Homeಕರ್ನಾಟಕಮರ್ಯಾದೆಗೇಡು ಹತ್ಯೆ: ಸಾವಿನ ಕುರಿತು ಮೊದಲೇ ಬರೆದಿದ್ದ ಯುವತಿ; ಪತ್ರದಲ್ಲೇನಿದೆ?

ಮರ್ಯಾದೆಗೇಡು ಹತ್ಯೆ: ಸಾವಿನ ಕುರಿತು ಮೊದಲೇ ಬರೆದಿದ್ದ ಯುವತಿ; ಪತ್ರದಲ್ಲೇನಿದೆ?

- Advertisement -
- Advertisement -

ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಮರ್ಯಾದೆಗೇಡು ಹತ್ಯೆಗೊಳಗಾದ ಯುವತಿ, ತನ್ನ ಪೋಷಕರ ವಿರುದ್ಧ ಬೇಸರ ವ್ಯಕ್ತಪಡಿಸಿ ಸಾವಿಗೂ ಮುನ್ನ ಬರೆದಿದ್ದರು ಎನ್ನಲಾದ ಮೂರು ಪುಟದ ಪತ್ರ ಲಭ್ಯವಾಗಿದೆ.

ಪಿರಿಯಾಪಟ್ಟಣದ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಒಕ್ಕಲಿಗ ಸಮುದಾಯಕ್ಕೆ ಸೇರಿದ ಶಾಲಿನಿ (17), ಪಕ್ಕದ ಮೆಳ್ಳಹಳ್ಳಿ ಗ್ರಾಮದ ದಲಿತ ಸಮುದಾಯದ ಮಂಜು ಎಂಬ ಹುಡುಗನನ್ನು ಪ್ರೀತಿಸುತ್ತಿದ್ದರು. ಆದರೆ ಈ ಸಂಬಂಧಕ್ಕೆ ಹುಡುಗಿಯ ಕುಟುಂಬವು ತೀವ್ರವಾಗಿ ವಿರೋಧಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯುವತಿಯ ಕೊಲೆ ಮಾಡುವ ಮಟ್ಟಕ್ಕೆ ಪೋಷಕರು ಹೊರಟರು. ಯುವತಿಯನ್ನು ಪ್ರೀತಿಸುತ್ತಿದ್ದ ಯುವಕನಿಂದ ಕೆಲವು ಮಾಹಿತಿಗಳನ್ನು ಪೊಲೀಸರು ಕಲೆಹಾಕಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಾಹಿತಿಗಳನ್ನು ಯುವಕ ನೀಡುತ್ತಿದ್ದು, ಶಾಲಿನಿ ಬರೆದಿದ್ದಳು ಎನ್ನಲಾದ ಪತ್ರ ಹಾಗೂ ಆಕೆಯ ಕಾಲ್‌ರೆಕಾರ್ಡ್‌‌ಗಳನ್ನು ಪೊಲೀಸರಿಗೆ ನೀಡಿದ್ದಾನೆ.

ಪತ್ರದಲ್ಲಿ ಏನಿದೆ?

ಶಾಲಿನಿ ತನ್ನ ಸಾವಿನ ಕುರಿತು ಮೊದಲೇ ಊಹಿಸಿರುವುದು ಈ ಪತ್ರದಿಂದ ತಿಳಿದುಬರುತ್ತದೆ. ತನಗಾಗಿರುವ ಹಿಂಸೆಯ ಈ ಪತ್ರ ಮುಖೇನ ಪೊಲೀಸರಿಗೆ ತಿಳಿಸುವ ಯತ್ನವನ್ನು ಶಾಲಿನಿ ಮಾಡಿದ್ದಾರೆ.

“ನನ್ನ ಜೀವನದಲ್ಲಿ ಜಿಗುಪ್ಸೆ ಬರುವಂತೆ ಕೆಲವು ವ್ಯಕ್ತಿಗಳು ನಡೆದುಕೊಂಡಿದ್ದಾರೆ. ಆದ್ದರಿಂದ ನನ್ನ ಜೀವನವನ್ನು ಇಲ್ಲಿಗೆ ಮುಗಿಸಲು ತೀರ್ಮಾನಿಸಿದ್ದೇನೆ. ನನ್ನ ತಂದೆ ಸುರೇಶ್‌, ತಾಯಿ ಬೇಬಿ, ಪಕ್ಕದ ಊರಿನ ನಿವಾಸಿಗಳಾದ ಸಂಗೀತ, ಗಣೇಶ್‌ ದಂಪತಿ, ಅದೇ ಊರಿನ ಮತ್ತೊಬ್ಬ ನಿವಾಸಿ ಪ್ರತಾಪ್‌ ಮತ್ತು ನನ್ನ ಚಿಕ್ಕಪ್ಪಂದಿರಾದ ಅರುಣಾ, ರವಿ ನನ್ನ ಸಾವಿಗೆ ಕಾರಣರು” ಎಂದು ಪತ್ರದಲ್ಲಿ ಬರೆದಿದ್ದಾರೆ.

“ಕಾನೂನಿನ ಪ್ರಕಾರ ನಮಗೆ ವಯಸ್ಸಾದ ಬಳಿಕ ಮದುವೆಯಾಗಲು ಇಚ್ಚಿಸಿದ್ದೆವು. ಆದರೆ ಮಂಜು (ಪ್ರೀತಿಸಿದ ಹುಡುಗ) ಬೇರೆ ಜಾತಿಯವನೆಂದು ಮನೆಯವರು ಕಿರುಕುಳ ಕೊಟ್ಟಿದ್ದಾರೆ. ಕೆಟ್ಟ ಮಾತುಗಳನ್ನು ನನ್ನ ತಂದೆ ತಾಯಿಗಳು ಆಡಿದ್ದಾರೆ. ಈ ಕೆಟ್ಟ ಪದಗಳನ್ನು ನನ್ನಿಂದ ಅರಗಿಸಿಕೊಳ್ಳಲು ಆಗುತ್ತಿಲ್ಲ. ನನ್ನ ಪೋಷಕರಿಗೆ ಸರಿಯಾಗಿ ತಿಳಿಹೇಳಿ. ನಾನು ಮರಣ ಹೊಂದಿದ ಬಳಿಕ ನನ್ನ ತಂದೆ ತಾಯಿ ನಾನು ಪ್ರೀತಿಸಿದ ಹುಡುಗನಿಗೆ ತೊಂದರೆ ಕೊಟ್ಟರೆ ನನ್ನ ಪೋಷಕರಿಗೆ ಶಿಕ್ಷೆ ಕೊಡಿ. ಮುಂದಿನ ಜನ್ಮ ಇದ್ದರೆ ನಿಮ್ಮಂಥವರ ಮಗಳಾಗಿ ಹುಟ್ಟುತ್ತೇನೆ” ಎಂದು ಶಾಲಿನಿ ಪೊಲೀಸರಿಗೆ ತಿಳಿಸಿದ್ದಾರೆ.

“ಜಾತಿ ಎಂಬ ಕೆಟ್ಟ ಪಿಡುಗು ನನ್ನನ್ನು ಬಲಿ ತೆಗೆದುಕೊಂಡಿದೆ… ಬೇರೆಯವರ ಮಾತು ಕೇಳಿ ಮಕ್ಕಳಿಗೆ ಕೆಟ್ಟ ಪದಗಳಿಂದ ಬೈಯ್ಯುವುದು, ಸಿಕ್ಕಸಿಕ್ಕದರಲ್ಲಿ ಹೊಡೆಯುವುದನ್ನು ನಿಲ್ಲಿಸಲು ಹೇಳಿ” ಎಂದು ಹೇಳುತ್ತಾ ತನ್ನ ಮೇಲಾಗಿರುವ  ಹಲ್ಲೆಗಳನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿರಿ: ಪಠ್ಯವಿವಾದ ಡೈವರ್ಟ್ ಮಾಡಲು ಯತ್ನ: ಬಿಜೆಪಿಗೆ ತಿರುಗುಬಾಣವಾದ ಚಡ್ಡಿ ಕಳಿಸುವ ಅಭಿಯಾನ

“ನಾವಿಬ್ಬರೂ ತುಂಬಾ ಪ್ರತಿಸಿದ್ದೆವು. ನನಗೆ 18 ವರ್ಷ ತುಂಬಿದ ನಂತರ ಮದುವೆಯಾಗಿ ಜೀವನದಲ್ಲಿ ಚೆನ್ನಾಗಿರಬೇಕು ಎಂದು ನೂರೆಂದು ಆಸೆ ಕಟ್ಟಿದ್ದೆವು. ಆದರೆ ಅದು ಸಾಧ್ಯವಾಗಲೂ ಯಾರೂ ಬಿಡಲಿಲ್ಲ…” ಎಂದು ಪತ್ರದಲ್ಲಿ ಬರೆದುಕೊಂಡಿದ್ದಾರೆ.

ವೈರಲ್‌ ಆಗುತ್ತಿರುವ ಪತ್ರದ ಕುರಿತು ಮಾಹಿತಿ ನೀಡಿದ ಪಿರಿಯಾಪಟ್ಟಣ ಪೊಲೀಸ್ ಅಧಿಕಾರಿ ಕುಮಾರ್‌, “ಇದು ಡೆತ್‌ ನೋಟ್‌ ಏನಲ್ಲ. ಇದು ಪತ್ರವಷ್ಟೇ. ಈ ಪತ್ರವನ್ನು ಶಾಲಿನಿ ಬರೆದು ತನಗೆ ತಲುಪಿಸಿರುವುದಾಗಿ ಹುಡುಗ ಹೇಳುತ್ತಿದ್ದಾರೆ. ಆದರೆ ಅದು ಶಾಲಿನಿಯೇ ಬರೆದದ್ದೋ, ಬೇರೆ ಯಾರಾದರೂ ಬರೆದದ್ದೋ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. ಕೊಲೆಯಾಗಿರುವ ಯುವತಿಯ ಕೈಬರಹವನ್ನು ಪರಿಶೀಲಿಸಬೇಕಿದೆ.  ತನ್ನೊಂದಿಗೆ ಶಾಲಿಗೆ ಈ ಕುರಿತು ಮಾತನಾಡಿದ್ದಳು ಎಂದು ಸಿಡಿಯೊಂದನ್ನು ಪೊಲೀಸರಿಗೆ ಮಂಜು ನೀಡಿದ್ದಾರೆ. ತನಿಖೆ ಮುಂದುವರಿದಿದೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....