಳಕ್ಕೆ ಪ್ರಯಾಣಿಸುವ ಮೊದಲು, ರಾಜೀವ್ ಗೌಡ ಮೂರು ದಿನಗಳ ಕಾಲ ಮಂಗಳೂರಿನ ರೆಸಾರ್ಟ್‌ನಲ್ಲಿ ತಂಗಿದ್ದರು. ಅವರು ಸಂಬಂಧಿಕರ ಕಾರಿನಲ್ಲಿ ಮಂಗಳೂರಿಗೆ ತೆರಳಿದ್ದರು. ಈ ಸಂಬಂಧ ಆಶ್ರಯ ನೀಡಿದ್ದ ಮಂಗಳೂರಿನ ಉದ್ಯಮಿ ಮೈಕಲ್ ಅವರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಮವಾರ ತಡರಾತ್ರಿ ಈ ಇಬ್ಬರನ್ನು ಕರೆತಂದು ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆ ಬಳಿಯ ಅತಿಥಿ ಗೃಹದಲ್ಲಿ ಇರಿಸಲಾಗಿದೆ. ಮಂಗಳವಾರ ಬೆಳಿಗ್ಗೆಯಿಂದಲೇ ಎಎಸ್‌ಪಿ ಜಗನ್ನಾಥ ರೈ, ಡಿವೈಎಸ್‌ಪಿ ರವಿಕುಮಾರ್, ತನಿಖಾಧಿಕಾರಿ ಇನ್‌ಸ್ಪೆಕ್ಟರ್ ಆನಂದ್ ವಿಚಾರಣೆ ನಡೆಸುತ್ತಿದ್ದಾರೆ. ಸೋಕೊ ತಂಡ ಕೂಡ ವಿಚಾರಣೆಯಲ್ಲಿ ಭಾಗಿಯಾಗಿದೆ ಎಂದು ವರದಿಯಾಗಿದೆ.

ವರದಿಯೊಂದರ ಪ್ರಕಾರ, ಪೊಲೀಸರ ಕಣ್ತಪ್ಪಿಸಲು ಯತ್ನಿಸಿದ್ದ ರಾಜೀವ್‌ ಗೌಡ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದ ಬಳಿ ಕಾರು ನಿಲ್ಲಿಸಿ, ಉದ್ಯಮಿಯ ಕಾರಿನಲ್ಲಿ ತಲಪಾಡಿ ಮಾರ್ಗವಾಗಿ ಕಾಸರಗೋಡಿನತ್ತ ಹೋಗುತ್ತಿದ್ದರು. ಈ ವೇಳೆ ಪೊಲೀಸರು ಬಂಧಿಸಿದ್ದಾರೆ.

ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ ಮಾಡಿ ಧಮ್ಕಿ ಹಾಕಿದ್ದರು.

ರಾಜೀವ್ ಗೌಡ ಅವರು ಅಧಿಕಾರಿ ಅಮೃತಗೌಡ ಅವರಿಗೆ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿದ್ದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೇ. 50ಕ್ಕಿಂತ ಹೆಚ್ಚಿನ ಬೆಲೆಗೆ ಅದಾನಿಯಿಂದ ವಿದ್ಯುತ್ ಖರೀದಿಗೆ ಒಪ್ಪಿದ್ದ ಹಸಿನಾ

ಪ್ರಧಾನಮಂತ್ರಿ ಪಟ್ಟದಿಂದ ಪದಚ್ಯುತಗೊಂಡ ಶೇಖ್ ಹಸೀನಾ ಅವರ ಅವಧಿಯಲ್ಲಿ ಸಹಿ ಹಾಕಲಾದ ಒಪ್ಪಂದಗಳ ಬಗ್ಗೆ ತನಿಖೆ ಮಾಡಲು ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ರಚಿಸಿದ ಪರಿಶೀಲನಾ ಸಮಿತಿಯು, ಅದಾನಿ ಗ್ರೂಪ್‌ನೊಂದಿಗಿನ ವಿದ್ಯುತ್ ಖರೀದಿ ಒಪ್ಪಂದದಲ್ಲಿ...

‘ಪಾಕಿಸ್ತಾನ ಭಯೋತ್ಪಾದನೆಯನ್ನು ತನ್ನ ರಾಷ್ಟ್ರ ನೀತಿಯ ಸಾಧನವಾಗಿ ಬಳಸುವುದನ್ನು ಸಹಿಸಿಕೊಳ್ಳುವುದು ಸಾಮಾನ್ಯವಲ್ಲ’: ಭಾರತ

ವಿಶ್ವಸಂಸ್ಥೆ: ಆಪರೇಷನ್ ಸಿಂಧೂರ್ ಬಗ್ಗೆ "ಸುಳ್ಳು ಮತ್ತು ಸ್ವಾರ್ಥಪರ" ವರದಿಯನ್ನು ಮುಂದಿಟ್ಟಿದ್ದಕ್ಕಾಗಿ ಇಸ್ಲಾಮಾಬಾದ್‌ನ ರಾಯಭಾರಿಗೆ ಭಾರತ ತಿರುಗೇಟು ನೀಡುತ್ತಿದ್ದಂತೆ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತವು ಕಠಿಣ ಪದಗಳಲ್ಲಿ ಪ್ರತಿಕ್ರಿಯಿಸಿತು. ಭಯೋತ್ಪಾದನೆಯನ್ನು ರಾಜ್ಯ ನೀತಿಯ ಸಾಧನವಾಗಿ...

ವಾರದಲ್ಲಿ 5 ದಿನಗಳ ಕೆಲಸ ಜಾರಿಗೆ ಒತ್ತಾಯ: ಬ್ಯಾಂಕ್‌ ನೌಕರರಿಂದ ಇಂದು ಮುಷ್ಕರ

ಐದು ದಿನಗಳ ಕೆಲಸದ ವಾರವನ್ನು (ವಾರದಲ್ಲಿ 5 ದಿನ ಕೆಲಸ) ತಕ್ಷಣ ಜಾರಿಗೆ ತರುವಂತೆ ಒತ್ತಾಯಿಸಿ ಬ್ಯಾಂಕ್ ನೌಕರರು ಮಂಗಳವಾರ (ಜ.27) ರಾಷ್ಟ್ರವ್ಯಾಪಿ ಮುಷ್ಕರ ಕೈಗೊಂಡಿದ್ದಾರೆ. ಇದರಿಂದ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಬ್ಯಾಂಕಿಂಗ್...

ಗ್ರೀನ್ ಕೇವ್ ನಿಂದ ಪ್ರವಾಸಿಗರನ್ನು ದೂರವಿಡಿ: ಛತ್ತೀಸ್‌ಗಢ ಸರ್ಕಾರಕ್ಕೆ ಪರಿಸರವಾದಿಗಳ ಎಚ್ಚರಿಕೆ

ರಾಯ್‌ಪುರ: ಒಂದು ಕಾಲದಲ್ಲಿ ಮಾವೋವಾದಿ ಪೀಡಿತ ಬಸ್ತಾರ್ ಜಿಲ್ಲೆಯ ಕಾಂಗರ್ ಕಣಿವೆ ರಾಷ್ಟ್ರೀಯ ಉದ್ಯಾನವನದಲ್ಲಿರುವ ಅಪರೂಪದ ಮತ್ತು ಪರಿಸರ ಸೂಕ್ಷ್ಮ 'ಹಸಿರು ಗುಹೆ'ಯನ್ನು ಪ್ರವಾಸಿಗರಿಗೆ ತೆರೆಯಲು ಛತ್ತೀಸ್‌ಗಢ ಸರ್ಕಾರ ನಿರ್ಧರಿಸಿದ್ದು, ಈ ಕ್ರಮಕ್ಕೆ...

ಅಹಮದಾಬಾದ್: ಅಮೃತಸರದಿಂದ ಮುಂಬೈಗೆ ಚಲಿಸುತ್ತಿದ್ದ ರೈಲಿನಲ್ಲಿ ಭಾರೀ ಮೌಲ್ಯದ ಕೊಕೇನ್ ಜಾಲ ಪತ್ತೆ

ಅಹಮದಾಬಾದ್: ಅಮೃತಸರ-ಮುಂಬೈ ಗೋಲ್ಡನ್ ಟೆಂಪಲ್ ಮೇಲ್ ರೈಲಿನ ಮೇಲೆ ತಡರಾತ್ರಿ ನಡೆದ ದಾಳಿಯಲ್ಲಿ ಮಿಜೋರಾಂ ಯುವಕನೊಬ್ಬ 2.19 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಕೊಕೇನ್ ಮತ್ತು ಮೆಥಾಂಫೆಟಮೈನ್‌ನೊಂದಿಗೆ ಸಿಕ್ಕಿಬಿದ್ದ ನಂತರ ಬಹು ನಗರ,...

ನಿಲುವು ಬದಲಿಸಿದ ಸಿಪಿಐ(ಎಂ) : ವಿಎಸ್ ಅಚ್ಯುತಾನಂದನ್ ಅವರ ಪದ್ಮವಿಭೂಷಣ ಪ್ರಶಸ್ತಿ ಸ್ವೀಕರಿಸಲು ನಿರ್ಧಾರ

ತನ್ನ ದೀರ್ಘಕಾಲದ ಸೈದ್ಧಾಂತಿಕ ನಿಲುವಿಗಿಂತ ಭಿನ್ನಾಭಿಪ್ರಾಯ ವ್ಯಕ್ತಪಡಿಸಿರುವ ಸಿಪಿಐ(ಎಂ), ಪಕ್ಷದ ದಂತಕಥೆ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ವಿ.ಎಸ್ ಅಚ್ಯುತಾನಂದನ್ ಅವರಿಗೆ ಮರಣೋತ್ತರವಾಗಿ ನೀಡಲಾಗುವ ಪದ್ಮವಿಭೂಷಣ ಪ್ರಶಸ್ತಿಯನ್ನು ಸ್ವೀಕರಿಸಲು ನಿರ್ಧರಿಸಿದೆ. ಕಮ್ಯುನಿಸ್ಟರು ಆಡಳಿತ ಅಥವಾ...

2024ರ ಪ್ರತಿಭಟನೆ ದಮನ ಪ್ರಕರಣ: ಬಾಂಗ್ಲಾದೇಶದ ಮಾಜಿ ಪೊಲೀಸ್ ಮುಖ್ಯಸ್ಥ ಹಬೀಬುರ್ ರೆಹಮಾನ್‌ಗೆ ಮರಣದಂಡನೆ

ಢಾಕಾ: ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ಆಳ್ವಿಕೆಯಲ್ಲಿ ನಡೆದ ಮಾನವೀಯತೆಯ ವಿರುದ್ಧದ ಅಪರಾಧಗಳಿಗಾಗಿ ಬಾಂಗ್ಲಾದೇಶ ನ್ಯಾಯಾಲಯವು ಸೋಮವಾರ ಢಾಕಾದ ಮಾಜಿ ಪೊಲೀಸ್ ಮುಖ್ಯಸ್ಥ ಮತ್ತು ಇಬ್ಬರು ಹಿರಿಯ ಸಹೋದ್ಯೋಗಿಗಳಿಗೆ ಮರಣದಂಡನೆ ವಿಧಿಸಲಾಗಿದೆ.  ರಾಜಧಾನಿಯ...

ಕೇರಳ, ತಮಿಳುನಾಡು, ಪ. ಬಂಗಾಳದ 32 ಮಂದಿಗೆ ‘ಪದ್ಮ’ ಪ್ರಶಸ್ತಿ : ವಿಧಾನಸಭೆ ಚುನಾವಣೆ ಮೇಲೆ ಬಿಜೆಪಿ ಕಣ್ಣು?

ಗಣರಾಜ್ಯೋತ್ಸವದ ಮುನ್ನಾದಿನದಂದು ಘೋಷಿಸಲಾದ 131 'ಪದ್ಮ ಪ್ರಶಸ್ತಿ'ಗಳಲ್ಲಿ, 38 ಪ್ರಶಸ್ತಿಗಳು ಈ ವರ್ಷ ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯ ಪಾಲಾಗಿವೆ. ದೇಶದ ಎರಡನೇ ಅತ್ಯುನ್ನತ...

‘ಏಕರೂಪ ಭಾರತವನ್ನಲ್ಲ, ಏಕೀಕೃತ ಭಾರತವನ್ನ ಸಂಭ್ರಮಿಸೋಣ’: ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ 

ಚೆನ್ನೈ: ಗಣರಾಜ್ಯೋತ್ಸವವನ್ನು ಏಕರೂಪ ಭಾರತದಂತಲ್ಲದೇ ಏಕೀಕೃತ ಭಾರತವಾಗಿ ಆಚರಿಸಬೇಕೆಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ ನೀಡಿದ್ದಾರೆ.  ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ ಸ್ಟಾಲಿನ್, "ಏಕರೂಪದ ಭಾರತವಲ್ಲ, ಏಕೀಕೃತ ಭಾರತವನ್ನು...

ಗಣರಾಜ್ಯೋತ್ಸವ ಪರೇಡ್ : ಸಿಆರ್‌ಪಿಎಫ್ ಪುರುಷರ ತುಕಡಿ ಮುನ್ನಡೆಸಿ ಗಮನಸೆಳೆದ ಮಹಿಳಾ ಅಧಿಕಾರಿ ಸಿಮ್ರಾನ್ ಬಾಲಾ

ದೆಹಲಿಯ ಕರ್ತವ್ಯ ಪಥದಲ್ಲಿ ನಡೆದ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಸಿಆರ್‌ಪಿಎಫ್ ಸಹಾಯಕ ಕಮಾಂಡೆಂಟ್ ಸಿಮ್ರಾನ್ ಬಾಲಾ ಅವರು ಅರೆಸೈನಿಕ ಪಡೆಯ ಸಂಪೂರ್ಣ ಪುರುಷರ ತುಕಡಿಯನ್ನು ಮುನ್ನಡೆಸುವ ಮೂಲಕ ಇತಿಹಾಸ ನಿರ್ಮಿಸಿದರು. ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯವರಾದ...