Homeಮುಖಪುಟಮೋದಿ ವಿರುದ್ಧ ವಾರಣಾಸಿಯಲ್ಲೇ ಕಣಕ್ಕಿಳಿಯುತ್ತಾರಾ ಬಿಜೆಪಿ ಹಿರಿಯ ನಾಯಕ ಮುರುಳಿ ಮನೋಹರ ಜೋಷಿ?

ಮೋದಿ ವಿರುದ್ಧ ವಾರಣಾಸಿಯಲ್ಲೇ ಕಣಕ್ಕಿಳಿಯುತ್ತಾರಾ ಬಿಜೆಪಿ ಹಿರಿಯ ನಾಯಕ ಮುರುಳಿ ಮನೋಹರ ಜೋಷಿ?

- Advertisement -
- Advertisement -

ಟೈಟಲ್ ನೋಡಿ ಆಶ್ಚರ್ಯವೆನಿಸಬಹುದಾದ ಈ ಸುದ್ದಿ ಈಗ ಕೇವಲ ತೆರೆಮರೆಯಲ್ಲಿ ಉಳಿದಿಲ್ಲ. ಅದಾಗಲೇ ದೇಶದ ಪ್ರಮುಖ ಸುದ್ದಿ ಚಾನೆಲ್‍ನ ವೆಬ್‍ಸೈಟ್‍ನಲ್ಲಿ ಬಂದಾಗಿದೆ.

ನಿನ್ನೆಯಷ್ಟೇ ಬಿಜೆಪಿ ಭೀಷ್ಮ ಎನ್ನುವ ವಿಶೇಷಣದ ಅಡ್ವಾಣಿಯವರು ತಮ್ಮ ಬ್ಲಾಗ್‍ನಲ್ಲಿ ‘ನಮ್ಮನ್ನು ರಾಜಕೀಯವಾಗಿ ವಿರೋಧಿಸುವವರು ದೇಶದ್ರೋಹಿಗಳಾಗುವುದಿಲ್ಲ, ನಮ್ಮ ಶತ್ರುಗಳೂ ಅಲ್ಲ, ಕೇವಲ ರಾಜಕೀಯ ಎದುರಾಳಿಗಳಷ್ಟೇ. ನಮ್ಮ ಭಾರತದ ಪ್ರಜಾಪ್ರಭುತ್ವ ನೆಲೆ ನಿಂತಿರುವುದೇ ಬಹುತ್ವ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ. ಈ ಪ್ರಜಾಪ್ರಭುತ್ವವೇ ಯಾವತ್ತೂ ಬಿಜೆಪಿ ಪಕ್ಷದ ಹೆಗ್ಗುರುತು” ಎಂದು ಬರೆದಿದ್ದರು. ಪ್ರಸ್ತುತ ಬಿಜೆಪಿಯ ಹಿರಿಯ ನಾಯಕರು ಮುಖ್ಯವಾಗಿ ಮೋದಿಯವರು, ತಮ್ಮ ರಾಜಕೀಯ ವಿರೋಧಿಗಳ, ನಿರ್ದಿಷ್ಟವಾಗಿ ಕಾಂಗ್ರೆಸ್ ನಾಯಕರ ದೇಶಪ್ರೇಮವನ್ನು ಪ್ರಶ್ನಿಸುತ್ತಾ ಚುನಾವಣಾ ಪ್ರಚಾರ ನಡೆಸುತ್ತಿರುವ ಸಂದರ್ಭದಲ್ಲಿ ಹಾಗೂ ಪಕ್ಷದೊಳಗೆ ಮೋದಿ-ಶಾ ಜೋಡಿ ಸರ್ವಾಧಿಕಾರಿಗಳಾಗಿ ಬೆಳೆದಿರುವ ಸನ್ನಿವೇಶದಲ್ಲಿ ಅಡ್ವಾಣಿಯವರ ಈ ಹೇಳಿಕೆ ಮೋದಿಯವರಿಗೆ ಕೊಟ್ಟ ಟಾಂಗ್ ಎಂತಲೇ ವಿಶ್ಲೇಷಣೆಗೆ ಒಳಪಡುತ್ತಿದೆ. ಮೋದಿ-ಅಮಿತ್ ಶಾ ಜೋಡಿ ತಮ್ಮನ್ನು ಮೂಲೆಗುಂಪು ಮಾಡಿದ್ದಕ್ಕೆ ಪ್ರತಿಯಾಗಿ ಈ ಹಿರಿಯ ನಾಯಕ ಚುನಾವಣೆಯ ಸಮಯದಲ್ಲಿ ಹೀಗೆ ಬರೆದಿರುವುದರಲ್ಲಿ ಹೆಚ್ಚೇನು ಅನುಮಾನವಿಲ್ಲ. ಇದು ಸಮರೋತ್ಸಾಹದಲ್ಲಿರುವ ಗುಜರಾತಿ ಜೋಡಿಗೆ ಭರ್ಜರಿ ಹಿನ್ನಡೆಯನ್ನೇ ಉಂಟು ಮಾಡುತ್ತಿದೆ.

ಅಡ್ವಾಣಿಯವರ ರೆಬೆಲ್ ಇಶ್ಯೂ ತಣ್ಣಗಾಗುವ ಮೊದಲೇ ಈಗ ಮತ್ತೊಬ್ಬ ಹಿರಿಯ ನಾಯಕ ಮುರುಳಿ ಮನೋಹರ್ ಜೋಷಿಯವರಿಂದಲೂ ಬಿಜೆಪಿಗೆ ಆಘಾತಕರವಾದ ಸುದ್ದಿ ಹೊರಬಿದ್ದಿದೆ. ಮೋದಿ-ಶಾ ಬಿಜೆಪಿಯೊಳಗೆ ಮುಂಚೂಣಿಗೆ ಬಂದ ಕ್ಷಣದಿಂದಲೂ ಪ್ರತಿರೋಧ ತೋರುತ್ತಲೇ ಬಂದಿದ್ದ ಮತ್ತು ಆ ಕಾರಣಕ್ಕೆ ಹೀನಾಯವಾಗಿ ಮೂಲೆ ಗುಂಪಾಗಿಸಲ್ಪಟ್ಟ ಜೋಷಿಯವರು ಇದೀಗ ಮೋದಿ ವಿರುದ್ಧ ವಾರಣಾಸಿಯಲ್ಲಿ ಚುನಾವಣಾ ಕಣಕ್ಕೆ ಧುಮುಕಲಿದ್ದಾರೆ ಎಂಬ ಸುದ್ದಿ ಬರೆದಿರುವುದು ಪ್ರಸಿದ್ಧ ಪತ್ರಕರ್ತೆ ಸ್ವಾತಿ ಚತುರ್ವೇದಿ. ಈಗಾಗಲೇ ಕಾಂಗ್ರೆಸ್‍ನ ಹಿರಿಯ ನಾಯಕರು ಅವರ ಜೊತೆಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಮಾತ್ರವಲ್ಲದೆ, ಇತರೆ ಪಕ್ಷಗಳ ನಾಯಕರೂ ಜೋಷಿಯವರನ್ನು ಸಂಪರ್ಕಿಸಿದ್ದು ಅವರು ವಾರಣಾಸಿಯಿಂದ ಸ್ಪರ್ಧಿಸಲು ಇಚ್ಛಿಸಿದರೆ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಬೆಂಬಲ ಸೂಚಿಸುವ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ನಾಯಕರಲ್ಲಿ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಅವರ ಹೆಸರೂ ಕೇಳಿಬರುತ್ತಿದೆ. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಮತ್ತು ಬಿಎಸ್‍ಪಿ ಮೈತ್ರಿ ಮಾಡಿಕೊಂಡಿರುವುದರಿಂದ ಜೋಷಿಗೆ ಮಾಯಾವತಿಯವರ ಬೆಂಬಲವೂ ಸಿಕ್ಕಂತಾಗುತ್ತದೆ.

ಜೋಷಿಯವರು ಈ ಮಾತುಕತೆಗೆ ಪೂರಕವಾಗಿ ಸ್ಪಂದಿಸಿದ್ದಾರಾದರೂ, ಮೊದಲಿಗೆ ವಾರಾಣಾಸಿಗಿಂತ ಬೇರೆಡೆ ಸ್ಪರ್ಧಿಸುವ ಅಭಿಲಾಷೆ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ. ವಾರಾಣಾಸಿ, ಈ ಮೊದಲು ಮುರುಳಿ ಮನೋಹರ್ ಜೋಷಿ ಸಂಸದನಾಗಿ ಪ್ರತಿನಿಧಿಸುತ್ತಿದ್ದ ಕ್ಷೇತ್ರ. ಆದರೆ 2014ರಲ್ಲಿ ಮೋದಿಯವರು ವಾರಾಣಾಸಿಯಿಂದ ಸ್ಪರ್ಧಿಸಲು ನಿರ್ಧರಿಸಿದಾಗ ಜೋಷಿಯವರಿಗೆ ಕಾನ್ಪುರ ಕ್ಷೇತ್ರದ ಟಿಕೆಟ್ ನೀಡಲಾಗಿತ್ತು. ಆಗಲೇ ತನ್ನ ಕ್ಷೇತ್ರವನ್ನು ಮೋದಿಯವರಿಗೆ ಬಿಟ್ಟುಕೊಡಲು ಸಣ್ಣಗೆ ಪ್ರತಿರೋಧ ಒಡ್ಡಿದ್ದ ಅವರು ಆರೆಸೆಸ್ ನಾಯಕರ ಮಧ್ಯಸ್ಥಿಕೆಯಿಂದ ಬಿಟ್ಟುಕೊಟ್ಟಿದ್ದರು. ಆದರೆ ಈ ಬಾರಿ ಟಿಕೆಟ್ ನೀಡುವಾಗ ಬಿಜೆಪಿ ಪಕ್ಷವು ಎಲ್.ಕೆ.ಅಡ್ವಾಣಿ ಮತ್ತು ಮುರುಳಿ ಮನೋಹರ್ ಜೋಷಿಯವರಿಗೆ ಸ್ಪರ್ಧಿಸಲು ಅವಕಾಶ ನೀಡಲಿಲ್ಲ. ಅಡ್ವಾಣಿಯವರು ಪ್ರತಿನಿಧಿಸುತ್ತಿದ್ದ ಗಾಂಧಿನಗರ ಕ್ಷೇತ್ರವನ್ನು ಸ್ವತಃ ಅಮಿತ್ ಶಾ ತಮ್ಮ ಬಳಿಯೇ ಉಳಿಸಿಕೊಂಡರೆ, ಮುರುಳಿ ಮನೋಹರ್ ಜೋಷಿಯವರು ಹಾಲಿ ಸಂಸದರಾಗಿರುವ ಕಾನ್ಪುರದಿಂದ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಮಂತ್ರಿ ಸತ್ಯದೇವ್ ಪಚೌರಿಯನ್ನು ಅಭ್ಯರ್ಥಿಯಾಗಿ ಘೋಷಿಸಿದೆ.

1992ರಲ್ಲಿ ಮೋದಿ ಮತ್ತು ಜೋಶಿಯವರು

ವಾಜಪೇಯಿಯವರ ಜೊತೆಗೂಡಿ ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಅಡ್ವಾಣಿ ಮತ್ತು ಜೋಷಿ ಇಬ್ಬರೂ ಮಹತ್ವದ ಪಾತ್ರ ನಿಭಾಯಿಸಿದಂತವರು. 1977ರಲ್ಲಿ ಜನತಾ ಪಾರ್ಟಿ ಅಧಿಕಾರಕ್ಕೆ ಬಂದಾಗ ಜನಸಂಘದಿಂದ ಸಚಿವರಾಗುವ ಅರ್ಹತೆಯಲ್ಲಿ ಇದ್ದವರು ವಾಜಪೇಯಿ ಮತ್ತು ಅಡ್ವಾಣಿ. ಜೋಷಿಯವರನ್ನು ಆಗ ಜನತಾ ಪಕ್ಷದ ಸಂಸದೀಯ ಪಕ್ಷದ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿತ್ತು. ಇನ್ನು ಬಿಜೆಪಿ ದೇಶದಲ್ಲಿ ಬಲವಾಗಿ ಬೇರೂರಲು ಕಾರಣವಾದದ್ದು ಅಡ್ವಾಣಿಯವರ ಕುಖ್ಯಾತ ರಥಯಾತ್ರೆ ಮತ್ತು ಅವರದೇ ನೇತೃತ್ವದಲ್ಲಿ ನಡೆದ ಬಾಬರಿ ಮಸೀದಿ ಧ್ವಂಸ ಪ್ರಕರಣಗಳು. ಜೋಷಿ ಇವರಿಬ್ಬರ ನಂತರದ ಮೂರನೇ ಸ್ಥಾನದಲ್ಲಿದ್ದ ನಾಯಕ. ವಾಜಪೇಯಿಯವರ ಹದಿಮೂರು ದಿವಸದ ಸರ್ಕಾರದಲ್ಲಿ ಗೃಹಮಂತ್ರಿಯಾಗುವಷ್ಟು, ಆನಂತರದ ಎನ್‍ಡಿಎ ಸರ್ಕಾರದಲ್ಲಿ ಮಾನವ ಸಂಪನ್ಮೂಲದಂತಹ ಪ್ರಭಾವಿ ಖಾತೆಯ ಸಚಿವರಾಗುವಷ್ಟು ಜೋಷಿ ಬಿಜೆಪಿಯೊಳಗೆ ವರ್ಚಸ್ಸು ಹೊಂದಿದ್ದರು. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿಯೂ ಆಯ್ಕೆಯಾಗಿದ್ದರು.

ಅಂತವರನ್ನು ಮೋದಿ-ಶಾ ಜೋಡಿ ಇತ್ತೀಚಿನ ದಿನಗಳಲ್ಲಿ ನಡೆಸಿಕೊಂಡ ರೀತಿ ಮಾತ್ರ ತುಂಬಾ ಅವಮಾನಕರದ್ದಾಗಿತ್ತು. ಅದರ ವಿರುದ್ಧ ಅಡ್ವಾಣಿಯವರು ಒಂದಷ್ಟು ಮಟ್ಟಿಗಿನ ಸಹನೆ ತೋರಿದರಾದರು ಮುರುಳಿ ಮನೋಹರ್ ಜೋಷಿ ಪ್ರತಿಯಾಡುತ್ತಲೇ ಬಂದಿದ್ದರು. 2014ರ ಚುನಾವಣೆ ಸಂದರ್ಭದಲ್ಲೇ ಇಡೀ ದೇಶಾದ್ಯಂತ ಮೋದಿ ಅಲೆ ಇದೆ ಎಂಬ ವಾದ ಎನ್ನುತ್ತಿದ್ದ ಸಂದರ್ಭದಲ್ಲಿ ಸಂದರ್ಶನವೊಂದರಲ್ಲಿ “ದೇಶದಲ್ಲಿ ಮೋದಿ ಅಲೆ ಇಲ್ಲ, ಇರೋದು ಬಿಜೆಪಿ ಅಲೆ. ಮೋದಿ ಕೇವಲ ಪಕ್ಷದ ಪ್ರಧಾನಿ ಅಭ್ಯರ್ಥಿ ಅಷ್ಟೆ” ಎಂದು ನೇರವಾಗಿ ಹೇಳಿದ್ದ ಜೋಷಿಯವರು, ಅಷ್ಟರಲ್ಲಾಗಲೇ ಬಿಜೆಪಿಯಿಂದ ಟಿಕೆಟ್ (ಬಾರ್ಮರ್ ಕ್ಷೇತ್ರ) ನಿರಾಕರಿಸಲ್ಪಟ್ಟಿದ್ದ ಮತ್ತೊಬ್ಬ ಹಿರಿಯ ನಾಯಕ ಜಸ್ವಂತ್ ಸಿಂಗ್‍ರ ಕುರಿತು “ಅವರಿಗೆ ಟಿಕೆಟ್ ನೀಡಬಾರದೆನ್ನುವುದು ಪಕ್ಷದೊಳಗೆ ಚರ್ಚೆಯೇ ಆಗಿರಲಿಲ್ಲ” ಎನ್ನುವ ಮೂಲಕ ಅದು ಮೋದಿ-ಶಾ ಜೋಡಿಯ ಏಕಪಕ್ಷೀಯ ನಿರ್ಧಾರ ಎಂದು ಟೀಕಿಸಿದ್ದರು. ಅಲ್ಲದೇ 2018ರಲ್ಲಿ `ಪವರ್ ಪೊಲಿಟಿಕ್ಸ್’ ಎಂಬ ನಿಯತಕಾಲಿಕೆಯಲ್ಲಿ ‘ರಾಜಧರ್ಮ’ ತಲೆಬರಹದಲ್ಲಿ ಲೇಖನವೊಂದನ್ನು ಬರೆದಿದ್ದ ಜೋಷಿ, ಇಡೀ ಲೇಖನವನ್ನು ಮೋದಿ-ಶಾ ಸರ್ವಾಧಿಕಾರವನ್ನು ಟೀಕಿಸಲು ದುಡಿಸಿಕೊಂಡಿದ್ದರು. ‘ವಾಲ್ಮೀಕಿಯ ಪ್ರಕಾರ ರಾಜನಾದವನು ಸರ್ವಾಧಿಕಾರಿಯಾಗಿರಬಾರದು. ರಾಜನಾದವನು ಆಡಳಿತವನ್ನು ನಡೆಸಲು ಮಂತ್ರಿಗಳ, ವಿದ್ವಾಂಸರ, ಸೇನಾ ಅಧಿಕಾರಿಗಳ ಸಲಹೆ ಕೇಳುತ್ತಿದ್ದುದನ್ನು ರಾಮಾಯಣದಲ್ಲಿ ನಾವು ಕಾಣಬಹುದು’ ಎಂಬ ಒಂದು ಸಾಲೇ ಇಡೀ ಲೇಖನಕ್ಕೆ ಹಿಡಿದ ಕನ್ನಡಿಯಂತಿದೆ. ಜೋಷಿಯವರ ವ್ಯಕ್ತಿತ್ವ ಹೀಗಿದ್ದುದರಿಂದಲೇ ಆರೆಸ್ಸೆಸ್ ನಾಯಕರು ಮೋದಿ-ಷಾ ಜೋಡಿಗೆ, ಜೋಷಿಯವರ ವಿಚಾರದಲ್ಲಿ ಎಚ್ಚರಿಸಿದ್ದರಂತೆ.

ಇದೀಗ ಸಿಡಿದೆದ್ದಿರುವ ಜೋಷಿಯವರನ್ನು ಆರೆಸ್ಸೆಸ್ ತಣ್ಣಗೆ ಮಾಡುತ್ತದಾ ಅಥವಾ ಮೋದಿಯ ವಿರುದ್ಧ ತಮ್ಮ ಸ್ವಂತ ಕ್ಷೇತ್ರ ವಾರಣಾಸಿಯಿಂದ ಸ್ಪರ್ಧೆ ಮಾಡಲು ಮುಂದಾಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...