Homeಮುಖಪುಟನಟಿ ನಿಕಿತಾಗೆ ವಿಧಿಸಿದ್ದ ನಿಷೇಧ ದರ್ಶನ್‌ಗೆ ಏಕಿಲ್ಲ?

ನಟಿ ನಿಕಿತಾಗೆ ವಿಧಿಸಿದ್ದ ನಿಷೇಧ ದರ್ಶನ್‌ಗೆ ಏಕಿಲ್ಲ?

- Advertisement -
- Advertisement -

ಸ್ಯಾಂಡಲ್‌ವುಡ್‌ ನಟ ದರ್ಶನ್ ಅವರನ್ನು ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಪ್ರಸ್ತುತ ದರ್ಶನ್, ಅವರ ಆಪ್ತೆ ಪೌವಿತ್ರಾ ಗೌಡ ಸೇರಿದಂತೆ ಪ್ರಕರಣದ 13 ಆರೋಪಿಗಳನ್ನು ನ್ಯಾಯಾಲಯ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

ಪೌವಿತ್ರಾ ಗೌಡಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳಿಸಿದ್ದಕ್ಕೆ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಎಂಬಾತನಿಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ಆರೋಪ ದರ್ಶನ್ ಮತ್ತು ಇತರರ ಮೇಲಿದೆ.

ಕೊಲೆ ಪ್ರಕರಣದಲ್ಲಿ ದರ್ಶನ್‌ ಬಂಧನವಾಗಿದೆ ಎಂಬ ವಿಷಯ ಹೊರ ಬೀಳುತ್ತಿದ್ದಂತೆ ರಾಜ್ಯಾಧ್ಯಂತ ದರ್ಶನ್ ವಿರುದ್ದ ದೊಡ್ಡ ಮಟ್ಟದಲ್ಲಿ ಜನಾಕ್ರೋಶ ವ್ಯಕ್ತವಾಗುತ್ತಿದೆ. ಚಿತ್ರದುರ್ಗ, ಮಂಡ್ಯ ಸೇರಿದಂತೆ ಕೆಲವೆಡೆ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಕಾನೂನು ಕ್ರಮ ಒಂದೆಡೆಯಾದರೆ, ದರ್ಶನ್ ಅವರನ್ನು ಕನ್ನಡ ಚಿತ್ರ ರಂಗದಿಂದ ಹೊರ ಹಾಕಬೇಕು ಎಂಬ ಆಗ್ರಹಗಳು ಎಲ್ಲೆಡೆ ವ್ಯಕ್ತವಾಗುತ್ತಿದೆ.

ಆದರೆ, ಈ ಕುರಿತು ಪ್ರತಿಕ್ರಿಯಿಸಿರುವ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್‌.ಎಂ ಸುರೇಶ್ ” ನಮಗೂ ಕೆಲವು ದೂರುಗಳು ಬಂದಿವೆ. ಅದಕ್ಕಾಗಿ ಕಲಾವಿದರ ಸಂಘ ಇದೆ. ಚಲನಚಿತ್ರ ವಾಣಿಜ್ಯ ಮಂಡಳಿ ಇರುವುದು ನಿರ್ಮಾಪಕರು, ವಿತರಕರು ಮತ್ತು ಪ್ರದರ್ಶಕರಿಗಾಗಿ ಮಾತ್ರ. ಅದಾಗ್ಯೂ ನಾವು ಈ ಬಗ್ಗೆ ಪ್ರತಿಕ್ರಿಯಿಸಲು ಪ್ರಯತ್ನಿಸಿದ್ದೇವೆ. ನಾವು ಕಲಾವಿದರ ಸಂಘದೊಂದಿಗೆ ಮಾತನಾಡಿದ್ದೇವೆ. ಚರ್ಚೆಗೆ ನಾನು ಸಭೆ ಕರೆಯುತ್ತೇನೆ. ಪೊಲೀಸ್ ತನಿಖೆ ಮುಗಿದು. ಅವರು ಚಾರ್ಜ್ ಶೀಟ್ ಸಲ್ಲಿಸುವವರೆಗೂ ಆರೋಪಿಗಳು ಅಪರಾಧಿಯಾಗುವುದಿಲ್ಲ. ಪೊಲೀಸ್ ಕಾನೂನು ಕ್ರಮ ಮುಗಿದ ನಂತರ ನಾವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

ನಿಕಿತಾರನ್ನು ಮೂರು ವರ್ಷ ಬ್ಯಾನ್ ಮಾಡಲಾಗಿತ್ತು

ದರ್ಶನ್ ಮತ್ತು ಅವರ ಪತ್ನಿ ವಿಜಯಲಕ್ಷ್ಮಿ ನಡುವೆ ವಿವಾದ ಸೃಷ್ಟಿಸಿದ ಆರೋಪದ ಮೇಲೆ ನಟಿ ನಿಕಿತಾ ತುಕ್ರಾಲ್ ಅವರ ಮೇಲೆ 2011ರಲ್ಲಿ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘವು ಮೂರು ವರ್ಷಗಳ ಕಾಲ ನಿಷೇಧ ಹೇರಿತ್ತು. ಬಳಿಕ ವಾಪಸ್ ಪಡೆದಿತ್ತು.

ಅಂದು ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಂಘದ ಕಾರ್ಯದರ್ಶಿ ಸೂರಪ್ಪ ಬಾಬು, ಕನ್ನಡ ಚಿತ್ರರಂಗ ಮತ್ತು ವಿಜಯಲಕ್ಷ್ಮಿ ಅವರ ಹಿತದೃಷ್ಟಿಯಿಂದ ಹಾಗೂ ಮಾನವೀಯ ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದರು.

“ವಿಜಯಲಕ್ಷ್ಮಿಗೆ ಸಮಸ್ಯೆಗಳನ್ನು ಸೃಷ್ಟಿಸುವಲ್ಲಿ ನಿಕಿತಾ ಪಾತ್ರದ ಬಗ್ಗೆ ಎಲ್ಲರಿಗೂ ತಿಳಿದಿದೆ. ಹೀರೋಗಳು ಮತ್ತು ಅವರ ಪತ್ನಿಯರ ನಡುವೆ ಸಮಸ್ಯೆ ಸೃಷ್ಟಿಸುವ ನಾಯಕಿಯರು ನಮಗೆ ಬೇಡ” ಎಂದು ಸೂರಪ್ಪ ಬಾಬು ಹೇಳಿದ್ದರು. ನಿಕಿತಾಗೆ ಮೂರು ವರ್ಷಗಳ ಕಾಲ ಯಾವುದೇ ಕನ್ನಡ ಚಿತ್ರದಲ್ಲಿ ನಟಿಸಲು ಅವಕಾಶ ನೀಡುವುದಿಲ್ಲ ಎಂದು ಆಗ ಹೇಳಲಾಗಿತ್ತು. ಈ ಕ್ರಮ ಕೈಗೊಳ್ಳುವ ವೇಳೆ ದರ್ಶನ್ ಅಭಿನಯದ ‘ಸಂಗೊಳ್ಳಿ ರಾಯಣ್ಣ’ ಚಿತ್ರಕ್ಕೆ ನಾಯಕಿಯಾಗಿ ನಿಕಿತಾ ನಟಿಸುತ್ತಿದ್ದರು. ಈ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದರು.

ಯಾವ ಜಾರ್ಜ್ ಶೀಟ್ ಮೇಲೆ ನಿಕಿತಾರನ್ನು ಬ್ಯಾನ್ ಮಾಡಿದ್ರಿ?

“ದರ್ಶನ್ ಮೇಲೆ ಆರೋಪ ಕೇಳಿ ಬಂದಿದೆ. ಪೊಲೀಸ್ ತನಿಖೆ ಮುಗಿದು, ಅವರು ಚಾರ್ಜ್ ಶೀಟ್ ಸಲ್ಲಿಸುವವರೆಗೂ ಆರೋಪಿಗಳು ಅಪರಾಧಿಯಾಗುವುದಿಲ್ಲ. ಪೊಲೀಸ್ ಕಾನೂನು ಕ್ರಮ ಮುಗಿದ ನಂತರ ನಾವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್‌.ಎಂ ಸುರೇಶ್ ಹೇಳಿದ್ದಾರೆ. ಹಾಗಾದರೆ, ನಿಕಿತಾ ಅವರನ್ನು ಯಾವ ಚಾರ್ಜ್ ಶೀಟ್ ಮೇಲೆ ಬ್ಯಾನ್ ಮಾಡಿದ್ದರು? ಎಂದು ಜನರು ಪ್ರಶ್ನೆ ಮಾಡಿದ್ದಾರೆ.

ದರ್ಶನ್ ವಿರುದ್ದ ಗಂಭೀರ ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸಿ ಚಾರ್ಜ್ ಶೀಟ್ ಹಾಕಲಿದ್ದಾರೆ. ಆದರೆ, ನಿಕಿತಾ ವಿರುದ್ದ ಯಾವುದೇ ಕ್ರಿಮಿನ್ ಪ್ರಕರಣ ದಾಖಲಾಗಿರಲಿಲ್ಲ. ಆದರೂ, ಇದೇ ದರ್ಶನ್ ವಿಚಾರದಲ್ಲಿ ನಿಕಿತಾರನ್ನು ಬ್ಯಾನ್ ಮಾಡಿದ್ದು ಹೇಗೆ? ಎಂಬ ಪ್ರಶ್ನೆಗಳು ವ್ಯಕ್ತವಾಗಿದೆ.

ದರ್ಶನ್ ಪ್ರಭಾವಿ ಎಂದು ವಿನಾಯಿತಿ?

ನಟಿ ನಿಕಿತಾಗೆ ಹೋಲಿಸಿದ್ರೆ ದರ್ಶನ್ ಪ್ರಭಾವಿ ವ್ಯಕ್ತಿ. ಕನ್ನಡ ಚಿತ್ರ ರಂಗದ ಪ್ರಮುಖ ನಟನಾಗಿರುವ ದರ್ಶನ್ ಭಾರೀ ಅಭಿಮಾನಿಗಳನ್ನೂ ಹೊಂದಿದ್ದಾರೆ. ಅವರಿಗೆ ವಿವಿಧ ಪಕ್ಷಗಳ ರಾಜಕೀಯ ನಾಯಕರ ಸಂಪರ್ಕವೂ ಇದೆ. ಈ ಎಲ್ಲಾ ಕಾರಣಕ್ಕೆ ಅವರ ವಿರುದ್ದ ಕ್ರಮ ಕೈಗೊಳ್ಳಲು ಮಿನಾಮೇಷ ಎನಿಸಲಾಗುತ್ತಿದ್ದೆಯಾ? ಎಂಬ ಪ್ರಶ್ನೆ ಎದ್ದಿದೆ.

ಇದನ್ನೂ ಓದಿ : ಅಗತ್ಯ ಬಿದ್ದರೆ ಬಿ.ಎಸ್.ಯಡಿಯೂರಪ್ಪ ಬಂಧನ: ಡಾ.ಜಿ.ಪರಮೇಶ್ವರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...