Homeಮುಖಪುಟಯುಪಿ ಪೊಲೀಸರ ಸಮ್ಮುಖದಲ್ಲೇ ಕೊಲೆ ಆರೋಪಿಯ ಹತ್ಯೆಗೈದ ಗುಂಪು

ಯುಪಿ ಪೊಲೀಸರ ಸಮ್ಮುಖದಲ್ಲೇ ಕೊಲೆ ಆರೋಪಿಯ ಹತ್ಯೆಗೈದ ಗುಂಪು

ಗಲಭೆ ನಡೆದ ಸ್ಥಳದಲ್ಲಿ ಹಲವಾರು ಪೊಲೀಸರು ಹಾಜರಿದ್ದರು. ಕೆಲವರು ಮಾತ್ರ ದಾಳಿ ತಡೆಯಲು ಪ್ರಯತ್ನಿಸಿದ್ದಾರೆ.

- Advertisement -
- Advertisement -

ಶಾಲಾ ಶಿಕ್ಷಕನನ್ನು ಗುಂಡಿಕ್ಕಿ ಕೊಂದ ವ್ಯಕ್ತಿಯೊಬ್ಬನನ್ನು ಜನರು ಪೊಲೀಸರ ಸಮ್ಮುಖದಲ್ಲಿಯೇ ಥಳಿಸಿ, ಕೊಲೆ ಮಾಡಿರುವ ಘಟನೆ ಪೂರ್ವ ಉತ್ತರ ಪ್ರದೇಶದ ಕುಶಿನಗರದಲ್ಲಿ ನಡೆದಿದೆ. ಜನರು ಕೋಲು, ಬಡಿಗೆಗಳಿಂದ ವ್ಯಕ್ತಿಗೆ ಹೊಡೆಯುತ್ತಿರುವುದು, ಸುತ್ತಲೂ ಪೊಲೀಸರು ನಿಂತಿರುವ ವಿಡಿಯೋ ವೈರಲ್ ಆಗಿದೆ.

ಗಲಭೆ ನಡೆದ ಸ್ಥಳದಲ್ಲಿ ಹಲವಾರು ಪೊಲೀಸರು ಹಾಜರಿದ್ದರು. ಕೆಲವರು ಮಾತ್ರ ದಾಳಿ ತಡೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಆ ವ್ಯಕ್ತಿ ನೆಲಕ್ಕೆ ಬಿದ್ದರೂ ಸಹ ಜನ ಮಾತ್ರ ಹೊಡೆಯುವುದನ್ನು ನಿಲ್ಲಿಸಲಿಲ್ಲ. ವ್ಯಕ್ತಿಯ ತಲೆಯಿಂದ ರಕ್ತ ಬರುವವರೆಗೂ ಹೊಡೆದು ಸಾಯಿಸಿದ್ದಾರೆ.

ಪೊಲೀಸರ ಪ್ರಕಾರ ಮೃತ ಆರೋಪಿ ಗೋರಖ್‌ಪುರದವರು. ಆತನ ಮೆಲೆ ತನ್ನ ತಂದೆಯ ಬಂದೂಕನ್ನು ಬಳಸಿ ಶಿಕ್ಷಕನನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂಬ ಆರೋಪವಿದೆ. ಈತ ಸುಧೀರ್ ಕುಮಾರ್ ಸಿಂಗ್ ಎಂಬುವರನ್ನು ಭೇಟಿಯಾಗಲು ಬಂದಿದ್ದ. ತಾನು ಸಿಂಗ್ ಅವರ ಹಿರಿಯ ಸಹೋದರನ ಸ್ನೇಹಿತ ಎಂದು ಮನೆಯಲ್ಲಿ ಕುಳಿತು ಚಹಾ ಸೇವಿಸಿದ್ದ. ಸಿಂಗ್ ಸ್ನಾನ ಮಾಡಿ ಹೊರಗೆ ಬರುತ್ತಿದ್ದಂತೆ ಅವರ ಮೇಲೆ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಾನೆ ಎಂದು ಕುಶಿನಗರ ಪೊಲೀಸ್ ಅಧೀಕ್ಷಕ ವಿನೋದ್ ಕುಮಾರ್ ಮಿಶ್ರಾ ಹೇಳಿದರು.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

PC: NDTV.com

ಘಟನೆಯ ನಂತರ ಆರೋಪಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ ಆದರೆ ಮನೆಯ ಹೊರಗೆ ಜನಸಮೂಹವಿದ್ದರಿಂದ ಆತ ಟೆರೇಸ್ ಮೇಲೆ ಹತ್ತಿದ್ದನು. ತನ್ನ ಬಳಿ ಇದ್ದ ಪಿಸ್ತೂಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ. ಆಗ ಸ್ಥಳೀಯರು ಪೊಲೀಸರನ್ನು ಕರೆದರು. ಪೊಲೀಸರು ಶರಣಾಗುವಂತೆ ಹೇಳಿದರೂ, ಕೆಳಗಿಳಿದು ಕೋಣೆಯಲ್ಲಿ ಬಚ್ಚಿಟ್ಟುಕೊಳ್ಳಲು ಪ್ರಯತ್ನಿಸಿದ, ತಕ್ಷಣ ಜನರ ಗುಂಪೊಂದು ದಾಳಿ ಮಾಡಿ ಆತನನ್ನು ಪೊಲೀಸರು ತಲುಪುವ ಮುನ್ನವೇ ಕೊಂದರು ಎಂದು ಮಿಶ್ರಾ ಹೇಳಿದ್ದಾರೆ.

ಆದರೆ ಸ್ಥಳೀಯರ ಪ್ರಕಾರ  ಶಿಕ್ಷಕರ ಮೇಲೆ ಗುಂಡು ಹಾರಿಸಿದ ನಂತರ, ಆತ ಮನೆಯ ಟೆರೇಸ್ ಹತ್ತಿ ಗುಂಡು ಹಾರಿಸಿದನು. ಪೊಲೀಸರು ಬಂದಾಗ, ಶರಣಾಗತಿಯಲ್ಲಿ ಕೈ ಎತ್ತಿದ್ದ.  ಪೊಲೀಸರು ಅವರನ್ನು ಕೆಳಕ್ಕೆ ಇಳಿಸಿ ಪೊಲೀಸ್ ವಾಹನದಲ್ಲಿ ಕೂರಿಸುತ್ತಿದ್ದಾಗ ಗ್ರಾಮಸ್ಥರು ಆತನನ್ನು ಎಳೆದುಕೊಂಡು ಹೋಗಿ ಹಲ್ಲೆ ಮಾಡಿದರು ಎಂದಿದ್ದಾರೆ.

ತಮ್ಮ ಮುಂದೆಯೇ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ದಾಳಿ ನಡೆಯುತ್ತಿದ್ದರು ಪೊಲೀಸರು ಏನು ಮಾಡದೆ ಇದ್ದರು. ಆದರೆ ಹೇಳಿಕೆಯಲ್ಲಿ ಮಾತ್ರ ನಾವು ತಲುಪುವ ಮುನ್ನವೇ ಘಟನೆ ನಡೆದುಹೋಯಿತು ಎಂದು ತಮ್ಮದೇನು ತಪ್ಪಿಲ್ಲ ಎಂದು ಸಾಬೀತುಪಡಿಸಲು ಪ್ರಯತ್ನಿಸಿದ್ದಾರೆ. ಆದರೆ ಘಟನೆ ನಂತರ ಸಿಕ್ಕಿರುವ ವಿಡಿಯೋದಲ್ಲಿ ಪೊಲೀಸರಿರುವುದು, ಅವರ ಮುಂದೆಯೇ ಹಲ್ಲೆ ನಡೆಯುತ್ತಿರುವುದು ಕಾಣಬಹುದಾಗಿದೆ.


ಇದನ್ನೂ ಓದಿ: ವಿಎಚ್‌ಪಿ ಸದಸ್ಯನಿಗೆ ಬೆದರಿಕೆ ಕರೆ ಪ್ರಕರಣ: ಯುಪಿ ಪೊಲೀಸರಿಂದ ಮುಸ್ಲಿಂ ವ್ಯಕ್ತಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...