Homeಮುಖಪುಟಯುಪಿ ಪೊಲೀಸರ ಸಮ್ಮುಖದಲ್ಲೇ ಕೊಲೆ ಆರೋಪಿಯ ಹತ್ಯೆಗೈದ ಗುಂಪು

ಯುಪಿ ಪೊಲೀಸರ ಸಮ್ಮುಖದಲ್ಲೇ ಕೊಲೆ ಆರೋಪಿಯ ಹತ್ಯೆಗೈದ ಗುಂಪು

ಗಲಭೆ ನಡೆದ ಸ್ಥಳದಲ್ಲಿ ಹಲವಾರು ಪೊಲೀಸರು ಹಾಜರಿದ್ದರು. ಕೆಲವರು ಮಾತ್ರ ದಾಳಿ ತಡೆಯಲು ಪ್ರಯತ್ನಿಸಿದ್ದಾರೆ.

- Advertisement -
- Advertisement -

ಶಾಲಾ ಶಿಕ್ಷಕನನ್ನು ಗುಂಡಿಕ್ಕಿ ಕೊಂದ ವ್ಯಕ್ತಿಯೊಬ್ಬನನ್ನು ಜನರು ಪೊಲೀಸರ ಸಮ್ಮುಖದಲ್ಲಿಯೇ ಥಳಿಸಿ, ಕೊಲೆ ಮಾಡಿರುವ ಘಟನೆ ಪೂರ್ವ ಉತ್ತರ ಪ್ರದೇಶದ ಕುಶಿನಗರದಲ್ಲಿ ನಡೆದಿದೆ. ಜನರು ಕೋಲು, ಬಡಿಗೆಗಳಿಂದ ವ್ಯಕ್ತಿಗೆ ಹೊಡೆಯುತ್ತಿರುವುದು, ಸುತ್ತಲೂ ಪೊಲೀಸರು ನಿಂತಿರುವ ವಿಡಿಯೋ ವೈರಲ್ ಆಗಿದೆ.

ಗಲಭೆ ನಡೆದ ಸ್ಥಳದಲ್ಲಿ ಹಲವಾರು ಪೊಲೀಸರು ಹಾಜರಿದ್ದರು. ಕೆಲವರು ಮಾತ್ರ ದಾಳಿ ತಡೆಯಲು ಪ್ರಯತ್ನಿಸುತ್ತಿದ್ದಾರೆ. ಆದರೆ ಆ ವ್ಯಕ್ತಿ ನೆಲಕ್ಕೆ ಬಿದ್ದರೂ ಸಹ ಜನ ಮಾತ್ರ ಹೊಡೆಯುವುದನ್ನು ನಿಲ್ಲಿಸಲಿಲ್ಲ. ವ್ಯಕ್ತಿಯ ತಲೆಯಿಂದ ರಕ್ತ ಬರುವವರೆಗೂ ಹೊಡೆದು ಸಾಯಿಸಿದ್ದಾರೆ.

ಪೊಲೀಸರ ಪ್ರಕಾರ ಮೃತ ಆರೋಪಿ ಗೋರಖ್‌ಪುರದವರು. ಆತನ ಮೆಲೆ ತನ್ನ ತಂದೆಯ ಬಂದೂಕನ್ನು ಬಳಸಿ ಶಿಕ್ಷಕನನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂಬ ಆರೋಪವಿದೆ. ಈತ ಸುಧೀರ್ ಕುಮಾರ್ ಸಿಂಗ್ ಎಂಬುವರನ್ನು ಭೇಟಿಯಾಗಲು ಬಂದಿದ್ದ. ತಾನು ಸಿಂಗ್ ಅವರ ಹಿರಿಯ ಸಹೋದರನ ಸ್ನೇಹಿತ ಎಂದು ಮನೆಯಲ್ಲಿ ಕುಳಿತು ಚಹಾ ಸೇವಿಸಿದ್ದ. ಸಿಂಗ್ ಸ್ನಾನ ಮಾಡಿ ಹೊರಗೆ ಬರುತ್ತಿದ್ದಂತೆ ಅವರ ಮೇಲೆ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಾನೆ ಎಂದು ಕುಶಿನಗರ ಪೊಲೀಸ್ ಅಧೀಕ್ಷಕ ವಿನೋದ್ ಕುಮಾರ್ ಮಿಶ್ರಾ ಹೇಳಿದರು.

ಇದನ್ನೂ ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

PC: NDTV.com

ಘಟನೆಯ ನಂತರ ಆರೋಪಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ ಆದರೆ ಮನೆಯ ಹೊರಗೆ ಜನಸಮೂಹವಿದ್ದರಿಂದ ಆತ ಟೆರೇಸ್ ಮೇಲೆ ಹತ್ತಿದ್ದನು. ತನ್ನ ಬಳಿ ಇದ್ದ ಪಿಸ್ತೂಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ. ಆಗ ಸ್ಥಳೀಯರು ಪೊಲೀಸರನ್ನು ಕರೆದರು. ಪೊಲೀಸರು ಶರಣಾಗುವಂತೆ ಹೇಳಿದರೂ, ಕೆಳಗಿಳಿದು ಕೋಣೆಯಲ್ಲಿ ಬಚ್ಚಿಟ್ಟುಕೊಳ್ಳಲು ಪ್ರಯತ್ನಿಸಿದ, ತಕ್ಷಣ ಜನರ ಗುಂಪೊಂದು ದಾಳಿ ಮಾಡಿ ಆತನನ್ನು ಪೊಲೀಸರು ತಲುಪುವ ಮುನ್ನವೇ ಕೊಂದರು ಎಂದು ಮಿಶ್ರಾ ಹೇಳಿದ್ದಾರೆ.

ಆದರೆ ಸ್ಥಳೀಯರ ಪ್ರಕಾರ  ಶಿಕ್ಷಕರ ಮೇಲೆ ಗುಂಡು ಹಾರಿಸಿದ ನಂತರ, ಆತ ಮನೆಯ ಟೆರೇಸ್ ಹತ್ತಿ ಗುಂಡು ಹಾರಿಸಿದನು. ಪೊಲೀಸರು ಬಂದಾಗ, ಶರಣಾಗತಿಯಲ್ಲಿ ಕೈ ಎತ್ತಿದ್ದ.  ಪೊಲೀಸರು ಅವರನ್ನು ಕೆಳಕ್ಕೆ ಇಳಿಸಿ ಪೊಲೀಸ್ ವಾಹನದಲ್ಲಿ ಕೂರಿಸುತ್ತಿದ್ದಾಗ ಗ್ರಾಮಸ್ಥರು ಆತನನ್ನು ಎಳೆದುಕೊಂಡು ಹೋಗಿ ಹಲ್ಲೆ ಮಾಡಿದರು ಎಂದಿದ್ದಾರೆ.

ತಮ್ಮ ಮುಂದೆಯೇ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ದಾಳಿ ನಡೆಯುತ್ತಿದ್ದರು ಪೊಲೀಸರು ಏನು ಮಾಡದೆ ಇದ್ದರು. ಆದರೆ ಹೇಳಿಕೆಯಲ್ಲಿ ಮಾತ್ರ ನಾವು ತಲುಪುವ ಮುನ್ನವೇ ಘಟನೆ ನಡೆದುಹೋಯಿತು ಎಂದು ತಮ್ಮದೇನು ತಪ್ಪಿಲ್ಲ ಎಂದು ಸಾಬೀತುಪಡಿಸಲು ಪ್ರಯತ್ನಿಸಿದ್ದಾರೆ. ಆದರೆ ಘಟನೆ ನಂತರ ಸಿಕ್ಕಿರುವ ವಿಡಿಯೋದಲ್ಲಿ ಪೊಲೀಸರಿರುವುದು, ಅವರ ಮುಂದೆಯೇ ಹಲ್ಲೆ ನಡೆಯುತ್ತಿರುವುದು ಕಾಣಬಹುದಾಗಿದೆ.


ಇದನ್ನೂ ಓದಿ: ವಿಎಚ್‌ಪಿ ಸದಸ್ಯನಿಗೆ ಬೆದರಿಕೆ ಕರೆ ಪ್ರಕರಣ: ಯುಪಿ ಪೊಲೀಸರಿಂದ ಮುಸ್ಲಿಂ ವ್ಯಕ್ತಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...