Homeಕರ್ನಾಟಕಗೃಹ ಸಚಿವರ ಜಿಲ್ಲೆಯಲ್ಲೇ ಕಾಂಗ್ರೆಸ್ ನಾಯಕಿಯ ಭೀಕರ ಹತ್ಯೆ: ಒಂದು ಕೊಲೆಯ ಸುತ್ತ...

ಗೃಹ ಸಚಿವರ ಜಿಲ್ಲೆಯಲ್ಲೇ ಕಾಂಗ್ರೆಸ್ ನಾಯಕಿಯ ಭೀಕರ ಹತ್ಯೆ: ಒಂದು ಕೊಲೆಯ ಸುತ್ತ…

ವಾಟ್ಸಾಫ್, ಫೇಸ್ಬುಕ್‍ನಲ್ಲಿ ರೇಷ್ಮಾ ಪಡೇಕನೂರ ಸಾವಿನ ಕುರಿತು ದಿನಕ್ಕೊಂದು ಸುದ್ದಿಗಳು ರೆಕ್ಕೆ, ಪುಕ್ಕ ಕಟ್ಟಿಕೊಂಡು ಹಾರಾಡುತ್ತಿವೆ.

- Advertisement -
- Advertisement -

| ಶಿವಾ |

ಮಳೆ ನಿಂತರೂ ಮಳೆ ಹನಿ ನಿಲ್ಲುತ್ತಿಲ್ಲ ಎನ್ನುವಂತೆ, ಭೀಮೆಯ ಒಡಲು ಕೊಂಚಮಟ್ಟಿಗೆ ತಣ್ಣಗಾದರೂ; ಸೂಫಿ, ಸಂತರ ನಾಡಾದ ವಿಜಯಪುರದಲ್ಲಿ ಮಾತ್ರ ರಕ್ತದ ಹನಿ ಹನಿಯುತ್ತಲೇ ಇದೆ. ವೈಯಕ್ತಿಕ ದ್ವೇಷ, ಹಗೆತನಕ್ಕೆ ಈ ಹಿಂದೆ ಸಾಕಷ್ಟು ಹೆಣಗಳು ಬಿದ್ದಿವೆ. ಆದರೆ ಈಚೆಗೆ ನಡೆದ ಕಾಂಗ್ರೆಸ್ ನಾಯಕಿ ರೇಷ್ಮಾ ಪಡೇಕನೂರ ಭೀಕರ ಹತ್ಯೆ ಜಿಲ್ಲೆಯ ಜನರನ್ನು ಮತ್ತೆ ಬೆಚ್ಚಿ ಬೀಳುವಂತೆ ಮಾಡಿದ್ದು, ಗೃಹ ಸಚಿವ ಎಂ.ಬಿ. ಪಾಟೀಲರ ತವರೂರಲ್ಲಿಯೇ ತಮ್ಮದೇ ಪಕ್ಷದ ನಾಯಕಿಯೊಬ್ಬರು ಹೀಗೆ ಭೀಕರವಾಗಿ ಕೊಲೆಯಾಗಿರುವುದು ದುರಂತದ ಸಂಗತಿ.

ಮೊದಲೆಲ್ಲಾ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ರೇಷ್ಮಾ ಪಡೇಕನೂರ ರಾಜಕೀಯ ನಾಯಕಿ ಆಗಬೇಕೆನ್ನುವ ಹಂಬಲದಿಂದ ರಾಜಕೀಯಕ್ಕೆ ಧುಮ್ಮುಕ್ಕಿದ್ದಳು. ಇದೇ ಹತ್ತು, ಹನ್ನೆರಡು ವರ್ಷಗಳ ಹಿಂದೆ ಸಾಮಾನ್ಯ ಮಹಿಳೆಯಂತಿದ್ದ ರೇಷ್ಮಾ ಪಡೇಕನೂರ; ನೋಡುನೋಡುತ್ತಿದ್ದಂತೆ ಪ್ರಮುಖ ರಾಜಕೀಯ ನಾಯಕರೊಂದಿಗೆ ಆತ್ಮೀಯ ಒಡನಾಟ ಬೆಳೆಸಿಕೊಂಡು ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ತನ್ನ ವರ್ಚಸ್ಸು ಬೆಳೆಸಿಕೊಂಡಿದ್ದಳು. ಹೀಗೆ ರಾಜಕೀಯವಾಗಿ ಬೆಳೆದವಳು ಕೆಲವರೊಂದಿಗೆ ಹಣಕಾಸಿನ ವ್ಯವಹಾರ ಹೊಂದಿದ್ದಳು ಎಂದು ಹೇಳಲಾಗುತ್ತಿದ್ದು, ಈ ಹಣಕಾಸಿನ ವ್ಯವಹಾರದ ವೈಮನಸ್ಸಿಗೆ ರೇಷ್ಮಾ ಪಡೇಕನೂರ ಬಲಿಯಾದಳಾ? ಇಲ್ಲಾ ಅವಳು ರಾಜಕಾರಣಿ ಆಗಲು ಹೊರಟಿದ್ದ ಆ ರಾಜಕಾರಣವೇ ರೇಷ್ಮಾಳ ಬದುಕಿಗೆ ಮುಳ್ಳಾಯಿತಾ? ಅದ್ಯಾವ ಹಗೆತನ, ದ್ವೇಷಕ್ಕಾಗಿ ರೇಷ್ಮಾ ಕೊಲೆಯಾದಳು ಎನ್ನುವ ಪ್ರಶ್ನೆಗೆ ಪೊಲೀಸ್ ಇಲಾಖೆ ಉತ್ತರ ನೀಡಬೇಕಿದೆ.

ದಯೆ ಸ್ವಯಂ ಸೇವಾಸಂಸ್ಥೆ ಸಂಸ್ಥಾಪಕ ಅಧ್ಯಕ್ಷೆಯಾದ ರೇಷ್ಮಾ ಪಡೇಕನೂರ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ಹಾಗೂ ಈ ಹಿಂದೆ ಜೆಡಿಎಸ್ ವಿಜಯಪುರ ಜಿಲ್ಲಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿ, ಕಳೆದ ವರ್ಷವಷ್ಟೇ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಳು. ಇಂತಹ ರಾಜಕೀಯ ಧುರೀಣೆಯನ್ನು ದುಷ್ಕರ್ಮಿಗಳು ಕೊಲೆ ಮಾಡಿರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಕೊಲೆಯಾದ ರೇಷ್ಮಾ ಪತಿ ಖಾಜಾ ಬಂದೇನವಾಜ್ ಪಡೇಕನೂರ ಸೊಲ್ಲಾಪುರದ ಎಐಎಂಐಎಂ ಪಕ್ಷದ ಮುಖಂಡ ಫೈಲವಾನ್ ತೌಫೀಕ್ ಇಸ್ಮಾಯಿಲ್ ಶೇಖ್ ಎಂಬವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ತೌಫೀಕ್ ಶೇಖ ಜೊತೆಗೆ ರೇಷ್ಮಾ ಪಡೇಕನೂರಳ ಹಣಕಾಸಿನ ವ್ಯವಹಾರವಿತ್ತು. ಈ ಕುರಿತು ಕೆಲ ದಿನಗಳ ಹಿಂದೆ ಇಬ್ಬರ ನಡುವೆ ಜಗಳವೂ ನಡೆದಿತ್ತು. ಈ ಸಂಬಂಧ ಸೊಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ಸಹ ನೀಡಲಾಗಿತ್ತು. ಈತನೇ ಮೊನ್ನೆ ರಾತ್ರಿ, ಹಣಕಾಸಿನ ವಿಷಯ ಮಾತನಾಡಲಿಕ್ಕಾಗಿಯೇ ರೇಷ್ಮಾಳನ್ನು ಮನೆಯಿಂದ ಹೊರಗೆ ಕರೆದೊಯ್ದಿದ್ದ. ಈತನೇ ಕೊಲೆ ಮಾಡಿರಬಹುದು ಎಂದು ದೂರು ನೀಡಲಾಗಿದೆ.

ಅಲ್ಲದೆ ಈ ಹಿಂದೆ ಎಂಐಎಂ ಮುಖಂಡ ತೌಫೀಕ್ ಶೇಖನ ಹೆಂಡತಿ, ವಿಜಯಪುರದ ರೇಷ್ಮಾಳ ಮನೆಗೆ ಬಂದು, ನನ್ನ ಗಂಡನ ಜೊತೆ ವಾಟ್ಸಾಫ್‍ನಲ್ಲಿ ಚಾಟಿಂಗ್ ಮಾಡುತ್ತೀ? ಅವನಿಗೂ ನಿನಗೂ ಏನು ಸಂಬಂಧ? ಎಂದು ಕ್ಯಾತೆ ತೆಗೆದು, ಜಗಳ ಮಾಡಿದ್ದಳು ಎನ್ನಲಾಗಿದೆ. ತೌಫೀಕ್ ಶೇಖ್ ಮತ್ತು ನನ್ನ ಮಧ್ಯೆ ಹಣಕಾಸಿನ ಸಂಬಂಧವಿದ್ದು, ಆತನ ಹೆಂಡತಿ ಇನ್ನಿಲ್ಲದ ಖ್ಯಾತೆ ತೆಗೆಯುತ್ತಿದ್ದಾಳೆ ಎಂದು ಆಕೆಯ ವಿರುದ್ಧ, ರೇಷ್ಮಾ ಪಡೇಕನೂರ ವಿಜಯಪುರದ ಜಲನಗರ ಠಾಣೆಯಲ್ಲಿ ದೂರು ನೀಡಿದ್ದಳು.

ರಾತ್ರಿ ಹೋದವಳು ಹೆಣವಾದಳು.

ಕೊಲೆ ನಡೆದ ದಿನ ರೇಷ್ಮಾ ಪಡೇಕನೂರ ರಾತ್ರಿ ತನ್ನ ವಿಜಯಪುರ ನಗರದ ಮನೆಯಿಂದ ಆಗಂತುಕನೊಂದಿಗೆ ಹೋದವಳು ಬೆಳಗಾಗುತ್ತಿದ್ದಂತೆ ಬಸವನಬಾಗೇವಾಡಿ ತಾಲೂಕಿನ ಕೊರ್ತಿ- ಕೊಲ್ಹಾರ ಸೇತುವೆ ಕೆಳಗೆ ಶವವಾಗಿ ಸುದ್ದಿಯಾದಳು. ಈ ನಿಗೂಢ ಕೊಲೆಗೆ ಜಿಲ್ಲೆಯ ಜನರು ತಲ್ಲಣಗೊಂಡದ್ದು ಒಂದೆಡೆಯಾದರೆ, ಇನ್ನೊಂದೆಡೆ ಹಲವು ಅನುಮಾನಗಳನ್ನು ಸಾರ್ವಜನಿಕರಲ್ಲಿ ಹುಟ್ಟು ಹಾಕಿದೆ.

ಜೆಡಿಎಸ್ ರಾಜ್ಯಾಧ್ಯಕ್ಷ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ, ಮಾಜಿ ಸಚಿವ ಎಸ್.ಆರ್. ಪಾಟೀಲ (ಬಾಡಗಂಡಿ), ಸಚಿವ ಎಂ.ಸಿ. ಮನಗೂಳಿ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ರೇಷ್ಮಾ ಪಡೇಕನೂರ ಕಳೆದ ವರ್ಷ ಎಂ.ಬಿ. ಪಾಟೀಲರ ಸಮ್ಮುಖದಲ್ಲಿ ಕಾಂಗ್ರೆಸ್‍ಗೆ ಸೇರ್ಪಡೆಗೊಂಡಿದ್ದಳು. ಆದರೆ ಮೊನ್ನೆ ಬರ್ಬರ ಹತ್ಯೆಯಾಗಿ, ಕೊಲ್ಹಾರ ಸೇತುವೆ ಕಳೆಗೆ ಬಿದ್ದಿದ್ದು ವಿಪರ್ಯಾಸ.

ವೈರಲ್ ಸುದ್ದಿ
ವಾಟ್ಸಾಫ್, ಫೇಸ್ಬುಕ್‍ನಲ್ಲಿ ರೇಷ್ಮಾ ಪಡೇಕನೂರ ಸಾವಿನ ಕುರಿತು ದಿನಕ್ಕೊಂದು ಸುದ್ದಿಗಳು ರೆಕ್ಕೆ, ಪುಕ್ಕ ಕಟ್ಟಿಕೊಂಡು ಹಾರಾಡುತ್ತಿವೆ. ತೌಫೀಕ್ ಶೇಖ್ ಮತ್ತು ರೇಷ್ಮಾ ಪಡೇಕನೂರ ನಡುವೆ ನಡೆದ ಸಂಭಾಷಣೆ ಸೇರಿದಂತೆ ಮೂರು ಆಡಿಯೋ ತುಣುಕುಗಳು ಜಿಲ್ಲೆಯಾದ್ಯಂತ ವೈರಲ್ ಆಗಿವೆ.

ಪೈಲ್ವಾನನ ಬಗ್ಗೆ ಹಗುರವಾಗಿ ಮಾತನಾಡಿದ ರೇಷ್ಮಾ ಪಡೇಕನೂರ ಅವರ ಧ್ವನಿ ಬಹುಶಃ ಕೊಲೆಗೆ ಕಾರಣವಾಗಿರಬಹುದೇ? ಫೈಲವಾನನ ಆಪ್ತರ ಮುಂದೆ ರೇಷ್ಮಾ ಪಡೇಕನೂರ ಅತ್ಯಂತ ಹೀನಾಯವಾಗಿ ಮಾತನಾಡಿದ್ದು, ಈ ಧ್ವನಿ ಮುದ್ರಿಕೆಯಲ್ಲಿ ಸ್ಪಷ್ಟವಾಗಿ ಕೇಳಿಬರುತ್ತದೆ. ಹಾಗಂತ ಇದನ್ನೆ ಪ್ರಮುಖ ಸಾಕ್ಷಿಯಾಗಿ ನಂಬುವಂತಿಲ್ಲ. ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಈ ಧ್ವನಿ ಮುದ್ರಿಕೆಗಳನ್ನು ಕಳಿಸಿ, ಸತ್ಯಾಸತ್ಯತೆಯನ್ನು ಪರೀಕ್ಷಿಸುವ ಅವಶ್ಯಕತೆಯೂ ಇದೆ. ದಿನ ಕಳೆದಂತೆ ರೇಷ್ಮಾ ಪಡೇಕನೂರ ಕಗ್ಗೊಲೆಯ ಹಿಂದಿನ ರಹಸ್ಯ ತೆರೆದಿಡುವ ಹೊಣೆಗಾರಿಕೆ ಜಿಲ್ಲೆ ಮತ್ತು ರಾಜ್ಯ ಪೊಲೀಸರ ಮೇಲಿದೆ. ಕೊಲೆಗೆ ಕಾರಣ ಏನೇ ಇರಲಿ ಆದರೆ ಜಿಲ್ಲೆಯಲ್ಲಿ ಕಾನೂನಿನ ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಈ ಕೊಲೆಯೇ ನಿಚ್ಚಳ ನಿದರ್ಶನವಾಗಿದೆ.

ಡಾ.ಎಂ.ಬಿ. ಪಾಟೀಲರು ಗೃಹ ಸಚಿವರಾದ ಮೇಲೆ ಹಳೇ ಕ್ರಿಮಿನಲ್‍ಗಳು ಹೊಸ ಅಪರಾಧ ಮಾಡಲು ಮುಂದಾಗುತ್ತಿದ್ದಾರೆ. ಜಿಲ್ಲೆಯಲ್ಲಿ ದಿನಕ್ಕೆ ಐದಾರು ಅಪರಾಧ ಪ್ರಕರಣಗಳು ಸಂಭವಿಸುತ್ತಿವೆ. ಇವುಗಳಿಗೆ ರಾಜಿ ಪಂಚಾಯಿತಿಯಲ್ಲಿ ಮುಕ್ತಿ ಕಾಣಿಸಲಾಗುತ್ತಿದೆ. ಇನ್ನುಳಿದಂತೆ ರೇಷ್ಮಾ ಪಡೇಕನೂರ ಕೊಲೆ ಪ್ರಕರಣಗಳನ್ನು ಗಂಭೀರವಾಗಿ ಹಾಗೂ ಸರಿಯಾದ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ತನಿಖೆಗೆ ಮುಂದಾಗಬೇಕು. ಅಂದಾಗ ಮಾತ್ರ ಈ ನಿಗೂಢ ಕೊಲೆಯ ಹಿಂದಿರುವ ಸಂಚು ಬಯಲಾಗಲು ಸಾಧ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...