Homeಕರ್ನಾಟಕಗೃಹ ಸಚಿವರ ಜಿಲ್ಲೆಯಲ್ಲೇ ಕಾಂಗ್ರೆಸ್ ನಾಯಕಿಯ ಭೀಕರ ಹತ್ಯೆ: ಒಂದು ಕೊಲೆಯ ಸುತ್ತ...

ಗೃಹ ಸಚಿವರ ಜಿಲ್ಲೆಯಲ್ಲೇ ಕಾಂಗ್ರೆಸ್ ನಾಯಕಿಯ ಭೀಕರ ಹತ್ಯೆ: ಒಂದು ಕೊಲೆಯ ಸುತ್ತ…

ವಾಟ್ಸಾಫ್, ಫೇಸ್ಬುಕ್‍ನಲ್ಲಿ ರೇಷ್ಮಾ ಪಡೇಕನೂರ ಸಾವಿನ ಕುರಿತು ದಿನಕ್ಕೊಂದು ಸುದ್ದಿಗಳು ರೆಕ್ಕೆ, ಪುಕ್ಕ ಕಟ್ಟಿಕೊಂಡು ಹಾರಾಡುತ್ತಿವೆ.

- Advertisement -
- Advertisement -

| ಶಿವಾ |

ಮಳೆ ನಿಂತರೂ ಮಳೆ ಹನಿ ನಿಲ್ಲುತ್ತಿಲ್ಲ ಎನ್ನುವಂತೆ, ಭೀಮೆಯ ಒಡಲು ಕೊಂಚಮಟ್ಟಿಗೆ ತಣ್ಣಗಾದರೂ; ಸೂಫಿ, ಸಂತರ ನಾಡಾದ ವಿಜಯಪುರದಲ್ಲಿ ಮಾತ್ರ ರಕ್ತದ ಹನಿ ಹನಿಯುತ್ತಲೇ ಇದೆ. ವೈಯಕ್ತಿಕ ದ್ವೇಷ, ಹಗೆತನಕ್ಕೆ ಈ ಹಿಂದೆ ಸಾಕಷ್ಟು ಹೆಣಗಳು ಬಿದ್ದಿವೆ. ಆದರೆ ಈಚೆಗೆ ನಡೆದ ಕಾಂಗ್ರೆಸ್ ನಾಯಕಿ ರೇಷ್ಮಾ ಪಡೇಕನೂರ ಭೀಕರ ಹತ್ಯೆ ಜಿಲ್ಲೆಯ ಜನರನ್ನು ಮತ್ತೆ ಬೆಚ್ಚಿ ಬೀಳುವಂತೆ ಮಾಡಿದ್ದು, ಗೃಹ ಸಚಿವ ಎಂ.ಬಿ. ಪಾಟೀಲರ ತವರೂರಲ್ಲಿಯೇ ತಮ್ಮದೇ ಪಕ್ಷದ ನಾಯಕಿಯೊಬ್ಬರು ಹೀಗೆ ಭೀಕರವಾಗಿ ಕೊಲೆಯಾಗಿರುವುದು ದುರಂತದ ಸಂಗತಿ.

ಮೊದಲೆಲ್ಲಾ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ರೇಷ್ಮಾ ಪಡೇಕನೂರ ರಾಜಕೀಯ ನಾಯಕಿ ಆಗಬೇಕೆನ್ನುವ ಹಂಬಲದಿಂದ ರಾಜಕೀಯಕ್ಕೆ ಧುಮ್ಮುಕ್ಕಿದ್ದಳು. ಇದೇ ಹತ್ತು, ಹನ್ನೆರಡು ವರ್ಷಗಳ ಹಿಂದೆ ಸಾಮಾನ್ಯ ಮಹಿಳೆಯಂತಿದ್ದ ರೇಷ್ಮಾ ಪಡೇಕನೂರ; ನೋಡುನೋಡುತ್ತಿದ್ದಂತೆ ಪ್ರಮುಖ ರಾಜಕೀಯ ನಾಯಕರೊಂದಿಗೆ ಆತ್ಮೀಯ ಒಡನಾಟ ಬೆಳೆಸಿಕೊಂಡು ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ತನ್ನ ವರ್ಚಸ್ಸು ಬೆಳೆಸಿಕೊಂಡಿದ್ದಳು. ಹೀಗೆ ರಾಜಕೀಯವಾಗಿ ಬೆಳೆದವಳು ಕೆಲವರೊಂದಿಗೆ ಹಣಕಾಸಿನ ವ್ಯವಹಾರ ಹೊಂದಿದ್ದಳು ಎಂದು ಹೇಳಲಾಗುತ್ತಿದ್ದು, ಈ ಹಣಕಾಸಿನ ವ್ಯವಹಾರದ ವೈಮನಸ್ಸಿಗೆ ರೇಷ್ಮಾ ಪಡೇಕನೂರ ಬಲಿಯಾದಳಾ? ಇಲ್ಲಾ ಅವಳು ರಾಜಕಾರಣಿ ಆಗಲು ಹೊರಟಿದ್ದ ಆ ರಾಜಕಾರಣವೇ ರೇಷ್ಮಾಳ ಬದುಕಿಗೆ ಮುಳ್ಳಾಯಿತಾ? ಅದ್ಯಾವ ಹಗೆತನ, ದ್ವೇಷಕ್ಕಾಗಿ ರೇಷ್ಮಾ ಕೊಲೆಯಾದಳು ಎನ್ನುವ ಪ್ರಶ್ನೆಗೆ ಪೊಲೀಸ್ ಇಲಾಖೆ ಉತ್ತರ ನೀಡಬೇಕಿದೆ.

ದಯೆ ಸ್ವಯಂ ಸೇವಾಸಂಸ್ಥೆ ಸಂಸ್ಥಾಪಕ ಅಧ್ಯಕ್ಷೆಯಾದ ರೇಷ್ಮಾ ಪಡೇಕನೂರ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ಹಾಗೂ ಈ ಹಿಂದೆ ಜೆಡಿಎಸ್ ವಿಜಯಪುರ ಜಿಲ್ಲಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿ, ಕಳೆದ ವರ್ಷವಷ್ಟೇ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಳು. ಇಂತಹ ರಾಜಕೀಯ ಧುರೀಣೆಯನ್ನು ದುಷ್ಕರ್ಮಿಗಳು ಕೊಲೆ ಮಾಡಿರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಕೊಲೆಯಾದ ರೇಷ್ಮಾ ಪತಿ ಖಾಜಾ ಬಂದೇನವಾಜ್ ಪಡೇಕನೂರ ಸೊಲ್ಲಾಪುರದ ಎಐಎಂಐಎಂ ಪಕ್ಷದ ಮುಖಂಡ ಫೈಲವಾನ್ ತೌಫೀಕ್ ಇಸ್ಮಾಯಿಲ್ ಶೇಖ್ ಎಂಬವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ತೌಫೀಕ್ ಶೇಖ ಜೊತೆಗೆ ರೇಷ್ಮಾ ಪಡೇಕನೂರಳ ಹಣಕಾಸಿನ ವ್ಯವಹಾರವಿತ್ತು. ಈ ಕುರಿತು ಕೆಲ ದಿನಗಳ ಹಿಂದೆ ಇಬ್ಬರ ನಡುವೆ ಜಗಳವೂ ನಡೆದಿತ್ತು. ಈ ಸಂಬಂಧ ಸೊಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ಸಹ ನೀಡಲಾಗಿತ್ತು. ಈತನೇ ಮೊನ್ನೆ ರಾತ್ರಿ, ಹಣಕಾಸಿನ ವಿಷಯ ಮಾತನಾಡಲಿಕ್ಕಾಗಿಯೇ ರೇಷ್ಮಾಳನ್ನು ಮನೆಯಿಂದ ಹೊರಗೆ ಕರೆದೊಯ್ದಿದ್ದ. ಈತನೇ ಕೊಲೆ ಮಾಡಿರಬಹುದು ಎಂದು ದೂರು ನೀಡಲಾಗಿದೆ.

ಅಲ್ಲದೆ ಈ ಹಿಂದೆ ಎಂಐಎಂ ಮುಖಂಡ ತೌಫೀಕ್ ಶೇಖನ ಹೆಂಡತಿ, ವಿಜಯಪುರದ ರೇಷ್ಮಾಳ ಮನೆಗೆ ಬಂದು, ನನ್ನ ಗಂಡನ ಜೊತೆ ವಾಟ್ಸಾಫ್‍ನಲ್ಲಿ ಚಾಟಿಂಗ್ ಮಾಡುತ್ತೀ? ಅವನಿಗೂ ನಿನಗೂ ಏನು ಸಂಬಂಧ? ಎಂದು ಕ್ಯಾತೆ ತೆಗೆದು, ಜಗಳ ಮಾಡಿದ್ದಳು ಎನ್ನಲಾಗಿದೆ. ತೌಫೀಕ್ ಶೇಖ್ ಮತ್ತು ನನ್ನ ಮಧ್ಯೆ ಹಣಕಾಸಿನ ಸಂಬಂಧವಿದ್ದು, ಆತನ ಹೆಂಡತಿ ಇನ್ನಿಲ್ಲದ ಖ್ಯಾತೆ ತೆಗೆಯುತ್ತಿದ್ದಾಳೆ ಎಂದು ಆಕೆಯ ವಿರುದ್ಧ, ರೇಷ್ಮಾ ಪಡೇಕನೂರ ವಿಜಯಪುರದ ಜಲನಗರ ಠಾಣೆಯಲ್ಲಿ ದೂರು ನೀಡಿದ್ದಳು.

ರಾತ್ರಿ ಹೋದವಳು ಹೆಣವಾದಳು.

ಕೊಲೆ ನಡೆದ ದಿನ ರೇಷ್ಮಾ ಪಡೇಕನೂರ ರಾತ್ರಿ ತನ್ನ ವಿಜಯಪುರ ನಗರದ ಮನೆಯಿಂದ ಆಗಂತುಕನೊಂದಿಗೆ ಹೋದವಳು ಬೆಳಗಾಗುತ್ತಿದ್ದಂತೆ ಬಸವನಬಾಗೇವಾಡಿ ತಾಲೂಕಿನ ಕೊರ್ತಿ- ಕೊಲ್ಹಾರ ಸೇತುವೆ ಕೆಳಗೆ ಶವವಾಗಿ ಸುದ್ದಿಯಾದಳು. ಈ ನಿಗೂಢ ಕೊಲೆಗೆ ಜಿಲ್ಲೆಯ ಜನರು ತಲ್ಲಣಗೊಂಡದ್ದು ಒಂದೆಡೆಯಾದರೆ, ಇನ್ನೊಂದೆಡೆ ಹಲವು ಅನುಮಾನಗಳನ್ನು ಸಾರ್ವಜನಿಕರಲ್ಲಿ ಹುಟ್ಟು ಹಾಕಿದೆ.

ಜೆಡಿಎಸ್ ರಾಜ್ಯಾಧ್ಯಕ್ಷ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ, ಮಾಜಿ ಸಚಿವ ಎಸ್.ಆರ್. ಪಾಟೀಲ (ಬಾಡಗಂಡಿ), ಸಚಿವ ಎಂ.ಸಿ. ಮನಗೂಳಿ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ರೇಷ್ಮಾ ಪಡೇಕನೂರ ಕಳೆದ ವರ್ಷ ಎಂ.ಬಿ. ಪಾಟೀಲರ ಸಮ್ಮುಖದಲ್ಲಿ ಕಾಂಗ್ರೆಸ್‍ಗೆ ಸೇರ್ಪಡೆಗೊಂಡಿದ್ದಳು. ಆದರೆ ಮೊನ್ನೆ ಬರ್ಬರ ಹತ್ಯೆಯಾಗಿ, ಕೊಲ್ಹಾರ ಸೇತುವೆ ಕಳೆಗೆ ಬಿದ್ದಿದ್ದು ವಿಪರ್ಯಾಸ.

ವೈರಲ್ ಸುದ್ದಿ
ವಾಟ್ಸಾಫ್, ಫೇಸ್ಬುಕ್‍ನಲ್ಲಿ ರೇಷ್ಮಾ ಪಡೇಕನೂರ ಸಾವಿನ ಕುರಿತು ದಿನಕ್ಕೊಂದು ಸುದ್ದಿಗಳು ರೆಕ್ಕೆ, ಪುಕ್ಕ ಕಟ್ಟಿಕೊಂಡು ಹಾರಾಡುತ್ತಿವೆ. ತೌಫೀಕ್ ಶೇಖ್ ಮತ್ತು ರೇಷ್ಮಾ ಪಡೇಕನೂರ ನಡುವೆ ನಡೆದ ಸಂಭಾಷಣೆ ಸೇರಿದಂತೆ ಮೂರು ಆಡಿಯೋ ತುಣುಕುಗಳು ಜಿಲ್ಲೆಯಾದ್ಯಂತ ವೈರಲ್ ಆಗಿವೆ.

ಪೈಲ್ವಾನನ ಬಗ್ಗೆ ಹಗುರವಾಗಿ ಮಾತನಾಡಿದ ರೇಷ್ಮಾ ಪಡೇಕನೂರ ಅವರ ಧ್ವನಿ ಬಹುಶಃ ಕೊಲೆಗೆ ಕಾರಣವಾಗಿರಬಹುದೇ? ಫೈಲವಾನನ ಆಪ್ತರ ಮುಂದೆ ರೇಷ್ಮಾ ಪಡೇಕನೂರ ಅತ್ಯಂತ ಹೀನಾಯವಾಗಿ ಮಾತನಾಡಿದ್ದು, ಈ ಧ್ವನಿ ಮುದ್ರಿಕೆಯಲ್ಲಿ ಸ್ಪಷ್ಟವಾಗಿ ಕೇಳಿಬರುತ್ತದೆ. ಹಾಗಂತ ಇದನ್ನೆ ಪ್ರಮುಖ ಸಾಕ್ಷಿಯಾಗಿ ನಂಬುವಂತಿಲ್ಲ. ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಈ ಧ್ವನಿ ಮುದ್ರಿಕೆಗಳನ್ನು ಕಳಿಸಿ, ಸತ್ಯಾಸತ್ಯತೆಯನ್ನು ಪರೀಕ್ಷಿಸುವ ಅವಶ್ಯಕತೆಯೂ ಇದೆ. ದಿನ ಕಳೆದಂತೆ ರೇಷ್ಮಾ ಪಡೇಕನೂರ ಕಗ್ಗೊಲೆಯ ಹಿಂದಿನ ರಹಸ್ಯ ತೆರೆದಿಡುವ ಹೊಣೆಗಾರಿಕೆ ಜಿಲ್ಲೆ ಮತ್ತು ರಾಜ್ಯ ಪೊಲೀಸರ ಮೇಲಿದೆ. ಕೊಲೆಗೆ ಕಾರಣ ಏನೇ ಇರಲಿ ಆದರೆ ಜಿಲ್ಲೆಯಲ್ಲಿ ಕಾನೂನಿನ ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಈ ಕೊಲೆಯೇ ನಿಚ್ಚಳ ನಿದರ್ಶನವಾಗಿದೆ.

ಡಾ.ಎಂ.ಬಿ. ಪಾಟೀಲರು ಗೃಹ ಸಚಿವರಾದ ಮೇಲೆ ಹಳೇ ಕ್ರಿಮಿನಲ್‍ಗಳು ಹೊಸ ಅಪರಾಧ ಮಾಡಲು ಮುಂದಾಗುತ್ತಿದ್ದಾರೆ. ಜಿಲ್ಲೆಯಲ್ಲಿ ದಿನಕ್ಕೆ ಐದಾರು ಅಪರಾಧ ಪ್ರಕರಣಗಳು ಸಂಭವಿಸುತ್ತಿವೆ. ಇವುಗಳಿಗೆ ರಾಜಿ ಪಂಚಾಯಿತಿಯಲ್ಲಿ ಮುಕ್ತಿ ಕಾಣಿಸಲಾಗುತ್ತಿದೆ. ಇನ್ನುಳಿದಂತೆ ರೇಷ್ಮಾ ಪಡೇಕನೂರ ಕೊಲೆ ಪ್ರಕರಣಗಳನ್ನು ಗಂಭೀರವಾಗಿ ಹಾಗೂ ಸರಿಯಾದ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ತನಿಖೆಗೆ ಮುಂದಾಗಬೇಕು. ಅಂದಾಗ ಮಾತ್ರ ಈ ನಿಗೂಢ ಕೊಲೆಯ ಹಿಂದಿರುವ ಸಂಚು ಬಯಲಾಗಲು ಸಾಧ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...