Homeಮುಖಪುಟಯುಪಿ ಪೊಲೀಸರ ಸಮ್ಮುಖದಲ್ಲೇ ಕೊಲೆ ಆರೋಪಿಯ ಹತ್ಯೆಗೈದ ಗುಂಪು

ಯುಪಿ ಪೊಲೀಸರ ಸಮ್ಮುಖದಲ್ಲೇ ಕೊಲೆ ಆರೋಪಿಯ ಹತ್ಯೆಗೈದ ಗುಂಪು

ಗಲಭೆ ನಡೆದ ಸ್ಥಳದಲ್ಲಿ ಹಲವಾರು ಪೊಲೀಸರು ಹಾಜರಿದ್ದರು. ಕೆಲವರು ಮಾತ್ರ ದಾಳಿ ತಡೆಯಲು ಪ್ರಯತ್ನಿಸಿದ್ದಾರೆ.

- Advertisement -
- Advertisement -

ಶಾಲಾ ಶಿಕ್ಷಕನನ್ನು ಗುಂಡಿಕ್ಕಿ ಕೊಂದ ವ್ಯಕ್ತಿಯೊಬ್ಬನನ್ನು ಜನರು ಪೊಲೀಸರ ಸಮ್ಮುಖದಲ್ಲಿಯೇ ಥಳಿಸಿ, ಕೊಲೆ ಮಾಡಿರುವ ಘಟನೆ ಪೂರ್ವ ಉತ್ತರ ಪ್ರದೇಶದ ಕುಶಿನಗರದಲ್ಲಿ ನಡೆದಿದೆ. ಜನರು ಕೋಲು, ಬಡಿಗೆಗಳಿಂದ ವ್ಯಕ್ತಿಗೆ ಹೊಡೆಯುತ್ತಿರುವುದು, ಸುತ್ತಲೂ ಪೊಲೀಸರು ನಿಂತಿರುವ ವಿಡಿಯೋ ವೈರಲ್ ಆಗಿದೆ.

ಗಲಭೆ ನಡೆದ ಸ್ಥಳದಲ್ಲಿ ಹಲವಾರು ಪೊಲೀಸರು ಹಾಜರಿದ್ದರು. ಕೆಲವರು ಮಾತ್ರ ದಾಳಿ ತಡೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಆ ವ್ಯಕ್ತಿ ನೆಲಕ್ಕೆ ಬಿದ್ದರೂ ಸಹ ಜನ ಮಾತ್ರ ಹೊಡೆಯುವುದನ್ನು ನಿಲ್ಲಿಸಲಿಲ್ಲ. ವ್ಯಕ್ತಿಯ ತಲೆಯಿಂದ ರಕ್ತ ಬರುವವರೆಗೂ ಹೊಡೆದು ಸಾಯಿಸಿದ್ದಾರೆ.

ಪೊಲೀಸರ ಪ್ರಕಾರ ಮೃತ ಆರೋಪಿ ಗೋರಖ್‌ಪುರದವರು. ಆತನ ಮೆಲೆ ತನ್ನ ತಂದೆಯ ಬಂದೂಕನ್ನು ಬಳಸಿ ಶಿಕ್ಷಕನನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂಬ ಆರೋಪವಿದೆ. ಈತ ಸುಧೀರ್ ಕುಮಾರ್ ಸಿಂಗ್ ಎಂಬುವರನ್ನು ಭೇಟಿಯಾಗಲು ಬಂದಿದ್ದ. ತಾನು ಸಿಂಗ್ ಅವರ ಹಿರಿಯ ಸಹೋದರನ ಸ್ನೇಹಿತ ಎಂದು ಮನೆಯಲ್ಲಿ ಕುಳಿತು ಚಹಾ ಸೇವಿಸಿದ್ದ. ಸಿಂಗ್ ಸ್ನಾನ ಮಾಡಿ ಹೊರಗೆ ಬರುತ್ತಿದ್ದಂತೆ ಅವರ ಮೇಲೆ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಾನೆ ಎಂದು ಕುಶಿನಗರ ಪೊಲೀಸ್ ಅಧೀಕ್ಷಕ ವಿನೋದ್ ಕುಮಾರ್ ಮಿಶ್ರಾ ಹೇಳಿದರು.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

PC: NDTV.com

ಘಟನೆಯ ನಂತರ ಆರೋಪಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ ಆದರೆ ಮನೆಯ ಹೊರಗೆ ಜನಸಮೂಹವಿದ್ದರಿಂದ ಆತ ಟೆರೇಸ್ ಮೇಲೆ ಹತ್ತಿದ್ದನು. ತನ್ನ ಬಳಿ ಇದ್ದ ಪಿಸ್ತೂಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ. ಆಗ ಸ್ಥಳೀಯರು ಪೊಲೀಸರನ್ನು ಕರೆದರು. ಪೊಲೀಸರು ಶರಣಾಗುವಂತೆ ಹೇಳಿದರೂ, ಕೆಳಗಿಳಿದು ಕೋಣೆಯಲ್ಲಿ ಬಚ್ಚಿಟ್ಟುಕೊಳ್ಳಲು ಪ್ರಯತ್ನಿಸಿದ, ತಕ್ಷಣ ಜನರ ಗುಂಪೊಂದು ದಾಳಿ ಮಾಡಿ ಆತನನ್ನು ಪೊಲೀಸರು ತಲುಪುವ ಮುನ್ನವೇ ಕೊಂದರು ಎಂದು ಮಿಶ್ರಾ ಹೇಳಿದ್ದಾರೆ.

ಆದರೆ ಸ್ಥಳೀಯರ ಪ್ರಕಾರ  ಶಿಕ್ಷಕರ ಮೇಲೆ ಗುಂಡು ಹಾರಿಸಿದ ನಂತರ, ಆತ ಮನೆಯ ಟೆರೇಸ್ ಹತ್ತಿ ಗುಂಡು ಹಾರಿಸಿದನು. ಪೊಲೀಸರು ಬಂದಾಗ, ಶರಣಾಗತಿಯಲ್ಲಿ ಕೈ ಎತ್ತಿದ್ದ.  ಪೊಲೀಸರು ಅವರನ್ನು ಕೆಳಕ್ಕೆ ಇಳಿಸಿ ಪೊಲೀಸ್ ವಾಹನದಲ್ಲಿ ಕೂರಿಸುತ್ತಿದ್ದಾಗ ಗ್ರಾಮಸ್ಥರು ಆತನನ್ನು ಎಳೆದುಕೊಂಡು ಹೋಗಿ ಹಲ್ಲೆ ಮಾಡಿದರು ಎಂದಿದ್ದಾರೆ.

ತಮ್ಮ ಮುಂದೆಯೇ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ದಾಳಿ ನಡೆಯುತ್ತಿದ್ದರು ಪೊಲೀಸರು ಏನು ಮಾಡದೆ ಇದ್ದರು. ಆದರೆ ಹೇಳಿಕೆಯಲ್ಲಿ ಮಾತ್ರ ನಾವು ತಲುಪುವ ಮುನ್ನವೇ ಘಟನೆ ನಡೆದುಹೋಯಿತು ಎಂದು ತಮ್ಮದೇನು ತಪ್ಪಿಲ್ಲ ಎಂದು ಸಾಬೀತುಪಡಿಸಲು ಪ್ರಯತ್ನಿಸಿದ್ದಾರೆ. ಆದರೆ ಘಟನೆ ನಂತರ ಸಿಕ್ಕಿರುವ ವಿಡಿಯೋದಲ್ಲಿ ಪೊಲೀಸರಿರುವುದು, ಅವರ ಮುಂದೆಯೇ ಹಲ್ಲೆ ನಡೆಯುತ್ತಿರುವುದು ಕಾಣಬಹುದಾಗಿದೆ.


ಇದನ್ನೂ ಓದಿ: ವಿಎಚ್‌ಪಿ ಸದಸ್ಯನಿಗೆ ಬೆದರಿಕೆ ಕರೆ ಪ್ರಕರಣ: ಯುಪಿ ಪೊಲೀಸರಿಂದ ಮುಸ್ಲಿಂ ವ್ಯಕ್ತಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...