Homeಮುಖಪುಟನಟಿ ನಿಕಿತಾಗೆ ವಿಧಿಸಿದ್ದ ನಿಷೇಧ ದರ್ಶನ್‌ಗೆ ಏಕಿಲ್ಲ?

ನಟಿ ನಿಕಿತಾಗೆ ವಿಧಿಸಿದ್ದ ನಿಷೇಧ ದರ್ಶನ್‌ಗೆ ಏಕಿಲ್ಲ?

- Advertisement -
- Advertisement -

ಸ್ಯಾಂಡಲ್‌ವುಡ್‌ ನಟ ದರ್ಶನ್ ಅವರನ್ನು ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಪ್ರಸ್ತುತ ದರ್ಶನ್, ಅವರ ಆಪ್ತೆ ಪೌವಿತ್ರಾ ಗೌಡ ಸೇರಿದಂತೆ ಪ್ರಕರಣದ 13 ಆರೋಪಿಗಳನ್ನು ನ್ಯಾಯಾಲಯ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

ಪೌವಿತ್ರಾ ಗೌಡಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳಿಸಿದ್ದಕ್ಕೆ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಎಂಬಾತನಿಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ಆರೋಪ ದರ್ಶನ್ ಮತ್ತು ಇತರರ ಮೇಲಿದೆ.

ಕೊಲೆ ಪ್ರಕರಣದಲ್ಲಿ ದರ್ಶನ್‌ ಬಂಧನವಾಗಿದೆ ಎಂಬ ವಿಷಯ ಹೊರ ಬೀಳುತ್ತಿದ್ದಂತೆ ರಾಜ್ಯಾಧ್ಯಂತ ದರ್ಶನ್ ವಿರುದ್ದ ದೊಡ್ಡ ಮಟ್ಟದಲ್ಲಿ ಜನಾಕ್ರೋಶ ವ್ಯಕ್ತವಾಗುತ್ತಿದೆ. ಚಿತ್ರದುರ್ಗ, ಮಂಡ್ಯ ಸೇರಿದಂತೆ ಕೆಲವೆಡೆ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಕಾನೂನು ಕ್ರಮ ಒಂದೆಡೆಯಾದರೆ, ದರ್ಶನ್ ಅವರನ್ನು ಕನ್ನಡ ಚಿತ್ರ ರಂಗದಿಂದ ಹೊರ ಹಾಕಬೇಕು ಎಂಬ ಆಗ್ರಹಗಳು ಎಲ್ಲೆಡೆ ವ್ಯಕ್ತವಾಗುತ್ತಿದೆ.

ಆದರೆ, ಈ ಕುರಿತು ಪ್ರತಿಕ್ರಿಯಿಸಿರುವ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್‌.ಎಂ ಸುರೇಶ್ ” ನಮಗೂ ಕೆಲವು ದೂರುಗಳು ಬಂದಿವೆ. ಅದಕ್ಕಾಗಿ ಕಲಾವಿದರ ಸಂಘ ಇದೆ. ಚಲನಚಿತ್ರ ವಾಣಿಜ್ಯ ಮಂಡಳಿ ಇರುವುದು ನಿರ್ಮಾಪಕರು, ವಿತರಕರು ಮತ್ತು ಪ್ರದರ್ಶಕರಿಗಾಗಿ ಮಾತ್ರ. ಅದಾಗ್ಯೂ ನಾವು ಈ ಬಗ್ಗೆ ಪ್ರತಿಕ್ರಿಯಿಸಲು ಪ್ರಯತ್ನಿಸಿದ್ದೇವೆ. ನಾವು ಕಲಾವಿದರ ಸಂಘದೊಂದಿಗೆ ಮಾತನಾಡಿದ್ದೇವೆ. ಚರ್ಚೆಗೆ ನಾನು ಸಭೆ ಕರೆಯುತ್ತೇನೆ. ಪೊಲೀಸ್ ತನಿಖೆ ಮುಗಿದು. ಅವರು ಚಾರ್ಜ್ ಶೀಟ್ ಸಲ್ಲಿಸುವವರೆಗೂ ಆರೋಪಿಗಳು ಅಪರಾಧಿಯಾಗುವುದಿಲ್ಲ. ಪೊಲೀಸ್ ಕಾನೂನು ಕ್ರಮ ಮುಗಿದ ನಂತರ ನಾವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

ನಿಕಿತಾರನ್ನು ಮೂರು ವರ್ಷ ಬ್ಯಾನ್ ಮಾಡಲಾಗಿತ್ತು

ದರ್ಶನ್ ಮತ್ತು ಅವರ ಪತ್ನಿ ವಿಜಯಲಕ್ಷ್ಮಿ ನಡುವೆ ವಿವಾದ ಸೃಷ್ಟಿಸಿದ ಆರೋಪದ ಮೇಲೆ ನಟಿ ನಿಕಿತಾ ತುಕ್ರಾಲ್ ಅವರ ಮೇಲೆ 2011ರಲ್ಲಿ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘವು ಮೂರು ವರ್ಷಗಳ ಕಾಲ ನಿಷೇಧ ಹೇರಿತ್ತು. ಬಳಿಕ ವಾಪಸ್ ಪಡೆದಿತ್ತು.

ಅಂದು ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಂಘದ ಕಾರ್ಯದರ್ಶಿ ಸೂರಪ್ಪ ಬಾಬು, ಕನ್ನಡ ಚಿತ್ರರಂಗ ಮತ್ತು ವಿಜಯಲಕ್ಷ್ಮಿ ಅವರ ಹಿತದೃಷ್ಟಿಯಿಂದ ಹಾಗೂ ಮಾನವೀಯ ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದರು.

“ವಿಜಯಲಕ್ಷ್ಮಿಗೆ ಸಮಸ್ಯೆಗಳನ್ನು ಸೃಷ್ಟಿಸುವಲ್ಲಿ ನಿಕಿತಾ ಪಾತ್ರದ ಬಗ್ಗೆ ಎಲ್ಲರಿಗೂ ತಿಳಿದಿದೆ. ಹೀರೋಗಳು ಮತ್ತು ಅವರ ಪತ್ನಿಯರ ನಡುವೆ ಸಮಸ್ಯೆ ಸೃಷ್ಟಿಸುವ ನಾಯಕಿಯರು ನಮಗೆ ಬೇಡ” ಎಂದು ಸೂರಪ್ಪ ಬಾಬು ಹೇಳಿದ್ದರು. ನಿಕಿತಾಗೆ ಮೂರು ವರ್ಷಗಳ ಕಾಲ ಯಾವುದೇ ಕನ್ನಡ ಚಿತ್ರದಲ್ಲಿ ನಟಿಸಲು ಅವಕಾಶ ನೀಡುವುದಿಲ್ಲ ಎಂದು ಆಗ ಹೇಳಲಾಗಿತ್ತು. ಈ ಕ್ರಮ ಕೈಗೊಳ್ಳುವ ವೇಳೆ ದರ್ಶನ್ ಅಭಿನಯದ ‘ಸಂಗೊಳ್ಳಿ ರಾಯಣ್ಣ’ ಚಿತ್ರಕ್ಕೆ ನಾಯಕಿಯಾಗಿ ನಿಕಿತಾ ನಟಿಸುತ್ತಿದ್ದರು. ಈ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದರು.

ಯಾವ ಜಾರ್ಜ್ ಶೀಟ್ ಮೇಲೆ ನಿಕಿತಾರನ್ನು ಬ್ಯಾನ್ ಮಾಡಿದ್ರಿ?

“ದರ್ಶನ್ ಮೇಲೆ ಆರೋಪ ಕೇಳಿ ಬಂದಿದೆ. ಪೊಲೀಸ್ ತನಿಖೆ ಮುಗಿದು, ಅವರು ಚಾರ್ಜ್ ಶೀಟ್ ಸಲ್ಲಿಸುವವರೆಗೂ ಆರೋಪಿಗಳು ಅಪರಾಧಿಯಾಗುವುದಿಲ್ಲ. ಪೊಲೀಸ್ ಕಾನೂನು ಕ್ರಮ ಮುಗಿದ ನಂತರ ನಾವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್‌.ಎಂ ಸುರೇಶ್ ಹೇಳಿದ್ದಾರೆ. ಹಾಗಾದರೆ, ನಿಕಿತಾ ಅವರನ್ನು ಯಾವ ಚಾರ್ಜ್ ಶೀಟ್ ಮೇಲೆ ಬ್ಯಾನ್ ಮಾಡಿದ್ದರು? ಎಂದು ಜನರು ಪ್ರಶ್ನೆ ಮಾಡಿದ್ದಾರೆ.

ದರ್ಶನ್ ವಿರುದ್ದ ಗಂಭೀರ ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸಿ ಚಾರ್ಜ್ ಶೀಟ್ ಹಾಕಲಿದ್ದಾರೆ. ಆದರೆ, ನಿಕಿತಾ ವಿರುದ್ದ ಯಾವುದೇ ಕ್ರಿಮಿನ್ ಪ್ರಕರಣ ದಾಖಲಾಗಿರಲಿಲ್ಲ. ಆದರೂ, ಇದೇ ದರ್ಶನ್ ವಿಚಾರದಲ್ಲಿ ನಿಕಿತಾರನ್ನು ಬ್ಯಾನ್ ಮಾಡಿದ್ದು ಹೇಗೆ? ಎಂಬ ಪ್ರಶ್ನೆಗಳು ವ್ಯಕ್ತವಾಗಿದೆ.

ದರ್ಶನ್ ಪ್ರಭಾವಿ ಎಂದು ವಿನಾಯಿತಿ?

ನಟಿ ನಿಕಿತಾಗೆ ಹೋಲಿಸಿದ್ರೆ ದರ್ಶನ್ ಪ್ರಭಾವಿ ವ್ಯಕ್ತಿ. ಕನ್ನಡ ಚಿತ್ರ ರಂಗದ ಪ್ರಮುಖ ನಟನಾಗಿರುವ ದರ್ಶನ್ ಭಾರೀ ಅಭಿಮಾನಿಗಳನ್ನೂ ಹೊಂದಿದ್ದಾರೆ. ಅವರಿಗೆ ವಿವಿಧ ಪಕ್ಷಗಳ ರಾಜಕೀಯ ನಾಯಕರ ಸಂಪರ್ಕವೂ ಇದೆ. ಈ ಎಲ್ಲಾ ಕಾರಣಕ್ಕೆ ಅವರ ವಿರುದ್ದ ಕ್ರಮ ಕೈಗೊಳ್ಳಲು ಮಿನಾಮೇಷ ಎನಿಸಲಾಗುತ್ತಿದ್ದೆಯಾ? ಎಂಬ ಪ್ರಶ್ನೆ ಎದ್ದಿದೆ.

ಇದನ್ನೂ ಓದಿ : ಅಗತ್ಯ ಬಿದ್ದರೆ ಬಿ.ಎಸ್.ಯಡಿಯೂರಪ್ಪ ಬಂಧನ: ಡಾ.ಜಿ.ಪರಮೇಶ್ವರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...