Homeಮುಖಪುಟತಾಹಿರ್ ಹುಸೇನ್ ರನ್ನು ಪಕ್ಷದಿಂದ ಅಮಾನತುಗೊಳಿಸಿದ ಎಎಪಿ

ತಾಹಿರ್ ಹುಸೇನ್ ರನ್ನು ಪಕ್ಷದಿಂದ ಅಮಾನತುಗೊಳಿಸಿದ ಎಎಪಿ

- Advertisement -
- Advertisement -

ದೆಹಲಿ ಗಲಭೆಯಲ್ಲಿ ಬೆಂಕಿ ಹಚ್ಚಿದ ಹಾಗೂ ಕೊಲೆ ಮಾಡಿದ ಆರೋಪ ಹೊಂದಿರುವ ತಾಹಿರ್ ಹುಸೇನ್ ಅವರನ್ನು ಆಮ್ ಆದ್ಮಿ ಪಕ್ಷವು ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದೆ. ಹುಸೇನ್ ಅವರ ಮೇಲಿನ ಆರೋಪದ ತನಿಖೆಯ ನಂತರ ಅವರ ಅಮಾನತು ತೆರವು ಗೊಳಿಸಲಾಗುವುದು ಎಎಪಿ ಟ್ವೀಟಿಸಿದೆ.

ಆಮ್ ಆದ್ಮಿ ಪಕ್ಷದ ಮುಖಂಡ ತಾಹಿರ್ ಹುಸೇನ್ ಅವರ ಮೇಲೆ ಗುಪ್ತಚರ ಇಲಾಖೆಯ ಉದ್ಯೋಗಿ ಅಂಕಿತ್ ಶರ್ಮಾ ಅವರ ಸಾವಿಗೆ ಸಂಬಂಧಿಸಿದಂತೆ ಕೊಲೆ ಆರೋಪ ಹೊರಿಸಲಾಗಿದೆ. ಗುಪ್ತಚರ ಇಲಾಖೆಯ ಉದ್ಯೋಗಿಯಾಗಿದ್ದ ಅಕಿಂತ್ ಶರ್ಮಾರ ಮೃತದೇಹ ಜಾಫ್ರಾಬಾದ್  ಹತ್ತಿರದ ಚರಂಡಿಯಲ್ಲಿ ಪತ್ತೆಯಾಗಿತ್ತು. ಹುಸೇನ್ ಅವರ ಬೆಂಬಲಿಗರು ತಮ್ಮ ಮಗನನ್ನು ಕೊಂದಿದ್ದಾರೆ ಎಂದು ಅಂಕಿತ್ ಅವರ ತಂದೆ ಆರೋಪಿಸಿದ್ದಾರೆ.

ಜಾಫ್ರಾಬಾದ್‌ನ ತನ್ನ ಮನೆಯ ಸಮೀಪ ಚರಂಡಿಯಲ್ಲಿ ಪತ್ತೆಯಾದ ಅಂಕಿತ್ ಶರ್ಮಾ ಅವರ ಮೇಲೆ ಗುಂಪೊಂದು ಹಲ್ಲೆ ನಡೆಸಿ ಇರಿದಿದೆ. ಗುರುವಾರ ಬಿಡುಗಡೆಯಾದ ಮರಣೋತ್ತರ ವರದಿಯು ಅವರ ದೇಹದಾದ್ಯಂತ ಅನೇಕ ಇರಿತದ ಗಾಯಗಳು ಇರುವುದನ್ನು ಸೂಚಿಸಿದೆ.

ಅಂಕಿತ್ ಶರ್ಮಾ ಅವರ ಸಾವಿನಲ್ಲಿ ಹುಸೇನ್ ಭಾಗಿಯಾಗಿದ್ದಾರೆ ಎಂಬ ಆರೋಪವನ್ನು ಬಿಜೆಪಿ ನಾಯಕ ಕಪಿಲ್ ಮಿಶ್ರಾ ಕೂಡ ಮಾಡಿದ್ದಾರೆ.

ತಾಹಿರ್ ಹುಸೇನ್ ಅವರಂತರೆ ತೋರುವ ವ್ಯಕ್ತಿಯೊಬ್ಬ ಕಟ್ಟಡದ ಮೇಲಿನಿಂದ ಕಲ್ಲು ಎಸೆಯುವವರೊಂದಿಗೆ ಕೋಲುಗಳನ್ನು ಹಿಡಿದ ವೀಡಿಯೋವೊಂದು ವೈರಲಾಗಿದೆ. ವೀಡಿಯೊಗಳಲ್ಲಿ ಕಟ್ಟಡದ ಕೆಳಗಿನಿಂದ ದಪ್ಪ ಹೊಗೆ ಏಳುತ್ತಿರುವ ದೃಶ್ಯವಿದೆ.

ಹುಸೇನ್ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ “ನಾನು ಮತ್ತು ನನ್ನ ಕುಟುಂಬ 24 ರಂದು ಪೊಲೀಸರ ಸಮ್ಮುಖದಲ್ಲಿ ಸುರಕ್ಷಿತ ಸ್ಥಳಕ್ಕೆ ಹೋಗಿದ್ದೇವೆ ಅದರ ನಂತರ ಮನೆಗೆ ಹಿಂದಿರುಗಲಿಲ್ಲ” ಎಂದು ಹೇಳಿದ್ದಾರೆ.

ದೆಹಲಿ ಹಿಂಸಾಚಾರದಲ್ಲಿ ಕನಿಷ್ಠ 38 ಜನರು ಸಾವನ್ನಪ್ಪಿದ್ದಾರೆ ಮತ್ತು 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ದೆಹಲಿ ಪೊಲೀಸರು ಮತ್ತು ಗೃಹ ಸಚಿವಾಲಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...

‘ಒಂದು ಲೀಟರ್ ತೈಲವನ್ನೂ ರಫ್ತು ಮಾಡುವುದಿಲ್ಲ’: ಟ್ರಂಪ್ ‘ಹಾರ್ಮುಜ್ ಜಲಸಂಧಿ ಸ್ವಾಧೀನ’ ಹೇಳಿಕೆಯ ನಂತರ ಕಠಿಣ ಎಚ್ಚರಿಕೆ ನೀಡಿದ ಇರಾನ್

ಟೆಹ್ರಾನ್: ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ತನ್ನ ವಿರುದ್ಧ ದಾಳಿಗಳು ಮುಂದುವರಿದರೆ, ಈ ಪ್ರದೇಶದಿಂದ ಒಂದು ಲೀಟರ್ ತೈಲವನ್ನು ರಫ್ತು ಮಾಡಲು ಸಹ ಇರಾನ್ ಅನುಮತಿಸುವುದಿಲ್ಲ ಎಂದು ಇರಾನ್...

ನ್ಯಾಯಾಂಗದ ಕುರಿತ ಅಧ್ಯಾಯ ವಿವಾದ: ಬೇಷರತ್ ಕ್ಷಮೆಯಾಚಿಸಿದ ಎನ್‌ಸಿಇಆರ್‌ಟಿ

ಇತ್ತೀಚೆಗೆ ಪ್ರಕಟವಾದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ಭ್ರಷ್ಟಾಚಾರದ ಅಧ್ಯಾಯವನ್ನು ಸೇರಿಸಿದ್ದಕ್ಕಾಗಿ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಮಂಗಳವಾರ (ಮಾ.10) ಬೇಷರತ್ತಾಗಿ ಸಾರ್ವಜನಿಕ ಕ್ಷಮೆಯಾಚಿಸಿದೆ ಮತ್ತು...

ಟ್ರಕ್ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣ : ಇಬ್ಬರು ಸ್ವಘೋಷಿತ ಗೋರಕ್ಷಕರ ಬಂಧನ

ಎಮ್ಮೆಗಳನ್ನು ಸಾಗಿಸುತ್ತಿದ್ದ ಟ್ರಕ್‌ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸ್ವಘೋಷಿತ ಗೋರಕ್ಷಕರನ್ನು ಮಹಾರಾಷ್ಟ್ರದ ಪುಣೆ ನಗರ ಪೊಲೀಸರು ಬಂಧಿಸಿದ್ದಾರೆ. ಬಿಪಾಶಾ ಅಲಿಯಾಸ್ ಆಕಾಶ್ ಮಾಣಿಕಂ ಮತ್ತು ಹೇಮಂತ್ ಗಾಯಕ್ವಾಡ್ ಬಂಧಿತರು....

ದೆಹಲಿ ಗಲಭೆ ಪ್ರಕರಣ : ಶಾರ್ಜೀಲ್ ಇಮಾಮ್‌ಗೆ 10 ದಿನಗಳ ಮಧ್ಯಂತರ ಜಾಮೀನು

ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರಿಗೆ ನ್ಯಾಯಾಲಯ ಸೋಮವಾರ (ಮಾ.9) 10 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತನ್ನ ಸಹೋದರನ...

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...