Homeಕರ್ನಾಟಕಮುನಿರತ್ನ ಅಪರಾಧಗಳಿಗೆ ಆರ್ ಅಶೋಕ್ & ಕುಮಾರಸ್ವಾಮಿ ಕುಮ್ಮಕ್ಕು ಇದೆಯೆ? - ಸಚಿವ ಭೈರೆಗೌಡ ...

ಮುನಿರತ್ನ ಅಪರಾಧಗಳಿಗೆ ಆರ್ ಅಶೋಕ್ & ಕುಮಾರಸ್ವಾಮಿ ಕುಮ್ಮಕ್ಕು ಇದೆಯೆ? – ಸಚಿವ ಭೈರೆಗೌಡ ಪ್ರಶ್ನೆ

- Advertisement -
- Advertisement -

ಶಾಸಕ ಮುನಿರತ್ನ ಅವರ ದುಷ್ಕೃತ್ಯವನ್ನು ಖಂಡಿಸದೆ ಆರ್. ಅಶೋಕ ಮತ್ತು ಎಚ್.ಡಿ. ಕುಮಾರಸ್ವಾಮಿ ಸುಮ್ಮನೆ ಇದ್ದಾರೆ. ಇವರ ಕುಮ್ಮಕ್ಕು ಇಲ್ಲದೆ ಇಷ್ಟೆಲ್ಲ ನಡೆಯುತ್ತದೆಯೇ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಚಿಕ್ಕಬಳ್ಳಾಪುರದಲ್ಲಿ ಶುಕ್ರವಾರ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಚಿಕ್ಕಬಳ್ಳಾಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುನಿರತ್ನ ಮಾಡಿದ್ದು ತಪ್ಪು ಎಂದು ಇವರು ಎಲ್ಲಿಯೂ ಮಾತನಾಡಿಲ್ಲ. ಮುನಿರತ್ನ ಭ್ರಷ್ಟಾಚಾರಿ, ಮನೆಯಲ್ಲಿಯೇ ಬಿಬಿಎಂಪಿ ಬಿಲ್ ಬರೆಯುತ್ತಾರೆ ಎನ್ನುವುದು ಎಲ್ಲರಿಗೂ ಗೊತ್ತಿತ್ತು. ಆದರೆ ಈಗ ಹನಿಟ್ರ್ಯಾಪ್ ನಡೆಸುತ್ತಾರೆ ಎನ್ನುವ ಆಘಾತಕಾರಿ ಅಂಶ ತಿಳಿದು ಬಂದಿದೆ ಎಂದು ಹೇಳಿದರು.

ಅಧಿಕಾರಿಗಳು, ರಾಜಕಾರಣಿಗಳನ್ನು ಹನಿಟ್ರ್ಯಾಪ್ ಮಾಡಿದ್ದಾರೆ. ಇದಕ್ಕೆ ಏಡ್ಸ್ ಇರುವವರನ್ನೇ ಬಳಕೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬಿಜೆಪಿ ಕಾರ್ಯಕರ್ತೆಯೇ ದೂರು ನೀಡಿದ್ದಾರೆ. ಇಷ್ಟೆಲ್ಲ ಕಂಡು ಬಂದರೂ ಬಿಜೆಪಿಯವರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂಓದಿ: ಫ್ಯಾಕ್ಟ್‌ಚೆಕ್‌ ಘಟಕ ಸ್ಥಾಪಿಸುವ ಕೇಂದ್ರ ಸರ್ಕಾರದ ಪ್ರಯತ್ನಕ್ಕೆ ಬಾಂಬೆ ಹೈಕೋರ್ಟ್ ತಡೆ

ಕಾಂಗ್ರೆಸ್‌ನಲ್ಲಿ ಇದ್ದಾಗ ತಪ್ಪು ಮಾಡಿದ್ದರೆ ಕೇಳಬೇಕಾಗಿತ್ತು. ಬಿಜೆಪಿಯಲ್ಲಿ ಇದ್ದಾಗ ಕೇಳಬಾರದು ಎನ್ನುವ ಮನಸ್ಥಿತಿ ಆರ್.ಅಶೋಕ ಅವರದ್ದು. ಅಶೋಕ್ ಮತ್ತು ಕುಮಾರಸ್ವಾಮಿಗೆ ಮನುಷ್ಯತ್ವ ಇದೆಯಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶೇ 100ರಷ್ಟು ಸಾಚ ಯಾರೂ ಇಲ್ಲ. ಎಲ್ಲರೂ ತಪ್ಪು ಮಾಡುತ್ತಾರೆ. ಆದರೆ ಮುನಿರತ್ನ ಮಾಡಿರುವುದು ಸರಿಯೇ ಎಂದು ಯೋಚಿಸಲಿ. ಇಷ್ಟೆಲ್ಲಾ ಹೊರ ಬಂದಿದ್ದರೂ ಬೆಂಬಲವಾಗಿ ನಿಂತವರೂ ಸಹ ಅಪರಾಧದ ಭಾಗವಾಗಿದ್ದಾರೆ ಎಂದು ಕಿಡಿಕಾರಿದರು.ಮುನಿರತ್ನ ಒಕ್ಕಲಿಗ ಸಮಾಜದ ಅವಹೇಳನ ಮಾಡಿದ್ದಾರೆ.

ಪ್ರಕರಣವನ್ನು ಎಸ್ಐಟಿ ತನಿಖೆಗೆ ಒಪ್ಪಿಸುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದೇವೆ. ಒಕ್ಕಲಿಗ ಸಮಾಜದ ಮೇಲೆ ದಾಳಿ ನಡೆದಾಗ ಸಮುದಾಯದ ಎಚ್ಚೆತ್ತುಕೊಂಡು ಒಂದು ಧ್ವನಿಯಲ್ಲಿ ಖಂಡಿಸಬೇಕು. ಸಮಾಜವು ನಿರ್ಮಲಾನಂದನಾಥ ಸ್ವಾಮೀಜಿ ಅವರಿಗೆ ಗೌರವ ಕೊಡುತ್ತದೆ. ಅವರ ನೇತೃತ್ವದಲ್ಲಿ ಖಂಡನಾ ನಿರ್ಣಯ ಸಭೆ ಆಗಬೇಕು ಎಂದು ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ಸ್ವಾಮೀಜಿ ಅವರ ತೀರ್ಮಾನವೇ ಅಂತಿಮ ಎಂದು ಸಚಿವರು ಹೇಳಿದ್ದಾರೆ.

ವಿಡಿಯೊ ನೋಡಿ: ನಂಗ ಜೇನು ಕುರುಬ ಮಕ್ಕಾಳು.. ದೂರಿ ದೂರಿ, ನಂಗ ಕಾಡಿನ ಅರಸಾರು.. ದೂರಿ ದೂರಿ – ಜೇನು ಕುರುಬರ ಹಾಡು ಕೇಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...