Homeಮುಖಪುಟಮೋದಿ ವಿರುದ್ಧ ವಾರಣಾಸಿಯಲ್ಲೇ ಕಣಕ್ಕಿಳಿಯುತ್ತಾರಾ ಬಿಜೆಪಿ ಹಿರಿಯ ನಾಯಕ ಮುರುಳಿ ಮನೋಹರ ಜೋಷಿ?

ಮೋದಿ ವಿರುದ್ಧ ವಾರಣಾಸಿಯಲ್ಲೇ ಕಣಕ್ಕಿಳಿಯುತ್ತಾರಾ ಬಿಜೆಪಿ ಹಿರಿಯ ನಾಯಕ ಮುರುಳಿ ಮನೋಹರ ಜೋಷಿ?

- Advertisement -
- Advertisement -

ಟೈಟಲ್ ನೋಡಿ ಆಶ್ಚರ್ಯವೆನಿಸಬಹುದಾದ ಈ ಸುದ್ದಿ ಈಗ ಕೇವಲ ತೆರೆಮರೆಯಲ್ಲಿ ಉಳಿದಿಲ್ಲ. ಅದಾಗಲೇ ದೇಶದ ಪ್ರಮುಖ ಸುದ್ದಿ ಚಾನೆಲ್‍ನ ವೆಬ್‍ಸೈಟ್‍ನಲ್ಲಿ ಬಂದಾಗಿದೆ.

ನಿನ್ನೆಯಷ್ಟೇ ಬಿಜೆಪಿ ಭೀಷ್ಮ ಎನ್ನುವ ವಿಶೇಷಣದ ಅಡ್ವಾಣಿಯವರು ತಮ್ಮ ಬ್ಲಾಗ್‍ನಲ್ಲಿ ‘ನಮ್ಮನ್ನು ರಾಜಕೀಯವಾಗಿ ವಿರೋಧಿಸುವವರು ದೇಶದ್ರೋಹಿಗಳಾಗುವುದಿಲ್ಲ, ನಮ್ಮ ಶತ್ರುಗಳೂ ಅಲ್ಲ, ಕೇವಲ ರಾಜಕೀಯ ಎದುರಾಳಿಗಳಷ್ಟೇ. ನಮ್ಮ ಭಾರತದ ಪ್ರಜಾಪ್ರಭುತ್ವ ನೆಲೆ ನಿಂತಿರುವುದೇ ಬಹುತ್ವ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ. ಈ ಪ್ರಜಾಪ್ರಭುತ್ವವೇ ಯಾವತ್ತೂ ಬಿಜೆಪಿ ಪಕ್ಷದ ಹೆಗ್ಗುರುತು” ಎಂದು ಬರೆದಿದ್ದರು. ಪ್ರಸ್ತುತ ಬಿಜೆಪಿಯ ಹಿರಿಯ ನಾಯಕರು ಮುಖ್ಯವಾಗಿ ಮೋದಿಯವರು, ತಮ್ಮ ರಾಜಕೀಯ ವಿರೋಧಿಗಳ, ನಿರ್ದಿಷ್ಟವಾಗಿ ಕಾಂಗ್ರೆಸ್ ನಾಯಕರ ದೇಶಪ್ರೇಮವನ್ನು ಪ್ರಶ್ನಿಸುತ್ತಾ ಚುನಾವಣಾ ಪ್ರಚಾರ ನಡೆಸುತ್ತಿರುವ ಸಂದರ್ಭದಲ್ಲಿ ಹಾಗೂ ಪಕ್ಷದೊಳಗೆ ಮೋದಿ-ಶಾ ಜೋಡಿ ಸರ್ವಾಧಿಕಾರಿಗಳಾಗಿ ಬೆಳೆದಿರುವ ಸನ್ನಿವೇಶದಲ್ಲಿ ಅಡ್ವಾಣಿಯವರ ಈ ಹೇಳಿಕೆ ಮೋದಿಯವರಿಗೆ ಕೊಟ್ಟ ಟಾಂಗ್ ಎಂತಲೇ ವಿಶ್ಲೇಷಣೆಗೆ ಒಳಪಡುತ್ತಿದೆ. ಮೋದಿ-ಅಮಿತ್ ಶಾ ಜೋಡಿ ತಮ್ಮನ್ನು ಮೂಲೆಗುಂಪು ಮಾಡಿದ್ದಕ್ಕೆ ಪ್ರತಿಯಾಗಿ ಈ ಹಿರಿಯ ನಾಯಕ ಚುನಾವಣೆಯ ಸಮಯದಲ್ಲಿ ಹೀಗೆ ಬರೆದಿರುವುದರಲ್ಲಿ ಹೆಚ್ಚೇನು ಅನುಮಾನವಿಲ್ಲ. ಇದು ಸಮರೋತ್ಸಾಹದಲ್ಲಿರುವ ಗುಜರಾತಿ ಜೋಡಿಗೆ ಭರ್ಜರಿ ಹಿನ್ನಡೆಯನ್ನೇ ಉಂಟು ಮಾಡುತ್ತಿದೆ.

ಅಡ್ವಾಣಿಯವರ ರೆಬೆಲ್ ಇಶ್ಯೂ ತಣ್ಣಗಾಗುವ ಮೊದಲೇ ಈಗ ಮತ್ತೊಬ್ಬ ಹಿರಿಯ ನಾಯಕ ಮುರುಳಿ ಮನೋಹರ್ ಜೋಷಿಯವರಿಂದಲೂ ಬಿಜೆಪಿಗೆ ಆಘಾತಕರವಾದ ಸುದ್ದಿ ಹೊರಬಿದ್ದಿದೆ. ಮೋದಿ-ಶಾ ಬಿಜೆಪಿಯೊಳಗೆ ಮುಂಚೂಣಿಗೆ ಬಂದ ಕ್ಷಣದಿಂದಲೂ ಪ್ರತಿರೋಧ ತೋರುತ್ತಲೇ ಬಂದಿದ್ದ ಮತ್ತು ಆ ಕಾರಣಕ್ಕೆ ಹೀನಾಯವಾಗಿ ಮೂಲೆ ಗುಂಪಾಗಿಸಲ್ಪಟ್ಟ ಜೋಷಿಯವರು ಇದೀಗ ಮೋದಿ ವಿರುದ್ಧ ವಾರಣಾಸಿಯಲ್ಲಿ ಚುನಾವಣಾ ಕಣಕ್ಕೆ ಧುಮುಕಲಿದ್ದಾರೆ ಎಂಬ ಸುದ್ದಿ ಬರೆದಿರುವುದು ಪ್ರಸಿದ್ಧ ಪತ್ರಕರ್ತೆ ಸ್ವಾತಿ ಚತುರ್ವೇದಿ. ಈಗಾಗಲೇ ಕಾಂಗ್ರೆಸ್‍ನ ಹಿರಿಯ ನಾಯಕರು ಅವರ ಜೊತೆಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಮಾತ್ರವಲ್ಲದೆ, ಇತರೆ ಪಕ್ಷಗಳ ನಾಯಕರೂ ಜೋಷಿಯವರನ್ನು ಸಂಪರ್ಕಿಸಿದ್ದು ಅವರು ವಾರಣಾಸಿಯಿಂದ ಸ್ಪರ್ಧಿಸಲು ಇಚ್ಛಿಸಿದರೆ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಬೆಂಬಲ ಸೂಚಿಸುವ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ನಾಯಕರಲ್ಲಿ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಅವರ ಹೆಸರೂ ಕೇಳಿಬರುತ್ತಿದೆ. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಮತ್ತು ಬಿಎಸ್‍ಪಿ ಮೈತ್ರಿ ಮಾಡಿಕೊಂಡಿರುವುದರಿಂದ ಜೋಷಿಗೆ ಮಾಯಾವತಿಯವರ ಬೆಂಬಲವೂ ಸಿಕ್ಕಂತಾಗುತ್ತದೆ.

ಜೋಷಿಯವರು ಈ ಮಾತುಕತೆಗೆ ಪೂರಕವಾಗಿ ಸ್ಪಂದಿಸಿದ್ದಾರಾದರೂ, ಮೊದಲಿಗೆ ವಾರಾಣಾಸಿಗಿಂತ ಬೇರೆಡೆ ಸ್ಪರ್ಧಿಸುವ ಅಭಿಲಾಷೆ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ. ವಾರಾಣಾಸಿ, ಈ ಮೊದಲು ಮುರುಳಿ ಮನೋಹರ್ ಜೋಷಿ ಸಂಸದನಾಗಿ ಪ್ರತಿನಿಧಿಸುತ್ತಿದ್ದ ಕ್ಷೇತ್ರ. ಆದರೆ 2014ರಲ್ಲಿ ಮೋದಿಯವರು ವಾರಾಣಾಸಿಯಿಂದ ಸ್ಪರ್ಧಿಸಲು ನಿರ್ಧರಿಸಿದಾಗ ಜೋಷಿಯವರಿಗೆ ಕಾನ್ಪುರ ಕ್ಷೇತ್ರದ ಟಿಕೆಟ್ ನೀಡಲಾಗಿತ್ತು. ಆಗಲೇ ತನ್ನ ಕ್ಷೇತ್ರವನ್ನು ಮೋದಿಯವರಿಗೆ ಬಿಟ್ಟುಕೊಡಲು ಸಣ್ಣಗೆ ಪ್ರತಿರೋಧ ಒಡ್ಡಿದ್ದ ಅವರು ಆರೆಸೆಸ್ ನಾಯಕರ ಮಧ್ಯಸ್ಥಿಕೆಯಿಂದ ಬಿಟ್ಟುಕೊಟ್ಟಿದ್ದರು. ಆದರೆ ಈ ಬಾರಿ ಟಿಕೆಟ್ ನೀಡುವಾಗ ಬಿಜೆಪಿ ಪಕ್ಷವು ಎಲ್.ಕೆ.ಅಡ್ವಾಣಿ ಮತ್ತು ಮುರುಳಿ ಮನೋಹರ್ ಜೋಷಿಯವರಿಗೆ ಸ್ಪರ್ಧಿಸಲು ಅವಕಾಶ ನೀಡಲಿಲ್ಲ. ಅಡ್ವಾಣಿಯವರು ಪ್ರತಿನಿಧಿಸುತ್ತಿದ್ದ ಗಾಂಧಿನಗರ ಕ್ಷೇತ್ರವನ್ನು ಸ್ವತಃ ಅಮಿತ್ ಶಾ ತಮ್ಮ ಬಳಿಯೇ ಉಳಿಸಿಕೊಂಡರೆ, ಮುರುಳಿ ಮನೋಹರ್ ಜೋಷಿಯವರು ಹಾಲಿ ಸಂಸದರಾಗಿರುವ ಕಾನ್ಪುರದಿಂದ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಮಂತ್ರಿ ಸತ್ಯದೇವ್ ಪಚೌರಿಯನ್ನು ಅಭ್ಯರ್ಥಿಯಾಗಿ ಘೋಷಿಸಿದೆ.

1992ರಲ್ಲಿ ಮೋದಿ ಮತ್ತು ಜೋಶಿಯವರು

ವಾಜಪೇಯಿಯವರ ಜೊತೆಗೂಡಿ ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಅಡ್ವಾಣಿ ಮತ್ತು ಜೋಷಿ ಇಬ್ಬರೂ ಮಹತ್ವದ ಪಾತ್ರ ನಿಭಾಯಿಸಿದಂತವರು. 1977ರಲ್ಲಿ ಜನತಾ ಪಾರ್ಟಿ ಅಧಿಕಾರಕ್ಕೆ ಬಂದಾಗ ಜನಸಂಘದಿಂದ ಸಚಿವರಾಗುವ ಅರ್ಹತೆಯಲ್ಲಿ ಇದ್ದವರು ವಾಜಪೇಯಿ ಮತ್ತು ಅಡ್ವಾಣಿ. ಜೋಷಿಯವರನ್ನು ಆಗ ಜನತಾ ಪಕ್ಷದ ಸಂಸದೀಯ ಪಕ್ಷದ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿತ್ತು. ಇನ್ನು ಬಿಜೆಪಿ ದೇಶದಲ್ಲಿ ಬಲವಾಗಿ ಬೇರೂರಲು ಕಾರಣವಾದದ್ದು ಅಡ್ವಾಣಿಯವರ ಕುಖ್ಯಾತ ರಥಯಾತ್ರೆ ಮತ್ತು ಅವರದೇ ನೇತೃತ್ವದಲ್ಲಿ ನಡೆದ ಬಾಬರಿ ಮಸೀದಿ ಧ್ವಂಸ ಪ್ರಕರಣಗಳು. ಜೋಷಿ ಇವರಿಬ್ಬರ ನಂತರದ ಮೂರನೇ ಸ್ಥಾನದಲ್ಲಿದ್ದ ನಾಯಕ. ವಾಜಪೇಯಿಯವರ ಹದಿಮೂರು ದಿವಸದ ಸರ್ಕಾರದಲ್ಲಿ ಗೃಹಮಂತ್ರಿಯಾಗುವಷ್ಟು, ಆನಂತರದ ಎನ್‍ಡಿಎ ಸರ್ಕಾರದಲ್ಲಿ ಮಾನವ ಸಂಪನ್ಮೂಲದಂತಹ ಪ್ರಭಾವಿ ಖಾತೆಯ ಸಚಿವರಾಗುವಷ್ಟು ಜೋಷಿ ಬಿಜೆಪಿಯೊಳಗೆ ವರ್ಚಸ್ಸು ಹೊಂದಿದ್ದರು. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿಯೂ ಆಯ್ಕೆಯಾಗಿದ್ದರು.

ಅಂತವರನ್ನು ಮೋದಿ-ಶಾ ಜೋಡಿ ಇತ್ತೀಚಿನ ದಿನಗಳಲ್ಲಿ ನಡೆಸಿಕೊಂಡ ರೀತಿ ಮಾತ್ರ ತುಂಬಾ ಅವಮಾನಕರದ್ದಾಗಿತ್ತು. ಅದರ ವಿರುದ್ಧ ಅಡ್ವಾಣಿಯವರು ಒಂದಷ್ಟು ಮಟ್ಟಿಗಿನ ಸಹನೆ ತೋರಿದರಾದರು ಮುರುಳಿ ಮನೋಹರ್ ಜೋಷಿ ಪ್ರತಿಯಾಡುತ್ತಲೇ ಬಂದಿದ್ದರು. 2014ರ ಚುನಾವಣೆ ಸಂದರ್ಭದಲ್ಲೇ ಇಡೀ ದೇಶಾದ್ಯಂತ ಮೋದಿ ಅಲೆ ಇದೆ ಎಂಬ ವಾದ ಎನ್ನುತ್ತಿದ್ದ ಸಂದರ್ಭದಲ್ಲಿ ಸಂದರ್ಶನವೊಂದರಲ್ಲಿ “ದೇಶದಲ್ಲಿ ಮೋದಿ ಅಲೆ ಇಲ್ಲ, ಇರೋದು ಬಿಜೆಪಿ ಅಲೆ. ಮೋದಿ ಕೇವಲ ಪಕ್ಷದ ಪ್ರಧಾನಿ ಅಭ್ಯರ್ಥಿ ಅಷ್ಟೆ” ಎಂದು ನೇರವಾಗಿ ಹೇಳಿದ್ದ ಜೋಷಿಯವರು, ಅಷ್ಟರಲ್ಲಾಗಲೇ ಬಿಜೆಪಿಯಿಂದ ಟಿಕೆಟ್ (ಬಾರ್ಮರ್ ಕ್ಷೇತ್ರ) ನಿರಾಕರಿಸಲ್ಪಟ್ಟಿದ್ದ ಮತ್ತೊಬ್ಬ ಹಿರಿಯ ನಾಯಕ ಜಸ್ವಂತ್ ಸಿಂಗ್‍ರ ಕುರಿತು “ಅವರಿಗೆ ಟಿಕೆಟ್ ನೀಡಬಾರದೆನ್ನುವುದು ಪಕ್ಷದೊಳಗೆ ಚರ್ಚೆಯೇ ಆಗಿರಲಿಲ್ಲ” ಎನ್ನುವ ಮೂಲಕ ಅದು ಮೋದಿ-ಶಾ ಜೋಡಿಯ ಏಕಪಕ್ಷೀಯ ನಿರ್ಧಾರ ಎಂದು ಟೀಕಿಸಿದ್ದರು. ಅಲ್ಲದೇ 2018ರಲ್ಲಿ `ಪವರ್ ಪೊಲಿಟಿಕ್ಸ್’ ಎಂಬ ನಿಯತಕಾಲಿಕೆಯಲ್ಲಿ ‘ರಾಜಧರ್ಮ’ ತಲೆಬರಹದಲ್ಲಿ ಲೇಖನವೊಂದನ್ನು ಬರೆದಿದ್ದ ಜೋಷಿ, ಇಡೀ ಲೇಖನವನ್ನು ಮೋದಿ-ಶಾ ಸರ್ವಾಧಿಕಾರವನ್ನು ಟೀಕಿಸಲು ದುಡಿಸಿಕೊಂಡಿದ್ದರು. ‘ವಾಲ್ಮೀಕಿಯ ಪ್ರಕಾರ ರಾಜನಾದವನು ಸರ್ವಾಧಿಕಾರಿಯಾಗಿರಬಾರದು. ರಾಜನಾದವನು ಆಡಳಿತವನ್ನು ನಡೆಸಲು ಮಂತ್ರಿಗಳ, ವಿದ್ವಾಂಸರ, ಸೇನಾ ಅಧಿಕಾರಿಗಳ ಸಲಹೆ ಕೇಳುತ್ತಿದ್ದುದನ್ನು ರಾಮಾಯಣದಲ್ಲಿ ನಾವು ಕಾಣಬಹುದು’ ಎಂಬ ಒಂದು ಸಾಲೇ ಇಡೀ ಲೇಖನಕ್ಕೆ ಹಿಡಿದ ಕನ್ನಡಿಯಂತಿದೆ. ಜೋಷಿಯವರ ವ್ಯಕ್ತಿತ್ವ ಹೀಗಿದ್ದುದರಿಂದಲೇ ಆರೆಸ್ಸೆಸ್ ನಾಯಕರು ಮೋದಿ-ಷಾ ಜೋಡಿಗೆ, ಜೋಷಿಯವರ ವಿಚಾರದಲ್ಲಿ ಎಚ್ಚರಿಸಿದ್ದರಂತೆ.

ಇದೀಗ ಸಿಡಿದೆದ್ದಿರುವ ಜೋಷಿಯವರನ್ನು ಆರೆಸ್ಸೆಸ್ ತಣ್ಣಗೆ ಮಾಡುತ್ತದಾ ಅಥವಾ ಮೋದಿಯ ವಿರುದ್ಧ ತಮ್ಮ ಸ್ವಂತ ಕ್ಷೇತ್ರ ವಾರಣಾಸಿಯಿಂದ ಸ್ಪರ್ಧೆ ಮಾಡಲು ಮುಂದಾಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...