Homeಕರ್ನಾಟಕಮರ್ಯಾದೆಗೇಡು ಹತ್ಯೆ: ಸಾವಿನ ಕುರಿತು ಮೊದಲೇ ಬರೆದಿದ್ದ ಯುವತಿ; ಪತ್ರದಲ್ಲೇನಿದೆ?

ಮರ್ಯಾದೆಗೇಡು ಹತ್ಯೆ: ಸಾವಿನ ಕುರಿತು ಮೊದಲೇ ಬರೆದಿದ್ದ ಯುವತಿ; ಪತ್ರದಲ್ಲೇನಿದೆ?

- Advertisement -
- Advertisement -

ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಮರ್ಯಾದೆಗೇಡು ಹತ್ಯೆಗೊಳಗಾದ ಯುವತಿ, ತನ್ನ ಪೋಷಕರ ವಿರುದ್ಧ ಬೇಸರ ವ್ಯಕ್ತಪಡಿಸಿ ಸಾವಿಗೂ ಮುನ್ನ ಬರೆದಿದ್ದರು ಎನ್ನಲಾದ ಮೂರು ಪುಟದ ಪತ್ರ ಲಭ್ಯವಾಗಿದೆ.

ಪಿರಿಯಾಪಟ್ಟಣದ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಒಕ್ಕಲಿಗ ಸಮುದಾಯಕ್ಕೆ ಸೇರಿದ ಶಾಲಿನಿ (17), ಪಕ್ಕದ ಮೆಳ್ಳಹಳ್ಳಿ ಗ್ರಾಮದ ದಲಿತ ಸಮುದಾಯದ ಮಂಜು ಎಂಬ ಹುಡುಗನನ್ನು ಪ್ರೀತಿಸುತ್ತಿದ್ದರು. ಆದರೆ ಈ ಸಂಬಂಧಕ್ಕೆ ಹುಡುಗಿಯ ಕುಟುಂಬವು ತೀವ್ರವಾಗಿ ವಿರೋಧಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯುವತಿಯ ಕೊಲೆ ಮಾಡುವ ಮಟ್ಟಕ್ಕೆ ಪೋಷಕರು ಹೊರಟರು. ಯುವತಿಯನ್ನು ಪ್ರೀತಿಸುತ್ತಿದ್ದ ಯುವಕನಿಂದ ಕೆಲವು ಮಾಹಿತಿಗಳನ್ನು ಪೊಲೀಸರು ಕಲೆಹಾಕಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಾಹಿತಿಗಳನ್ನು ಯುವಕ ನೀಡುತ್ತಿದ್ದು, ಶಾಲಿನಿ ಬರೆದಿದ್ದಳು ಎನ್ನಲಾದ ಪತ್ರ ಹಾಗೂ ಆಕೆಯ ಕಾಲ್‌ರೆಕಾರ್ಡ್‌‌ಗಳನ್ನು ಪೊಲೀಸರಿಗೆ ನೀಡಿದ್ದಾನೆ.

ಪತ್ರದಲ್ಲಿ ಏನಿದೆ?

ಶಾಲಿನಿ ತನ್ನ ಸಾವಿನ ಕುರಿತು ಮೊದಲೇ ಊಹಿಸಿರುವುದು ಈ ಪತ್ರದಿಂದ ತಿಳಿದುಬರುತ್ತದೆ. ತನಗಾಗಿರುವ ಹಿಂಸೆಯ ಈ ಪತ್ರ ಮುಖೇನ ಪೊಲೀಸರಿಗೆ ತಿಳಿಸುವ ಯತ್ನವನ್ನು ಶಾಲಿನಿ ಮಾಡಿದ್ದಾರೆ.

“ನನ್ನ ಜೀವನದಲ್ಲಿ ಜಿಗುಪ್ಸೆ ಬರುವಂತೆ ಕೆಲವು ವ್ಯಕ್ತಿಗಳು ನಡೆದುಕೊಂಡಿದ್ದಾರೆ. ಆದ್ದರಿಂದ ನನ್ನ ಜೀವನವನ್ನು ಇಲ್ಲಿಗೆ ಮುಗಿಸಲು ತೀರ್ಮಾನಿಸಿದ್ದೇನೆ. ನನ್ನ ತಂದೆ ಸುರೇಶ್‌, ತಾಯಿ ಬೇಬಿ, ಪಕ್ಕದ ಊರಿನ ನಿವಾಸಿಗಳಾದ ಸಂಗೀತ, ಗಣೇಶ್‌ ದಂಪತಿ, ಅದೇ ಊರಿನ ಮತ್ತೊಬ್ಬ ನಿವಾಸಿ ಪ್ರತಾಪ್‌ ಮತ್ತು ನನ್ನ ಚಿಕ್ಕಪ್ಪಂದಿರಾದ ಅರುಣಾ, ರವಿ ನನ್ನ ಸಾವಿಗೆ ಕಾರಣರು” ಎಂದು ಪತ್ರದಲ್ಲಿ ಬರೆದಿದ್ದಾರೆ.

“ಕಾನೂನಿನ ಪ್ರಕಾರ ನಮಗೆ ವಯಸ್ಸಾದ ಬಳಿಕ ಮದುವೆಯಾಗಲು ಇಚ್ಚಿಸಿದ್ದೆವು. ಆದರೆ ಮಂಜು (ಪ್ರೀತಿಸಿದ ಹುಡುಗ) ಬೇರೆ ಜಾತಿಯವನೆಂದು ಮನೆಯವರು ಕಿರುಕುಳ ಕೊಟ್ಟಿದ್ದಾರೆ. ಕೆಟ್ಟ ಮಾತುಗಳನ್ನು ನನ್ನ ತಂದೆ ತಾಯಿಗಳು ಆಡಿದ್ದಾರೆ. ಈ ಕೆಟ್ಟ ಪದಗಳನ್ನು ನನ್ನಿಂದ ಅರಗಿಸಿಕೊಳ್ಳಲು ಆಗುತ್ತಿಲ್ಲ. ನನ್ನ ಪೋಷಕರಿಗೆ ಸರಿಯಾಗಿ ತಿಳಿಹೇಳಿ. ನಾನು ಮರಣ ಹೊಂದಿದ ಬಳಿಕ ನನ್ನ ತಂದೆ ತಾಯಿ ನಾನು ಪ್ರೀತಿಸಿದ ಹುಡುಗನಿಗೆ ತೊಂದರೆ ಕೊಟ್ಟರೆ ನನ್ನ ಪೋಷಕರಿಗೆ ಶಿಕ್ಷೆ ಕೊಡಿ. ಮುಂದಿನ ಜನ್ಮ ಇದ್ದರೆ ನಿಮ್ಮಂಥವರ ಮಗಳಾಗಿ ಹುಟ್ಟುತ್ತೇನೆ” ಎಂದು ಶಾಲಿನಿ ಪೊಲೀಸರಿಗೆ ತಿಳಿಸಿದ್ದಾರೆ.

“ಜಾತಿ ಎಂಬ ಕೆಟ್ಟ ಪಿಡುಗು ನನ್ನನ್ನು ಬಲಿ ತೆಗೆದುಕೊಂಡಿದೆ… ಬೇರೆಯವರ ಮಾತು ಕೇಳಿ ಮಕ್ಕಳಿಗೆ ಕೆಟ್ಟ ಪದಗಳಿಂದ ಬೈಯ್ಯುವುದು, ಸಿಕ್ಕಸಿಕ್ಕದರಲ್ಲಿ ಹೊಡೆಯುವುದನ್ನು ನಿಲ್ಲಿಸಲು ಹೇಳಿ” ಎಂದು ಹೇಳುತ್ತಾ ತನ್ನ ಮೇಲಾಗಿರುವ  ಹಲ್ಲೆಗಳನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿರಿ: ಪಠ್ಯವಿವಾದ ಡೈವರ್ಟ್ ಮಾಡಲು ಯತ್ನ: ಬಿಜೆಪಿಗೆ ತಿರುಗುಬಾಣವಾದ ಚಡ್ಡಿ ಕಳಿಸುವ ಅಭಿಯಾನ

“ನಾವಿಬ್ಬರೂ ತುಂಬಾ ಪ್ರತಿಸಿದ್ದೆವು. ನನಗೆ 18 ವರ್ಷ ತುಂಬಿದ ನಂತರ ಮದುವೆಯಾಗಿ ಜೀವನದಲ್ಲಿ ಚೆನ್ನಾಗಿರಬೇಕು ಎಂದು ನೂರೆಂದು ಆಸೆ ಕಟ್ಟಿದ್ದೆವು. ಆದರೆ ಅದು ಸಾಧ್ಯವಾಗಲೂ ಯಾರೂ ಬಿಡಲಿಲ್ಲ…” ಎಂದು ಪತ್ರದಲ್ಲಿ ಬರೆದುಕೊಂಡಿದ್ದಾರೆ.

ವೈರಲ್‌ ಆಗುತ್ತಿರುವ ಪತ್ರದ ಕುರಿತು ಮಾಹಿತಿ ನೀಡಿದ ಪಿರಿಯಾಪಟ್ಟಣ ಪೊಲೀಸ್ ಅಧಿಕಾರಿ ಕುಮಾರ್‌, “ಇದು ಡೆತ್‌ ನೋಟ್‌ ಏನಲ್ಲ. ಇದು ಪತ್ರವಷ್ಟೇ. ಈ ಪತ್ರವನ್ನು ಶಾಲಿನಿ ಬರೆದು ತನಗೆ ತಲುಪಿಸಿರುವುದಾಗಿ ಹುಡುಗ ಹೇಳುತ್ತಿದ್ದಾರೆ. ಆದರೆ ಅದು ಶಾಲಿನಿಯೇ ಬರೆದದ್ದೋ, ಬೇರೆ ಯಾರಾದರೂ ಬರೆದದ್ದೋ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. ಕೊಲೆಯಾಗಿರುವ ಯುವತಿಯ ಕೈಬರಹವನ್ನು ಪರಿಶೀಲಿಸಬೇಕಿದೆ.  ತನ್ನೊಂದಿಗೆ ಶಾಲಿಗೆ ಈ ಕುರಿತು ಮಾತನಾಡಿದ್ದಳು ಎಂದು ಸಿಡಿಯೊಂದನ್ನು ಪೊಲೀಸರಿಗೆ ಮಂಜು ನೀಡಿದ್ದಾರೆ. ತನಿಖೆ ಮುಂದುವರಿದಿದೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...