Homeಕರ್ನಾಟಕಗೃಹ ಸಚಿವರ ಜಿಲ್ಲೆಯಲ್ಲೇ ಕಾಂಗ್ರೆಸ್ ನಾಯಕಿಯ ಭೀಕರ ಹತ್ಯೆ: ಒಂದು ಕೊಲೆಯ ಸುತ್ತ...

ಗೃಹ ಸಚಿವರ ಜಿಲ್ಲೆಯಲ್ಲೇ ಕಾಂಗ್ರೆಸ್ ನಾಯಕಿಯ ಭೀಕರ ಹತ್ಯೆ: ಒಂದು ಕೊಲೆಯ ಸುತ್ತ…

ವಾಟ್ಸಾಫ್, ಫೇಸ್ಬುಕ್‍ನಲ್ಲಿ ರೇಷ್ಮಾ ಪಡೇಕನೂರ ಸಾವಿನ ಕುರಿತು ದಿನಕ್ಕೊಂದು ಸುದ್ದಿಗಳು ರೆಕ್ಕೆ, ಪುಕ್ಕ ಕಟ್ಟಿಕೊಂಡು ಹಾರಾಡುತ್ತಿವೆ.

- Advertisement -
- Advertisement -

| ಶಿವಾ |

ಮಳೆ ನಿಂತರೂ ಮಳೆ ಹನಿ ನಿಲ್ಲುತ್ತಿಲ್ಲ ಎನ್ನುವಂತೆ, ಭೀಮೆಯ ಒಡಲು ಕೊಂಚಮಟ್ಟಿಗೆ ತಣ್ಣಗಾದರೂ; ಸೂಫಿ, ಸಂತರ ನಾಡಾದ ವಿಜಯಪುರದಲ್ಲಿ ಮಾತ್ರ ರಕ್ತದ ಹನಿ ಹನಿಯುತ್ತಲೇ ಇದೆ. ವೈಯಕ್ತಿಕ ದ್ವೇಷ, ಹಗೆತನಕ್ಕೆ ಈ ಹಿಂದೆ ಸಾಕಷ್ಟು ಹೆಣಗಳು ಬಿದ್ದಿವೆ. ಆದರೆ ಈಚೆಗೆ ನಡೆದ ಕಾಂಗ್ರೆಸ್ ನಾಯಕಿ ರೇಷ್ಮಾ ಪಡೇಕನೂರ ಭೀಕರ ಹತ್ಯೆ ಜಿಲ್ಲೆಯ ಜನರನ್ನು ಮತ್ತೆ ಬೆಚ್ಚಿ ಬೀಳುವಂತೆ ಮಾಡಿದ್ದು, ಗೃಹ ಸಚಿವ ಎಂ.ಬಿ. ಪಾಟೀಲರ ತವರೂರಲ್ಲಿಯೇ ತಮ್ಮದೇ ಪಕ್ಷದ ನಾಯಕಿಯೊಬ್ಬರು ಹೀಗೆ ಭೀಕರವಾಗಿ ಕೊಲೆಯಾಗಿರುವುದು ದುರಂತದ ಸಂಗತಿ.

ಮೊದಲೆಲ್ಲಾ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ರೇಷ್ಮಾ ಪಡೇಕನೂರ ರಾಜಕೀಯ ನಾಯಕಿ ಆಗಬೇಕೆನ್ನುವ ಹಂಬಲದಿಂದ ರಾಜಕೀಯಕ್ಕೆ ಧುಮ್ಮುಕ್ಕಿದ್ದಳು. ಇದೇ ಹತ್ತು, ಹನ್ನೆರಡು ವರ್ಷಗಳ ಹಿಂದೆ ಸಾಮಾನ್ಯ ಮಹಿಳೆಯಂತಿದ್ದ ರೇಷ್ಮಾ ಪಡೇಕನೂರ; ನೋಡುನೋಡುತ್ತಿದ್ದಂತೆ ಪ್ರಮುಖ ರಾಜಕೀಯ ನಾಯಕರೊಂದಿಗೆ ಆತ್ಮೀಯ ಒಡನಾಟ ಬೆಳೆಸಿಕೊಂಡು ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ತನ್ನ ವರ್ಚಸ್ಸು ಬೆಳೆಸಿಕೊಂಡಿದ್ದಳು. ಹೀಗೆ ರಾಜಕೀಯವಾಗಿ ಬೆಳೆದವಳು ಕೆಲವರೊಂದಿಗೆ ಹಣಕಾಸಿನ ವ್ಯವಹಾರ ಹೊಂದಿದ್ದಳು ಎಂದು ಹೇಳಲಾಗುತ್ತಿದ್ದು, ಈ ಹಣಕಾಸಿನ ವ್ಯವಹಾರದ ವೈಮನಸ್ಸಿಗೆ ರೇಷ್ಮಾ ಪಡೇಕನೂರ ಬಲಿಯಾದಳಾ? ಇಲ್ಲಾ ಅವಳು ರಾಜಕಾರಣಿ ಆಗಲು ಹೊರಟಿದ್ದ ಆ ರಾಜಕಾರಣವೇ ರೇಷ್ಮಾಳ ಬದುಕಿಗೆ ಮುಳ್ಳಾಯಿತಾ? ಅದ್ಯಾವ ಹಗೆತನ, ದ್ವೇಷಕ್ಕಾಗಿ ರೇಷ್ಮಾ ಕೊಲೆಯಾದಳು ಎನ್ನುವ ಪ್ರಶ್ನೆಗೆ ಪೊಲೀಸ್ ಇಲಾಖೆ ಉತ್ತರ ನೀಡಬೇಕಿದೆ.

ದಯೆ ಸ್ವಯಂ ಸೇವಾಸಂಸ್ಥೆ ಸಂಸ್ಥಾಪಕ ಅಧ್ಯಕ್ಷೆಯಾದ ರೇಷ್ಮಾ ಪಡೇಕನೂರ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ಹಾಗೂ ಈ ಹಿಂದೆ ಜೆಡಿಎಸ್ ವಿಜಯಪುರ ಜಿಲ್ಲಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿ, ಕಳೆದ ವರ್ಷವಷ್ಟೇ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಳು. ಇಂತಹ ರಾಜಕೀಯ ಧುರೀಣೆಯನ್ನು ದುಷ್ಕರ್ಮಿಗಳು ಕೊಲೆ ಮಾಡಿರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಕೊಲೆಯಾದ ರೇಷ್ಮಾ ಪತಿ ಖಾಜಾ ಬಂದೇನವಾಜ್ ಪಡೇಕನೂರ ಸೊಲ್ಲಾಪುರದ ಎಐಎಂಐಎಂ ಪಕ್ಷದ ಮುಖಂಡ ಫೈಲವಾನ್ ತೌಫೀಕ್ ಇಸ್ಮಾಯಿಲ್ ಶೇಖ್ ಎಂಬವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ತೌಫೀಕ್ ಶೇಖ ಜೊತೆಗೆ ರೇಷ್ಮಾ ಪಡೇಕನೂರಳ ಹಣಕಾಸಿನ ವ್ಯವಹಾರವಿತ್ತು. ಈ ಕುರಿತು ಕೆಲ ದಿನಗಳ ಹಿಂದೆ ಇಬ್ಬರ ನಡುವೆ ಜಗಳವೂ ನಡೆದಿತ್ತು. ಈ ಸಂಬಂಧ ಸೊಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ಸಹ ನೀಡಲಾಗಿತ್ತು. ಈತನೇ ಮೊನ್ನೆ ರಾತ್ರಿ, ಹಣಕಾಸಿನ ವಿಷಯ ಮಾತನಾಡಲಿಕ್ಕಾಗಿಯೇ ರೇಷ್ಮಾಳನ್ನು ಮನೆಯಿಂದ ಹೊರಗೆ ಕರೆದೊಯ್ದಿದ್ದ. ಈತನೇ ಕೊಲೆ ಮಾಡಿರಬಹುದು ಎಂದು ದೂರು ನೀಡಲಾಗಿದೆ.

ಅಲ್ಲದೆ ಈ ಹಿಂದೆ ಎಂಐಎಂ ಮುಖಂಡ ತೌಫೀಕ್ ಶೇಖನ ಹೆಂಡತಿ, ವಿಜಯಪುರದ ರೇಷ್ಮಾಳ ಮನೆಗೆ ಬಂದು, ನನ್ನ ಗಂಡನ ಜೊತೆ ವಾಟ್ಸಾಫ್‍ನಲ್ಲಿ ಚಾಟಿಂಗ್ ಮಾಡುತ್ತೀ? ಅವನಿಗೂ ನಿನಗೂ ಏನು ಸಂಬಂಧ? ಎಂದು ಕ್ಯಾತೆ ತೆಗೆದು, ಜಗಳ ಮಾಡಿದ್ದಳು ಎನ್ನಲಾಗಿದೆ. ತೌಫೀಕ್ ಶೇಖ್ ಮತ್ತು ನನ್ನ ಮಧ್ಯೆ ಹಣಕಾಸಿನ ಸಂಬಂಧವಿದ್ದು, ಆತನ ಹೆಂಡತಿ ಇನ್ನಿಲ್ಲದ ಖ್ಯಾತೆ ತೆಗೆಯುತ್ತಿದ್ದಾಳೆ ಎಂದು ಆಕೆಯ ವಿರುದ್ಧ, ರೇಷ್ಮಾ ಪಡೇಕನೂರ ವಿಜಯಪುರದ ಜಲನಗರ ಠಾಣೆಯಲ್ಲಿ ದೂರು ನೀಡಿದ್ದಳು.

ರಾತ್ರಿ ಹೋದವಳು ಹೆಣವಾದಳು.

ಕೊಲೆ ನಡೆದ ದಿನ ರೇಷ್ಮಾ ಪಡೇಕನೂರ ರಾತ್ರಿ ತನ್ನ ವಿಜಯಪುರ ನಗರದ ಮನೆಯಿಂದ ಆಗಂತುಕನೊಂದಿಗೆ ಹೋದವಳು ಬೆಳಗಾಗುತ್ತಿದ್ದಂತೆ ಬಸವನಬಾಗೇವಾಡಿ ತಾಲೂಕಿನ ಕೊರ್ತಿ- ಕೊಲ್ಹಾರ ಸೇತುವೆ ಕೆಳಗೆ ಶವವಾಗಿ ಸುದ್ದಿಯಾದಳು. ಈ ನಿಗೂಢ ಕೊಲೆಗೆ ಜಿಲ್ಲೆಯ ಜನರು ತಲ್ಲಣಗೊಂಡದ್ದು ಒಂದೆಡೆಯಾದರೆ, ಇನ್ನೊಂದೆಡೆ ಹಲವು ಅನುಮಾನಗಳನ್ನು ಸಾರ್ವಜನಿಕರಲ್ಲಿ ಹುಟ್ಟು ಹಾಕಿದೆ.

ಜೆಡಿಎಸ್ ರಾಜ್ಯಾಧ್ಯಕ್ಷ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ, ಮಾಜಿ ಸಚಿವ ಎಸ್.ಆರ್. ಪಾಟೀಲ (ಬಾಡಗಂಡಿ), ಸಚಿವ ಎಂ.ಸಿ. ಮನಗೂಳಿ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ರೇಷ್ಮಾ ಪಡೇಕನೂರ ಕಳೆದ ವರ್ಷ ಎಂ.ಬಿ. ಪಾಟೀಲರ ಸಮ್ಮುಖದಲ್ಲಿ ಕಾಂಗ್ರೆಸ್‍ಗೆ ಸೇರ್ಪಡೆಗೊಂಡಿದ್ದಳು. ಆದರೆ ಮೊನ್ನೆ ಬರ್ಬರ ಹತ್ಯೆಯಾಗಿ, ಕೊಲ್ಹಾರ ಸೇತುವೆ ಕಳೆಗೆ ಬಿದ್ದಿದ್ದು ವಿಪರ್ಯಾಸ.

ವೈರಲ್ ಸುದ್ದಿ
ವಾಟ್ಸಾಫ್, ಫೇಸ್ಬುಕ್‍ನಲ್ಲಿ ರೇಷ್ಮಾ ಪಡೇಕನೂರ ಸಾವಿನ ಕುರಿತು ದಿನಕ್ಕೊಂದು ಸುದ್ದಿಗಳು ರೆಕ್ಕೆ, ಪುಕ್ಕ ಕಟ್ಟಿಕೊಂಡು ಹಾರಾಡುತ್ತಿವೆ. ತೌಫೀಕ್ ಶೇಖ್ ಮತ್ತು ರೇಷ್ಮಾ ಪಡೇಕನೂರ ನಡುವೆ ನಡೆದ ಸಂಭಾಷಣೆ ಸೇರಿದಂತೆ ಮೂರು ಆಡಿಯೋ ತುಣುಕುಗಳು ಜಿಲ್ಲೆಯಾದ್ಯಂತ ವೈರಲ್ ಆಗಿವೆ.

ಪೈಲ್ವಾನನ ಬಗ್ಗೆ ಹಗುರವಾಗಿ ಮಾತನಾಡಿದ ರೇಷ್ಮಾ ಪಡೇಕನೂರ ಅವರ ಧ್ವನಿ ಬಹುಶಃ ಕೊಲೆಗೆ ಕಾರಣವಾಗಿರಬಹುದೇ? ಫೈಲವಾನನ ಆಪ್ತರ ಮುಂದೆ ರೇಷ್ಮಾ ಪಡೇಕನೂರ ಅತ್ಯಂತ ಹೀನಾಯವಾಗಿ ಮಾತನಾಡಿದ್ದು, ಈ ಧ್ವನಿ ಮುದ್ರಿಕೆಯಲ್ಲಿ ಸ್ಪಷ್ಟವಾಗಿ ಕೇಳಿಬರುತ್ತದೆ. ಹಾಗಂತ ಇದನ್ನೆ ಪ್ರಮುಖ ಸಾಕ್ಷಿಯಾಗಿ ನಂಬುವಂತಿಲ್ಲ. ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಈ ಧ್ವನಿ ಮುದ್ರಿಕೆಗಳನ್ನು ಕಳಿಸಿ, ಸತ್ಯಾಸತ್ಯತೆಯನ್ನು ಪರೀಕ್ಷಿಸುವ ಅವಶ್ಯಕತೆಯೂ ಇದೆ. ದಿನ ಕಳೆದಂತೆ ರೇಷ್ಮಾ ಪಡೇಕನೂರ ಕಗ್ಗೊಲೆಯ ಹಿಂದಿನ ರಹಸ್ಯ ತೆರೆದಿಡುವ ಹೊಣೆಗಾರಿಕೆ ಜಿಲ್ಲೆ ಮತ್ತು ರಾಜ್ಯ ಪೊಲೀಸರ ಮೇಲಿದೆ. ಕೊಲೆಗೆ ಕಾರಣ ಏನೇ ಇರಲಿ ಆದರೆ ಜಿಲ್ಲೆಯಲ್ಲಿ ಕಾನೂನಿನ ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಈ ಕೊಲೆಯೇ ನಿಚ್ಚಳ ನಿದರ್ಶನವಾಗಿದೆ.

ಡಾ.ಎಂ.ಬಿ. ಪಾಟೀಲರು ಗೃಹ ಸಚಿವರಾದ ಮೇಲೆ ಹಳೇ ಕ್ರಿಮಿನಲ್‍ಗಳು ಹೊಸ ಅಪರಾಧ ಮಾಡಲು ಮುಂದಾಗುತ್ತಿದ್ದಾರೆ. ಜಿಲ್ಲೆಯಲ್ಲಿ ದಿನಕ್ಕೆ ಐದಾರು ಅಪರಾಧ ಪ್ರಕರಣಗಳು ಸಂಭವಿಸುತ್ತಿವೆ. ಇವುಗಳಿಗೆ ರಾಜಿ ಪಂಚಾಯಿತಿಯಲ್ಲಿ ಮುಕ್ತಿ ಕಾಣಿಸಲಾಗುತ್ತಿದೆ. ಇನ್ನುಳಿದಂತೆ ರೇಷ್ಮಾ ಪಡೇಕನೂರ ಕೊಲೆ ಪ್ರಕರಣಗಳನ್ನು ಗಂಭೀರವಾಗಿ ಹಾಗೂ ಸರಿಯಾದ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ತನಿಖೆಗೆ ಮುಂದಾಗಬೇಕು. ಅಂದಾಗ ಮಾತ್ರ ಈ ನಿಗೂಢ ಕೊಲೆಯ ಹಿಂದಿರುವ ಸಂಚು ಬಯಲಾಗಲು ಸಾಧ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...