Homeಕರ್ನಾಟಕಮರ್ಯಾದೆಗೇಡು ಹತ್ಯೆ: ಸಾವಿನ ಕುರಿತು ಮೊದಲೇ ಬರೆದಿದ್ದ ಯುವತಿ; ಪತ್ರದಲ್ಲೇನಿದೆ?

ಮರ್ಯಾದೆಗೇಡು ಹತ್ಯೆ: ಸಾವಿನ ಕುರಿತು ಮೊದಲೇ ಬರೆದಿದ್ದ ಯುವತಿ; ಪತ್ರದಲ್ಲೇನಿದೆ?

- Advertisement -
- Advertisement -

ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಮರ್ಯಾದೆಗೇಡು ಹತ್ಯೆಗೊಳಗಾದ ಯುವತಿ, ತನ್ನ ಪೋಷಕರ ವಿರುದ್ಧ ಬೇಸರ ವ್ಯಕ್ತಪಡಿಸಿ ಸಾವಿಗೂ ಮುನ್ನ ಬರೆದಿದ್ದರು ಎನ್ನಲಾದ ಮೂರು ಪುಟದ ಪತ್ರ ಲಭ್ಯವಾಗಿದೆ.

ಪಿರಿಯಾಪಟ್ಟಣದ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಒಕ್ಕಲಿಗ ಸಮುದಾಯಕ್ಕೆ ಸೇರಿದ ಶಾಲಿನಿ (17), ಪಕ್ಕದ ಮೆಳ್ಳಹಳ್ಳಿ ಗ್ರಾಮದ ದಲಿತ ಸಮುದಾಯದ ಮಂಜು ಎಂಬ ಹುಡುಗನನ್ನು ಪ್ರೀತಿಸುತ್ತಿದ್ದರು. ಆದರೆ ಈ ಸಂಬಂಧಕ್ಕೆ ಹುಡುಗಿಯ ಕುಟುಂಬವು ತೀವ್ರವಾಗಿ ವಿರೋಧಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯುವತಿಯ ಕೊಲೆ ಮಾಡುವ ಮಟ್ಟಕ್ಕೆ ಪೋಷಕರು ಹೊರಟರು. ಯುವತಿಯನ್ನು ಪ್ರೀತಿಸುತ್ತಿದ್ದ ಯುವಕನಿಂದ ಕೆಲವು ಮಾಹಿತಿಗಳನ್ನು ಪೊಲೀಸರು ಕಲೆಹಾಕಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಾಹಿತಿಗಳನ್ನು ಯುವಕ ನೀಡುತ್ತಿದ್ದು, ಶಾಲಿನಿ ಬರೆದಿದ್ದಳು ಎನ್ನಲಾದ ಪತ್ರ ಹಾಗೂ ಆಕೆಯ ಕಾಲ್‌ರೆಕಾರ್ಡ್‌‌ಗಳನ್ನು ಪೊಲೀಸರಿಗೆ ನೀಡಿದ್ದಾನೆ.

ಪತ್ರದಲ್ಲಿ ಏನಿದೆ?

ಶಾಲಿನಿ ತನ್ನ ಸಾವಿನ ಕುರಿತು ಮೊದಲೇ ಊಹಿಸಿರುವುದು ಈ ಪತ್ರದಿಂದ ತಿಳಿದುಬರುತ್ತದೆ. ತನಗಾಗಿರುವ ಹಿಂಸೆಯ ಈ ಪತ್ರ ಮುಖೇನ ಪೊಲೀಸರಿಗೆ ತಿಳಿಸುವ ಯತ್ನವನ್ನು ಶಾಲಿನಿ ಮಾಡಿದ್ದಾರೆ.

“ನನ್ನ ಜೀವನದಲ್ಲಿ ಜಿಗುಪ್ಸೆ ಬರುವಂತೆ ಕೆಲವು ವ್ಯಕ್ತಿಗಳು ನಡೆದುಕೊಂಡಿದ್ದಾರೆ. ಆದ್ದರಿಂದ ನನ್ನ ಜೀವನವನ್ನು ಇಲ್ಲಿಗೆ ಮುಗಿಸಲು ತೀರ್ಮಾನಿಸಿದ್ದೇನೆ. ನನ್ನ ತಂದೆ ಸುರೇಶ್‌, ತಾಯಿ ಬೇಬಿ, ಪಕ್ಕದ ಊರಿನ ನಿವಾಸಿಗಳಾದ ಸಂಗೀತ, ಗಣೇಶ್‌ ದಂಪತಿ, ಅದೇ ಊರಿನ ಮತ್ತೊಬ್ಬ ನಿವಾಸಿ ಪ್ರತಾಪ್‌ ಮತ್ತು ನನ್ನ ಚಿಕ್ಕಪ್ಪಂದಿರಾದ ಅರುಣಾ, ರವಿ ನನ್ನ ಸಾವಿಗೆ ಕಾರಣರು” ಎಂದು ಪತ್ರದಲ್ಲಿ ಬರೆದಿದ್ದಾರೆ.

“ಕಾನೂನಿನ ಪ್ರಕಾರ ನಮಗೆ ವಯಸ್ಸಾದ ಬಳಿಕ ಮದುವೆಯಾಗಲು ಇಚ್ಚಿಸಿದ್ದೆವು. ಆದರೆ ಮಂಜು (ಪ್ರೀತಿಸಿದ ಹುಡುಗ) ಬೇರೆ ಜಾತಿಯವನೆಂದು ಮನೆಯವರು ಕಿರುಕುಳ ಕೊಟ್ಟಿದ್ದಾರೆ. ಕೆಟ್ಟ ಮಾತುಗಳನ್ನು ನನ್ನ ತಂದೆ ತಾಯಿಗಳು ಆಡಿದ್ದಾರೆ. ಈ ಕೆಟ್ಟ ಪದಗಳನ್ನು ನನ್ನಿಂದ ಅರಗಿಸಿಕೊಳ್ಳಲು ಆಗುತ್ತಿಲ್ಲ. ನನ್ನ ಪೋಷಕರಿಗೆ ಸರಿಯಾಗಿ ತಿಳಿಹೇಳಿ. ನಾನು ಮರಣ ಹೊಂದಿದ ಬಳಿಕ ನನ್ನ ತಂದೆ ತಾಯಿ ನಾನು ಪ್ರೀತಿಸಿದ ಹುಡುಗನಿಗೆ ತೊಂದರೆ ಕೊಟ್ಟರೆ ನನ್ನ ಪೋಷಕರಿಗೆ ಶಿಕ್ಷೆ ಕೊಡಿ. ಮುಂದಿನ ಜನ್ಮ ಇದ್ದರೆ ನಿಮ್ಮಂಥವರ ಮಗಳಾಗಿ ಹುಟ್ಟುತ್ತೇನೆ” ಎಂದು ಶಾಲಿನಿ ಪೊಲೀಸರಿಗೆ ತಿಳಿಸಿದ್ದಾರೆ.

“ಜಾತಿ ಎಂಬ ಕೆಟ್ಟ ಪಿಡುಗು ನನ್ನನ್ನು ಬಲಿ ತೆಗೆದುಕೊಂಡಿದೆ… ಬೇರೆಯವರ ಮಾತು ಕೇಳಿ ಮಕ್ಕಳಿಗೆ ಕೆಟ್ಟ ಪದಗಳಿಂದ ಬೈಯ್ಯುವುದು, ಸಿಕ್ಕಸಿಕ್ಕದರಲ್ಲಿ ಹೊಡೆಯುವುದನ್ನು ನಿಲ್ಲಿಸಲು ಹೇಳಿ” ಎಂದು ಹೇಳುತ್ತಾ ತನ್ನ ಮೇಲಾಗಿರುವ  ಹಲ್ಲೆಗಳನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿರಿ: ಪಠ್ಯವಿವಾದ ಡೈವರ್ಟ್ ಮಾಡಲು ಯತ್ನ: ಬಿಜೆಪಿಗೆ ತಿರುಗುಬಾಣವಾದ ಚಡ್ಡಿ ಕಳಿಸುವ ಅಭಿಯಾನ

“ನಾವಿಬ್ಬರೂ ತುಂಬಾ ಪ್ರತಿಸಿದ್ದೆವು. ನನಗೆ 18 ವರ್ಷ ತುಂಬಿದ ನಂತರ ಮದುವೆಯಾಗಿ ಜೀವನದಲ್ಲಿ ಚೆನ್ನಾಗಿರಬೇಕು ಎಂದು ನೂರೆಂದು ಆಸೆ ಕಟ್ಟಿದ್ದೆವು. ಆದರೆ ಅದು ಸಾಧ್ಯವಾಗಲೂ ಯಾರೂ ಬಿಡಲಿಲ್ಲ…” ಎಂದು ಪತ್ರದಲ್ಲಿ ಬರೆದುಕೊಂಡಿದ್ದಾರೆ.

ವೈರಲ್‌ ಆಗುತ್ತಿರುವ ಪತ್ರದ ಕುರಿತು ಮಾಹಿತಿ ನೀಡಿದ ಪಿರಿಯಾಪಟ್ಟಣ ಪೊಲೀಸ್ ಅಧಿಕಾರಿ ಕುಮಾರ್‌, “ಇದು ಡೆತ್‌ ನೋಟ್‌ ಏನಲ್ಲ. ಇದು ಪತ್ರವಷ್ಟೇ. ಈ ಪತ್ರವನ್ನು ಶಾಲಿನಿ ಬರೆದು ತನಗೆ ತಲುಪಿಸಿರುವುದಾಗಿ ಹುಡುಗ ಹೇಳುತ್ತಿದ್ದಾರೆ. ಆದರೆ ಅದು ಶಾಲಿನಿಯೇ ಬರೆದದ್ದೋ, ಬೇರೆ ಯಾರಾದರೂ ಬರೆದದ್ದೋ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. ಕೊಲೆಯಾಗಿರುವ ಯುವತಿಯ ಕೈಬರಹವನ್ನು ಪರಿಶೀಲಿಸಬೇಕಿದೆ.  ತನ್ನೊಂದಿಗೆ ಶಾಲಿಗೆ ಈ ಕುರಿತು ಮಾತನಾಡಿದ್ದಳು ಎಂದು ಸಿಡಿಯೊಂದನ್ನು ಪೊಲೀಸರಿಗೆ ಮಂಜು ನೀಡಿದ್ದಾರೆ. ತನಿಖೆ ಮುಂದುವರಿದಿದೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...