Homeಮುಖಪುಟತಾಹಿರ್ ಹುಸೇನ್ ರನ್ನು ಪಕ್ಷದಿಂದ ಅಮಾನತುಗೊಳಿಸಿದ ಎಎಪಿ

ತಾಹಿರ್ ಹುಸೇನ್ ರನ್ನು ಪಕ್ಷದಿಂದ ಅಮಾನತುಗೊಳಿಸಿದ ಎಎಪಿ

- Advertisement -
- Advertisement -

ದೆಹಲಿ ಗಲಭೆಯಲ್ಲಿ ಬೆಂಕಿ ಹಚ್ಚಿದ ಹಾಗೂ ಕೊಲೆ ಮಾಡಿದ ಆರೋಪ ಹೊಂದಿರುವ ತಾಹಿರ್ ಹುಸೇನ್ ಅವರನ್ನು ಆಮ್ ಆದ್ಮಿ ಪಕ್ಷವು ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದೆ. ಹುಸೇನ್ ಅವರ ಮೇಲಿನ ಆರೋಪದ ತನಿಖೆಯ ನಂತರ ಅವರ ಅಮಾನತು ತೆರವು ಗೊಳಿಸಲಾಗುವುದು ಎಎಪಿ ಟ್ವೀಟಿಸಿದೆ.

ಆಮ್ ಆದ್ಮಿ ಪಕ್ಷದ ಮುಖಂಡ ತಾಹಿರ್ ಹುಸೇನ್ ಅವರ ಮೇಲೆ ಗುಪ್ತಚರ ಇಲಾಖೆಯ ಉದ್ಯೋಗಿ ಅಂಕಿತ್ ಶರ್ಮಾ ಅವರ ಸಾವಿಗೆ ಸಂಬಂಧಿಸಿದಂತೆ ಕೊಲೆ ಆರೋಪ ಹೊರಿಸಲಾಗಿದೆ. ಗುಪ್ತಚರ ಇಲಾಖೆಯ ಉದ್ಯೋಗಿಯಾಗಿದ್ದ ಅಕಿಂತ್ ಶರ್ಮಾರ ಮೃತದೇಹ ಜಾಫ್ರಾಬಾದ್  ಹತ್ತಿರದ ಚರಂಡಿಯಲ್ಲಿ ಪತ್ತೆಯಾಗಿತ್ತು. ಹುಸೇನ್ ಅವರ ಬೆಂಬಲಿಗರು ತಮ್ಮ ಮಗನನ್ನು ಕೊಂದಿದ್ದಾರೆ ಎಂದು ಅಂಕಿತ್ ಅವರ ತಂದೆ ಆರೋಪಿಸಿದ್ದಾರೆ.

ಜಾಫ್ರಾಬಾದ್‌ನ ತನ್ನ ಮನೆಯ ಸಮೀಪ ಚರಂಡಿಯಲ್ಲಿ ಪತ್ತೆಯಾದ ಅಂಕಿತ್ ಶರ್ಮಾ ಅವರ ಮೇಲೆ ಗುಂಪೊಂದು ಹಲ್ಲೆ ನಡೆಸಿ ಇರಿದಿದೆ. ಗುರುವಾರ ಬಿಡುಗಡೆಯಾದ ಮರಣೋತ್ತರ ವರದಿಯು ಅವರ ದೇಹದಾದ್ಯಂತ ಅನೇಕ ಇರಿತದ ಗಾಯಗಳು ಇರುವುದನ್ನು ಸೂಚಿಸಿದೆ.

ಅಂಕಿತ್ ಶರ್ಮಾ ಅವರ ಸಾವಿನಲ್ಲಿ ಹುಸೇನ್ ಭಾಗಿಯಾಗಿದ್ದಾರೆ ಎಂಬ ಆರೋಪವನ್ನು ಬಿಜೆಪಿ ನಾಯಕ ಕಪಿಲ್ ಮಿಶ್ರಾ ಕೂಡ ಮಾಡಿದ್ದಾರೆ.

ತಾಹಿರ್ ಹುಸೇನ್ ಅವರಂತರೆ ತೋರುವ ವ್ಯಕ್ತಿಯೊಬ್ಬ ಕಟ್ಟಡದ ಮೇಲಿನಿಂದ ಕಲ್ಲು ಎಸೆಯುವವರೊಂದಿಗೆ ಕೋಲುಗಳನ್ನು ಹಿಡಿದ ವೀಡಿಯೋವೊಂದು ವೈರಲಾಗಿದೆ. ವೀಡಿಯೊಗಳಲ್ಲಿ ಕಟ್ಟಡದ ಕೆಳಗಿನಿಂದ ದಪ್ಪ ಹೊಗೆ ಏಳುತ್ತಿರುವ ದೃಶ್ಯವಿದೆ.

ಹುಸೇನ್ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ “ನಾನು ಮತ್ತು ನನ್ನ ಕುಟುಂಬ 24 ರಂದು ಪೊಲೀಸರ ಸಮ್ಮುಖದಲ್ಲಿ ಸುರಕ್ಷಿತ ಸ್ಥಳಕ್ಕೆ ಹೋಗಿದ್ದೇವೆ ಅದರ ನಂತರ ಮನೆಗೆ ಹಿಂದಿರುಗಲಿಲ್ಲ” ಎಂದು ಹೇಳಿದ್ದಾರೆ.

ದೆಹಲಿ ಹಿಂಸಾಚಾರದಲ್ಲಿ ಕನಿಷ್ಠ 38 ಜನರು ಸಾವನ್ನಪ್ಪಿದ್ದಾರೆ ಮತ್ತು 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ದೆಹಲಿ ಪೊಲೀಸರು ಮತ್ತು ಗೃಹ ಸಚಿವಾಲಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...