Homeಕರ್ನಾಟಕಗೃಹ ಸಚಿವರ ಜಿಲ್ಲೆಯಲ್ಲೇ ಕಾಂಗ್ರೆಸ್ ನಾಯಕಿಯ ಭೀಕರ ಹತ್ಯೆ: ಒಂದು ಕೊಲೆಯ ಸುತ್ತ...

ಗೃಹ ಸಚಿವರ ಜಿಲ್ಲೆಯಲ್ಲೇ ಕಾಂಗ್ರೆಸ್ ನಾಯಕಿಯ ಭೀಕರ ಹತ್ಯೆ: ಒಂದು ಕೊಲೆಯ ಸುತ್ತ…

ವಾಟ್ಸಾಫ್, ಫೇಸ್ಬುಕ್‍ನಲ್ಲಿ ರೇಷ್ಮಾ ಪಡೇಕನೂರ ಸಾವಿನ ಕುರಿತು ದಿನಕ್ಕೊಂದು ಸುದ್ದಿಗಳು ರೆಕ್ಕೆ, ಪುಕ್ಕ ಕಟ್ಟಿಕೊಂಡು ಹಾರಾಡುತ್ತಿವೆ.

- Advertisement -
- Advertisement -

| ಶಿವಾ |

ಮಳೆ ನಿಂತರೂ ಮಳೆ ಹನಿ ನಿಲ್ಲುತ್ತಿಲ್ಲ ಎನ್ನುವಂತೆ, ಭೀಮೆಯ ಒಡಲು ಕೊಂಚಮಟ್ಟಿಗೆ ತಣ್ಣಗಾದರೂ; ಸೂಫಿ, ಸಂತರ ನಾಡಾದ ವಿಜಯಪುರದಲ್ಲಿ ಮಾತ್ರ ರಕ್ತದ ಹನಿ ಹನಿಯುತ್ತಲೇ ಇದೆ. ವೈಯಕ್ತಿಕ ದ್ವೇಷ, ಹಗೆತನಕ್ಕೆ ಈ ಹಿಂದೆ ಸಾಕಷ್ಟು ಹೆಣಗಳು ಬಿದ್ದಿವೆ. ಆದರೆ ಈಚೆಗೆ ನಡೆದ ಕಾಂಗ್ರೆಸ್ ನಾಯಕಿ ರೇಷ್ಮಾ ಪಡೇಕನೂರ ಭೀಕರ ಹತ್ಯೆ ಜಿಲ್ಲೆಯ ಜನರನ್ನು ಮತ್ತೆ ಬೆಚ್ಚಿ ಬೀಳುವಂತೆ ಮಾಡಿದ್ದು, ಗೃಹ ಸಚಿವ ಎಂ.ಬಿ. ಪಾಟೀಲರ ತವರೂರಲ್ಲಿಯೇ ತಮ್ಮದೇ ಪಕ್ಷದ ನಾಯಕಿಯೊಬ್ಬರು ಹೀಗೆ ಭೀಕರವಾಗಿ ಕೊಲೆಯಾಗಿರುವುದು ದುರಂತದ ಸಂಗತಿ.

ಮೊದಲೆಲ್ಲಾ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ರೇಷ್ಮಾ ಪಡೇಕನೂರ ರಾಜಕೀಯ ನಾಯಕಿ ಆಗಬೇಕೆನ್ನುವ ಹಂಬಲದಿಂದ ರಾಜಕೀಯಕ್ಕೆ ಧುಮ್ಮುಕ್ಕಿದ್ದಳು. ಇದೇ ಹತ್ತು, ಹನ್ನೆರಡು ವರ್ಷಗಳ ಹಿಂದೆ ಸಾಮಾನ್ಯ ಮಹಿಳೆಯಂತಿದ್ದ ರೇಷ್ಮಾ ಪಡೇಕನೂರ; ನೋಡುನೋಡುತ್ತಿದ್ದಂತೆ ಪ್ರಮುಖ ರಾಜಕೀಯ ನಾಯಕರೊಂದಿಗೆ ಆತ್ಮೀಯ ಒಡನಾಟ ಬೆಳೆಸಿಕೊಂಡು ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ತನ್ನ ವರ್ಚಸ್ಸು ಬೆಳೆಸಿಕೊಂಡಿದ್ದಳು. ಹೀಗೆ ರಾಜಕೀಯವಾಗಿ ಬೆಳೆದವಳು ಕೆಲವರೊಂದಿಗೆ ಹಣಕಾಸಿನ ವ್ಯವಹಾರ ಹೊಂದಿದ್ದಳು ಎಂದು ಹೇಳಲಾಗುತ್ತಿದ್ದು, ಈ ಹಣಕಾಸಿನ ವ್ಯವಹಾರದ ವೈಮನಸ್ಸಿಗೆ ರೇಷ್ಮಾ ಪಡೇಕನೂರ ಬಲಿಯಾದಳಾ? ಇಲ್ಲಾ ಅವಳು ರಾಜಕಾರಣಿ ಆಗಲು ಹೊರಟಿದ್ದ ಆ ರಾಜಕಾರಣವೇ ರೇಷ್ಮಾಳ ಬದುಕಿಗೆ ಮುಳ್ಳಾಯಿತಾ? ಅದ್ಯಾವ ಹಗೆತನ, ದ್ವೇಷಕ್ಕಾಗಿ ರೇಷ್ಮಾ ಕೊಲೆಯಾದಳು ಎನ್ನುವ ಪ್ರಶ್ನೆಗೆ ಪೊಲೀಸ್ ಇಲಾಖೆ ಉತ್ತರ ನೀಡಬೇಕಿದೆ.

ದಯೆ ಸ್ವಯಂ ಸೇವಾಸಂಸ್ಥೆ ಸಂಸ್ಥಾಪಕ ಅಧ್ಯಕ್ಷೆಯಾದ ರೇಷ್ಮಾ ಪಡೇಕನೂರ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ಹಾಗೂ ಈ ಹಿಂದೆ ಜೆಡಿಎಸ್ ವಿಜಯಪುರ ಜಿಲ್ಲಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿ, ಕಳೆದ ವರ್ಷವಷ್ಟೇ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಳು. ಇಂತಹ ರಾಜಕೀಯ ಧುರೀಣೆಯನ್ನು ದುಷ್ಕರ್ಮಿಗಳು ಕೊಲೆ ಮಾಡಿರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಕೊಲೆಯಾದ ರೇಷ್ಮಾ ಪತಿ ಖಾಜಾ ಬಂದೇನವಾಜ್ ಪಡೇಕನೂರ ಸೊಲ್ಲಾಪುರದ ಎಐಎಂಐಎಂ ಪಕ್ಷದ ಮುಖಂಡ ಫೈಲವಾನ್ ತೌಫೀಕ್ ಇಸ್ಮಾಯಿಲ್ ಶೇಖ್ ಎಂಬವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ತೌಫೀಕ್ ಶೇಖ ಜೊತೆಗೆ ರೇಷ್ಮಾ ಪಡೇಕನೂರಳ ಹಣಕಾಸಿನ ವ್ಯವಹಾರವಿತ್ತು. ಈ ಕುರಿತು ಕೆಲ ದಿನಗಳ ಹಿಂದೆ ಇಬ್ಬರ ನಡುವೆ ಜಗಳವೂ ನಡೆದಿತ್ತು. ಈ ಸಂಬಂಧ ಸೊಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ಸಹ ನೀಡಲಾಗಿತ್ತು. ಈತನೇ ಮೊನ್ನೆ ರಾತ್ರಿ, ಹಣಕಾಸಿನ ವಿಷಯ ಮಾತನಾಡಲಿಕ್ಕಾಗಿಯೇ ರೇಷ್ಮಾಳನ್ನು ಮನೆಯಿಂದ ಹೊರಗೆ ಕರೆದೊಯ್ದಿದ್ದ. ಈತನೇ ಕೊಲೆ ಮಾಡಿರಬಹುದು ಎಂದು ದೂರು ನೀಡಲಾಗಿದೆ.

ಅಲ್ಲದೆ ಈ ಹಿಂದೆ ಎಂಐಎಂ ಮುಖಂಡ ತೌಫೀಕ್ ಶೇಖನ ಹೆಂಡತಿ, ವಿಜಯಪುರದ ರೇಷ್ಮಾಳ ಮನೆಗೆ ಬಂದು, ನನ್ನ ಗಂಡನ ಜೊತೆ ವಾಟ್ಸಾಫ್‍ನಲ್ಲಿ ಚಾಟಿಂಗ್ ಮಾಡುತ್ತೀ? ಅವನಿಗೂ ನಿನಗೂ ಏನು ಸಂಬಂಧ? ಎಂದು ಕ್ಯಾತೆ ತೆಗೆದು, ಜಗಳ ಮಾಡಿದ್ದಳು ಎನ್ನಲಾಗಿದೆ. ತೌಫೀಕ್ ಶೇಖ್ ಮತ್ತು ನನ್ನ ಮಧ್ಯೆ ಹಣಕಾಸಿನ ಸಂಬಂಧವಿದ್ದು, ಆತನ ಹೆಂಡತಿ ಇನ್ನಿಲ್ಲದ ಖ್ಯಾತೆ ತೆಗೆಯುತ್ತಿದ್ದಾಳೆ ಎಂದು ಆಕೆಯ ವಿರುದ್ಧ, ರೇಷ್ಮಾ ಪಡೇಕನೂರ ವಿಜಯಪುರದ ಜಲನಗರ ಠಾಣೆಯಲ್ಲಿ ದೂರು ನೀಡಿದ್ದಳು.

ರಾತ್ರಿ ಹೋದವಳು ಹೆಣವಾದಳು.

ಕೊಲೆ ನಡೆದ ದಿನ ರೇಷ್ಮಾ ಪಡೇಕನೂರ ರಾತ್ರಿ ತನ್ನ ವಿಜಯಪುರ ನಗರದ ಮನೆಯಿಂದ ಆಗಂತುಕನೊಂದಿಗೆ ಹೋದವಳು ಬೆಳಗಾಗುತ್ತಿದ್ದಂತೆ ಬಸವನಬಾಗೇವಾಡಿ ತಾಲೂಕಿನ ಕೊರ್ತಿ- ಕೊಲ್ಹಾರ ಸೇತುವೆ ಕೆಳಗೆ ಶವವಾಗಿ ಸುದ್ದಿಯಾದಳು. ಈ ನಿಗೂಢ ಕೊಲೆಗೆ ಜಿಲ್ಲೆಯ ಜನರು ತಲ್ಲಣಗೊಂಡದ್ದು ಒಂದೆಡೆಯಾದರೆ, ಇನ್ನೊಂದೆಡೆ ಹಲವು ಅನುಮಾನಗಳನ್ನು ಸಾರ್ವಜನಿಕರಲ್ಲಿ ಹುಟ್ಟು ಹಾಕಿದೆ.

ಜೆಡಿಎಸ್ ರಾಜ್ಯಾಧ್ಯಕ್ಷ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ, ಮಾಜಿ ಸಚಿವ ಎಸ್.ಆರ್. ಪಾಟೀಲ (ಬಾಡಗಂಡಿ), ಸಚಿವ ಎಂ.ಸಿ. ಮನಗೂಳಿ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ರೇಷ್ಮಾ ಪಡೇಕನೂರ ಕಳೆದ ವರ್ಷ ಎಂ.ಬಿ. ಪಾಟೀಲರ ಸಮ್ಮುಖದಲ್ಲಿ ಕಾಂಗ್ರೆಸ್‍ಗೆ ಸೇರ್ಪಡೆಗೊಂಡಿದ್ದಳು. ಆದರೆ ಮೊನ್ನೆ ಬರ್ಬರ ಹತ್ಯೆಯಾಗಿ, ಕೊಲ್ಹಾರ ಸೇತುವೆ ಕಳೆಗೆ ಬಿದ್ದಿದ್ದು ವಿಪರ್ಯಾಸ.

ವೈರಲ್ ಸುದ್ದಿ
ವಾಟ್ಸಾಫ್, ಫೇಸ್ಬುಕ್‍ನಲ್ಲಿ ರೇಷ್ಮಾ ಪಡೇಕನೂರ ಸಾವಿನ ಕುರಿತು ದಿನಕ್ಕೊಂದು ಸುದ್ದಿಗಳು ರೆಕ್ಕೆ, ಪುಕ್ಕ ಕಟ್ಟಿಕೊಂಡು ಹಾರಾಡುತ್ತಿವೆ. ತೌಫೀಕ್ ಶೇಖ್ ಮತ್ತು ರೇಷ್ಮಾ ಪಡೇಕನೂರ ನಡುವೆ ನಡೆದ ಸಂಭಾಷಣೆ ಸೇರಿದಂತೆ ಮೂರು ಆಡಿಯೋ ತುಣುಕುಗಳು ಜಿಲ್ಲೆಯಾದ್ಯಂತ ವೈರಲ್ ಆಗಿವೆ.

ಪೈಲ್ವಾನನ ಬಗ್ಗೆ ಹಗುರವಾಗಿ ಮಾತನಾಡಿದ ರೇಷ್ಮಾ ಪಡೇಕನೂರ ಅವರ ಧ್ವನಿ ಬಹುಶಃ ಕೊಲೆಗೆ ಕಾರಣವಾಗಿರಬಹುದೇ? ಫೈಲವಾನನ ಆಪ್ತರ ಮುಂದೆ ರೇಷ್ಮಾ ಪಡೇಕನೂರ ಅತ್ಯಂತ ಹೀನಾಯವಾಗಿ ಮಾತನಾಡಿದ್ದು, ಈ ಧ್ವನಿ ಮುದ್ರಿಕೆಯಲ್ಲಿ ಸ್ಪಷ್ಟವಾಗಿ ಕೇಳಿಬರುತ್ತದೆ. ಹಾಗಂತ ಇದನ್ನೆ ಪ್ರಮುಖ ಸಾಕ್ಷಿಯಾಗಿ ನಂಬುವಂತಿಲ್ಲ. ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಈ ಧ್ವನಿ ಮುದ್ರಿಕೆಗಳನ್ನು ಕಳಿಸಿ, ಸತ್ಯಾಸತ್ಯತೆಯನ್ನು ಪರೀಕ್ಷಿಸುವ ಅವಶ್ಯಕತೆಯೂ ಇದೆ. ದಿನ ಕಳೆದಂತೆ ರೇಷ್ಮಾ ಪಡೇಕನೂರ ಕಗ್ಗೊಲೆಯ ಹಿಂದಿನ ರಹಸ್ಯ ತೆರೆದಿಡುವ ಹೊಣೆಗಾರಿಕೆ ಜಿಲ್ಲೆ ಮತ್ತು ರಾಜ್ಯ ಪೊಲೀಸರ ಮೇಲಿದೆ. ಕೊಲೆಗೆ ಕಾರಣ ಏನೇ ಇರಲಿ ಆದರೆ ಜಿಲ್ಲೆಯಲ್ಲಿ ಕಾನೂನಿನ ಸುವ್ಯವಸ್ಥೆ ಹದಗೆಟ್ಟಿದೆ ಎಂಬುದಕ್ಕೆ ಈ ಕೊಲೆಯೇ ನಿಚ್ಚಳ ನಿದರ್ಶನವಾಗಿದೆ.

ಡಾ.ಎಂ.ಬಿ. ಪಾಟೀಲರು ಗೃಹ ಸಚಿವರಾದ ಮೇಲೆ ಹಳೇ ಕ್ರಿಮಿನಲ್‍ಗಳು ಹೊಸ ಅಪರಾಧ ಮಾಡಲು ಮುಂದಾಗುತ್ತಿದ್ದಾರೆ. ಜಿಲ್ಲೆಯಲ್ಲಿ ದಿನಕ್ಕೆ ಐದಾರು ಅಪರಾಧ ಪ್ರಕರಣಗಳು ಸಂಭವಿಸುತ್ತಿವೆ. ಇವುಗಳಿಗೆ ರಾಜಿ ಪಂಚಾಯಿತಿಯಲ್ಲಿ ಮುಕ್ತಿ ಕಾಣಿಸಲಾಗುತ್ತಿದೆ. ಇನ್ನುಳಿದಂತೆ ರೇಷ್ಮಾ ಪಡೇಕನೂರ ಕೊಲೆ ಪ್ರಕರಣಗಳನ್ನು ಗಂಭೀರವಾಗಿ ಹಾಗೂ ಸರಿಯಾದ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ತನಿಖೆಗೆ ಮುಂದಾಗಬೇಕು. ಅಂದಾಗ ಮಾತ್ರ ಈ ನಿಗೂಢ ಕೊಲೆಯ ಹಿಂದಿರುವ ಸಂಚು ಬಯಲಾಗಲು ಸಾಧ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...