Homeಕರ್ನಾಟಕಕುಂಕುಮ ವಿಚಾರ: ಮಹಿಳೆಯನ್ನು ನಿಂದಿಸಿದ ಮುನಿಸ್ವಾಮಿಗೆ ಜನರಿಂದ ತರಾಟೆ

ಕುಂಕುಮ ವಿಚಾರ: ಮಹಿಳೆಯನ್ನು ನಿಂದಿಸಿದ ಮುನಿಸ್ವಾಮಿಗೆ ಜನರಿಂದ ತರಾಟೆ

- Advertisement -
- Advertisement -

”ಏನಮ್ಮ ನಿನ್ನ ಹೆಸರು, ಹಣೆಗೆ ಯಾಕೆ ಕುಂಕುಮ ಹಾಕಿಲ್ಲ? ಹಣ ಕೊಟ್ಟು ಬಲವಂತವಾಗಿ ಮತಾಂತರ ಮಾಡಿದ್ದಾರೆ ಅಲ್ಲವಾ? ವೈಷ್ಣವಿ ಎಂಬುದಾಗಿ ಅಂಗಡಿ ಹೆಸರನ್ನು ಯಾಕೆ ಇಟ್ಟುಕೊಂಡಿದ್ದೀಯಾ? ಯಾರೊ ಕಾಸು ಕೊಡುತ್ತಾರೆ ಅಂತ ಸುಜಾತ ಅಂತ ಹೆಸರು ಇಟ್ಟುಕೊಂಡಿದ್ದೀಯಾ? ಗಂಡ ಬದುಕಿದ್ದಾನೆ ತಾನೇ? ನಿನಗೆ ಕಾಮನ್ ಸೆನ್ಸ್ ಇಲ್ಲ. ತಂದೆ ಹೆಸರು ಬದಲಾಯಿಸುತ್ತೀಯಾ ನೀನು? ಅದನ್ನೆಲ್ಲ ಇಟ್ಟುಕೊಳ್ಳುವುದಕ್ಕೆ ಯೋಗ್ಯತೆ ಇಲ್ಲ ನಿನಗೆ..”- ಹೀಗೆ ಕೋಲಾರ ಸಂಸದ ಮುನಿಸ್ವಾಮಿಯವರು ದುಡಿಯುವ ಮಹಿಳೆಯೊಬ್ಬರನ್ನು ನಿಂದಿಸಿದ್ದಾರೆ.

ಸಾಂವಿಧಾನಿಕ ಮೌಲ್ಯಗಳನ್ನು ಮರೆತು ಮುನಿಸ್ವಾಮಿ ವರ್ತಿಸಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಮುನಿಸ್ವಾಮಿಯವರ ಹೇಳಿಕೆಯನ್ನು ಹಂಚಿಕೊಂಡು ಬುದ್ಧಿಮಾತು ಹೇಳುತ್ತಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನದಂದೇ ಈ ಘಟನೆ ನಡೆದಿರುವುದನ್ನು ಉಲ್ಲೇಖಿಸಿ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ವಕೀಲರಾದ ಅಖಿಲಾ ವಿದ್ಯಾಸಂದ್ರ ಈ ಕುರಿತು ಪೋಸ್ಟ್ ಮಾಡಿದ್ದು, “ಇಂತಹ ಅಧಿಕ ಪ್ರಸಂಗ ಮೆರೆಯಲು ಈ ಸಂಸದನಿಗೆ ಅಧಿಕಾರ ಕೊಟ್ಟವರು ಯಾರು? ಪ್ರತಿಸಲ ಮುಖ ತೊಳೆದಾಗ ಹರಿದು ಚರಂಡಿನೀರಿನೊಂದಿಗೆ ಮಿಳಿತವಾಗುವ ಕುಂಕುಮದಲ್ಲಿದೆಯೇ ಆಕೆಯ ಗಂಡನ ಜೀವ? ತಲೆಯೊಳಗೆ ಮತಿಯಿಲ್ಲದ ಕೂಪಮಂಡೂಕಗಳಿವು. ಆ ಸ್ವಾವಲಂಬಿ ಮಹಿಳೆಯರನ್ನು ಅವಮಾನಗೊಳಿಸಲೆಂದೇ ಅಂತಾರಾಷ್ಟ್ರೀಯ ಮಹಿಳಾ ದಿನದ ಆ ಕಾರ್ಯಕ್ರಮಕ್ಕೆ ಹೋಗಿದ್ದೇನು ಈ ‘ಮನು’ಜ? ಛೀ ಧಿಕ್ಕಾರವಿರಲಿ ಈತನ ವ್ಯಕ್ತಿತ್ವಕ್ಕೆ” ಎಂದಿದ್ದಾರೆ.

ಲೇಖಕಿ ಮಮತಾ ಅರಸೀಕೆರೆ ಪ್ರತಿಕ್ರಿಯಿಸಿ, “ಹಣೆಗೆ ಕುಂಕುಮ ಇಟ್ಟುಕೊಂಡಿಲ್ಲ ಎಂದು ಸಂಸದರೊಬ್ಬರು ಮಹಿಳೆಯರೊಬ್ಬರನ್ನು ದಬಾಯಿಸಿದ್ದಾರೆ. ನಿನ್ನ ಗಂಡ ಬದುಕಿದ್ದಾನೆ ತಾನೆ ಕುಂಕುಮ ಇಟ್ಟುಕೊ ಅಂದಿದ್ದಾರೆ. ಈ ಅಂಶಗಳೆಲ್ಲ ವೈಯಕ್ತಿಕ ವಿಷಯಗಳು. ಭಾರತೀಯ ಸಂಸ್ಕೃತಿ ಹೆಸರಲ್ಲಿ ಹೇರುವ ಪ್ರವೃತ್ತಿ ಸಲ್ಲದು. ಅದರಲ್ಲೂ ಹೆಣ್ಣುಮಕ್ಕಳೆಂದರೆ ಸಾಕು ಅವರನ್ನೇ ಸತತ ಗಮನಿಸುವ, ಕಾಯ್ದುಕೊಂಡಿದ್ದು ಯಾವುದಾದರೂ ವಿಷಯವನ್ನೆತ್ತಿ ತಿವಿಯುವ ಈ ಪುರುಷರ ಮನಃಸ್ಥಿತಿ ಅದ್ಯಾವಾಗ ಬದಲಾಗುವುದೊ ತಿಳಿಯದು. ಬಾಹ್ಯ ಲಕ್ಷಣಗಳು , ಸಂಕೇತಗಳ ಮೂಲಕ ಮಹಿಳೆಯರನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವ ನಡೆಗಳನ್ನು ಯಾವತ್ತೂ ವಿರೋಧಿಸಬೇಕು” ಎಂದು ತಿಳಿಸಿದ್ದಾರೆ.

ಮುಂದುವರಿದು, “ಸಂಸ್ಕೃತಿ ಹೆಸರಲ್ಲಿ ಮಾಡುವ ಅನಾಚಾರಗಳನ್ನು ಮೊದಲು ಬದಲಾಯಿಸಲಿ. ಅಷ್ಟಕ್ಕೂ ಸಂಸ್ಕೃತಿ ಉಳಿಸುವ ಜವಾಬುದಾರಿಕೆಯನ್ನು ಯಾರು ಯಾರಿಗೂ ಕೊಟ್ಟಿಲ್ಲ. ದಬಾಯಿಸುವ ಹಕ್ಕು ಯಾರಿಗೂ ಇಲ್ಲ. ದಬಾಯಿಸಲು, ಬದಲಾಯಿಸಲು, ಬೇಕಾದಷ್ಟು ಸಮಾಜ ಬಾಹಿರ ಅಪಸವ್ಯಗಳಿವೆ. ಮಹಿಳೆಯರ ಮೇಲೆ ಆಗುವ ದೌರ್ಜನ್ಯಗಳ ಬಗ್ಗೆ ಖಂಡತುಂಡವಾಗಿ ಮಾತನಾಡಲಿ ನೋಡುವ. ಅಂತಹ ಕಡೆಯೆಲ್ಲಾ ಈ ಜೋರು ಮನೋಭಾವ ಮಾಡಿ ತೋರಿಸಲಿ. ಹೊರಗೊಂದು ಒಳಗೊಂದು ಪ್ರವೃತ್ತಿಯನ್ನು ಬಿಟ್ಟು ನಡೆ ನುಡಿ ಸಮತೋಲದಲ್ಲಿಟ್ಟುಕೊಂಡಿರಲಿ ಸಾಕು ಈ ಪುರುಷವರ್ಗಗಳೆಲ್ಲ” ಎಂದಿದ್ದಾರೆ.

ಅಸ್ತಿತ್ವ ಲೀಗಲ್ ಟ್ರಸ್ಟ್ ಸಂಸ್ಥಾಪಕರು ಹಾಗೂ ವಕೀಲರಾದ ಅಂಜಲಿ ರಾಮಣ್ಣ ಪ್ರತಿಕ್ರಿಯಿಸಿ, “ಸಿರಿವಂತರು ಅವರ ಧಿರಿಸಿಗೆ match ಆಗಲ್ಲ ಅಂತ ಕುಂಕುಮ ಇಟ್ಟುಕೊಂಡಿರಲ್ಲ. ಮಧ್ಯಮದವರು matching ಬೊಟ್ಟು ಇಟ್ಟುಕೊಂಡಿರುತ್ತಾರೆ. ದುಡಿಯುವ ಮಹಿಳೆಯರು ಕುಂಕುಮ, ಬಳೆ ಏನೂ ತೊಟ್ಟಿರುವುದಿಲ್ಲ, ಅವರ ಕೈ ಬಿರುಕುಗಳಿಂದ, ಹಣೆ ಧೂಳಿನಿಂದ, ಕೂದಲು ಬಿಸಿಲಿನಿಂದ ತುಂಬಿರುತ್ತದೆ. ಇವರೆಲ್ಲರ ಗಂಡಂದಿರು ಪೂರ್ತಿ ಆಯುಷ್ಯ ಬದುಕಿದವರನ್ನು ಕಂಡಿದ್ದೇನೆ. ಸಂಸದ ಮುನಿಸ್ವಾಮಿ ಮಹಾಶಯರು ಚಿತ್ರಗುಪ್ತನ ಕೆಲಸ ಬಿಟ್ಟು ಜನರ ಜವಾಬ್ದಾರಿ ನೋಡುವುದು ಒಳಿತು” ಎಂದು ಬುದ್ಧಿ ಹೇಳಿದ್ದಾರೆ.

ಲೇಖಕಿ ಭಾರತಿ ಹೆಗಡೆಯವರು ಪ್ರತಿಕ್ರಿಯಿಸಿ, “ಪರವಾಗಿಲ್ಲ ಸಂಸದರೇ‌. ಇದು ಬಹಳ ಬೇಗ ಕಣ್ಣಿಗೆ ಬೀಳತ್ತೆ. ಹಾಸಿ ಹೊದೆಯಷ್ಟಿರುವ ಬಡತನ, ನೀರಿನ ಸಮಸ್ಯೆ, ಹೆಚ್ಚುತ್ತಾ ಇರೋ ಹೆಣ್ಣಿನ ಮೇಲಿನ ದೌರ್ಜನ್ಯ ಅತ್ಯಾಚಾರಗಳು, ಇದ್ಯಾವುದೂ ತಮ್ಮ ಗಮನಕ್ಕೆ ಬರೋದಿಲ್ಲ. ಕುಂಕುಮ ಇಟ್ಗೊಳೋದು ಬಿಡೋದು ಅವರವರ ವೈಯಕ್ತಿಕ ನಿಲುವು. ಅದಕ್ಕಾಗಿ ಸರ್ವಾಜನಿಕವಾಗಿ ಒಬ್ಬ ಮಹಿಳೆಯನ್ನು ನಿಂದಿಸಿದ ತಮ್ಮ ಕುರಿತು ಏನೆನ್ನಬೇಕು?” ಎಂದು ಪ್ರಶ್ನಿಸಿದ್ದಾರೆ.

ಪ್ರಕಾಶಕಿ ಅಕ್ಷತಾ ಹುಂಚದಕಟ್ಟೆ ಘಟನೆಯನ್ನು ಖಂಡಿಸಿದ್ದು, “ಈ ಮನಃಸ್ಥಿತಿಗೆ ಧಿಕ್ಕಾರ ಹೇಳುತ್ತಲೇ. ಇದರ ಮೂಲ ಹುಡುಕಿ ಅದನ್ನು ಸಂಪೂರ್ಣ ತೊಲಗಿಸುವ ಪ್ರಯತ್ನ ಮಾಡದೇ ಹೋದರೆ ಇಂಥ ಮನಃಸ್ಥಿತಿಗಳು ಮತ್ತೆ ಮತ್ತೆ ಎದ್ದು ನಮಗೆ ಜಾಡಿಸುವ ಸಂಭವ ಸೃಷ್ಟಿಯಾಗುತ್ತಲೇ ಇರುತ್ತದೆ. ಇದು ನನ್ನ ಪ್ರಕಾರ ಈ ಮಹನೀಯರ ಹೆಗಲ ಮೇಲಿಟ್ಟು ಬೇರೆಯವರು ಗುರಿ ಇಟ್ಟು ಹೊಡೆದ ಪಿಸ್ತೂಲ್. ಹೆಗಲು ಕೊಟ್ಟವರನ್ನು ಧಿಕ್ಕರಿಸುತ್ತಲೇ , ಬೇರೆಯವರ ಹೆಗಲ ಮೇಲೆ ತಮ್ಮ ಸಿದ್ಧಾಂತದ ಗುರಿಯನ್ನು ಇಟ್ಟು ಹೊಡೆವ ಮನಸ್ಥಿತಿಯನ್ನು ಸಂಪೂರ್ಣ ಧಿಕ್ಕರಿಸಬೇಕಾಗಿದೆ. ಮಹಿಳೆಯರ ಸ್ವಯಂ ಅಸ್ಮಿತೆಯನ್ನು ಒಪ್ಪದ ಎಲ್ಲ ಜಾತಿ ಧರ್ಮದ ಮೂಲಭೂತವಾದಿ ಮನಃಸ್ಥಿತಿಗಳಿಗೆ ಧಿಕ್ಕಾರ ಹೇಳಬೇಕಾಗಿದೆ” ಎಂದಿದ್ದಾರೆ.

ಪ್ರೊ.ಪುರುಷೋತ್ತಮ ಬಿಳಿಮಲೆಯವರು ಹೀಗೆ ಪೋಸ್ಟ್ ಮಾಡಿದ್ದಾರೆ:

ಅಯ್ಯಾ ಮುನಿಸ್ವಾಮೀ,
ಬಡ ಮಹಿಳೆಯರ ಕುಂಕುಮ ಬೆವರಲ್ಲಿ ಕರಗಿ ಹೋಗುತ್ತೆ.
ಕುಂಕುಮ ತರಲು ಮತ್ತೆ ಗಂಡನಿಗೆ ಹೇಳಬೇಕು,
ನಿನ್ನ ಕುಂಕುಮ ನಿನ್ನ ಹಣೆಯಲಿ ಭದ್ರವಾಗಿರಲಿ
ಕಂಡ ಕಂಡವರಿಗೆಲ್ಲ ನಾಮ ಹಾಕಲು ಬೇಕಾಗಬಹುದು ನಿನಗೆ
ದುಡಿವ ಮಹಿಳೆಯ ಬಳೆಗಳು ಕೆಲಸದ ನಡುವೆ ಒಡೆದು ಚೂರಾಗುತ್ತವೆ.
ಮತ್ತೆ ಕೊಳ್ಳಲು ಊರ ಜಾತ್ರೆಗೆ ಕಾಯಬೇಕು.
ಹಬ್ಬದಲಿ ಬಳೆಮಾರುವನಿಗೆ ತಡೆ ಒಡ್ಡಲಾಗಿದೆಯಂತೆ
ಈಗ ನಿನ್ನ ಬಳೆಗಳ ನೀನೇ ಇಟ್ಟುಕೋ
ಜಾತಿ ಮತಗಳ ಹೆಸರಿನಲಿ ಜನಗಳಿಗೆ ತೊಡಿಸಲು ಬೇಕಾಗಬಹುದು ನಿನಗೆ
ತಾಯಂದಿರ ಹೊಟ್ಟೆ ಬೆನ್ನಿಗಂಟಿದ್ದು ನಿನಗೆ ಕಾಣಲಿಲ್ಲ
ಎಣ್ಣೆಯಿಲ್ಲದೆ ಅವರ ನೆತ್ತಿ ಒಣಗಿದ್ದು ನಿನಗೆ ಗೊತ್ತಿಲ್ಲ
ಗುಡಿಸಲುಗಳು ಸೋರುತ್ತಿರುವುದ ನೀನು ನೋಡಲಿಲ್ಲ,
ಮಕ್ಕಳು ಶಾಲೆಕಾಣದ ಬಗೆಗೆ ನಿನಗೆ ಅರಿವು ಮೂಡಲಿಲ್ಲ.
ವಯಸಾದರೂ ನಿನಗೆ ತಾಯಿಯ ಮುಖ ದರ್ಶನವಾಗಲೇ ಇಲ್ಲ.

ಕವಿತಾ ಕವಿ ಎಂಬವರು ಪ್ರತಿಕ್ರಿಯಿಸಿ, “ನನ್ನಂಥವರನ್ನು ಕೇಳಬೇಕಿತ್ತು. ಗ್ರಹಚಾರ ಬಿಡಿಸ್ತಿದ್ದೆ. ಜನಪ್ರತಿನಿಧಿಯಾಗಿರುವುದು ಜನಸೇವೆ ಮಾಡಲೆಂದೇ ಹೊರತು ದಬ್ಬಾಳಿಕೆ ನಡೆಸಲು ಅಲ್ಲ. ಮೊದಲು ನಿಮ್ಮನ್ನು ಗಾದಿಗೇರಿಸಿದ ಸಂವಿಧಾನ ಓದಿ. ನಂತರ ಮತ ಕೇಳಲು ಬನ್ನಿ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...