Homeಮುಖಪುಟಮೋದಿ ವಿರುದ್ಧ ವಾರಣಾಸಿಯಲ್ಲೇ ಕಣಕ್ಕಿಳಿಯುತ್ತಾರಾ ಬಿಜೆಪಿ ಹಿರಿಯ ನಾಯಕ ಮುರುಳಿ ಮನೋಹರ ಜೋಷಿ?

ಮೋದಿ ವಿರುದ್ಧ ವಾರಣಾಸಿಯಲ್ಲೇ ಕಣಕ್ಕಿಳಿಯುತ್ತಾರಾ ಬಿಜೆಪಿ ಹಿರಿಯ ನಾಯಕ ಮುರುಳಿ ಮನೋಹರ ಜೋಷಿ?

- Advertisement -
- Advertisement -

ಟೈಟಲ್ ನೋಡಿ ಆಶ್ಚರ್ಯವೆನಿಸಬಹುದಾದ ಈ ಸುದ್ದಿ ಈಗ ಕೇವಲ ತೆರೆಮರೆಯಲ್ಲಿ ಉಳಿದಿಲ್ಲ. ಅದಾಗಲೇ ದೇಶದ ಪ್ರಮುಖ ಸುದ್ದಿ ಚಾನೆಲ್‍ನ ವೆಬ್‍ಸೈಟ್‍ನಲ್ಲಿ ಬಂದಾಗಿದೆ.

ನಿನ್ನೆಯಷ್ಟೇ ಬಿಜೆಪಿ ಭೀಷ್ಮ ಎನ್ನುವ ವಿಶೇಷಣದ ಅಡ್ವಾಣಿಯವರು ತಮ್ಮ ಬ್ಲಾಗ್‍ನಲ್ಲಿ ‘ನಮ್ಮನ್ನು ರಾಜಕೀಯವಾಗಿ ವಿರೋಧಿಸುವವರು ದೇಶದ್ರೋಹಿಗಳಾಗುವುದಿಲ್ಲ, ನಮ್ಮ ಶತ್ರುಗಳೂ ಅಲ್ಲ, ಕೇವಲ ರಾಜಕೀಯ ಎದುರಾಳಿಗಳಷ್ಟೇ. ನಮ್ಮ ಭಾರತದ ಪ್ರಜಾಪ್ರಭುತ್ವ ನೆಲೆ ನಿಂತಿರುವುದೇ ಬಹುತ್ವ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ. ಈ ಪ್ರಜಾಪ್ರಭುತ್ವವೇ ಯಾವತ್ತೂ ಬಿಜೆಪಿ ಪಕ್ಷದ ಹೆಗ್ಗುರುತು” ಎಂದು ಬರೆದಿದ್ದರು. ಪ್ರಸ್ತುತ ಬಿಜೆಪಿಯ ಹಿರಿಯ ನಾಯಕರು ಮುಖ್ಯವಾಗಿ ಮೋದಿಯವರು, ತಮ್ಮ ರಾಜಕೀಯ ವಿರೋಧಿಗಳ, ನಿರ್ದಿಷ್ಟವಾಗಿ ಕಾಂಗ್ರೆಸ್ ನಾಯಕರ ದೇಶಪ್ರೇಮವನ್ನು ಪ್ರಶ್ನಿಸುತ್ತಾ ಚುನಾವಣಾ ಪ್ರಚಾರ ನಡೆಸುತ್ತಿರುವ ಸಂದರ್ಭದಲ್ಲಿ ಹಾಗೂ ಪಕ್ಷದೊಳಗೆ ಮೋದಿ-ಶಾ ಜೋಡಿ ಸರ್ವಾಧಿಕಾರಿಗಳಾಗಿ ಬೆಳೆದಿರುವ ಸನ್ನಿವೇಶದಲ್ಲಿ ಅಡ್ವಾಣಿಯವರ ಈ ಹೇಳಿಕೆ ಮೋದಿಯವರಿಗೆ ಕೊಟ್ಟ ಟಾಂಗ್ ಎಂತಲೇ ವಿಶ್ಲೇಷಣೆಗೆ ಒಳಪಡುತ್ತಿದೆ. ಮೋದಿ-ಅಮಿತ್ ಶಾ ಜೋಡಿ ತಮ್ಮನ್ನು ಮೂಲೆಗುಂಪು ಮಾಡಿದ್ದಕ್ಕೆ ಪ್ರತಿಯಾಗಿ ಈ ಹಿರಿಯ ನಾಯಕ ಚುನಾವಣೆಯ ಸಮಯದಲ್ಲಿ ಹೀಗೆ ಬರೆದಿರುವುದರಲ್ಲಿ ಹೆಚ್ಚೇನು ಅನುಮಾನವಿಲ್ಲ. ಇದು ಸಮರೋತ್ಸಾಹದಲ್ಲಿರುವ ಗುಜರಾತಿ ಜೋಡಿಗೆ ಭರ್ಜರಿ ಹಿನ್ನಡೆಯನ್ನೇ ಉಂಟು ಮಾಡುತ್ತಿದೆ.

ಅಡ್ವಾಣಿಯವರ ರೆಬೆಲ್ ಇಶ್ಯೂ ತಣ್ಣಗಾಗುವ ಮೊದಲೇ ಈಗ ಮತ್ತೊಬ್ಬ ಹಿರಿಯ ನಾಯಕ ಮುರುಳಿ ಮನೋಹರ್ ಜೋಷಿಯವರಿಂದಲೂ ಬಿಜೆಪಿಗೆ ಆಘಾತಕರವಾದ ಸುದ್ದಿ ಹೊರಬಿದ್ದಿದೆ. ಮೋದಿ-ಶಾ ಬಿಜೆಪಿಯೊಳಗೆ ಮುಂಚೂಣಿಗೆ ಬಂದ ಕ್ಷಣದಿಂದಲೂ ಪ್ರತಿರೋಧ ತೋರುತ್ತಲೇ ಬಂದಿದ್ದ ಮತ್ತು ಆ ಕಾರಣಕ್ಕೆ ಹೀನಾಯವಾಗಿ ಮೂಲೆ ಗುಂಪಾಗಿಸಲ್ಪಟ್ಟ ಜೋಷಿಯವರು ಇದೀಗ ಮೋದಿ ವಿರುದ್ಧ ವಾರಣಾಸಿಯಲ್ಲಿ ಚುನಾವಣಾ ಕಣಕ್ಕೆ ಧುಮುಕಲಿದ್ದಾರೆ ಎಂಬ ಸುದ್ದಿ ಬರೆದಿರುವುದು ಪ್ರಸಿದ್ಧ ಪತ್ರಕರ್ತೆ ಸ್ವಾತಿ ಚತುರ್ವೇದಿ. ಈಗಾಗಲೇ ಕಾಂಗ್ರೆಸ್‍ನ ಹಿರಿಯ ನಾಯಕರು ಅವರ ಜೊತೆಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಮಾತ್ರವಲ್ಲದೆ, ಇತರೆ ಪಕ್ಷಗಳ ನಾಯಕರೂ ಜೋಷಿಯವರನ್ನು ಸಂಪರ್ಕಿಸಿದ್ದು ಅವರು ವಾರಣಾಸಿಯಿಂದ ಸ್ಪರ್ಧಿಸಲು ಇಚ್ಛಿಸಿದರೆ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಬೆಂಬಲ ಸೂಚಿಸುವ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ನಾಯಕರಲ್ಲಿ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಅವರ ಹೆಸರೂ ಕೇಳಿಬರುತ್ತಿದೆ. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಮತ್ತು ಬಿಎಸ್‍ಪಿ ಮೈತ್ರಿ ಮಾಡಿಕೊಂಡಿರುವುದರಿಂದ ಜೋಷಿಗೆ ಮಾಯಾವತಿಯವರ ಬೆಂಬಲವೂ ಸಿಕ್ಕಂತಾಗುತ್ತದೆ.

ಜೋಷಿಯವರು ಈ ಮಾತುಕತೆಗೆ ಪೂರಕವಾಗಿ ಸ್ಪಂದಿಸಿದ್ದಾರಾದರೂ, ಮೊದಲಿಗೆ ವಾರಾಣಾಸಿಗಿಂತ ಬೇರೆಡೆ ಸ್ಪರ್ಧಿಸುವ ಅಭಿಲಾಷೆ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ. ವಾರಾಣಾಸಿ, ಈ ಮೊದಲು ಮುರುಳಿ ಮನೋಹರ್ ಜೋಷಿ ಸಂಸದನಾಗಿ ಪ್ರತಿನಿಧಿಸುತ್ತಿದ್ದ ಕ್ಷೇತ್ರ. ಆದರೆ 2014ರಲ್ಲಿ ಮೋದಿಯವರು ವಾರಾಣಾಸಿಯಿಂದ ಸ್ಪರ್ಧಿಸಲು ನಿರ್ಧರಿಸಿದಾಗ ಜೋಷಿಯವರಿಗೆ ಕಾನ್ಪುರ ಕ್ಷೇತ್ರದ ಟಿಕೆಟ್ ನೀಡಲಾಗಿತ್ತು. ಆಗಲೇ ತನ್ನ ಕ್ಷೇತ್ರವನ್ನು ಮೋದಿಯವರಿಗೆ ಬಿಟ್ಟುಕೊಡಲು ಸಣ್ಣಗೆ ಪ್ರತಿರೋಧ ಒಡ್ಡಿದ್ದ ಅವರು ಆರೆಸೆಸ್ ನಾಯಕರ ಮಧ್ಯಸ್ಥಿಕೆಯಿಂದ ಬಿಟ್ಟುಕೊಟ್ಟಿದ್ದರು. ಆದರೆ ಈ ಬಾರಿ ಟಿಕೆಟ್ ನೀಡುವಾಗ ಬಿಜೆಪಿ ಪಕ್ಷವು ಎಲ್.ಕೆ.ಅಡ್ವಾಣಿ ಮತ್ತು ಮುರುಳಿ ಮನೋಹರ್ ಜೋಷಿಯವರಿಗೆ ಸ್ಪರ್ಧಿಸಲು ಅವಕಾಶ ನೀಡಲಿಲ್ಲ. ಅಡ್ವಾಣಿಯವರು ಪ್ರತಿನಿಧಿಸುತ್ತಿದ್ದ ಗಾಂಧಿನಗರ ಕ್ಷೇತ್ರವನ್ನು ಸ್ವತಃ ಅಮಿತ್ ಶಾ ತಮ್ಮ ಬಳಿಯೇ ಉಳಿಸಿಕೊಂಡರೆ, ಮುರುಳಿ ಮನೋಹರ್ ಜೋಷಿಯವರು ಹಾಲಿ ಸಂಸದರಾಗಿರುವ ಕಾನ್ಪುರದಿಂದ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಮಂತ್ರಿ ಸತ್ಯದೇವ್ ಪಚೌರಿಯನ್ನು ಅಭ್ಯರ್ಥಿಯಾಗಿ ಘೋಷಿಸಿದೆ.

1992ರಲ್ಲಿ ಮೋದಿ ಮತ್ತು ಜೋಶಿಯವರು

ವಾಜಪೇಯಿಯವರ ಜೊತೆಗೂಡಿ ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಅಡ್ವಾಣಿ ಮತ್ತು ಜೋಷಿ ಇಬ್ಬರೂ ಮಹತ್ವದ ಪಾತ್ರ ನಿಭಾಯಿಸಿದಂತವರು. 1977ರಲ್ಲಿ ಜನತಾ ಪಾರ್ಟಿ ಅಧಿಕಾರಕ್ಕೆ ಬಂದಾಗ ಜನಸಂಘದಿಂದ ಸಚಿವರಾಗುವ ಅರ್ಹತೆಯಲ್ಲಿ ಇದ್ದವರು ವಾಜಪೇಯಿ ಮತ್ತು ಅಡ್ವಾಣಿ. ಜೋಷಿಯವರನ್ನು ಆಗ ಜನತಾ ಪಕ್ಷದ ಸಂಸದೀಯ ಪಕ್ಷದ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿತ್ತು. ಇನ್ನು ಬಿಜೆಪಿ ದೇಶದಲ್ಲಿ ಬಲವಾಗಿ ಬೇರೂರಲು ಕಾರಣವಾದದ್ದು ಅಡ್ವಾಣಿಯವರ ಕುಖ್ಯಾತ ರಥಯಾತ್ರೆ ಮತ್ತು ಅವರದೇ ನೇತೃತ್ವದಲ್ಲಿ ನಡೆದ ಬಾಬರಿ ಮಸೀದಿ ಧ್ವಂಸ ಪ್ರಕರಣಗಳು. ಜೋಷಿ ಇವರಿಬ್ಬರ ನಂತರದ ಮೂರನೇ ಸ್ಥಾನದಲ್ಲಿದ್ದ ನಾಯಕ. ವಾಜಪೇಯಿಯವರ ಹದಿಮೂರು ದಿವಸದ ಸರ್ಕಾರದಲ್ಲಿ ಗೃಹಮಂತ್ರಿಯಾಗುವಷ್ಟು, ಆನಂತರದ ಎನ್‍ಡಿಎ ಸರ್ಕಾರದಲ್ಲಿ ಮಾನವ ಸಂಪನ್ಮೂಲದಂತಹ ಪ್ರಭಾವಿ ಖಾತೆಯ ಸಚಿವರಾಗುವಷ್ಟು ಜೋಷಿ ಬಿಜೆಪಿಯೊಳಗೆ ವರ್ಚಸ್ಸು ಹೊಂದಿದ್ದರು. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿಯೂ ಆಯ್ಕೆಯಾಗಿದ್ದರು.

ಅಂತವರನ್ನು ಮೋದಿ-ಶಾ ಜೋಡಿ ಇತ್ತೀಚಿನ ದಿನಗಳಲ್ಲಿ ನಡೆಸಿಕೊಂಡ ರೀತಿ ಮಾತ್ರ ತುಂಬಾ ಅವಮಾನಕರದ್ದಾಗಿತ್ತು. ಅದರ ವಿರುದ್ಧ ಅಡ್ವಾಣಿಯವರು ಒಂದಷ್ಟು ಮಟ್ಟಿಗಿನ ಸಹನೆ ತೋರಿದರಾದರು ಮುರುಳಿ ಮನೋಹರ್ ಜೋಷಿ ಪ್ರತಿಯಾಡುತ್ತಲೇ ಬಂದಿದ್ದರು. 2014ರ ಚುನಾವಣೆ ಸಂದರ್ಭದಲ್ಲೇ ಇಡೀ ದೇಶಾದ್ಯಂತ ಮೋದಿ ಅಲೆ ಇದೆ ಎಂಬ ವಾದ ಎನ್ನುತ್ತಿದ್ದ ಸಂದರ್ಭದಲ್ಲಿ ಸಂದರ್ಶನವೊಂದರಲ್ಲಿ “ದೇಶದಲ್ಲಿ ಮೋದಿ ಅಲೆ ಇಲ್ಲ, ಇರೋದು ಬಿಜೆಪಿ ಅಲೆ. ಮೋದಿ ಕೇವಲ ಪಕ್ಷದ ಪ್ರಧಾನಿ ಅಭ್ಯರ್ಥಿ ಅಷ್ಟೆ” ಎಂದು ನೇರವಾಗಿ ಹೇಳಿದ್ದ ಜೋಷಿಯವರು, ಅಷ್ಟರಲ್ಲಾಗಲೇ ಬಿಜೆಪಿಯಿಂದ ಟಿಕೆಟ್ (ಬಾರ್ಮರ್ ಕ್ಷೇತ್ರ) ನಿರಾಕರಿಸಲ್ಪಟ್ಟಿದ್ದ ಮತ್ತೊಬ್ಬ ಹಿರಿಯ ನಾಯಕ ಜಸ್ವಂತ್ ಸಿಂಗ್‍ರ ಕುರಿತು “ಅವರಿಗೆ ಟಿಕೆಟ್ ನೀಡಬಾರದೆನ್ನುವುದು ಪಕ್ಷದೊಳಗೆ ಚರ್ಚೆಯೇ ಆಗಿರಲಿಲ್ಲ” ಎನ್ನುವ ಮೂಲಕ ಅದು ಮೋದಿ-ಶಾ ಜೋಡಿಯ ಏಕಪಕ್ಷೀಯ ನಿರ್ಧಾರ ಎಂದು ಟೀಕಿಸಿದ್ದರು. ಅಲ್ಲದೇ 2018ರಲ್ಲಿ `ಪವರ್ ಪೊಲಿಟಿಕ್ಸ್’ ಎಂಬ ನಿಯತಕಾಲಿಕೆಯಲ್ಲಿ ‘ರಾಜಧರ್ಮ’ ತಲೆಬರಹದಲ್ಲಿ ಲೇಖನವೊಂದನ್ನು ಬರೆದಿದ್ದ ಜೋಷಿ, ಇಡೀ ಲೇಖನವನ್ನು ಮೋದಿ-ಶಾ ಸರ್ವಾಧಿಕಾರವನ್ನು ಟೀಕಿಸಲು ದುಡಿಸಿಕೊಂಡಿದ್ದರು. ‘ವಾಲ್ಮೀಕಿಯ ಪ್ರಕಾರ ರಾಜನಾದವನು ಸರ್ವಾಧಿಕಾರಿಯಾಗಿರಬಾರದು. ರಾಜನಾದವನು ಆಡಳಿತವನ್ನು ನಡೆಸಲು ಮಂತ್ರಿಗಳ, ವಿದ್ವಾಂಸರ, ಸೇನಾ ಅಧಿಕಾರಿಗಳ ಸಲಹೆ ಕೇಳುತ್ತಿದ್ದುದನ್ನು ರಾಮಾಯಣದಲ್ಲಿ ನಾವು ಕಾಣಬಹುದು’ ಎಂಬ ಒಂದು ಸಾಲೇ ಇಡೀ ಲೇಖನಕ್ಕೆ ಹಿಡಿದ ಕನ್ನಡಿಯಂತಿದೆ. ಜೋಷಿಯವರ ವ್ಯಕ್ತಿತ್ವ ಹೀಗಿದ್ದುದರಿಂದಲೇ ಆರೆಸ್ಸೆಸ್ ನಾಯಕರು ಮೋದಿ-ಷಾ ಜೋಡಿಗೆ, ಜೋಷಿಯವರ ವಿಚಾರದಲ್ಲಿ ಎಚ್ಚರಿಸಿದ್ದರಂತೆ.

ಇದೀಗ ಸಿಡಿದೆದ್ದಿರುವ ಜೋಷಿಯವರನ್ನು ಆರೆಸ್ಸೆಸ್ ತಣ್ಣಗೆ ಮಾಡುತ್ತದಾ ಅಥವಾ ಮೋದಿಯ ವಿರುದ್ಧ ತಮ್ಮ ಸ್ವಂತ ಕ್ಷೇತ್ರ ವಾರಣಾಸಿಯಿಂದ ಸ್ಪರ್ಧೆ ಮಾಡಲು ಮುಂದಾಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...