Homeಕರ್ನಾಟಕಮರ್ಯಾದೆಗೇಡು ಹತ್ಯೆ: ಸಾವಿನ ಕುರಿತು ಮೊದಲೇ ಬರೆದಿದ್ದ ಯುವತಿ; ಪತ್ರದಲ್ಲೇನಿದೆ?

ಮರ್ಯಾದೆಗೇಡು ಹತ್ಯೆ: ಸಾವಿನ ಕುರಿತು ಮೊದಲೇ ಬರೆದಿದ್ದ ಯುವತಿ; ಪತ್ರದಲ್ಲೇನಿದೆ?

- Advertisement -
- Advertisement -

ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಮರ್ಯಾದೆಗೇಡು ಹತ್ಯೆಗೊಳಗಾದ ಯುವತಿ, ತನ್ನ ಪೋಷಕರ ವಿರುದ್ಧ ಬೇಸರ ವ್ಯಕ್ತಪಡಿಸಿ ಸಾವಿಗೂ ಮುನ್ನ ಬರೆದಿದ್ದರು ಎನ್ನಲಾದ ಮೂರು ಪುಟದ ಪತ್ರ ಲಭ್ಯವಾಗಿದೆ.

ಪಿರಿಯಾಪಟ್ಟಣದ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಒಕ್ಕಲಿಗ ಸಮುದಾಯಕ್ಕೆ ಸೇರಿದ ಶಾಲಿನಿ (17), ಪಕ್ಕದ ಮೆಳ್ಳಹಳ್ಳಿ ಗ್ರಾಮದ ದಲಿತ ಸಮುದಾಯದ ಮಂಜು ಎಂಬ ಹುಡುಗನನ್ನು ಪ್ರೀತಿಸುತ್ತಿದ್ದರು. ಆದರೆ ಈ ಸಂಬಂಧಕ್ಕೆ ಹುಡುಗಿಯ ಕುಟುಂಬವು ತೀವ್ರವಾಗಿ ವಿರೋಧಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯುವತಿಯ ಕೊಲೆ ಮಾಡುವ ಮಟ್ಟಕ್ಕೆ ಪೋಷಕರು ಹೊರಟರು. ಯುವತಿಯನ್ನು ಪ್ರೀತಿಸುತ್ತಿದ್ದ ಯುವಕನಿಂದ ಕೆಲವು ಮಾಹಿತಿಗಳನ್ನು ಪೊಲೀಸರು ಕಲೆಹಾಕಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಾಹಿತಿಗಳನ್ನು ಯುವಕ ನೀಡುತ್ತಿದ್ದು, ಶಾಲಿನಿ ಬರೆದಿದ್ದಳು ಎನ್ನಲಾದ ಪತ್ರ ಹಾಗೂ ಆಕೆಯ ಕಾಲ್‌ರೆಕಾರ್ಡ್‌‌ಗಳನ್ನು ಪೊಲೀಸರಿಗೆ ನೀಡಿದ್ದಾನೆ.

ಪತ್ರದಲ್ಲಿ ಏನಿದೆ?

ಶಾಲಿನಿ ತನ್ನ ಸಾವಿನ ಕುರಿತು ಮೊದಲೇ ಊಹಿಸಿರುವುದು ಈ ಪತ್ರದಿಂದ ತಿಳಿದುಬರುತ್ತದೆ. ತನಗಾಗಿರುವ ಹಿಂಸೆಯ ಈ ಪತ್ರ ಮುಖೇನ ಪೊಲೀಸರಿಗೆ ತಿಳಿಸುವ ಯತ್ನವನ್ನು ಶಾಲಿನಿ ಮಾಡಿದ್ದಾರೆ.

“ನನ್ನ ಜೀವನದಲ್ಲಿ ಜಿಗುಪ್ಸೆ ಬರುವಂತೆ ಕೆಲವು ವ್ಯಕ್ತಿಗಳು ನಡೆದುಕೊಂಡಿದ್ದಾರೆ. ಆದ್ದರಿಂದ ನನ್ನ ಜೀವನವನ್ನು ಇಲ್ಲಿಗೆ ಮುಗಿಸಲು ತೀರ್ಮಾನಿಸಿದ್ದೇನೆ. ನನ್ನ ತಂದೆ ಸುರೇಶ್‌, ತಾಯಿ ಬೇಬಿ, ಪಕ್ಕದ ಊರಿನ ನಿವಾಸಿಗಳಾದ ಸಂಗೀತ, ಗಣೇಶ್‌ ದಂಪತಿ, ಅದೇ ಊರಿನ ಮತ್ತೊಬ್ಬ ನಿವಾಸಿ ಪ್ರತಾಪ್‌ ಮತ್ತು ನನ್ನ ಚಿಕ್ಕಪ್ಪಂದಿರಾದ ಅರುಣಾ, ರವಿ ನನ್ನ ಸಾವಿಗೆ ಕಾರಣರು” ಎಂದು ಪತ್ರದಲ್ಲಿ ಬರೆದಿದ್ದಾರೆ.

“ಕಾನೂನಿನ ಪ್ರಕಾರ ನಮಗೆ ವಯಸ್ಸಾದ ಬಳಿಕ ಮದುವೆಯಾಗಲು ಇಚ್ಚಿಸಿದ್ದೆವು. ಆದರೆ ಮಂಜು (ಪ್ರೀತಿಸಿದ ಹುಡುಗ) ಬೇರೆ ಜಾತಿಯವನೆಂದು ಮನೆಯವರು ಕಿರುಕುಳ ಕೊಟ್ಟಿದ್ದಾರೆ. ಕೆಟ್ಟ ಮಾತುಗಳನ್ನು ನನ್ನ ತಂದೆ ತಾಯಿಗಳು ಆಡಿದ್ದಾರೆ. ಈ ಕೆಟ್ಟ ಪದಗಳನ್ನು ನನ್ನಿಂದ ಅರಗಿಸಿಕೊಳ್ಳಲು ಆಗುತ್ತಿಲ್ಲ. ನನ್ನ ಪೋಷಕರಿಗೆ ಸರಿಯಾಗಿ ತಿಳಿಹೇಳಿ. ನಾನು ಮರಣ ಹೊಂದಿದ ಬಳಿಕ ನನ್ನ ತಂದೆ ತಾಯಿ ನಾನು ಪ್ರೀತಿಸಿದ ಹುಡುಗನಿಗೆ ತೊಂದರೆ ಕೊಟ್ಟರೆ ನನ್ನ ಪೋಷಕರಿಗೆ ಶಿಕ್ಷೆ ಕೊಡಿ. ಮುಂದಿನ ಜನ್ಮ ಇದ್ದರೆ ನಿಮ್ಮಂಥವರ ಮಗಳಾಗಿ ಹುಟ್ಟುತ್ತೇನೆ” ಎಂದು ಶಾಲಿನಿ ಪೊಲೀಸರಿಗೆ ತಿಳಿಸಿದ್ದಾರೆ.

“ಜಾತಿ ಎಂಬ ಕೆಟ್ಟ ಪಿಡುಗು ನನ್ನನ್ನು ಬಲಿ ತೆಗೆದುಕೊಂಡಿದೆ… ಬೇರೆಯವರ ಮಾತು ಕೇಳಿ ಮಕ್ಕಳಿಗೆ ಕೆಟ್ಟ ಪದಗಳಿಂದ ಬೈಯ್ಯುವುದು, ಸಿಕ್ಕಸಿಕ್ಕದರಲ್ಲಿ ಹೊಡೆಯುವುದನ್ನು ನಿಲ್ಲಿಸಲು ಹೇಳಿ” ಎಂದು ಹೇಳುತ್ತಾ ತನ್ನ ಮೇಲಾಗಿರುವ  ಹಲ್ಲೆಗಳನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿರಿ: ಪಠ್ಯವಿವಾದ ಡೈವರ್ಟ್ ಮಾಡಲು ಯತ್ನ: ಬಿಜೆಪಿಗೆ ತಿರುಗುಬಾಣವಾದ ಚಡ್ಡಿ ಕಳಿಸುವ ಅಭಿಯಾನ

“ನಾವಿಬ್ಬರೂ ತುಂಬಾ ಪ್ರತಿಸಿದ್ದೆವು. ನನಗೆ 18 ವರ್ಷ ತುಂಬಿದ ನಂತರ ಮದುವೆಯಾಗಿ ಜೀವನದಲ್ಲಿ ಚೆನ್ನಾಗಿರಬೇಕು ಎಂದು ನೂರೆಂದು ಆಸೆ ಕಟ್ಟಿದ್ದೆವು. ಆದರೆ ಅದು ಸಾಧ್ಯವಾಗಲೂ ಯಾರೂ ಬಿಡಲಿಲ್ಲ…” ಎಂದು ಪತ್ರದಲ್ಲಿ ಬರೆದುಕೊಂಡಿದ್ದಾರೆ.

ವೈರಲ್‌ ಆಗುತ್ತಿರುವ ಪತ್ರದ ಕುರಿತು ಮಾಹಿತಿ ನೀಡಿದ ಪಿರಿಯಾಪಟ್ಟಣ ಪೊಲೀಸ್ ಅಧಿಕಾರಿ ಕುಮಾರ್‌, “ಇದು ಡೆತ್‌ ನೋಟ್‌ ಏನಲ್ಲ. ಇದು ಪತ್ರವಷ್ಟೇ. ಈ ಪತ್ರವನ್ನು ಶಾಲಿನಿ ಬರೆದು ತನಗೆ ತಲುಪಿಸಿರುವುದಾಗಿ ಹುಡುಗ ಹೇಳುತ್ತಿದ್ದಾರೆ. ಆದರೆ ಅದು ಶಾಲಿನಿಯೇ ಬರೆದದ್ದೋ, ಬೇರೆ ಯಾರಾದರೂ ಬರೆದದ್ದೋ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. ಕೊಲೆಯಾಗಿರುವ ಯುವತಿಯ ಕೈಬರಹವನ್ನು ಪರಿಶೀಲಿಸಬೇಕಿದೆ.  ತನ್ನೊಂದಿಗೆ ಶಾಲಿಗೆ ಈ ಕುರಿತು ಮಾತನಾಡಿದ್ದಳು ಎಂದು ಸಿಡಿಯೊಂದನ್ನು ಪೊಲೀಸರಿಗೆ ಮಂಜು ನೀಡಿದ್ದಾರೆ. ತನಿಖೆ ಮುಂದುವರಿದಿದೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...