Homeಮುಖಪುಟಮೋದಿ ವಿರುದ್ಧ ವಾರಣಾಸಿಯಲ್ಲೇ ಕಣಕ್ಕಿಳಿಯುತ್ತಾರಾ ಬಿಜೆಪಿ ಹಿರಿಯ ನಾಯಕ ಮುರುಳಿ ಮನೋಹರ ಜೋಷಿ?

ಮೋದಿ ವಿರುದ್ಧ ವಾರಣಾಸಿಯಲ್ಲೇ ಕಣಕ್ಕಿಳಿಯುತ್ತಾರಾ ಬಿಜೆಪಿ ಹಿರಿಯ ನಾಯಕ ಮುರುಳಿ ಮನೋಹರ ಜೋಷಿ?

- Advertisement -
- Advertisement -

ಟೈಟಲ್ ನೋಡಿ ಆಶ್ಚರ್ಯವೆನಿಸಬಹುದಾದ ಈ ಸುದ್ದಿ ಈಗ ಕೇವಲ ತೆರೆಮರೆಯಲ್ಲಿ ಉಳಿದಿಲ್ಲ. ಅದಾಗಲೇ ದೇಶದ ಪ್ರಮುಖ ಸುದ್ದಿ ಚಾನೆಲ್‍ನ ವೆಬ್‍ಸೈಟ್‍ನಲ್ಲಿ ಬಂದಾಗಿದೆ.

ನಿನ್ನೆಯಷ್ಟೇ ಬಿಜೆಪಿ ಭೀಷ್ಮ ಎನ್ನುವ ವಿಶೇಷಣದ ಅಡ್ವಾಣಿಯವರು ತಮ್ಮ ಬ್ಲಾಗ್‍ನಲ್ಲಿ ‘ನಮ್ಮನ್ನು ರಾಜಕೀಯವಾಗಿ ವಿರೋಧಿಸುವವರು ದೇಶದ್ರೋಹಿಗಳಾಗುವುದಿಲ್ಲ, ನಮ್ಮ ಶತ್ರುಗಳೂ ಅಲ್ಲ, ಕೇವಲ ರಾಜಕೀಯ ಎದುರಾಳಿಗಳಷ್ಟೇ. ನಮ್ಮ ಭಾರತದ ಪ್ರಜಾಪ್ರಭುತ್ವ ನೆಲೆ ನಿಂತಿರುವುದೇ ಬಹುತ್ವ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ. ಈ ಪ್ರಜಾಪ್ರಭುತ್ವವೇ ಯಾವತ್ತೂ ಬಿಜೆಪಿ ಪಕ್ಷದ ಹೆಗ್ಗುರುತು” ಎಂದು ಬರೆದಿದ್ದರು. ಪ್ರಸ್ತುತ ಬಿಜೆಪಿಯ ಹಿರಿಯ ನಾಯಕರು ಮುಖ್ಯವಾಗಿ ಮೋದಿಯವರು, ತಮ್ಮ ರಾಜಕೀಯ ವಿರೋಧಿಗಳ, ನಿರ್ದಿಷ್ಟವಾಗಿ ಕಾಂಗ್ರೆಸ್ ನಾಯಕರ ದೇಶಪ್ರೇಮವನ್ನು ಪ್ರಶ್ನಿಸುತ್ತಾ ಚುನಾವಣಾ ಪ್ರಚಾರ ನಡೆಸುತ್ತಿರುವ ಸಂದರ್ಭದಲ್ಲಿ ಹಾಗೂ ಪಕ್ಷದೊಳಗೆ ಮೋದಿ-ಶಾ ಜೋಡಿ ಸರ್ವಾಧಿಕಾರಿಗಳಾಗಿ ಬೆಳೆದಿರುವ ಸನ್ನಿವೇಶದಲ್ಲಿ ಅಡ್ವಾಣಿಯವರ ಈ ಹೇಳಿಕೆ ಮೋದಿಯವರಿಗೆ ಕೊಟ್ಟ ಟಾಂಗ್ ಎಂತಲೇ ವಿಶ್ಲೇಷಣೆಗೆ ಒಳಪಡುತ್ತಿದೆ. ಮೋದಿ-ಅಮಿತ್ ಶಾ ಜೋಡಿ ತಮ್ಮನ್ನು ಮೂಲೆಗುಂಪು ಮಾಡಿದ್ದಕ್ಕೆ ಪ್ರತಿಯಾಗಿ ಈ ಹಿರಿಯ ನಾಯಕ ಚುನಾವಣೆಯ ಸಮಯದಲ್ಲಿ ಹೀಗೆ ಬರೆದಿರುವುದರಲ್ಲಿ ಹೆಚ್ಚೇನು ಅನುಮಾನವಿಲ್ಲ. ಇದು ಸಮರೋತ್ಸಾಹದಲ್ಲಿರುವ ಗುಜರಾತಿ ಜೋಡಿಗೆ ಭರ್ಜರಿ ಹಿನ್ನಡೆಯನ್ನೇ ಉಂಟು ಮಾಡುತ್ತಿದೆ.

ಅಡ್ವಾಣಿಯವರ ರೆಬೆಲ್ ಇಶ್ಯೂ ತಣ್ಣಗಾಗುವ ಮೊದಲೇ ಈಗ ಮತ್ತೊಬ್ಬ ಹಿರಿಯ ನಾಯಕ ಮುರುಳಿ ಮನೋಹರ್ ಜೋಷಿಯವರಿಂದಲೂ ಬಿಜೆಪಿಗೆ ಆಘಾತಕರವಾದ ಸುದ್ದಿ ಹೊರಬಿದ್ದಿದೆ. ಮೋದಿ-ಶಾ ಬಿಜೆಪಿಯೊಳಗೆ ಮುಂಚೂಣಿಗೆ ಬಂದ ಕ್ಷಣದಿಂದಲೂ ಪ್ರತಿರೋಧ ತೋರುತ್ತಲೇ ಬಂದಿದ್ದ ಮತ್ತು ಆ ಕಾರಣಕ್ಕೆ ಹೀನಾಯವಾಗಿ ಮೂಲೆ ಗುಂಪಾಗಿಸಲ್ಪಟ್ಟ ಜೋಷಿಯವರು ಇದೀಗ ಮೋದಿ ವಿರುದ್ಧ ವಾರಣಾಸಿಯಲ್ಲಿ ಚುನಾವಣಾ ಕಣಕ್ಕೆ ಧುಮುಕಲಿದ್ದಾರೆ ಎಂಬ ಸುದ್ದಿ ಬರೆದಿರುವುದು ಪ್ರಸಿದ್ಧ ಪತ್ರಕರ್ತೆ ಸ್ವಾತಿ ಚತುರ್ವೇದಿ. ಈಗಾಗಲೇ ಕಾಂಗ್ರೆಸ್‍ನ ಹಿರಿಯ ನಾಯಕರು ಅವರ ಜೊತೆಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಮಾತ್ರವಲ್ಲದೆ, ಇತರೆ ಪಕ್ಷಗಳ ನಾಯಕರೂ ಜೋಷಿಯವರನ್ನು ಸಂಪರ್ಕಿಸಿದ್ದು ಅವರು ವಾರಣಾಸಿಯಿಂದ ಸ್ಪರ್ಧಿಸಲು ಇಚ್ಛಿಸಿದರೆ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಬೆಂಬಲ ಸೂಚಿಸುವ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ನಾಯಕರಲ್ಲಿ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಅವರ ಹೆಸರೂ ಕೇಳಿಬರುತ್ತಿದೆ. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಮತ್ತು ಬಿಎಸ್‍ಪಿ ಮೈತ್ರಿ ಮಾಡಿಕೊಂಡಿರುವುದರಿಂದ ಜೋಷಿಗೆ ಮಾಯಾವತಿಯವರ ಬೆಂಬಲವೂ ಸಿಕ್ಕಂತಾಗುತ್ತದೆ.

ಜೋಷಿಯವರು ಈ ಮಾತುಕತೆಗೆ ಪೂರಕವಾಗಿ ಸ್ಪಂದಿಸಿದ್ದಾರಾದರೂ, ಮೊದಲಿಗೆ ವಾರಾಣಾಸಿಗಿಂತ ಬೇರೆಡೆ ಸ್ಪರ್ಧಿಸುವ ಅಭಿಲಾಷೆ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ. ವಾರಾಣಾಸಿ, ಈ ಮೊದಲು ಮುರುಳಿ ಮನೋಹರ್ ಜೋಷಿ ಸಂಸದನಾಗಿ ಪ್ರತಿನಿಧಿಸುತ್ತಿದ್ದ ಕ್ಷೇತ್ರ. ಆದರೆ 2014ರಲ್ಲಿ ಮೋದಿಯವರು ವಾರಾಣಾಸಿಯಿಂದ ಸ್ಪರ್ಧಿಸಲು ನಿರ್ಧರಿಸಿದಾಗ ಜೋಷಿಯವರಿಗೆ ಕಾನ್ಪುರ ಕ್ಷೇತ್ರದ ಟಿಕೆಟ್ ನೀಡಲಾಗಿತ್ತು. ಆಗಲೇ ತನ್ನ ಕ್ಷೇತ್ರವನ್ನು ಮೋದಿಯವರಿಗೆ ಬಿಟ್ಟುಕೊಡಲು ಸಣ್ಣಗೆ ಪ್ರತಿರೋಧ ಒಡ್ಡಿದ್ದ ಅವರು ಆರೆಸೆಸ್ ನಾಯಕರ ಮಧ್ಯಸ್ಥಿಕೆಯಿಂದ ಬಿಟ್ಟುಕೊಟ್ಟಿದ್ದರು. ಆದರೆ ಈ ಬಾರಿ ಟಿಕೆಟ್ ನೀಡುವಾಗ ಬಿಜೆಪಿ ಪಕ್ಷವು ಎಲ್.ಕೆ.ಅಡ್ವಾಣಿ ಮತ್ತು ಮುರುಳಿ ಮನೋಹರ್ ಜೋಷಿಯವರಿಗೆ ಸ್ಪರ್ಧಿಸಲು ಅವಕಾಶ ನೀಡಲಿಲ್ಲ. ಅಡ್ವಾಣಿಯವರು ಪ್ರತಿನಿಧಿಸುತ್ತಿದ್ದ ಗಾಂಧಿನಗರ ಕ್ಷೇತ್ರವನ್ನು ಸ್ವತಃ ಅಮಿತ್ ಶಾ ತಮ್ಮ ಬಳಿಯೇ ಉಳಿಸಿಕೊಂಡರೆ, ಮುರುಳಿ ಮನೋಹರ್ ಜೋಷಿಯವರು ಹಾಲಿ ಸಂಸದರಾಗಿರುವ ಕಾನ್ಪುರದಿಂದ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಮಂತ್ರಿ ಸತ್ಯದೇವ್ ಪಚೌರಿಯನ್ನು ಅಭ್ಯರ್ಥಿಯಾಗಿ ಘೋಷಿಸಿದೆ.

1992ರಲ್ಲಿ ಮೋದಿ ಮತ್ತು ಜೋಶಿಯವರು

ವಾಜಪೇಯಿಯವರ ಜೊತೆಗೂಡಿ ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಅಡ್ವಾಣಿ ಮತ್ತು ಜೋಷಿ ಇಬ್ಬರೂ ಮಹತ್ವದ ಪಾತ್ರ ನಿಭಾಯಿಸಿದಂತವರು. 1977ರಲ್ಲಿ ಜನತಾ ಪಾರ್ಟಿ ಅಧಿಕಾರಕ್ಕೆ ಬಂದಾಗ ಜನಸಂಘದಿಂದ ಸಚಿವರಾಗುವ ಅರ್ಹತೆಯಲ್ಲಿ ಇದ್ದವರು ವಾಜಪೇಯಿ ಮತ್ತು ಅಡ್ವಾಣಿ. ಜೋಷಿಯವರನ್ನು ಆಗ ಜನತಾ ಪಕ್ಷದ ಸಂಸದೀಯ ಪಕ್ಷದ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿತ್ತು. ಇನ್ನು ಬಿಜೆಪಿ ದೇಶದಲ್ಲಿ ಬಲವಾಗಿ ಬೇರೂರಲು ಕಾರಣವಾದದ್ದು ಅಡ್ವಾಣಿಯವರ ಕುಖ್ಯಾತ ರಥಯಾತ್ರೆ ಮತ್ತು ಅವರದೇ ನೇತೃತ್ವದಲ್ಲಿ ನಡೆದ ಬಾಬರಿ ಮಸೀದಿ ಧ್ವಂಸ ಪ್ರಕರಣಗಳು. ಜೋಷಿ ಇವರಿಬ್ಬರ ನಂತರದ ಮೂರನೇ ಸ್ಥಾನದಲ್ಲಿದ್ದ ನಾಯಕ. ವಾಜಪೇಯಿಯವರ ಹದಿಮೂರು ದಿವಸದ ಸರ್ಕಾರದಲ್ಲಿ ಗೃಹಮಂತ್ರಿಯಾಗುವಷ್ಟು, ಆನಂತರದ ಎನ್‍ಡಿಎ ಸರ್ಕಾರದಲ್ಲಿ ಮಾನವ ಸಂಪನ್ಮೂಲದಂತಹ ಪ್ರಭಾವಿ ಖಾತೆಯ ಸಚಿವರಾಗುವಷ್ಟು ಜೋಷಿ ಬಿಜೆಪಿಯೊಳಗೆ ವರ್ಚಸ್ಸು ಹೊಂದಿದ್ದರು. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿಯೂ ಆಯ್ಕೆಯಾಗಿದ್ದರು.

ಅಂತವರನ್ನು ಮೋದಿ-ಶಾ ಜೋಡಿ ಇತ್ತೀಚಿನ ದಿನಗಳಲ್ಲಿ ನಡೆಸಿಕೊಂಡ ರೀತಿ ಮಾತ್ರ ತುಂಬಾ ಅವಮಾನಕರದ್ದಾಗಿತ್ತು. ಅದರ ವಿರುದ್ಧ ಅಡ್ವಾಣಿಯವರು ಒಂದಷ್ಟು ಮಟ್ಟಿಗಿನ ಸಹನೆ ತೋರಿದರಾದರು ಮುರುಳಿ ಮನೋಹರ್ ಜೋಷಿ ಪ್ರತಿಯಾಡುತ್ತಲೇ ಬಂದಿದ್ದರು. 2014ರ ಚುನಾವಣೆ ಸಂದರ್ಭದಲ್ಲೇ ಇಡೀ ದೇಶಾದ್ಯಂತ ಮೋದಿ ಅಲೆ ಇದೆ ಎಂಬ ವಾದ ಎನ್ನುತ್ತಿದ್ದ ಸಂದರ್ಭದಲ್ಲಿ ಸಂದರ್ಶನವೊಂದರಲ್ಲಿ “ದೇಶದಲ್ಲಿ ಮೋದಿ ಅಲೆ ಇಲ್ಲ, ಇರೋದು ಬಿಜೆಪಿ ಅಲೆ. ಮೋದಿ ಕೇವಲ ಪಕ್ಷದ ಪ್ರಧಾನಿ ಅಭ್ಯರ್ಥಿ ಅಷ್ಟೆ” ಎಂದು ನೇರವಾಗಿ ಹೇಳಿದ್ದ ಜೋಷಿಯವರು, ಅಷ್ಟರಲ್ಲಾಗಲೇ ಬಿಜೆಪಿಯಿಂದ ಟಿಕೆಟ್ (ಬಾರ್ಮರ್ ಕ್ಷೇತ್ರ) ನಿರಾಕರಿಸಲ್ಪಟ್ಟಿದ್ದ ಮತ್ತೊಬ್ಬ ಹಿರಿಯ ನಾಯಕ ಜಸ್ವಂತ್ ಸಿಂಗ್‍ರ ಕುರಿತು “ಅವರಿಗೆ ಟಿಕೆಟ್ ನೀಡಬಾರದೆನ್ನುವುದು ಪಕ್ಷದೊಳಗೆ ಚರ್ಚೆಯೇ ಆಗಿರಲಿಲ್ಲ” ಎನ್ನುವ ಮೂಲಕ ಅದು ಮೋದಿ-ಶಾ ಜೋಡಿಯ ಏಕಪಕ್ಷೀಯ ನಿರ್ಧಾರ ಎಂದು ಟೀಕಿಸಿದ್ದರು. ಅಲ್ಲದೇ 2018ರಲ್ಲಿ `ಪವರ್ ಪೊಲಿಟಿಕ್ಸ್’ ಎಂಬ ನಿಯತಕಾಲಿಕೆಯಲ್ಲಿ ‘ರಾಜಧರ್ಮ’ ತಲೆಬರಹದಲ್ಲಿ ಲೇಖನವೊಂದನ್ನು ಬರೆದಿದ್ದ ಜೋಷಿ, ಇಡೀ ಲೇಖನವನ್ನು ಮೋದಿ-ಶಾ ಸರ್ವಾಧಿಕಾರವನ್ನು ಟೀಕಿಸಲು ದುಡಿಸಿಕೊಂಡಿದ್ದರು. ‘ವಾಲ್ಮೀಕಿಯ ಪ್ರಕಾರ ರಾಜನಾದವನು ಸರ್ವಾಧಿಕಾರಿಯಾಗಿರಬಾರದು. ರಾಜನಾದವನು ಆಡಳಿತವನ್ನು ನಡೆಸಲು ಮಂತ್ರಿಗಳ, ವಿದ್ವಾಂಸರ, ಸೇನಾ ಅಧಿಕಾರಿಗಳ ಸಲಹೆ ಕೇಳುತ್ತಿದ್ದುದನ್ನು ರಾಮಾಯಣದಲ್ಲಿ ನಾವು ಕಾಣಬಹುದು’ ಎಂಬ ಒಂದು ಸಾಲೇ ಇಡೀ ಲೇಖನಕ್ಕೆ ಹಿಡಿದ ಕನ್ನಡಿಯಂತಿದೆ. ಜೋಷಿಯವರ ವ್ಯಕ್ತಿತ್ವ ಹೀಗಿದ್ದುದರಿಂದಲೇ ಆರೆಸ್ಸೆಸ್ ನಾಯಕರು ಮೋದಿ-ಷಾ ಜೋಡಿಗೆ, ಜೋಷಿಯವರ ವಿಚಾರದಲ್ಲಿ ಎಚ್ಚರಿಸಿದ್ದರಂತೆ.

ಇದೀಗ ಸಿಡಿದೆದ್ದಿರುವ ಜೋಷಿಯವರನ್ನು ಆರೆಸ್ಸೆಸ್ ತಣ್ಣಗೆ ಮಾಡುತ್ತದಾ ಅಥವಾ ಮೋದಿಯ ವಿರುದ್ಧ ತಮ್ಮ ಸ್ವಂತ ಕ್ಷೇತ್ರ ವಾರಣಾಸಿಯಿಂದ ಸ್ಪರ್ಧೆ ಮಾಡಲು ಮುಂದಾಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...