Homeಕರ್ನಾಟಕಇಬ್ಬರು ಮಾಜಿ ಸಿಎಂಗಳಿಗೆ ಹನಿಟ್ರ್ಯಾಪ್ ಮಾಡಿ ಸಚಿವ ಸ್ಥಾನ ಪಡೆದಿದ್ದ ಮುನಿರತ್ನ : ಸಂತ್ರಸ್ತ ಮಹಿಳೆ...

ಇಬ್ಬರು ಮಾಜಿ ಸಿಎಂಗಳಿಗೆ ಹನಿಟ್ರ್ಯಾಪ್ ಮಾಡಿ ಸಚಿವ ಸ್ಥಾನ ಪಡೆದಿದ್ದ ಮುನಿರತ್ನ : ಸಂತ್ರಸ್ತ ಮಹಿಳೆ ಗಂಭೀರ ಆರೋಪ

- Advertisement -
- Advertisement -

“ಶಾಸಕ ಮುನಿರತ್ನ ಇಬ್ಬರು ಮಾಜಿ ಮುಖ್ಯಂತ್ರಿಗಳನ್ನು ಹನಿಟ್ರ್ಯಾಪ್ ಮಾಡಿದ್ದಾರೆ. ನನಗೆ ಸರ್ಕಾರದಿಂದ ಭದ್ರತೆ ಕೊಟ್ಟರೆ ಆ ಮಾಜಿ ಮುಖ್ಯಮಂತ್ರಿಗಳ ಹೆಸರನ್ನು ಹಾಗೂ ಸಂಬಂಧಿತ ವಿಡಿಯೋವನ್ನು ಕೊಡುತ್ತೇನೆ” ಎಂದು ಮುನಿರತ್ನ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಮಹಿಳೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಹಿಳೆ “ಮುನಿರತ್ನ ಇಬ್ಬರು ಮಾಜಿ ಮುಖ್ಯಮಂತ್ರಿಗಳನ್ನು ಹನಿಟ್ರ್ಯಾಪ್‌ ಮಾಡಿ, ಕಿರುಕುಳ ಕೊಟ್ಟು ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಮುನಿರತ್ನ ಬಳಿ ಯಾವುದೇ ಮಾಧ್ಯಮಗಳ ಬಳಿಯೂ ಇಲ್ಲದಂತಹ ತುಂಬಾ ಅಡ್ವಾನ್ಸ್ಡ್ ಕ್ಯಾಮರಾಗಳಿವೆ. ನಮ್ಮಂಥವರ ಅಸಹಾಯಕತೆ ಬಳಸಿಕೊಂಡು ಮಾಜಿ ಸಿಎಂ, ಸಚಿವರು, ಶಾಸಕರನ್ನು ಹನಿಟ್ರ್ಯಾಪ್ ಮಾಡಿ ವಿಡಿಯೋ ರೆಕಾರ್ಡ್ ಮಾಡಿಸಿದ್ದಾರೆ. ಪೊಲೀಸ್ ಇಲಾಖೆಯ ಎಸಿಪಿ, ಸಿಪಿಐ ಸೇರಿದಂತೆ ಹಿರಿಯ ಅಧಿಕಾರಿಗಳನ್ನೂ ಹನಿಟ್ರ್ಯಾಪ್ ಮಾಡಿಸಿದ್ದಾರೆ. ನನ್ನ ಹಾಗೂ ಮುನಿರತ್ನ ಅವರ ಬ್ರೈನ್ ಮ್ಯಾಪಿಂಗ್ ಮಾಡಿಸಲಿ” ಎಂದು ಶಾಸಕ ಅಶ್ವತ್ಥನಾರಾಯಣ, ಹಾಗೂ ಪ್ರತಿಪಕ್ಷ ನಾಯಕ ಆರ್ ಅಶೋಕ್‌ಗೆ ಸವಾಲು ಹಾಕಿದ್ದಾರೆ.

“ಹನಿಟ್ರ್ಯಾಪ್ ಮಾಡುವುದಕ್ಕೆ ನನ್ನನ್ನು ಬಳಕೆ ಮಾಡಿಕೊಂಡಿಲ್ಲ, ಬೇರೆ ಮಹಿಳೆಯರನ್ನು ಬಳಸಿಕೊಂಡಿದ್ದಾರೆ. ಇದರಲ್ಲಿ ಯಾವುದೇ ಸಿನಿಮಾ ನಟಿಯರು ಇಲ್ಲ. ಹನಿಟ್ರ್ಯಾಪ್‌ಗೆ ಬಳಸಿಕೊಳ್ಳಲಾದ ಸುಮಾರು ಐದಾರು ಸಂತ್ರಸ್ತ ಮಹಿಳೆಯರು ಹೆದರಿಕೊಂಡು ಸುಮ್ಮನಾಗಿದ್ದಾರೆ. ಅವರು ಕೂಡ ನನ್ನಂತೆಯೇ ಹೊರಗೆ ಬಂದರೆ ಎಲ್ಲಾ ಸತ್ಯಗಳೂ ಹೊರಗೆ ಬರಲಿವೆ” ಎಂದಿದ್ದಾರೆ.

“ಅನೇಕ ಮಹಿಳೆಯರನ್ನು ಶಾಸಕ ಮುನಿರತ್ನ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಲವು ರಾಜಕೀಯ ನಾಯಕರ ಮೇಲೆ ಹನಿಟ್ರ್ಯಾಪ್ ಮಾಡಲು ಬಳಕೆ ಮಾಡಿಕೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ವಿಜಯೇಂದ್ರ ಅವರ 10 ನಿಮಿಷದ ಅಪಾಯಿಂಟ್‌ಮೆಂಟ್ ಬೇಕಿದೆ. ಹತ್ತೇ ಹತ್ತು ನಿಮಿಷ ಅವರ ಜೊತೆ ಮಾತಾಡಬೇಕು. ಇದಕ್ಕೆ ಅವಕಾಶ ಮಾಡಿಕೊಡಿ. ಇಷ್ಟೆಲ್ಲಾ ಆದರೂ ಮುನಿರತ್ನ ಅವರನ್ನು ಪಕ್ಷದಲ್ಲಿ ಇರಿಸಿಕೊಂಡಿದ್ದೀರಲ್ಲ? ಎಂದು ಕೇಳಬೇಕಿದೆ” ಎಂದು ಮಹಿಳೆ ಹೇಳಿದ್ದಾರೆ.

“2020ರಲ್ಲಿ ಮಮತಾ ವೆಂಕಟೇಶ್ ಎಂಬವರ ಮೂಲಕ ಮುನಿರತ್ನ ಪರಿಚಯ ಆಗಿದ್ದರು. ಒಂದು ದಿನ ನನಗೆ ವಿಡಿಯೋ ಕರೆ ಮಾಡಿದ್ದರು. ಬಳಿಕ ನನ್ನನ್ನು ಅವರ ಬಳಿ ಕರೆಸಿಕೊಂಡು ಗೋದಾಮಿನ ಬಳಿ ಕರೆದೊಯ್ದು ಹೆದರಿಸಿ ಅತ್ಯಾಚಾರ ಮಾಡಿದ್ದಾರೆ. ಅವರಿಗೆ ಜಾಮೀನು ಸಿಕ್ಕಿ ಹೊರ ಬಂದರೆ ನನಗೆ ಜೀವ ಭಯ ಇದೆ” ಎಂದಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...