Homeಕರ್ನಾಟಕಮರ್ಯಾದೆಗೇಡು ಹತ್ಯೆ: ಸಾವಿನ ಕುರಿತು ಮೊದಲೇ ಬರೆದಿದ್ದ ಯುವತಿ; ಪತ್ರದಲ್ಲೇನಿದೆ?

ಮರ್ಯಾದೆಗೇಡು ಹತ್ಯೆ: ಸಾವಿನ ಕುರಿತು ಮೊದಲೇ ಬರೆದಿದ್ದ ಯುವತಿ; ಪತ್ರದಲ್ಲೇನಿದೆ?

- Advertisement -
- Advertisement -

ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಮರ್ಯಾದೆಗೇಡು ಹತ್ಯೆಗೊಳಗಾದ ಯುವತಿ, ತನ್ನ ಪೋಷಕರ ವಿರುದ್ಧ ಬೇಸರ ವ್ಯಕ್ತಪಡಿಸಿ ಸಾವಿಗೂ ಮುನ್ನ ಬರೆದಿದ್ದರು ಎನ್ನಲಾದ ಮೂರು ಪುಟದ ಪತ್ರ ಲಭ್ಯವಾಗಿದೆ.

ಪಿರಿಯಾಪಟ್ಟಣದ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಒಕ್ಕಲಿಗ ಸಮುದಾಯಕ್ಕೆ ಸೇರಿದ ಶಾಲಿನಿ (17), ಪಕ್ಕದ ಮೆಳ್ಳಹಳ್ಳಿ ಗ್ರಾಮದ ದಲಿತ ಸಮುದಾಯದ ಮಂಜು ಎಂಬ ಹುಡುಗನನ್ನು ಪ್ರೀತಿಸುತ್ತಿದ್ದರು. ಆದರೆ ಈ ಸಂಬಂಧಕ್ಕೆ ಹುಡುಗಿಯ ಕುಟುಂಬವು ತೀವ್ರವಾಗಿ ವಿರೋಧಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯುವತಿಯ ಕೊಲೆ ಮಾಡುವ ಮಟ್ಟಕ್ಕೆ ಪೋಷಕರು ಹೊರಟರು. ಯುವತಿಯನ್ನು ಪ್ರೀತಿಸುತ್ತಿದ್ದ ಯುವಕನಿಂದ ಕೆಲವು ಮಾಹಿತಿಗಳನ್ನು ಪೊಲೀಸರು ಕಲೆಹಾಕಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಾಹಿತಿಗಳನ್ನು ಯುವಕ ನೀಡುತ್ತಿದ್ದು, ಶಾಲಿನಿ ಬರೆದಿದ್ದಳು ಎನ್ನಲಾದ ಪತ್ರ ಹಾಗೂ ಆಕೆಯ ಕಾಲ್‌ರೆಕಾರ್ಡ್‌‌ಗಳನ್ನು ಪೊಲೀಸರಿಗೆ ನೀಡಿದ್ದಾನೆ.

ಪತ್ರದಲ್ಲಿ ಏನಿದೆ?

ಶಾಲಿನಿ ತನ್ನ ಸಾವಿನ ಕುರಿತು ಮೊದಲೇ ಊಹಿಸಿರುವುದು ಈ ಪತ್ರದಿಂದ ತಿಳಿದುಬರುತ್ತದೆ. ತನಗಾಗಿರುವ ಹಿಂಸೆಯ ಈ ಪತ್ರ ಮುಖೇನ ಪೊಲೀಸರಿಗೆ ತಿಳಿಸುವ ಯತ್ನವನ್ನು ಶಾಲಿನಿ ಮಾಡಿದ್ದಾರೆ.

“ನನ್ನ ಜೀವನದಲ್ಲಿ ಜಿಗುಪ್ಸೆ ಬರುವಂತೆ ಕೆಲವು ವ್ಯಕ್ತಿಗಳು ನಡೆದುಕೊಂಡಿದ್ದಾರೆ. ಆದ್ದರಿಂದ ನನ್ನ ಜೀವನವನ್ನು ಇಲ್ಲಿಗೆ ಮುಗಿಸಲು ತೀರ್ಮಾನಿಸಿದ್ದೇನೆ. ನನ್ನ ತಂದೆ ಸುರೇಶ್‌, ತಾಯಿ ಬೇಬಿ, ಪಕ್ಕದ ಊರಿನ ನಿವಾಸಿಗಳಾದ ಸಂಗೀತ, ಗಣೇಶ್‌ ದಂಪತಿ, ಅದೇ ಊರಿನ ಮತ್ತೊಬ್ಬ ನಿವಾಸಿ ಪ್ರತಾಪ್‌ ಮತ್ತು ನನ್ನ ಚಿಕ್ಕಪ್ಪಂದಿರಾದ ಅರುಣಾ, ರವಿ ನನ್ನ ಸಾವಿಗೆ ಕಾರಣರು” ಎಂದು ಪತ್ರದಲ್ಲಿ ಬರೆದಿದ್ದಾರೆ.

“ಕಾನೂನಿನ ಪ್ರಕಾರ ನಮಗೆ ವಯಸ್ಸಾದ ಬಳಿಕ ಮದುವೆಯಾಗಲು ಇಚ್ಚಿಸಿದ್ದೆವು. ಆದರೆ ಮಂಜು (ಪ್ರೀತಿಸಿದ ಹುಡುಗ) ಬೇರೆ ಜಾತಿಯವನೆಂದು ಮನೆಯವರು ಕಿರುಕುಳ ಕೊಟ್ಟಿದ್ದಾರೆ. ಕೆಟ್ಟ ಮಾತುಗಳನ್ನು ನನ್ನ ತಂದೆ ತಾಯಿಗಳು ಆಡಿದ್ದಾರೆ. ಈ ಕೆಟ್ಟ ಪದಗಳನ್ನು ನನ್ನಿಂದ ಅರಗಿಸಿಕೊಳ್ಳಲು ಆಗುತ್ತಿಲ್ಲ. ನನ್ನ ಪೋಷಕರಿಗೆ ಸರಿಯಾಗಿ ತಿಳಿಹೇಳಿ. ನಾನು ಮರಣ ಹೊಂದಿದ ಬಳಿಕ ನನ್ನ ತಂದೆ ತಾಯಿ ನಾನು ಪ್ರೀತಿಸಿದ ಹುಡುಗನಿಗೆ ತೊಂದರೆ ಕೊಟ್ಟರೆ ನನ್ನ ಪೋಷಕರಿಗೆ ಶಿಕ್ಷೆ ಕೊಡಿ. ಮುಂದಿನ ಜನ್ಮ ಇದ್ದರೆ ನಿಮ್ಮಂಥವರ ಮಗಳಾಗಿ ಹುಟ್ಟುತ್ತೇನೆ” ಎಂದು ಶಾಲಿನಿ ಪೊಲೀಸರಿಗೆ ತಿಳಿಸಿದ್ದಾರೆ.

“ಜಾತಿ ಎಂಬ ಕೆಟ್ಟ ಪಿಡುಗು ನನ್ನನ್ನು ಬಲಿ ತೆಗೆದುಕೊಂಡಿದೆ… ಬೇರೆಯವರ ಮಾತು ಕೇಳಿ ಮಕ್ಕಳಿಗೆ ಕೆಟ್ಟ ಪದಗಳಿಂದ ಬೈಯ್ಯುವುದು, ಸಿಕ್ಕಸಿಕ್ಕದರಲ್ಲಿ ಹೊಡೆಯುವುದನ್ನು ನಿಲ್ಲಿಸಲು ಹೇಳಿ” ಎಂದು ಹೇಳುತ್ತಾ ತನ್ನ ಮೇಲಾಗಿರುವ  ಹಲ್ಲೆಗಳನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿರಿ: ಪಠ್ಯವಿವಾದ ಡೈವರ್ಟ್ ಮಾಡಲು ಯತ್ನ: ಬಿಜೆಪಿಗೆ ತಿರುಗುಬಾಣವಾದ ಚಡ್ಡಿ ಕಳಿಸುವ ಅಭಿಯಾನ

“ನಾವಿಬ್ಬರೂ ತುಂಬಾ ಪ್ರತಿಸಿದ್ದೆವು. ನನಗೆ 18 ವರ್ಷ ತುಂಬಿದ ನಂತರ ಮದುವೆಯಾಗಿ ಜೀವನದಲ್ಲಿ ಚೆನ್ನಾಗಿರಬೇಕು ಎಂದು ನೂರೆಂದು ಆಸೆ ಕಟ್ಟಿದ್ದೆವು. ಆದರೆ ಅದು ಸಾಧ್ಯವಾಗಲೂ ಯಾರೂ ಬಿಡಲಿಲ್ಲ…” ಎಂದು ಪತ್ರದಲ್ಲಿ ಬರೆದುಕೊಂಡಿದ್ದಾರೆ.

ವೈರಲ್‌ ಆಗುತ್ತಿರುವ ಪತ್ರದ ಕುರಿತು ಮಾಹಿತಿ ನೀಡಿದ ಪಿರಿಯಾಪಟ್ಟಣ ಪೊಲೀಸ್ ಅಧಿಕಾರಿ ಕುಮಾರ್‌, “ಇದು ಡೆತ್‌ ನೋಟ್‌ ಏನಲ್ಲ. ಇದು ಪತ್ರವಷ್ಟೇ. ಈ ಪತ್ರವನ್ನು ಶಾಲಿನಿ ಬರೆದು ತನಗೆ ತಲುಪಿಸಿರುವುದಾಗಿ ಹುಡುಗ ಹೇಳುತ್ತಿದ್ದಾರೆ. ಆದರೆ ಅದು ಶಾಲಿನಿಯೇ ಬರೆದದ್ದೋ, ಬೇರೆ ಯಾರಾದರೂ ಬರೆದದ್ದೋ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. ಕೊಲೆಯಾಗಿರುವ ಯುವತಿಯ ಕೈಬರಹವನ್ನು ಪರಿಶೀಲಿಸಬೇಕಿದೆ.  ತನ್ನೊಂದಿಗೆ ಶಾಲಿಗೆ ಈ ಕುರಿತು ಮಾತನಾಡಿದ್ದಳು ಎಂದು ಸಿಡಿಯೊಂದನ್ನು ಪೊಲೀಸರಿಗೆ ಮಂಜು ನೀಡಿದ್ದಾರೆ. ತನಿಖೆ ಮುಂದುವರಿದಿದೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...