Homeಕರ್ನಾಟಕಕುಂಕುಮ ವಿಚಾರ: ಮಹಿಳೆಯನ್ನು ನಿಂದಿಸಿದ ಮುನಿಸ್ವಾಮಿಗೆ ಜನರಿಂದ ತರಾಟೆ

ಕುಂಕುಮ ವಿಚಾರ: ಮಹಿಳೆಯನ್ನು ನಿಂದಿಸಿದ ಮುನಿಸ್ವಾಮಿಗೆ ಜನರಿಂದ ತರಾಟೆ

- Advertisement -
- Advertisement -

”ಏನಮ್ಮ ನಿನ್ನ ಹೆಸರು, ಹಣೆಗೆ ಯಾಕೆ ಕುಂಕುಮ ಹಾಕಿಲ್ಲ? ಹಣ ಕೊಟ್ಟು ಬಲವಂತವಾಗಿ ಮತಾಂತರ ಮಾಡಿದ್ದಾರೆ ಅಲ್ಲವಾ? ವೈಷ್ಣವಿ ಎಂಬುದಾಗಿ ಅಂಗಡಿ ಹೆಸರನ್ನು ಯಾಕೆ ಇಟ್ಟುಕೊಂಡಿದ್ದೀಯಾ? ಯಾರೊ ಕಾಸು ಕೊಡುತ್ತಾರೆ ಅಂತ ಸುಜಾತ ಅಂತ ಹೆಸರು ಇಟ್ಟುಕೊಂಡಿದ್ದೀಯಾ? ಗಂಡ ಬದುಕಿದ್ದಾನೆ ತಾನೇ? ನಿನಗೆ ಕಾಮನ್ ಸೆನ್ಸ್ ಇಲ್ಲ. ತಂದೆ ಹೆಸರು ಬದಲಾಯಿಸುತ್ತೀಯಾ ನೀನು? ಅದನ್ನೆಲ್ಲ ಇಟ್ಟುಕೊಳ್ಳುವುದಕ್ಕೆ ಯೋಗ್ಯತೆ ಇಲ್ಲ ನಿನಗೆ..”- ಹೀಗೆ ಕೋಲಾರ ಸಂಸದ ಮುನಿಸ್ವಾಮಿಯವರು ದುಡಿಯುವ ಮಹಿಳೆಯೊಬ್ಬರನ್ನು ನಿಂದಿಸಿದ್ದಾರೆ.

ಸಾಂವಿಧಾನಿಕ ಮೌಲ್ಯಗಳನ್ನು ಮರೆತು ಮುನಿಸ್ವಾಮಿ ವರ್ತಿಸಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಮುನಿಸ್ವಾಮಿಯವರ ಹೇಳಿಕೆಯನ್ನು ಹಂಚಿಕೊಂಡು ಬುದ್ಧಿಮಾತು ಹೇಳುತ್ತಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನದಂದೇ ಈ ಘಟನೆ ನಡೆದಿರುವುದನ್ನು ಉಲ್ಲೇಖಿಸಿ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ವಕೀಲರಾದ ಅಖಿಲಾ ವಿದ್ಯಾಸಂದ್ರ ಈ ಕುರಿತು ಪೋಸ್ಟ್ ಮಾಡಿದ್ದು, “ಇಂತಹ ಅಧಿಕ ಪ್ರಸಂಗ ಮೆರೆಯಲು ಈ ಸಂಸದನಿಗೆ ಅಧಿಕಾರ ಕೊಟ್ಟವರು ಯಾರು? ಪ್ರತಿಸಲ ಮುಖ ತೊಳೆದಾಗ ಹರಿದು ಚರಂಡಿನೀರಿನೊಂದಿಗೆ ಮಿಳಿತವಾಗುವ ಕುಂಕುಮದಲ್ಲಿದೆಯೇ ಆಕೆಯ ಗಂಡನ ಜೀವ? ತಲೆಯೊಳಗೆ ಮತಿಯಿಲ್ಲದ ಕೂಪಮಂಡೂಕಗಳಿವು. ಆ ಸ್ವಾವಲಂಬಿ ಮಹಿಳೆಯರನ್ನು ಅವಮಾನಗೊಳಿಸಲೆಂದೇ ಅಂತಾರಾಷ್ಟ್ರೀಯ ಮಹಿಳಾ ದಿನದ ಆ ಕಾರ್ಯಕ್ರಮಕ್ಕೆ ಹೋಗಿದ್ದೇನು ಈ ‘ಮನು’ಜ? ಛೀ ಧಿಕ್ಕಾರವಿರಲಿ ಈತನ ವ್ಯಕ್ತಿತ್ವಕ್ಕೆ” ಎಂದಿದ್ದಾರೆ.

ಲೇಖಕಿ ಮಮತಾ ಅರಸೀಕೆರೆ ಪ್ರತಿಕ್ರಿಯಿಸಿ, “ಹಣೆಗೆ ಕುಂಕುಮ ಇಟ್ಟುಕೊಂಡಿಲ್ಲ ಎಂದು ಸಂಸದರೊಬ್ಬರು ಮಹಿಳೆಯರೊಬ್ಬರನ್ನು ದಬಾಯಿಸಿದ್ದಾರೆ. ನಿನ್ನ ಗಂಡ ಬದುಕಿದ್ದಾನೆ ತಾನೆ ಕುಂಕುಮ ಇಟ್ಟುಕೊ ಅಂದಿದ್ದಾರೆ. ಈ ಅಂಶಗಳೆಲ್ಲ ವೈಯಕ್ತಿಕ ವಿಷಯಗಳು. ಭಾರತೀಯ ಸಂಸ್ಕೃತಿ ಹೆಸರಲ್ಲಿ ಹೇರುವ ಪ್ರವೃತ್ತಿ ಸಲ್ಲದು. ಅದರಲ್ಲೂ ಹೆಣ್ಣುಮಕ್ಕಳೆಂದರೆ ಸಾಕು ಅವರನ್ನೇ ಸತತ ಗಮನಿಸುವ, ಕಾಯ್ದುಕೊಂಡಿದ್ದು ಯಾವುದಾದರೂ ವಿಷಯವನ್ನೆತ್ತಿ ತಿವಿಯುವ ಈ ಪುರುಷರ ಮನಃಸ್ಥಿತಿ ಅದ್ಯಾವಾಗ ಬದಲಾಗುವುದೊ ತಿಳಿಯದು. ಬಾಹ್ಯ ಲಕ್ಷಣಗಳು , ಸಂಕೇತಗಳ ಮೂಲಕ ಮಹಿಳೆಯರನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವ ನಡೆಗಳನ್ನು ಯಾವತ್ತೂ ವಿರೋಧಿಸಬೇಕು” ಎಂದು ತಿಳಿಸಿದ್ದಾರೆ.

ಮುಂದುವರಿದು, “ಸಂಸ್ಕೃತಿ ಹೆಸರಲ್ಲಿ ಮಾಡುವ ಅನಾಚಾರಗಳನ್ನು ಮೊದಲು ಬದಲಾಯಿಸಲಿ. ಅಷ್ಟಕ್ಕೂ ಸಂಸ್ಕೃತಿ ಉಳಿಸುವ ಜವಾಬುದಾರಿಕೆಯನ್ನು ಯಾರು ಯಾರಿಗೂ ಕೊಟ್ಟಿಲ್ಲ. ದಬಾಯಿಸುವ ಹಕ್ಕು ಯಾರಿಗೂ ಇಲ್ಲ. ದಬಾಯಿಸಲು, ಬದಲಾಯಿಸಲು, ಬೇಕಾದಷ್ಟು ಸಮಾಜ ಬಾಹಿರ ಅಪಸವ್ಯಗಳಿವೆ. ಮಹಿಳೆಯರ ಮೇಲೆ ಆಗುವ ದೌರ್ಜನ್ಯಗಳ ಬಗ್ಗೆ ಖಂಡತುಂಡವಾಗಿ ಮಾತನಾಡಲಿ ನೋಡುವ. ಅಂತಹ ಕಡೆಯೆಲ್ಲಾ ಈ ಜೋರು ಮನೋಭಾವ ಮಾಡಿ ತೋರಿಸಲಿ. ಹೊರಗೊಂದು ಒಳಗೊಂದು ಪ್ರವೃತ್ತಿಯನ್ನು ಬಿಟ್ಟು ನಡೆ ನುಡಿ ಸಮತೋಲದಲ್ಲಿಟ್ಟುಕೊಂಡಿರಲಿ ಸಾಕು ಈ ಪುರುಷವರ್ಗಗಳೆಲ್ಲ” ಎಂದಿದ್ದಾರೆ.

ಅಸ್ತಿತ್ವ ಲೀಗಲ್ ಟ್ರಸ್ಟ್ ಸಂಸ್ಥಾಪಕರು ಹಾಗೂ ವಕೀಲರಾದ ಅಂಜಲಿ ರಾಮಣ್ಣ ಪ್ರತಿಕ್ರಿಯಿಸಿ, “ಸಿರಿವಂತರು ಅವರ ಧಿರಿಸಿಗೆ match ಆಗಲ್ಲ ಅಂತ ಕುಂಕುಮ ಇಟ್ಟುಕೊಂಡಿರಲ್ಲ. ಮಧ್ಯಮದವರು matching ಬೊಟ್ಟು ಇಟ್ಟುಕೊಂಡಿರುತ್ತಾರೆ. ದುಡಿಯುವ ಮಹಿಳೆಯರು ಕುಂಕುಮ, ಬಳೆ ಏನೂ ತೊಟ್ಟಿರುವುದಿಲ್ಲ, ಅವರ ಕೈ ಬಿರುಕುಗಳಿಂದ, ಹಣೆ ಧೂಳಿನಿಂದ, ಕೂದಲು ಬಿಸಿಲಿನಿಂದ ತುಂಬಿರುತ್ತದೆ. ಇವರೆಲ್ಲರ ಗಂಡಂದಿರು ಪೂರ್ತಿ ಆಯುಷ್ಯ ಬದುಕಿದವರನ್ನು ಕಂಡಿದ್ದೇನೆ. ಸಂಸದ ಮುನಿಸ್ವಾಮಿ ಮಹಾಶಯರು ಚಿತ್ರಗುಪ್ತನ ಕೆಲಸ ಬಿಟ್ಟು ಜನರ ಜವಾಬ್ದಾರಿ ನೋಡುವುದು ಒಳಿತು” ಎಂದು ಬುದ್ಧಿ ಹೇಳಿದ್ದಾರೆ.

ಲೇಖಕಿ ಭಾರತಿ ಹೆಗಡೆಯವರು ಪ್ರತಿಕ್ರಿಯಿಸಿ, “ಪರವಾಗಿಲ್ಲ ಸಂಸದರೇ‌. ಇದು ಬಹಳ ಬೇಗ ಕಣ್ಣಿಗೆ ಬೀಳತ್ತೆ. ಹಾಸಿ ಹೊದೆಯಷ್ಟಿರುವ ಬಡತನ, ನೀರಿನ ಸಮಸ್ಯೆ, ಹೆಚ್ಚುತ್ತಾ ಇರೋ ಹೆಣ್ಣಿನ ಮೇಲಿನ ದೌರ್ಜನ್ಯ ಅತ್ಯಾಚಾರಗಳು, ಇದ್ಯಾವುದೂ ತಮ್ಮ ಗಮನಕ್ಕೆ ಬರೋದಿಲ್ಲ. ಕುಂಕುಮ ಇಟ್ಗೊಳೋದು ಬಿಡೋದು ಅವರವರ ವೈಯಕ್ತಿಕ ನಿಲುವು. ಅದಕ್ಕಾಗಿ ಸರ್ವಾಜನಿಕವಾಗಿ ಒಬ್ಬ ಮಹಿಳೆಯನ್ನು ನಿಂದಿಸಿದ ತಮ್ಮ ಕುರಿತು ಏನೆನ್ನಬೇಕು?” ಎಂದು ಪ್ರಶ್ನಿಸಿದ್ದಾರೆ.

ಪ್ರಕಾಶಕಿ ಅಕ್ಷತಾ ಹುಂಚದಕಟ್ಟೆ ಘಟನೆಯನ್ನು ಖಂಡಿಸಿದ್ದು, “ಈ ಮನಃಸ್ಥಿತಿಗೆ ಧಿಕ್ಕಾರ ಹೇಳುತ್ತಲೇ. ಇದರ ಮೂಲ ಹುಡುಕಿ ಅದನ್ನು ಸಂಪೂರ್ಣ ತೊಲಗಿಸುವ ಪ್ರಯತ್ನ ಮಾಡದೇ ಹೋದರೆ ಇಂಥ ಮನಃಸ್ಥಿತಿಗಳು ಮತ್ತೆ ಮತ್ತೆ ಎದ್ದು ನಮಗೆ ಜಾಡಿಸುವ ಸಂಭವ ಸೃಷ್ಟಿಯಾಗುತ್ತಲೇ ಇರುತ್ತದೆ. ಇದು ನನ್ನ ಪ್ರಕಾರ ಈ ಮಹನೀಯರ ಹೆಗಲ ಮೇಲಿಟ್ಟು ಬೇರೆಯವರು ಗುರಿ ಇಟ್ಟು ಹೊಡೆದ ಪಿಸ್ತೂಲ್. ಹೆಗಲು ಕೊಟ್ಟವರನ್ನು ಧಿಕ್ಕರಿಸುತ್ತಲೇ , ಬೇರೆಯವರ ಹೆಗಲ ಮೇಲೆ ತಮ್ಮ ಸಿದ್ಧಾಂತದ ಗುರಿಯನ್ನು ಇಟ್ಟು ಹೊಡೆವ ಮನಸ್ಥಿತಿಯನ್ನು ಸಂಪೂರ್ಣ ಧಿಕ್ಕರಿಸಬೇಕಾಗಿದೆ. ಮಹಿಳೆಯರ ಸ್ವಯಂ ಅಸ್ಮಿತೆಯನ್ನು ಒಪ್ಪದ ಎಲ್ಲ ಜಾತಿ ಧರ್ಮದ ಮೂಲಭೂತವಾದಿ ಮನಃಸ್ಥಿತಿಗಳಿಗೆ ಧಿಕ್ಕಾರ ಹೇಳಬೇಕಾಗಿದೆ” ಎಂದಿದ್ದಾರೆ.

ಪ್ರೊ.ಪುರುಷೋತ್ತಮ ಬಿಳಿಮಲೆಯವರು ಹೀಗೆ ಪೋಸ್ಟ್ ಮಾಡಿದ್ದಾರೆ:

ಅಯ್ಯಾ ಮುನಿಸ್ವಾಮೀ,
ಬಡ ಮಹಿಳೆಯರ ಕುಂಕುಮ ಬೆವರಲ್ಲಿ ಕರಗಿ ಹೋಗುತ್ತೆ.
ಕುಂಕುಮ ತರಲು ಮತ್ತೆ ಗಂಡನಿಗೆ ಹೇಳಬೇಕು,
ನಿನ್ನ ಕುಂಕುಮ ನಿನ್ನ ಹಣೆಯಲಿ ಭದ್ರವಾಗಿರಲಿ
ಕಂಡ ಕಂಡವರಿಗೆಲ್ಲ ನಾಮ ಹಾಕಲು ಬೇಕಾಗಬಹುದು ನಿನಗೆ
ದುಡಿವ ಮಹಿಳೆಯ ಬಳೆಗಳು ಕೆಲಸದ ನಡುವೆ ಒಡೆದು ಚೂರಾಗುತ್ತವೆ.
ಮತ್ತೆ ಕೊಳ್ಳಲು ಊರ ಜಾತ್ರೆಗೆ ಕಾಯಬೇಕು.
ಹಬ್ಬದಲಿ ಬಳೆಮಾರುವನಿಗೆ ತಡೆ ಒಡ್ಡಲಾಗಿದೆಯಂತೆ
ಈಗ ನಿನ್ನ ಬಳೆಗಳ ನೀನೇ ಇಟ್ಟುಕೋ
ಜಾತಿ ಮತಗಳ ಹೆಸರಿನಲಿ ಜನಗಳಿಗೆ ತೊಡಿಸಲು ಬೇಕಾಗಬಹುದು ನಿನಗೆ
ತಾಯಂದಿರ ಹೊಟ್ಟೆ ಬೆನ್ನಿಗಂಟಿದ್ದು ನಿನಗೆ ಕಾಣಲಿಲ್ಲ
ಎಣ್ಣೆಯಿಲ್ಲದೆ ಅವರ ನೆತ್ತಿ ಒಣಗಿದ್ದು ನಿನಗೆ ಗೊತ್ತಿಲ್ಲ
ಗುಡಿಸಲುಗಳು ಸೋರುತ್ತಿರುವುದ ನೀನು ನೋಡಲಿಲ್ಲ,
ಮಕ್ಕಳು ಶಾಲೆಕಾಣದ ಬಗೆಗೆ ನಿನಗೆ ಅರಿವು ಮೂಡಲಿಲ್ಲ.
ವಯಸಾದರೂ ನಿನಗೆ ತಾಯಿಯ ಮುಖ ದರ್ಶನವಾಗಲೇ ಇಲ್ಲ.

ಕವಿತಾ ಕವಿ ಎಂಬವರು ಪ್ರತಿಕ್ರಿಯಿಸಿ, “ನನ್ನಂಥವರನ್ನು ಕೇಳಬೇಕಿತ್ತು. ಗ್ರಹಚಾರ ಬಿಡಿಸ್ತಿದ್ದೆ. ಜನಪ್ರತಿನಿಧಿಯಾಗಿರುವುದು ಜನಸೇವೆ ಮಾಡಲೆಂದೇ ಹೊರತು ದಬ್ಬಾಳಿಕೆ ನಡೆಸಲು ಅಲ್ಲ. ಮೊದಲು ನಿಮ್ಮನ್ನು ಗಾದಿಗೇರಿಸಿದ ಸಂವಿಧಾನ ಓದಿ. ನಂತರ ಮತ ಕೇಳಲು ಬನ್ನಿ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...