Homeಮುಖಪುಟಮೋದಿ ವಿರುದ್ಧ ವಾರಣಾಸಿಯಲ್ಲೇ ಕಣಕ್ಕಿಳಿಯುತ್ತಾರಾ ಬಿಜೆಪಿ ಹಿರಿಯ ನಾಯಕ ಮುರುಳಿ ಮನೋಹರ ಜೋಷಿ?

ಮೋದಿ ವಿರುದ್ಧ ವಾರಣಾಸಿಯಲ್ಲೇ ಕಣಕ್ಕಿಳಿಯುತ್ತಾರಾ ಬಿಜೆಪಿ ಹಿರಿಯ ನಾಯಕ ಮುರುಳಿ ಮನೋಹರ ಜೋಷಿ?

- Advertisement -
- Advertisement -

ಟೈಟಲ್ ನೋಡಿ ಆಶ್ಚರ್ಯವೆನಿಸಬಹುದಾದ ಈ ಸುದ್ದಿ ಈಗ ಕೇವಲ ತೆರೆಮರೆಯಲ್ಲಿ ಉಳಿದಿಲ್ಲ. ಅದಾಗಲೇ ದೇಶದ ಪ್ರಮುಖ ಸುದ್ದಿ ಚಾನೆಲ್‍ನ ವೆಬ್‍ಸೈಟ್‍ನಲ್ಲಿ ಬಂದಾಗಿದೆ.

ನಿನ್ನೆಯಷ್ಟೇ ಬಿಜೆಪಿ ಭೀಷ್ಮ ಎನ್ನುವ ವಿಶೇಷಣದ ಅಡ್ವಾಣಿಯವರು ತಮ್ಮ ಬ್ಲಾಗ್‍ನಲ್ಲಿ ‘ನಮ್ಮನ್ನು ರಾಜಕೀಯವಾಗಿ ವಿರೋಧಿಸುವವರು ದೇಶದ್ರೋಹಿಗಳಾಗುವುದಿಲ್ಲ, ನಮ್ಮ ಶತ್ರುಗಳೂ ಅಲ್ಲ, ಕೇವಲ ರಾಜಕೀಯ ಎದುರಾಳಿಗಳಷ್ಟೇ. ನಮ್ಮ ಭಾರತದ ಪ್ರಜಾಪ್ರಭುತ್ವ ನೆಲೆ ನಿಂತಿರುವುದೇ ಬಹುತ್ವ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ. ಈ ಪ್ರಜಾಪ್ರಭುತ್ವವೇ ಯಾವತ್ತೂ ಬಿಜೆಪಿ ಪಕ್ಷದ ಹೆಗ್ಗುರುತು” ಎಂದು ಬರೆದಿದ್ದರು. ಪ್ರಸ್ತುತ ಬಿಜೆಪಿಯ ಹಿರಿಯ ನಾಯಕರು ಮುಖ್ಯವಾಗಿ ಮೋದಿಯವರು, ತಮ್ಮ ರಾಜಕೀಯ ವಿರೋಧಿಗಳ, ನಿರ್ದಿಷ್ಟವಾಗಿ ಕಾಂಗ್ರೆಸ್ ನಾಯಕರ ದೇಶಪ್ರೇಮವನ್ನು ಪ್ರಶ್ನಿಸುತ್ತಾ ಚುನಾವಣಾ ಪ್ರಚಾರ ನಡೆಸುತ್ತಿರುವ ಸಂದರ್ಭದಲ್ಲಿ ಹಾಗೂ ಪಕ್ಷದೊಳಗೆ ಮೋದಿ-ಶಾ ಜೋಡಿ ಸರ್ವಾಧಿಕಾರಿಗಳಾಗಿ ಬೆಳೆದಿರುವ ಸನ್ನಿವೇಶದಲ್ಲಿ ಅಡ್ವಾಣಿಯವರ ಈ ಹೇಳಿಕೆ ಮೋದಿಯವರಿಗೆ ಕೊಟ್ಟ ಟಾಂಗ್ ಎಂತಲೇ ವಿಶ್ಲೇಷಣೆಗೆ ಒಳಪಡುತ್ತಿದೆ. ಮೋದಿ-ಅಮಿತ್ ಶಾ ಜೋಡಿ ತಮ್ಮನ್ನು ಮೂಲೆಗುಂಪು ಮಾಡಿದ್ದಕ್ಕೆ ಪ್ರತಿಯಾಗಿ ಈ ಹಿರಿಯ ನಾಯಕ ಚುನಾವಣೆಯ ಸಮಯದಲ್ಲಿ ಹೀಗೆ ಬರೆದಿರುವುದರಲ್ಲಿ ಹೆಚ್ಚೇನು ಅನುಮಾನವಿಲ್ಲ. ಇದು ಸಮರೋತ್ಸಾಹದಲ್ಲಿರುವ ಗುಜರಾತಿ ಜೋಡಿಗೆ ಭರ್ಜರಿ ಹಿನ್ನಡೆಯನ್ನೇ ಉಂಟು ಮಾಡುತ್ತಿದೆ.

ಅಡ್ವಾಣಿಯವರ ರೆಬೆಲ್ ಇಶ್ಯೂ ತಣ್ಣಗಾಗುವ ಮೊದಲೇ ಈಗ ಮತ್ತೊಬ್ಬ ಹಿರಿಯ ನಾಯಕ ಮುರುಳಿ ಮನೋಹರ್ ಜೋಷಿಯವರಿಂದಲೂ ಬಿಜೆಪಿಗೆ ಆಘಾತಕರವಾದ ಸುದ್ದಿ ಹೊರಬಿದ್ದಿದೆ. ಮೋದಿ-ಶಾ ಬಿಜೆಪಿಯೊಳಗೆ ಮುಂಚೂಣಿಗೆ ಬಂದ ಕ್ಷಣದಿಂದಲೂ ಪ್ರತಿರೋಧ ತೋರುತ್ತಲೇ ಬಂದಿದ್ದ ಮತ್ತು ಆ ಕಾರಣಕ್ಕೆ ಹೀನಾಯವಾಗಿ ಮೂಲೆ ಗುಂಪಾಗಿಸಲ್ಪಟ್ಟ ಜೋಷಿಯವರು ಇದೀಗ ಮೋದಿ ವಿರುದ್ಧ ವಾರಣಾಸಿಯಲ್ಲಿ ಚುನಾವಣಾ ಕಣಕ್ಕೆ ಧುಮುಕಲಿದ್ದಾರೆ ಎಂಬ ಸುದ್ದಿ ಬರೆದಿರುವುದು ಪ್ರಸಿದ್ಧ ಪತ್ರಕರ್ತೆ ಸ್ವಾತಿ ಚತುರ್ವೇದಿ. ಈಗಾಗಲೇ ಕಾಂಗ್ರೆಸ್‍ನ ಹಿರಿಯ ನಾಯಕರು ಅವರ ಜೊತೆಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಮಾತ್ರವಲ್ಲದೆ, ಇತರೆ ಪಕ್ಷಗಳ ನಾಯಕರೂ ಜೋಷಿಯವರನ್ನು ಸಂಪರ್ಕಿಸಿದ್ದು ಅವರು ವಾರಣಾಸಿಯಿಂದ ಸ್ಪರ್ಧಿಸಲು ಇಚ್ಛಿಸಿದರೆ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಬೆಂಬಲ ಸೂಚಿಸುವ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ನಾಯಕರಲ್ಲಿ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಅವರ ಹೆಸರೂ ಕೇಳಿಬರುತ್ತಿದೆ. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಮತ್ತು ಬಿಎಸ್‍ಪಿ ಮೈತ್ರಿ ಮಾಡಿಕೊಂಡಿರುವುದರಿಂದ ಜೋಷಿಗೆ ಮಾಯಾವತಿಯವರ ಬೆಂಬಲವೂ ಸಿಕ್ಕಂತಾಗುತ್ತದೆ.

ಜೋಷಿಯವರು ಈ ಮಾತುಕತೆಗೆ ಪೂರಕವಾಗಿ ಸ್ಪಂದಿಸಿದ್ದಾರಾದರೂ, ಮೊದಲಿಗೆ ವಾರಾಣಾಸಿಗಿಂತ ಬೇರೆಡೆ ಸ್ಪರ್ಧಿಸುವ ಅಭಿಲಾಷೆ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ. ವಾರಾಣಾಸಿ, ಈ ಮೊದಲು ಮುರುಳಿ ಮನೋಹರ್ ಜೋಷಿ ಸಂಸದನಾಗಿ ಪ್ರತಿನಿಧಿಸುತ್ತಿದ್ದ ಕ್ಷೇತ್ರ. ಆದರೆ 2014ರಲ್ಲಿ ಮೋದಿಯವರು ವಾರಾಣಾಸಿಯಿಂದ ಸ್ಪರ್ಧಿಸಲು ನಿರ್ಧರಿಸಿದಾಗ ಜೋಷಿಯವರಿಗೆ ಕಾನ್ಪುರ ಕ್ಷೇತ್ರದ ಟಿಕೆಟ್ ನೀಡಲಾಗಿತ್ತು. ಆಗಲೇ ತನ್ನ ಕ್ಷೇತ್ರವನ್ನು ಮೋದಿಯವರಿಗೆ ಬಿಟ್ಟುಕೊಡಲು ಸಣ್ಣಗೆ ಪ್ರತಿರೋಧ ಒಡ್ಡಿದ್ದ ಅವರು ಆರೆಸೆಸ್ ನಾಯಕರ ಮಧ್ಯಸ್ಥಿಕೆಯಿಂದ ಬಿಟ್ಟುಕೊಟ್ಟಿದ್ದರು. ಆದರೆ ಈ ಬಾರಿ ಟಿಕೆಟ್ ನೀಡುವಾಗ ಬಿಜೆಪಿ ಪಕ್ಷವು ಎಲ್.ಕೆ.ಅಡ್ವಾಣಿ ಮತ್ತು ಮುರುಳಿ ಮನೋಹರ್ ಜೋಷಿಯವರಿಗೆ ಸ್ಪರ್ಧಿಸಲು ಅವಕಾಶ ನೀಡಲಿಲ್ಲ. ಅಡ್ವಾಣಿಯವರು ಪ್ರತಿನಿಧಿಸುತ್ತಿದ್ದ ಗಾಂಧಿನಗರ ಕ್ಷೇತ್ರವನ್ನು ಸ್ವತಃ ಅಮಿತ್ ಶಾ ತಮ್ಮ ಬಳಿಯೇ ಉಳಿಸಿಕೊಂಡರೆ, ಮುರುಳಿ ಮನೋಹರ್ ಜೋಷಿಯವರು ಹಾಲಿ ಸಂಸದರಾಗಿರುವ ಕಾನ್ಪುರದಿಂದ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಮಂತ್ರಿ ಸತ್ಯದೇವ್ ಪಚೌರಿಯನ್ನು ಅಭ್ಯರ್ಥಿಯಾಗಿ ಘೋಷಿಸಿದೆ.

1992ರಲ್ಲಿ ಮೋದಿ ಮತ್ತು ಜೋಶಿಯವರು

ವಾಜಪೇಯಿಯವರ ಜೊತೆಗೂಡಿ ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಅಡ್ವಾಣಿ ಮತ್ತು ಜೋಷಿ ಇಬ್ಬರೂ ಮಹತ್ವದ ಪಾತ್ರ ನಿಭಾಯಿಸಿದಂತವರು. 1977ರಲ್ಲಿ ಜನತಾ ಪಾರ್ಟಿ ಅಧಿಕಾರಕ್ಕೆ ಬಂದಾಗ ಜನಸಂಘದಿಂದ ಸಚಿವರಾಗುವ ಅರ್ಹತೆಯಲ್ಲಿ ಇದ್ದವರು ವಾಜಪೇಯಿ ಮತ್ತು ಅಡ್ವಾಣಿ. ಜೋಷಿಯವರನ್ನು ಆಗ ಜನತಾ ಪಕ್ಷದ ಸಂಸದೀಯ ಪಕ್ಷದ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿತ್ತು. ಇನ್ನು ಬಿಜೆಪಿ ದೇಶದಲ್ಲಿ ಬಲವಾಗಿ ಬೇರೂರಲು ಕಾರಣವಾದದ್ದು ಅಡ್ವಾಣಿಯವರ ಕುಖ್ಯಾತ ರಥಯಾತ್ರೆ ಮತ್ತು ಅವರದೇ ನೇತೃತ್ವದಲ್ಲಿ ನಡೆದ ಬಾಬರಿ ಮಸೀದಿ ಧ್ವಂಸ ಪ್ರಕರಣಗಳು. ಜೋಷಿ ಇವರಿಬ್ಬರ ನಂತರದ ಮೂರನೇ ಸ್ಥಾನದಲ್ಲಿದ್ದ ನಾಯಕ. ವಾಜಪೇಯಿಯವರ ಹದಿಮೂರು ದಿವಸದ ಸರ್ಕಾರದಲ್ಲಿ ಗೃಹಮಂತ್ರಿಯಾಗುವಷ್ಟು, ಆನಂತರದ ಎನ್‍ಡಿಎ ಸರ್ಕಾರದಲ್ಲಿ ಮಾನವ ಸಂಪನ್ಮೂಲದಂತಹ ಪ್ರಭಾವಿ ಖಾತೆಯ ಸಚಿವರಾಗುವಷ್ಟು ಜೋಷಿ ಬಿಜೆಪಿಯೊಳಗೆ ವರ್ಚಸ್ಸು ಹೊಂದಿದ್ದರು. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿಯೂ ಆಯ್ಕೆಯಾಗಿದ್ದರು.

ಅಂತವರನ್ನು ಮೋದಿ-ಶಾ ಜೋಡಿ ಇತ್ತೀಚಿನ ದಿನಗಳಲ್ಲಿ ನಡೆಸಿಕೊಂಡ ರೀತಿ ಮಾತ್ರ ತುಂಬಾ ಅವಮಾನಕರದ್ದಾಗಿತ್ತು. ಅದರ ವಿರುದ್ಧ ಅಡ್ವಾಣಿಯವರು ಒಂದಷ್ಟು ಮಟ್ಟಿಗಿನ ಸಹನೆ ತೋರಿದರಾದರು ಮುರುಳಿ ಮನೋಹರ್ ಜೋಷಿ ಪ್ರತಿಯಾಡುತ್ತಲೇ ಬಂದಿದ್ದರು. 2014ರ ಚುನಾವಣೆ ಸಂದರ್ಭದಲ್ಲೇ ಇಡೀ ದೇಶಾದ್ಯಂತ ಮೋದಿ ಅಲೆ ಇದೆ ಎಂಬ ವಾದ ಎನ್ನುತ್ತಿದ್ದ ಸಂದರ್ಭದಲ್ಲಿ ಸಂದರ್ಶನವೊಂದರಲ್ಲಿ “ದೇಶದಲ್ಲಿ ಮೋದಿ ಅಲೆ ಇಲ್ಲ, ಇರೋದು ಬಿಜೆಪಿ ಅಲೆ. ಮೋದಿ ಕೇವಲ ಪಕ್ಷದ ಪ್ರಧಾನಿ ಅಭ್ಯರ್ಥಿ ಅಷ್ಟೆ” ಎಂದು ನೇರವಾಗಿ ಹೇಳಿದ್ದ ಜೋಷಿಯವರು, ಅಷ್ಟರಲ್ಲಾಗಲೇ ಬಿಜೆಪಿಯಿಂದ ಟಿಕೆಟ್ (ಬಾರ್ಮರ್ ಕ್ಷೇತ್ರ) ನಿರಾಕರಿಸಲ್ಪಟ್ಟಿದ್ದ ಮತ್ತೊಬ್ಬ ಹಿರಿಯ ನಾಯಕ ಜಸ್ವಂತ್ ಸಿಂಗ್‍ರ ಕುರಿತು “ಅವರಿಗೆ ಟಿಕೆಟ್ ನೀಡಬಾರದೆನ್ನುವುದು ಪಕ್ಷದೊಳಗೆ ಚರ್ಚೆಯೇ ಆಗಿರಲಿಲ್ಲ” ಎನ್ನುವ ಮೂಲಕ ಅದು ಮೋದಿ-ಶಾ ಜೋಡಿಯ ಏಕಪಕ್ಷೀಯ ನಿರ್ಧಾರ ಎಂದು ಟೀಕಿಸಿದ್ದರು. ಅಲ್ಲದೇ 2018ರಲ್ಲಿ `ಪವರ್ ಪೊಲಿಟಿಕ್ಸ್’ ಎಂಬ ನಿಯತಕಾಲಿಕೆಯಲ್ಲಿ ‘ರಾಜಧರ್ಮ’ ತಲೆಬರಹದಲ್ಲಿ ಲೇಖನವೊಂದನ್ನು ಬರೆದಿದ್ದ ಜೋಷಿ, ಇಡೀ ಲೇಖನವನ್ನು ಮೋದಿ-ಶಾ ಸರ್ವಾಧಿಕಾರವನ್ನು ಟೀಕಿಸಲು ದುಡಿಸಿಕೊಂಡಿದ್ದರು. ‘ವಾಲ್ಮೀಕಿಯ ಪ್ರಕಾರ ರಾಜನಾದವನು ಸರ್ವಾಧಿಕಾರಿಯಾಗಿರಬಾರದು. ರಾಜನಾದವನು ಆಡಳಿತವನ್ನು ನಡೆಸಲು ಮಂತ್ರಿಗಳ, ವಿದ್ವಾಂಸರ, ಸೇನಾ ಅಧಿಕಾರಿಗಳ ಸಲಹೆ ಕೇಳುತ್ತಿದ್ದುದನ್ನು ರಾಮಾಯಣದಲ್ಲಿ ನಾವು ಕಾಣಬಹುದು’ ಎಂಬ ಒಂದು ಸಾಲೇ ಇಡೀ ಲೇಖನಕ್ಕೆ ಹಿಡಿದ ಕನ್ನಡಿಯಂತಿದೆ. ಜೋಷಿಯವರ ವ್ಯಕ್ತಿತ್ವ ಹೀಗಿದ್ದುದರಿಂದಲೇ ಆರೆಸ್ಸೆಸ್ ನಾಯಕರು ಮೋದಿ-ಷಾ ಜೋಡಿಗೆ, ಜೋಷಿಯವರ ವಿಚಾರದಲ್ಲಿ ಎಚ್ಚರಿಸಿದ್ದರಂತೆ.

ಇದೀಗ ಸಿಡಿದೆದ್ದಿರುವ ಜೋಷಿಯವರನ್ನು ಆರೆಸ್ಸೆಸ್ ತಣ್ಣಗೆ ಮಾಡುತ್ತದಾ ಅಥವಾ ಮೋದಿಯ ವಿರುದ್ಧ ತಮ್ಮ ಸ್ವಂತ ಕ್ಷೇತ್ರ ವಾರಣಾಸಿಯಿಂದ ಸ್ಪರ್ಧೆ ಮಾಡಲು ಮುಂದಾಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...