Homeಕರ್ನಾಟಕಗೃಹ ಸಚಿವರ ಜಿಲ್ಲೆಯಲ್ಲೇ ಕಾಂಗ್ರೆಸ್ ನಾಯಕಿಯ ಭೀಕರ ಹತ್ಯೆ: ಒಂದು ಕೊಲೆಯ ಸುತ್ತ...

ಗೃಹ ಸಚಿವರ ಜಿಲ್ಲೆಯಲ್ಲೇ ಕಾಂಗ್ರೆಸ್ ನಾಯಕಿಯ ಭೀಕರ ಹತ್ಯೆ: ಒಂದು ಕೊಲೆಯ ಸುತ್ತ…

ವಾಟ್ಸಾಫ್, ಫೇಸ್ಬುಕ್‍ನಲ್ಲಿ ರೇಷ್ಮಾ ಪಡೇಕನೂರ ಸಾವಿನ ಕುರಿತು ದಿನಕ್ಕೊಂದು ಸುದ್ದಿಗಳು ರೆಕ್ಕೆ, ಪುಕ್ಕ ಕಟ್ಟಿಕೊಂಡು ಹಾರಾಡುತ್ತಿವೆ.

- Advertisement -
- Advertisement -

| ಶಿವಾ |

ಮಳೆ ನಿಂತರೂ ಮಳೆ ಹನಿ ನಿಲ್ಲುತ್ತಿಲ್ಲ ಎನ್ನುವಂತೆ, ಭೀಮೆಯ ಒಡಲು ಕೊಂಚಮಟ್ಟಿಗೆ ತಣ್ಣಗಾದರೂ; ಸೂಫಿ, ಸಂತರ ನಾಡಾದ ವಿಜಯಪುರದಲ್ಲಿ ಮಾತ್ರ ರಕ್ತದ ಹನಿ ಹನಿಯುತ್ತಲೇ ಇದೆ. ವೈಯಕ್ತಿಕ ದ್ವೇಷ, ಹಗೆತನಕ್ಕೆ ಈ ಹಿಂದೆ ಸಾಕಷ್ಟು ಹೆಣಗಳು ಬಿದ್ದಿವೆ. ಆದರೆ ಈಚೆಗೆ ನಡೆದ ಕಾಂಗ್ರೆಸ್ ನಾಯಕಿ ರೇಷ್ಮಾ ಪಡೇಕನೂರ ಭೀಕರ ಹತ್ಯೆ ಜಿಲ್ಲೆಯ ಜನರನ್ನು ಮತ್ತೆ ಬೆಚ್ಚಿ ಬೀಳುವಂತೆ ಮಾಡಿದ್ದು, ಗೃಹ ಸಚಿವ ಎಂ.ಬಿ. ಪಾಟೀಲರ ತವರೂರಲ್ಲಿಯೇ ತಮ್ಮದೇ ಪಕ್ಷದ ನಾಯಕಿಯೊಬ್ಬರು ಹೀಗೆ ಭೀಕರವಾಗಿ ಕೊಲೆಯಾಗಿರುವುದು ದುರಂತದ ಸಂಗತಿ.

ಮೊದಲೆಲ್ಲಾ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ರೇಷ್ಮಾ ಪಡೇಕನೂರ ರಾಜಕೀಯ ನಾಯಕಿ ಆಗಬೇಕೆನ್ನುವ ಹಂಬಲದಿಂದ ರಾಜಕೀಯಕ್ಕೆ ಧುಮ್ಮುಕ್ಕಿದ್ದಳು. ಇದೇ ಹತ್ತು, ಹನ್ನೆರಡು ವರ್ಷಗಳ ಹಿಂದೆ ಸಾಮಾನ್ಯ ಮಹಿಳೆಯಂತಿದ್ದ ರೇಷ್ಮಾ ಪಡೇಕನೂರ; ನೋಡುನೋಡುತ್ತಿದ್ದಂತೆ ಪ್ರಮುಖ ರಾಜಕೀಯ ನಾಯಕರೊಂದಿಗೆ ಆತ್ಮೀಯ ಒಡನಾಟ ಬೆಳೆಸಿಕೊಂಡು ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ತನ್ನ ವರ್ಚಸ್ಸು ಬೆಳೆಸಿಕೊಂಡಿದ್ದಳು. ಹೀಗೆ ರಾಜಕೀಯವಾಗಿ ಬೆಳೆದವಳು ಕೆಲವರೊಂದಿಗೆ ಹಣಕಾಸಿನ ವ್ಯವಹಾರ ಹೊಂದಿದ್ದಳು ಎಂದು ಹೇಳಲಾಗುತ್ತಿದ್ದು, ಈ ಹಣಕಾಸಿನ ವ್ಯವಹಾರದ ವೈಮನಸ್ಸಿಗೆ ರೇಷ್ಮಾ ಪಡೇಕನೂರ ಬಲಿಯಾದಳಾ? ಇಲ್ಲಾ ಅವಳು ರಾಜಕಾರಣಿ ಆಗಲು ಹೊರಟಿದ್ದ ಆ ರಾಜಕಾರಣವೇ ರೇಷ್ಮಾಳ ಬದುಕಿಗೆ ಮುಳ್ಳಾಯಿತಾ? ಅದ್ಯಾವ ಹಗೆತನ, ದ್ವೇಷಕ್ಕಾಗಿ ರೇಷ್ಮಾ ಕೊಲೆಯಾದಳು ಎನ್ನುವ ಪ್ರಶ್ನೆಗೆ ಪೊಲೀಸ್ ಇಲಾಖೆ ಉತ್ತರ ನೀಡಬೇಕಿದೆ.

ದಯೆ ಸ್ವಯಂ ಸೇವಾಸಂಸ್ಥೆ ಸಂಸ್ಥಾಪಕ ಅಧ್ಯಕ್ಷೆಯಾದ ರೇಷ್ಮಾ ಪಡೇಕನೂರ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ಹಾಗೂ ಈ ಹಿಂದೆ ಜೆಡಿಎಸ್ ವಿಜಯಪುರ ಜಿಲ್ಲಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿ, ಕಳೆದ ವರ್ಷವಷ್ಟೇ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಳು. ಇಂತಹ ರಾಜಕೀಯ ಧುರೀಣೆಯನ್ನು ದುಷ್ಕರ್ಮಿಗಳು ಕೊಲೆ ಮಾಡಿರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಕೊಲೆಯಾದ ರೇಷ್ಮಾ ಪತಿ ಖಾಜಾ ಬಂದೇನವಾಜ್ ಪಡೇಕನೂರ ಸೊಲ್ಲಾಪುರದ ಎಐಎಂಐಎಂ ಪಕ್ಷದ ಮುಖಂಡ ಫೈಲವಾನ್ ತೌಫೀಕ್ ಇಸ್ಮಾಯಿಲ್ ಶೇಖ್ ಎಂಬವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ತೌಫೀಕ್ ಶೇಖ ಜೊತೆಗೆ ರೇಷ್ಮಾ ಪಡೇಕನೂರಳ ಹಣಕಾಸಿನ ವ್ಯವಹಾರವಿತ್ತು. ಈ ಕುರಿತು ಕೆಲ ದಿನಗಳ ಹಿಂದೆ ಇಬ್ಬರ ನಡುವೆ ಜಗಳವೂ ನಡೆದಿತ್ತು. ಈ ಸಂಬಂಧ ಸೊಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ಸಹ ನೀಡಲಾಗಿತ್ತು. ಈತನೇ ಮೊನ್ನೆ ರಾತ್ರಿ, ಹಣಕಾಸಿನ ವಿಷಯ ಮಾತನಾಡಲಿಕ್ಕಾಗಿಯೇ ರೇಷ್ಮಾಳನ್ನು ಮನೆಯಿಂದ ಹೊರಗೆ ಕರೆದೊಯ್ದಿದ್ದ. ಈತನೇ ಕೊಲೆ ಮಾಡಿರಬಹುದು ಎಂದು ದೂರು ನೀಡಲಾಗಿದೆ.

ಅಲ್ಲದೆ ಈ ಹಿಂದೆ ಎಂಐಎಂ ಮುಖಂಡ ತೌಫೀಕ್ ಶೇಖನ ಹೆಂಡತಿ, ವಿಜಯಪುರದ ರೇಷ್ಮಾಳ ಮನೆಗೆ ಬಂದು, ನನ್ನ ಗಂಡನ ಜೊತೆ ವಾಟ್ಸಾಫ್‍ನಲ್ಲಿ ಚಾಟಿಂಗ್ ಮಾಡುತ್ತೀ? ಅವನಿಗೂ ನಿನಗೂ ಏನು ಸಂಬಂಧ? ಎಂದು ಕ್ಯಾತೆ ತೆಗೆದು, ಜಗಳ ಮಾಡಿದ್ದಳು ಎನ್ನಲಾಗಿದೆ. ತೌಫೀಕ್ ಶೇಖ್ ಮತ್ತು ನನ್ನ ಮಧ್ಯೆ ಹಣಕಾಸಿನ ಸಂಬಂಧವಿದ್ದು, ಆತನ ಹೆಂಡತಿ ಇನ್ನಿಲ್ಲದ ಖ್ಯಾತೆ ತೆಗೆಯುತ್ತಿದ್ದಾಳೆ ಎಂದು ಆಕೆಯ ವಿರುದ್ಧ, ರೇಷ್ಮಾ ಪಡೇಕನೂರ ವಿಜಯಪುರದ ಜಲನಗರ ಠಾಣೆಯಲ್ಲಿ ದೂರು ನೀಡಿದ್ದಳು.

ರಾತ್ರಿ ಹೋದವಳು ಹೆಣವಾದಳು.

ಕೊಲೆ ನಡೆದ ದಿನ ರೇಷ್ಮಾ ಪಡೇಕನೂರ ರಾತ್ರಿ ತನ್ನ ವಿಜಯಪುರ ನಗರದ ಮನೆಯಿಂದ ಆಗಂತುಕನೊಂದಿಗೆ ಹೋದವಳು ಬೆಳಗಾಗುತ್ತಿದ್ದಂತೆ ಬಸವನಬಾಗೇವಾಡಿ ತಾಲೂಕಿನ ಕೊರ್ತಿ- ಕೊಲ್ಹಾರ ಸೇತುವೆ ಕೆಳಗೆ ಶವವಾಗಿ ಸುದ್ದಿಯಾದಳು. ಈ ನಿಗೂಢ ಕೊಲೆಗೆ ಜಿಲ್ಲೆಯ ಜನರು ತಲ್ಲಣಗೊಂಡದ್ದು ಒಂದೆಡೆಯಾದರೆ, ಇನ್ನೊಂದೆಡೆ ಹಲವು ಅನುಮಾನಗಳನ್ನು ಸಾರ್ವಜನಿಕರಲ್ಲಿ ಹುಟ್ಟು ಹಾಕಿದೆ.

ಜೆಡಿಎಸ್ ರಾಜ್ಯಾಧ್ಯಕ್ಷ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ, ಮಾಜಿ ಸಚಿವ ಎಸ್.ಆರ್. ಪಾಟೀಲ (ಬಾಡಗಂಡಿ), ಸಚಿವ ಎಂ.ಸಿ. ಮನಗೂಳಿ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ರೇಷ್ಮಾ ಪಡೇಕನೂರ ಕಳೆದ ವರ್ಷ ಎಂ.ಬಿ. ಪಾಟೀಲರ ಸಮ್ಮುಖದಲ್ಲಿ ಕಾಂಗ್ರೆಸ್‍ಗೆ ಸೇರ್ಪಡೆಗೊಂಡಿದ್ದಳು. ಆದರೆ ಮೊನ್ನೆ ಬರ್ಬರ ಹತ್ಯೆಯಾಗಿ, ಕೊಲ್ಹಾರ ಸೇತುವೆ ಕಳೆಗೆ ಬಿದ್ದಿದ್ದು ವಿಪರ್ಯಾಸ.

ವೈರಲ್ ಸುದ್ದಿ
ವಾಟ್ಸಾಫ್, ಫೇಸ್ಬುಕ್‍ನಲ್ಲಿ ರೇಷ್ಮಾ ಪಡೇಕನೂರ ಸಾವಿನ ಕುರಿತು ದಿನಕ್ಕೊಂದು ಸುದ್ದಿಗಳು ರೆಕ್ಕೆ, ಪುಕ್ಕ ಕಟ್ಟಿಕೊಂಡು ಹಾರಾಡುತ್ತಿವೆ. ತೌಫೀಕ್ ಶೇಖ್ ಮತ್ತು ರೇಷ್ಮಾ ಪಡೇಕನೂರ ನಡುವೆ ನಡೆದ ಸಂಭಾಷಣೆ ಸೇರಿದಂತೆ ಮೂರು ಆಡಿಯೋ ತುಣುಕುಗಳು ಜಿಲ್ಲೆಯಾದ್ಯಂತ ವೈರಲ್ ಆಗಿವೆ.

ಪೈಲ್ವಾನನ ಬಗ್ಗೆ ಹಗುರವಾಗಿ ಮಾತನಾಡಿದ ರೇಷ್ಮಾ ಪಡೇಕನೂರ ಅವರ ಧ್ವನಿ ಬಹುಶಃ ಕೊಲೆಗೆ ಕಾರಣವಾಗಿರಬಹುದೇ? ಫೈಲವಾನನ ಆಪ್ತರ ಮುಂದೆ ರೇಷ್ಮಾ ಪಡೇಕನೂರ ಅತ್ಯಂತ ಹೀನಾಯವಾಗಿ ಮಾತನಾಡಿದ್ದು, ಈ ಧ್ವನಿ ಮುದ್ರಿಕೆಯಲ್ಲಿ ಸ್ಪಷ್ಟವಾಗಿ ಕೇಳಿಬರುತ್ತದೆ. ಹಾಗಂತ ಇದನ್ನೆ ಪ್ರಮುಖ ಸಾಕ್ಷಿಯಾಗಿ ನಂಬುವಂತಿಲ್ಲ. ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಈ ಧ್ವನಿ ಮುದ್ರಿಕೆಗಳನ್ನು ಕಳಿಸಿ, ಸತ್ಯಾಸತ್ಯತೆಯನ್ನು ಪರೀಕ್ಷಿಸುವ ಅವಶ್ಯಕತೆಯೂ ಇದೆ. ದಿನ ಕಳೆದಂತೆ ರೇಷ್ಮಾ ಪಡೇಕನೂರ ಕಗ್ಗೊಲೆಯ ಹಿಂದಿನ ರಹಸ್ಯ ತೆರೆದಿಡುವ ಹೊಣೆಗಾರಿಕೆ ಜಿಲ್ಲೆ ಮತ್ತು ರಾಜ್ಯ ಪೊಲೀಸರ ಮೇಲಿದೆ. ಕೊಲೆಗೆ ಕಾರಣ ಏನೇ ಇರಲಿ ಆದರೆ ಜಿಲ್ಲೆಯಲ್ಲಿ ಕಾನೂನಿನ ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಈ ಕೊಲೆಯೇ ನಿಚ್ಚಳ ನಿದರ್ಶನವಾಗಿದೆ.

ಡಾ.ಎಂ.ಬಿ. ಪಾಟೀಲರು ಗೃಹ ಸಚಿವರಾದ ಮೇಲೆ ಹಳೇ ಕ್ರಿಮಿನಲ್‍ಗಳು ಹೊಸ ಅಪರಾಧ ಮಾಡಲು ಮುಂದಾಗುತ್ತಿದ್ದಾರೆ. ಜಿಲ್ಲೆಯಲ್ಲಿ ದಿನಕ್ಕೆ ಐದಾರು ಅಪರಾಧ ಪ್ರಕರಣಗಳು ಸಂಭವಿಸುತ್ತಿವೆ. ಇವುಗಳಿಗೆ ರಾಜಿ ಪಂಚಾಯಿತಿಯಲ್ಲಿ ಮುಕ್ತಿ ಕಾಣಿಸಲಾಗುತ್ತಿದೆ. ಇನ್ನುಳಿದಂತೆ ರೇಷ್ಮಾ ಪಡೇಕನೂರ ಕೊಲೆ ಪ್ರಕರಣಗಳನ್ನು ಗಂಭೀರವಾಗಿ ಹಾಗೂ ಸರಿಯಾದ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ತನಿಖೆಗೆ ಮುಂದಾಗಬೇಕು. ಅಂದಾಗ ಮಾತ್ರ ಈ ನಿಗೂಢ ಕೊಲೆಯ ಹಿಂದಿರುವ ಸಂಚು ಬಯಲಾಗಲು ಸಾಧ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...