Homeಕರ್ನಾಟಕಗೃಹ ಸಚಿವರ ಜಿಲ್ಲೆಯಲ್ಲೇ ಕಾಂಗ್ರೆಸ್ ನಾಯಕಿಯ ಭೀಕರ ಹತ್ಯೆ: ಒಂದು ಕೊಲೆಯ ಸುತ್ತ...

ಗೃಹ ಸಚಿವರ ಜಿಲ್ಲೆಯಲ್ಲೇ ಕಾಂಗ್ರೆಸ್ ನಾಯಕಿಯ ಭೀಕರ ಹತ್ಯೆ: ಒಂದು ಕೊಲೆಯ ಸುತ್ತ…

ವಾಟ್ಸಾಫ್, ಫೇಸ್ಬುಕ್‍ನಲ್ಲಿ ರೇಷ್ಮಾ ಪಡೇಕನೂರ ಸಾವಿನ ಕುರಿತು ದಿನಕ್ಕೊಂದು ಸುದ್ದಿಗಳು ರೆಕ್ಕೆ, ಪುಕ್ಕ ಕಟ್ಟಿಕೊಂಡು ಹಾರಾಡುತ್ತಿವೆ.

- Advertisement -
- Advertisement -

| ಶಿವಾ |

ಮಳೆ ನಿಂತರೂ ಮಳೆ ಹನಿ ನಿಲ್ಲುತ್ತಿಲ್ಲ ಎನ್ನುವಂತೆ, ಭೀಮೆಯ ಒಡಲು ಕೊಂಚಮಟ್ಟಿಗೆ ತಣ್ಣಗಾದರೂ; ಸೂಫಿ, ಸಂತರ ನಾಡಾದ ವಿಜಯಪುರದಲ್ಲಿ ಮಾತ್ರ ರಕ್ತದ ಹನಿ ಹನಿಯುತ್ತಲೇ ಇದೆ. ವೈಯಕ್ತಿಕ ದ್ವೇಷ, ಹಗೆತನಕ್ಕೆ ಈ ಹಿಂದೆ ಸಾಕಷ್ಟು ಹೆಣಗಳು ಬಿದ್ದಿವೆ. ಆದರೆ ಈಚೆಗೆ ನಡೆದ ಕಾಂಗ್ರೆಸ್ ನಾಯಕಿ ರೇಷ್ಮಾ ಪಡೇಕನೂರ ಭೀಕರ ಹತ್ಯೆ ಜಿಲ್ಲೆಯ ಜನರನ್ನು ಮತ್ತೆ ಬೆಚ್ಚಿ ಬೀಳುವಂತೆ ಮಾಡಿದ್ದು, ಗೃಹ ಸಚಿವ ಎಂ.ಬಿ. ಪಾಟೀಲರ ತವರೂರಲ್ಲಿಯೇ ತಮ್ಮದೇ ಪಕ್ಷದ ನಾಯಕಿಯೊಬ್ಬರು ಹೀಗೆ ಭೀಕರವಾಗಿ ಕೊಲೆಯಾಗಿರುವುದು ದುರಂತದ ಸಂಗತಿ.

ಮೊದಲೆಲ್ಲಾ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ರೇಷ್ಮಾ ಪಡೇಕನೂರ ರಾಜಕೀಯ ನಾಯಕಿ ಆಗಬೇಕೆನ್ನುವ ಹಂಬಲದಿಂದ ರಾಜಕೀಯಕ್ಕೆ ಧುಮ್ಮುಕ್ಕಿದ್ದಳು. ಇದೇ ಹತ್ತು, ಹನ್ನೆರಡು ವರ್ಷಗಳ ಹಿಂದೆ ಸಾಮಾನ್ಯ ಮಹಿಳೆಯಂತಿದ್ದ ರೇಷ್ಮಾ ಪಡೇಕನೂರ; ನೋಡುನೋಡುತ್ತಿದ್ದಂತೆ ಪ್ರಮುಖ ರಾಜಕೀಯ ನಾಯಕರೊಂದಿಗೆ ಆತ್ಮೀಯ ಒಡನಾಟ ಬೆಳೆಸಿಕೊಂಡು ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ತನ್ನ ವರ್ಚಸ್ಸು ಬೆಳೆಸಿಕೊಂಡಿದ್ದಳು. ಹೀಗೆ ರಾಜಕೀಯವಾಗಿ ಬೆಳೆದವಳು ಕೆಲವರೊಂದಿಗೆ ಹಣಕಾಸಿನ ವ್ಯವಹಾರ ಹೊಂದಿದ್ದಳು ಎಂದು ಹೇಳಲಾಗುತ್ತಿದ್ದು, ಈ ಹಣಕಾಸಿನ ವ್ಯವಹಾರದ ವೈಮನಸ್ಸಿಗೆ ರೇಷ್ಮಾ ಪಡೇಕನೂರ ಬಲಿಯಾದಳಾ? ಇಲ್ಲಾ ಅವಳು ರಾಜಕಾರಣಿ ಆಗಲು ಹೊರಟಿದ್ದ ಆ ರಾಜಕಾರಣವೇ ರೇಷ್ಮಾಳ ಬದುಕಿಗೆ ಮುಳ್ಳಾಯಿತಾ? ಅದ್ಯಾವ ಹಗೆತನ, ದ್ವೇಷಕ್ಕಾಗಿ ರೇಷ್ಮಾ ಕೊಲೆಯಾದಳು ಎನ್ನುವ ಪ್ರಶ್ನೆಗೆ ಪೊಲೀಸ್ ಇಲಾಖೆ ಉತ್ತರ ನೀಡಬೇಕಿದೆ.

ದಯೆ ಸ್ವಯಂ ಸೇವಾಸಂಸ್ಥೆ ಸಂಸ್ಥಾಪಕ ಅಧ್ಯಕ್ಷೆಯಾದ ರೇಷ್ಮಾ ಪಡೇಕನೂರ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ಹಾಗೂ ಈ ಹಿಂದೆ ಜೆಡಿಎಸ್ ವಿಜಯಪುರ ಜಿಲ್ಲಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿ, ಕಳೆದ ವರ್ಷವಷ್ಟೇ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಳು. ಇಂತಹ ರಾಜಕೀಯ ಧುರೀಣೆಯನ್ನು ದುಷ್ಕರ್ಮಿಗಳು ಕೊಲೆ ಮಾಡಿರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಕೊಲೆಯಾದ ರೇಷ್ಮಾ ಪತಿ ಖಾಜಾ ಬಂದೇನವಾಜ್ ಪಡೇಕನೂರ ಸೊಲ್ಲಾಪುರದ ಎಐಎಂಐಎಂ ಪಕ್ಷದ ಮುಖಂಡ ಫೈಲವಾನ್ ತೌಫೀಕ್ ಇಸ್ಮಾಯಿಲ್ ಶೇಖ್ ಎಂಬವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ತೌಫೀಕ್ ಶೇಖ ಜೊತೆಗೆ ರೇಷ್ಮಾ ಪಡೇಕನೂರಳ ಹಣಕಾಸಿನ ವ್ಯವಹಾರವಿತ್ತು. ಈ ಕುರಿತು ಕೆಲ ದಿನಗಳ ಹಿಂದೆ ಇಬ್ಬರ ನಡುವೆ ಜಗಳವೂ ನಡೆದಿತ್ತು. ಈ ಸಂಬಂಧ ಸೊಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ಸಹ ನೀಡಲಾಗಿತ್ತು. ಈತನೇ ಮೊನ್ನೆ ರಾತ್ರಿ, ಹಣಕಾಸಿನ ವಿಷಯ ಮಾತನಾಡಲಿಕ್ಕಾಗಿಯೇ ರೇಷ್ಮಾಳನ್ನು ಮನೆಯಿಂದ ಹೊರಗೆ ಕರೆದೊಯ್ದಿದ್ದ. ಈತನೇ ಕೊಲೆ ಮಾಡಿರಬಹುದು ಎಂದು ದೂರು ನೀಡಲಾಗಿದೆ.

ಅಲ್ಲದೆ ಈ ಹಿಂದೆ ಎಂಐಎಂ ಮುಖಂಡ ತೌಫೀಕ್ ಶೇಖನ ಹೆಂಡತಿ, ವಿಜಯಪುರದ ರೇಷ್ಮಾಳ ಮನೆಗೆ ಬಂದು, ನನ್ನ ಗಂಡನ ಜೊತೆ ವಾಟ್ಸಾಫ್‍ನಲ್ಲಿ ಚಾಟಿಂಗ್ ಮಾಡುತ್ತೀ? ಅವನಿಗೂ ನಿನಗೂ ಏನು ಸಂಬಂಧ? ಎಂದು ಕ್ಯಾತೆ ತೆಗೆದು, ಜಗಳ ಮಾಡಿದ್ದಳು ಎನ್ನಲಾಗಿದೆ. ತೌಫೀಕ್ ಶೇಖ್ ಮತ್ತು ನನ್ನ ಮಧ್ಯೆ ಹಣಕಾಸಿನ ಸಂಬಂಧವಿದ್ದು, ಆತನ ಹೆಂಡತಿ ಇನ್ನಿಲ್ಲದ ಖ್ಯಾತೆ ತೆಗೆಯುತ್ತಿದ್ದಾಳೆ ಎಂದು ಆಕೆಯ ವಿರುದ್ಧ, ರೇಷ್ಮಾ ಪಡೇಕನೂರ ವಿಜಯಪುರದ ಜಲನಗರ ಠಾಣೆಯಲ್ಲಿ ದೂರು ನೀಡಿದ್ದಳು.

ರಾತ್ರಿ ಹೋದವಳು ಹೆಣವಾದಳು.

ಕೊಲೆ ನಡೆದ ದಿನ ರೇಷ್ಮಾ ಪಡೇಕನೂರ ರಾತ್ರಿ ತನ್ನ ವಿಜಯಪುರ ನಗರದ ಮನೆಯಿಂದ ಆಗಂತುಕನೊಂದಿಗೆ ಹೋದವಳು ಬೆಳಗಾಗುತ್ತಿದ್ದಂತೆ ಬಸವನಬಾಗೇವಾಡಿ ತಾಲೂಕಿನ ಕೊರ್ತಿ- ಕೊಲ್ಹಾರ ಸೇತುವೆ ಕೆಳಗೆ ಶವವಾಗಿ ಸುದ್ದಿಯಾದಳು. ಈ ನಿಗೂಢ ಕೊಲೆಗೆ ಜಿಲ್ಲೆಯ ಜನರು ತಲ್ಲಣಗೊಂಡದ್ದು ಒಂದೆಡೆಯಾದರೆ, ಇನ್ನೊಂದೆಡೆ ಹಲವು ಅನುಮಾನಗಳನ್ನು ಸಾರ್ವಜನಿಕರಲ್ಲಿ ಹುಟ್ಟು ಹಾಕಿದೆ.

ಜೆಡಿಎಸ್ ರಾಜ್ಯಾಧ್ಯಕ್ಷ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ, ಮಾಜಿ ಸಚಿವ ಎಸ್.ಆರ್. ಪಾಟೀಲ (ಬಾಡಗಂಡಿ), ಸಚಿವ ಎಂ.ಸಿ. ಮನಗೂಳಿ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ರೇಷ್ಮಾ ಪಡೇಕನೂರ ಕಳೆದ ವರ್ಷ ಎಂ.ಬಿ. ಪಾಟೀಲರ ಸಮ್ಮುಖದಲ್ಲಿ ಕಾಂಗ್ರೆಸ್‍ಗೆ ಸೇರ್ಪಡೆಗೊಂಡಿದ್ದಳು. ಆದರೆ ಮೊನ್ನೆ ಬರ್ಬರ ಹತ್ಯೆಯಾಗಿ, ಕೊಲ್ಹಾರ ಸೇತುವೆ ಕಳೆಗೆ ಬಿದ್ದಿದ್ದು ವಿಪರ್ಯಾಸ.

ವೈರಲ್ ಸುದ್ದಿ
ವಾಟ್ಸಾಫ್, ಫೇಸ್ಬುಕ್‍ನಲ್ಲಿ ರೇಷ್ಮಾ ಪಡೇಕನೂರ ಸಾವಿನ ಕುರಿತು ದಿನಕ್ಕೊಂದು ಸುದ್ದಿಗಳು ರೆಕ್ಕೆ, ಪುಕ್ಕ ಕಟ್ಟಿಕೊಂಡು ಹಾರಾಡುತ್ತಿವೆ. ತೌಫೀಕ್ ಶೇಖ್ ಮತ್ತು ರೇಷ್ಮಾ ಪಡೇಕನೂರ ನಡುವೆ ನಡೆದ ಸಂಭಾಷಣೆ ಸೇರಿದಂತೆ ಮೂರು ಆಡಿಯೋ ತುಣುಕುಗಳು ಜಿಲ್ಲೆಯಾದ್ಯಂತ ವೈರಲ್ ಆಗಿವೆ.

ಪೈಲ್ವಾನನ ಬಗ್ಗೆ ಹಗುರವಾಗಿ ಮಾತನಾಡಿದ ರೇಷ್ಮಾ ಪಡೇಕನೂರ ಅವರ ಧ್ವನಿ ಬಹುಶಃ ಕೊಲೆಗೆ ಕಾರಣವಾಗಿರಬಹುದೇ? ಫೈಲವಾನನ ಆಪ್ತರ ಮುಂದೆ ರೇಷ್ಮಾ ಪಡೇಕನೂರ ಅತ್ಯಂತ ಹೀನಾಯವಾಗಿ ಮಾತನಾಡಿದ್ದು, ಈ ಧ್ವನಿ ಮುದ್ರಿಕೆಯಲ್ಲಿ ಸ್ಪಷ್ಟವಾಗಿ ಕೇಳಿಬರುತ್ತದೆ. ಹಾಗಂತ ಇದನ್ನೆ ಪ್ರಮುಖ ಸಾಕ್ಷಿಯಾಗಿ ನಂಬುವಂತಿಲ್ಲ. ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಈ ಧ್ವನಿ ಮುದ್ರಿಕೆಗಳನ್ನು ಕಳಿಸಿ, ಸತ್ಯಾಸತ್ಯತೆಯನ್ನು ಪರೀಕ್ಷಿಸುವ ಅವಶ್ಯಕತೆಯೂ ಇದೆ. ದಿನ ಕಳೆದಂತೆ ರೇಷ್ಮಾ ಪಡೇಕನೂರ ಕಗ್ಗೊಲೆಯ ಹಿಂದಿನ ರಹಸ್ಯ ತೆರೆದಿಡುವ ಹೊಣೆಗಾರಿಕೆ ಜಿಲ್ಲೆ ಮತ್ತು ರಾಜ್ಯ ಪೊಲೀಸರ ಮೇಲಿದೆ. ಕೊಲೆಗೆ ಕಾರಣ ಏನೇ ಇರಲಿ ಆದರೆ ಜಿಲ್ಲೆಯಲ್ಲಿ ಕಾನೂನಿನ ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಈ ಕೊಲೆಯೇ ನಿಚ್ಚಳ ನಿದರ್ಶನವಾಗಿದೆ.

ಡಾ.ಎಂ.ಬಿ. ಪಾಟೀಲರು ಗೃಹ ಸಚಿವರಾದ ಮೇಲೆ ಹಳೇ ಕ್ರಿಮಿನಲ್‍ಗಳು ಹೊಸ ಅಪರಾಧ ಮಾಡಲು ಮುಂದಾಗುತ್ತಿದ್ದಾರೆ. ಜಿಲ್ಲೆಯಲ್ಲಿ ದಿನಕ್ಕೆ ಐದಾರು ಅಪರಾಧ ಪ್ರಕರಣಗಳು ಸಂಭವಿಸುತ್ತಿವೆ. ಇವುಗಳಿಗೆ ರಾಜಿ ಪಂಚಾಯಿತಿಯಲ್ಲಿ ಮುಕ್ತಿ ಕಾಣಿಸಲಾಗುತ್ತಿದೆ. ಇನ್ನುಳಿದಂತೆ ರೇಷ್ಮಾ ಪಡೇಕನೂರ ಕೊಲೆ ಪ್ರಕರಣಗಳನ್ನು ಗಂಭೀರವಾಗಿ ಹಾಗೂ ಸರಿಯಾದ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ತನಿಖೆಗೆ ಮುಂದಾಗಬೇಕು. ಅಂದಾಗ ಮಾತ್ರ ಈ ನಿಗೂಢ ಕೊಲೆಯ ಹಿಂದಿರುವ ಸಂಚು ಬಯಲಾಗಲು ಸಾಧ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...