Homeಮುಖಪುಟಮೋದಿ ವಿರುದ್ಧ ವಾರಣಾಸಿಯಲ್ಲೇ ಕಣಕ್ಕಿಳಿಯುತ್ತಾರಾ ಬಿಜೆಪಿ ಹಿರಿಯ ನಾಯಕ ಮುರುಳಿ ಮನೋಹರ ಜೋಷಿ?

ಮೋದಿ ವಿರುದ್ಧ ವಾರಣಾಸಿಯಲ್ಲೇ ಕಣಕ್ಕಿಳಿಯುತ್ತಾರಾ ಬಿಜೆಪಿ ಹಿರಿಯ ನಾಯಕ ಮುರುಳಿ ಮನೋಹರ ಜೋಷಿ?

- Advertisement -
- Advertisement -

ಟೈಟಲ್ ನೋಡಿ ಆಶ್ಚರ್ಯವೆನಿಸಬಹುದಾದ ಈ ಸುದ್ದಿ ಈಗ ಕೇವಲ ತೆರೆಮರೆಯಲ್ಲಿ ಉಳಿದಿಲ್ಲ. ಅದಾಗಲೇ ದೇಶದ ಪ್ರಮುಖ ಸುದ್ದಿ ಚಾನೆಲ್‍ನ ವೆಬ್‍ಸೈಟ್‍ನಲ್ಲಿ ಬಂದಾಗಿದೆ.

ನಿನ್ನೆಯಷ್ಟೇ ಬಿಜೆಪಿ ಭೀಷ್ಮ ಎನ್ನುವ ವಿಶೇಷಣದ ಅಡ್ವಾಣಿಯವರು ತಮ್ಮ ಬ್ಲಾಗ್‍ನಲ್ಲಿ ‘ನಮ್ಮನ್ನು ರಾಜಕೀಯವಾಗಿ ವಿರೋಧಿಸುವವರು ದೇಶದ್ರೋಹಿಗಳಾಗುವುದಿಲ್ಲ, ನಮ್ಮ ಶತ್ರುಗಳೂ ಅಲ್ಲ, ಕೇವಲ ರಾಜಕೀಯ ಎದುರಾಳಿಗಳಷ್ಟೇ. ನಮ್ಮ ಭಾರತದ ಪ್ರಜಾಪ್ರಭುತ್ವ ನೆಲೆ ನಿಂತಿರುವುದೇ ಬಹುತ್ವ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ. ಈ ಪ್ರಜಾಪ್ರಭುತ್ವವೇ ಯಾವತ್ತೂ ಬಿಜೆಪಿ ಪಕ್ಷದ ಹೆಗ್ಗುರುತು” ಎಂದು ಬರೆದಿದ್ದರು. ಪ್ರಸ್ತುತ ಬಿಜೆಪಿಯ ಹಿರಿಯ ನಾಯಕರು ಮುಖ್ಯವಾಗಿ ಮೋದಿಯವರು, ತಮ್ಮ ರಾಜಕೀಯ ವಿರೋಧಿಗಳ, ನಿರ್ದಿಷ್ಟವಾಗಿ ಕಾಂಗ್ರೆಸ್ ನಾಯಕರ ದೇಶಪ್ರೇಮವನ್ನು ಪ್ರಶ್ನಿಸುತ್ತಾ ಚುನಾವಣಾ ಪ್ರಚಾರ ನಡೆಸುತ್ತಿರುವ ಸಂದರ್ಭದಲ್ಲಿ ಹಾಗೂ ಪಕ್ಷದೊಳಗೆ ಮೋದಿ-ಶಾ ಜೋಡಿ ಸರ್ವಾಧಿಕಾರಿಗಳಾಗಿ ಬೆಳೆದಿರುವ ಸನ್ನಿವೇಶದಲ್ಲಿ ಅಡ್ವಾಣಿಯವರ ಈ ಹೇಳಿಕೆ ಮೋದಿಯವರಿಗೆ ಕೊಟ್ಟ ಟಾಂಗ್ ಎಂತಲೇ ವಿಶ್ಲೇಷಣೆಗೆ ಒಳಪಡುತ್ತಿದೆ. ಮೋದಿ-ಅಮಿತ್ ಶಾ ಜೋಡಿ ತಮ್ಮನ್ನು ಮೂಲೆಗುಂಪು ಮಾಡಿದ್ದಕ್ಕೆ ಪ್ರತಿಯಾಗಿ ಈ ಹಿರಿಯ ನಾಯಕ ಚುನಾವಣೆಯ ಸಮಯದಲ್ಲಿ ಹೀಗೆ ಬರೆದಿರುವುದರಲ್ಲಿ ಹೆಚ್ಚೇನು ಅನುಮಾನವಿಲ್ಲ. ಇದು ಸಮರೋತ್ಸಾಹದಲ್ಲಿರುವ ಗುಜರಾತಿ ಜೋಡಿಗೆ ಭರ್ಜರಿ ಹಿನ್ನಡೆಯನ್ನೇ ಉಂಟು ಮಾಡುತ್ತಿದೆ.

ಅಡ್ವಾಣಿಯವರ ರೆಬೆಲ್ ಇಶ್ಯೂ ತಣ್ಣಗಾಗುವ ಮೊದಲೇ ಈಗ ಮತ್ತೊಬ್ಬ ಹಿರಿಯ ನಾಯಕ ಮುರುಳಿ ಮನೋಹರ್ ಜೋಷಿಯವರಿಂದಲೂ ಬಿಜೆಪಿಗೆ ಆಘಾತಕರವಾದ ಸುದ್ದಿ ಹೊರಬಿದ್ದಿದೆ. ಮೋದಿ-ಶಾ ಬಿಜೆಪಿಯೊಳಗೆ ಮುಂಚೂಣಿಗೆ ಬಂದ ಕ್ಷಣದಿಂದಲೂ ಪ್ರತಿರೋಧ ತೋರುತ್ತಲೇ ಬಂದಿದ್ದ ಮತ್ತು ಆ ಕಾರಣಕ್ಕೆ ಹೀನಾಯವಾಗಿ ಮೂಲೆ ಗುಂಪಾಗಿಸಲ್ಪಟ್ಟ ಜೋಷಿಯವರು ಇದೀಗ ಮೋದಿ ವಿರುದ್ಧ ವಾರಣಾಸಿಯಲ್ಲಿ ಚುನಾವಣಾ ಕಣಕ್ಕೆ ಧುಮುಕಲಿದ್ದಾರೆ ಎಂಬ ಸುದ್ದಿ ಬರೆದಿರುವುದು ಪ್ರಸಿದ್ಧ ಪತ್ರಕರ್ತೆ ಸ್ವಾತಿ ಚತುರ್ವೇದಿ. ಈಗಾಗಲೇ ಕಾಂಗ್ರೆಸ್‍ನ ಹಿರಿಯ ನಾಯಕರು ಅವರ ಜೊತೆಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಮಾತ್ರವಲ್ಲದೆ, ಇತರೆ ಪಕ್ಷಗಳ ನಾಯಕರೂ ಜೋಷಿಯವರನ್ನು ಸಂಪರ್ಕಿಸಿದ್ದು ಅವರು ವಾರಣಾಸಿಯಿಂದ ಸ್ಪರ್ಧಿಸಲು ಇಚ್ಛಿಸಿದರೆ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಬೆಂಬಲ ಸೂಚಿಸುವ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ನಾಯಕರಲ್ಲಿ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಅವರ ಹೆಸರೂ ಕೇಳಿಬರುತ್ತಿದೆ. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಮತ್ತು ಬಿಎಸ್‍ಪಿ ಮೈತ್ರಿ ಮಾಡಿಕೊಂಡಿರುವುದರಿಂದ ಜೋಷಿಗೆ ಮಾಯಾವತಿಯವರ ಬೆಂಬಲವೂ ಸಿಕ್ಕಂತಾಗುತ್ತದೆ.

ಜೋಷಿಯವರು ಈ ಮಾತುಕತೆಗೆ ಪೂರಕವಾಗಿ ಸ್ಪಂದಿಸಿದ್ದಾರಾದರೂ, ಮೊದಲಿಗೆ ವಾರಾಣಾಸಿಗಿಂತ ಬೇರೆಡೆ ಸ್ಪರ್ಧಿಸುವ ಅಭಿಲಾಷೆ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ. ವಾರಾಣಾಸಿ, ಈ ಮೊದಲು ಮುರುಳಿ ಮನೋಹರ್ ಜೋಷಿ ಸಂಸದನಾಗಿ ಪ್ರತಿನಿಧಿಸುತ್ತಿದ್ದ ಕ್ಷೇತ್ರ. ಆದರೆ 2014ರಲ್ಲಿ ಮೋದಿಯವರು ವಾರಾಣಾಸಿಯಿಂದ ಸ್ಪರ್ಧಿಸಲು ನಿರ್ಧರಿಸಿದಾಗ ಜೋಷಿಯವರಿಗೆ ಕಾನ್ಪುರ ಕ್ಷೇತ್ರದ ಟಿಕೆಟ್ ನೀಡಲಾಗಿತ್ತು. ಆಗಲೇ ತನ್ನ ಕ್ಷೇತ್ರವನ್ನು ಮೋದಿಯವರಿಗೆ ಬಿಟ್ಟುಕೊಡಲು ಸಣ್ಣಗೆ ಪ್ರತಿರೋಧ ಒಡ್ಡಿದ್ದ ಅವರು ಆರೆಸೆಸ್ ನಾಯಕರ ಮಧ್ಯಸ್ಥಿಕೆಯಿಂದ ಬಿಟ್ಟುಕೊಟ್ಟಿದ್ದರು. ಆದರೆ ಈ ಬಾರಿ ಟಿಕೆಟ್ ನೀಡುವಾಗ ಬಿಜೆಪಿ ಪಕ್ಷವು ಎಲ್.ಕೆ.ಅಡ್ವಾಣಿ ಮತ್ತು ಮುರುಳಿ ಮನೋಹರ್ ಜೋಷಿಯವರಿಗೆ ಸ್ಪರ್ಧಿಸಲು ಅವಕಾಶ ನೀಡಲಿಲ್ಲ. ಅಡ್ವಾಣಿಯವರು ಪ್ರತಿನಿಧಿಸುತ್ತಿದ್ದ ಗಾಂಧಿನಗರ ಕ್ಷೇತ್ರವನ್ನು ಸ್ವತಃ ಅಮಿತ್ ಶಾ ತಮ್ಮ ಬಳಿಯೇ ಉಳಿಸಿಕೊಂಡರೆ, ಮುರುಳಿ ಮನೋಹರ್ ಜೋಷಿಯವರು ಹಾಲಿ ಸಂಸದರಾಗಿರುವ ಕಾನ್ಪುರದಿಂದ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಮಂತ್ರಿ ಸತ್ಯದೇವ್ ಪಚೌರಿಯನ್ನು ಅಭ್ಯರ್ಥಿಯಾಗಿ ಘೋಷಿಸಿದೆ.

1992ರಲ್ಲಿ ಮೋದಿ ಮತ್ತು ಜೋಶಿಯವರು

ವಾಜಪೇಯಿಯವರ ಜೊತೆಗೂಡಿ ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಅಡ್ವಾಣಿ ಮತ್ತು ಜೋಷಿ ಇಬ್ಬರೂ ಮಹತ್ವದ ಪಾತ್ರ ನಿಭಾಯಿಸಿದಂತವರು. 1977ರಲ್ಲಿ ಜನತಾ ಪಾರ್ಟಿ ಅಧಿಕಾರಕ್ಕೆ ಬಂದಾಗ ಜನಸಂಘದಿಂದ ಸಚಿವರಾಗುವ ಅರ್ಹತೆಯಲ್ಲಿ ಇದ್ದವರು ವಾಜಪೇಯಿ ಮತ್ತು ಅಡ್ವಾಣಿ. ಜೋಷಿಯವರನ್ನು ಆಗ ಜನತಾ ಪಕ್ಷದ ಸಂಸದೀಯ ಪಕ್ಷದ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿತ್ತು. ಇನ್ನು ಬಿಜೆಪಿ ದೇಶದಲ್ಲಿ ಬಲವಾಗಿ ಬೇರೂರಲು ಕಾರಣವಾದದ್ದು ಅಡ್ವಾಣಿಯವರ ಕುಖ್ಯಾತ ರಥಯಾತ್ರೆ ಮತ್ತು ಅವರದೇ ನೇತೃತ್ವದಲ್ಲಿ ನಡೆದ ಬಾಬರಿ ಮಸೀದಿ ಧ್ವಂಸ ಪ್ರಕರಣಗಳು. ಜೋಷಿ ಇವರಿಬ್ಬರ ನಂತರದ ಮೂರನೇ ಸ್ಥಾನದಲ್ಲಿದ್ದ ನಾಯಕ. ವಾಜಪೇಯಿಯವರ ಹದಿಮೂರು ದಿವಸದ ಸರ್ಕಾರದಲ್ಲಿ ಗೃಹಮಂತ್ರಿಯಾಗುವಷ್ಟು, ಆನಂತರದ ಎನ್‍ಡಿಎ ಸರ್ಕಾರದಲ್ಲಿ ಮಾನವ ಸಂಪನ್ಮೂಲದಂತಹ ಪ್ರಭಾವಿ ಖಾತೆಯ ಸಚಿವರಾಗುವಷ್ಟು ಜೋಷಿ ಬಿಜೆಪಿಯೊಳಗೆ ವರ್ಚಸ್ಸು ಹೊಂದಿದ್ದರು. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿಯೂ ಆಯ್ಕೆಯಾಗಿದ್ದರು.

ಅಂತವರನ್ನು ಮೋದಿ-ಶಾ ಜೋಡಿ ಇತ್ತೀಚಿನ ದಿನಗಳಲ್ಲಿ ನಡೆಸಿಕೊಂಡ ರೀತಿ ಮಾತ್ರ ತುಂಬಾ ಅವಮಾನಕರದ್ದಾಗಿತ್ತು. ಅದರ ವಿರುದ್ಧ ಅಡ್ವಾಣಿಯವರು ಒಂದಷ್ಟು ಮಟ್ಟಿಗಿನ ಸಹನೆ ತೋರಿದರಾದರು ಮುರುಳಿ ಮನೋಹರ್ ಜೋಷಿ ಪ್ರತಿಯಾಡುತ್ತಲೇ ಬಂದಿದ್ದರು. 2014ರ ಚುನಾವಣೆ ಸಂದರ್ಭದಲ್ಲೇ ಇಡೀ ದೇಶಾದ್ಯಂತ ಮೋದಿ ಅಲೆ ಇದೆ ಎಂಬ ವಾದ ಎನ್ನುತ್ತಿದ್ದ ಸಂದರ್ಭದಲ್ಲಿ ಸಂದರ್ಶನವೊಂದರಲ್ಲಿ “ದೇಶದಲ್ಲಿ ಮೋದಿ ಅಲೆ ಇಲ್ಲ, ಇರೋದು ಬಿಜೆಪಿ ಅಲೆ. ಮೋದಿ ಕೇವಲ ಪಕ್ಷದ ಪ್ರಧಾನಿ ಅಭ್ಯರ್ಥಿ ಅಷ್ಟೆ” ಎಂದು ನೇರವಾಗಿ ಹೇಳಿದ್ದ ಜೋಷಿಯವರು, ಅಷ್ಟರಲ್ಲಾಗಲೇ ಬಿಜೆಪಿಯಿಂದ ಟಿಕೆಟ್ (ಬಾರ್ಮರ್ ಕ್ಷೇತ್ರ) ನಿರಾಕರಿಸಲ್ಪಟ್ಟಿದ್ದ ಮತ್ತೊಬ್ಬ ಹಿರಿಯ ನಾಯಕ ಜಸ್ವಂತ್ ಸಿಂಗ್‍ರ ಕುರಿತು “ಅವರಿಗೆ ಟಿಕೆಟ್ ನೀಡಬಾರದೆನ್ನುವುದು ಪಕ್ಷದೊಳಗೆ ಚರ್ಚೆಯೇ ಆಗಿರಲಿಲ್ಲ” ಎನ್ನುವ ಮೂಲಕ ಅದು ಮೋದಿ-ಶಾ ಜೋಡಿಯ ಏಕಪಕ್ಷೀಯ ನಿರ್ಧಾರ ಎಂದು ಟೀಕಿಸಿದ್ದರು. ಅಲ್ಲದೇ 2018ರಲ್ಲಿ `ಪವರ್ ಪೊಲಿಟಿಕ್ಸ್’ ಎಂಬ ನಿಯತಕಾಲಿಕೆಯಲ್ಲಿ ‘ರಾಜಧರ್ಮ’ ತಲೆಬರಹದಲ್ಲಿ ಲೇಖನವೊಂದನ್ನು ಬರೆದಿದ್ದ ಜೋಷಿ, ಇಡೀ ಲೇಖನವನ್ನು ಮೋದಿ-ಶಾ ಸರ್ವಾಧಿಕಾರವನ್ನು ಟೀಕಿಸಲು ದುಡಿಸಿಕೊಂಡಿದ್ದರು. ‘ವಾಲ್ಮೀಕಿಯ ಪ್ರಕಾರ ರಾಜನಾದವನು ಸರ್ವಾಧಿಕಾರಿಯಾಗಿರಬಾರದು. ರಾಜನಾದವನು ಆಡಳಿತವನ್ನು ನಡೆಸಲು ಮಂತ್ರಿಗಳ, ವಿದ್ವಾಂಸರ, ಸೇನಾ ಅಧಿಕಾರಿಗಳ ಸಲಹೆ ಕೇಳುತ್ತಿದ್ದುದನ್ನು ರಾಮಾಯಣದಲ್ಲಿ ನಾವು ಕಾಣಬಹುದು’ ಎಂಬ ಒಂದು ಸಾಲೇ ಇಡೀ ಲೇಖನಕ್ಕೆ ಹಿಡಿದ ಕನ್ನಡಿಯಂತಿದೆ. ಜೋಷಿಯವರ ವ್ಯಕ್ತಿತ್ವ ಹೀಗಿದ್ದುದರಿಂದಲೇ ಆರೆಸ್ಸೆಸ್ ನಾಯಕರು ಮೋದಿ-ಷಾ ಜೋಡಿಗೆ, ಜೋಷಿಯವರ ವಿಚಾರದಲ್ಲಿ ಎಚ್ಚರಿಸಿದ್ದರಂತೆ.

ಇದೀಗ ಸಿಡಿದೆದ್ದಿರುವ ಜೋಷಿಯವರನ್ನು ಆರೆಸ್ಸೆಸ್ ತಣ್ಣಗೆ ಮಾಡುತ್ತದಾ ಅಥವಾ ಮೋದಿಯ ವಿರುದ್ಧ ತಮ್ಮ ಸ್ವಂತ ಕ್ಷೇತ್ರ ವಾರಣಾಸಿಯಿಂದ ಸ್ಪರ್ಧೆ ಮಾಡಲು ಮುಂದಾಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...