Homeಮುಖಪುಟನಟಿ ನಿಕಿತಾಗೆ ವಿಧಿಸಿದ್ದ ನಿಷೇಧ ದರ್ಶನ್‌ಗೆ ಏಕಿಲ್ಲ?

ನಟಿ ನಿಕಿತಾಗೆ ವಿಧಿಸಿದ್ದ ನಿಷೇಧ ದರ್ಶನ್‌ಗೆ ಏಕಿಲ್ಲ?

- Advertisement -
- Advertisement -

ಸ್ಯಾಂಡಲ್‌ವುಡ್‌ ನಟ ದರ್ಶನ್ ಅವರನ್ನು ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಪ್ರಸ್ತುತ ದರ್ಶನ್, ಅವರ ಆಪ್ತೆ ಪೌವಿತ್ರಾ ಗೌಡ ಸೇರಿದಂತೆ ಪ್ರಕರಣದ 13 ಆರೋಪಿಗಳನ್ನು ನ್ಯಾಯಾಲಯ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

ಪೌವಿತ್ರಾ ಗೌಡಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳಿಸಿದ್ದಕ್ಕೆ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಎಂಬಾತನಿಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ಆರೋಪ ದರ್ಶನ್ ಮತ್ತು ಇತರರ ಮೇಲಿದೆ.

ಕೊಲೆ ಪ್ರಕರಣದಲ್ಲಿ ದರ್ಶನ್‌ ಬಂಧನವಾಗಿದೆ ಎಂಬ ವಿಷಯ ಹೊರ ಬೀಳುತ್ತಿದ್ದಂತೆ ರಾಜ್ಯಾಧ್ಯಂತ ದರ್ಶನ್ ವಿರುದ್ದ ದೊಡ್ಡ ಮಟ್ಟದಲ್ಲಿ ಜನಾಕ್ರೋಶ ವ್ಯಕ್ತವಾಗುತ್ತಿದೆ. ಚಿತ್ರದುರ್ಗ, ಮಂಡ್ಯ ಸೇರಿದಂತೆ ಕೆಲವೆಡೆ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಕಾನೂನು ಕ್ರಮ ಒಂದೆಡೆಯಾದರೆ, ದರ್ಶನ್ ಅವರನ್ನು ಕನ್ನಡ ಚಿತ್ರ ರಂಗದಿಂದ ಹೊರ ಹಾಕಬೇಕು ಎಂಬ ಆಗ್ರಹಗಳು ಎಲ್ಲೆಡೆ ವ್ಯಕ್ತವಾಗುತ್ತಿದೆ.

ಆದರೆ, ಈ ಕುರಿತು ಪ್ರತಿಕ್ರಿಯಿಸಿರುವ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್‌.ಎಂ ಸುರೇಶ್ ” ನಮಗೂ ಕೆಲವು ದೂರುಗಳು ಬಂದಿವೆ. ಅದಕ್ಕಾಗಿ ಕಲಾವಿದರ ಸಂಘ ಇದೆ. ಚಲನಚಿತ್ರ ವಾಣಿಜ್ಯ ಮಂಡಳಿ ಇರುವುದು ನಿರ್ಮಾಪಕರು, ವಿತರಕರು ಮತ್ತು ಪ್ರದರ್ಶಕರಿಗಾಗಿ ಮಾತ್ರ. ಅದಾಗ್ಯೂ ನಾವು ಈ ಬಗ್ಗೆ ಪ್ರತಿಕ್ರಿಯಿಸಲು ಪ್ರಯತ್ನಿಸಿದ್ದೇವೆ. ನಾವು ಕಲಾವಿದರ ಸಂಘದೊಂದಿಗೆ ಮಾತನಾಡಿದ್ದೇವೆ. ಚರ್ಚೆಗೆ ನಾನು ಸಭೆ ಕರೆಯುತ್ತೇನೆ. ಪೊಲೀಸ್ ತನಿಖೆ ಮುಗಿದು. ಅವರು ಚಾರ್ಜ್ ಶೀಟ್ ಸಲ್ಲಿಸುವವರೆಗೂ ಆರೋಪಿಗಳು ಅಪರಾಧಿಯಾಗುವುದಿಲ್ಲ. ಪೊಲೀಸ್ ಕಾನೂನು ಕ್ರಮ ಮುಗಿದ ನಂತರ ನಾವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

ನಿಕಿತಾರನ್ನು ಮೂರು ವರ್ಷ ಬ್ಯಾನ್ ಮಾಡಲಾಗಿತ್ತು

ದರ್ಶನ್ ಮತ್ತು ಅವರ ಪತ್ನಿ ವಿಜಯಲಕ್ಷ್ಮಿ ನಡುವೆ ವಿವಾದ ಸೃಷ್ಟಿಸಿದ ಆರೋಪದ ಮೇಲೆ ನಟಿ ನಿಕಿತಾ ತುಕ್ರಾಲ್ ಅವರ ಮೇಲೆ 2011ರಲ್ಲಿ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘವು ಮೂರು ವರ್ಷಗಳ ಕಾಲ ನಿಷೇಧ ಹೇರಿತ್ತು. ಬಳಿಕ ವಾಪಸ್ ಪಡೆದಿತ್ತು.

ಅಂದು ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಂಘದ ಕಾರ್ಯದರ್ಶಿ ಸೂರಪ್ಪ ಬಾಬು, ಕನ್ನಡ ಚಿತ್ರರಂಗ ಮತ್ತು ವಿಜಯಲಕ್ಷ್ಮಿ ಅವರ ಹಿತದೃಷ್ಟಿಯಿಂದ ಹಾಗೂ ಮಾನವೀಯ ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದರು.

“ವಿಜಯಲಕ್ಷ್ಮಿಗೆ ಸಮಸ್ಯೆಗಳನ್ನು ಸೃಷ್ಟಿಸುವಲ್ಲಿ ನಿಕಿತಾ ಪಾತ್ರದ ಬಗ್ಗೆ ಎಲ್ಲರಿಗೂ ತಿಳಿದಿದೆ. ಹೀರೋಗಳು ಮತ್ತು ಅವರ ಪತ್ನಿಯರ ನಡುವೆ ಸಮಸ್ಯೆ ಸೃಷ್ಟಿಸುವ ನಾಯಕಿಯರು ನಮಗೆ ಬೇಡ” ಎಂದು ಸೂರಪ್ಪ ಬಾಬು ಹೇಳಿದ್ದರು. ನಿಕಿತಾಗೆ ಮೂರು ವರ್ಷಗಳ ಕಾಲ ಯಾವುದೇ ಕನ್ನಡ ಚಿತ್ರದಲ್ಲಿ ನಟಿಸಲು ಅವಕಾಶ ನೀಡುವುದಿಲ್ಲ ಎಂದು ಆಗ ಹೇಳಲಾಗಿತ್ತು. ಈ ಕ್ರಮ ಕೈಗೊಳ್ಳುವ ವೇಳೆ ದರ್ಶನ್ ಅಭಿನಯದ ‘ಸಂಗೊಳ್ಳಿ ರಾಯಣ್ಣ’ ಚಿತ್ರಕ್ಕೆ ನಾಯಕಿಯಾಗಿ ನಿಕಿತಾ ನಟಿಸುತ್ತಿದ್ದರು. ಈ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದರು.

ಯಾವ ಜಾರ್ಜ್ ಶೀಟ್ ಮೇಲೆ ನಿಕಿತಾರನ್ನು ಬ್ಯಾನ್ ಮಾಡಿದ್ರಿ?

“ದರ್ಶನ್ ಮೇಲೆ ಆರೋಪ ಕೇಳಿ ಬಂದಿದೆ. ಪೊಲೀಸ್ ತನಿಖೆ ಮುಗಿದು, ಅವರು ಚಾರ್ಜ್ ಶೀಟ್ ಸಲ್ಲಿಸುವವರೆಗೂ ಆರೋಪಿಗಳು ಅಪರಾಧಿಯಾಗುವುದಿಲ್ಲ. ಪೊಲೀಸ್ ಕಾನೂನು ಕ್ರಮ ಮುಗಿದ ನಂತರ ನಾವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್‌.ಎಂ ಸುರೇಶ್ ಹೇಳಿದ್ದಾರೆ. ಹಾಗಾದರೆ, ನಿಕಿತಾ ಅವರನ್ನು ಯಾವ ಚಾರ್ಜ್ ಶೀಟ್ ಮೇಲೆ ಬ್ಯಾನ್ ಮಾಡಿದ್ದರು? ಎಂದು ಜನರು ಪ್ರಶ್ನೆ ಮಾಡಿದ್ದಾರೆ.

ದರ್ಶನ್ ವಿರುದ್ದ ಗಂಭೀರ ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸಿ ಚಾರ್ಜ್ ಶೀಟ್ ಹಾಕಲಿದ್ದಾರೆ. ಆದರೆ, ನಿಕಿತಾ ವಿರುದ್ದ ಯಾವುದೇ ಕ್ರಿಮಿನ್ ಪ್ರಕರಣ ದಾಖಲಾಗಿರಲಿಲ್ಲ. ಆದರೂ, ಇದೇ ದರ್ಶನ್ ವಿಚಾರದಲ್ಲಿ ನಿಕಿತಾರನ್ನು ಬ್ಯಾನ್ ಮಾಡಿದ್ದು ಹೇಗೆ? ಎಂಬ ಪ್ರಶ್ನೆಗಳು ವ್ಯಕ್ತವಾಗಿದೆ.

ದರ್ಶನ್ ಪ್ರಭಾವಿ ಎಂದು ವಿನಾಯಿತಿ?

ನಟಿ ನಿಕಿತಾಗೆ ಹೋಲಿಸಿದ್ರೆ ದರ್ಶನ್ ಪ್ರಭಾವಿ ವ್ಯಕ್ತಿ. ಕನ್ನಡ ಚಿತ್ರ ರಂಗದ ಪ್ರಮುಖ ನಟನಾಗಿರುವ ದರ್ಶನ್ ಭಾರೀ ಅಭಿಮಾನಿಗಳನ್ನೂ ಹೊಂದಿದ್ದಾರೆ. ಅವರಿಗೆ ವಿವಿಧ ಪಕ್ಷಗಳ ರಾಜಕೀಯ ನಾಯಕರ ಸಂಪರ್ಕವೂ ಇದೆ. ಈ ಎಲ್ಲಾ ಕಾರಣಕ್ಕೆ ಅವರ ವಿರುದ್ದ ಕ್ರಮ ಕೈಗೊಳ್ಳಲು ಮಿನಾಮೇಷ ಎನಿಸಲಾಗುತ್ತಿದ್ದೆಯಾ? ಎಂಬ ಪ್ರಶ್ನೆ ಎದ್ದಿದೆ.

ಇದನ್ನೂ ಓದಿ : ಅಗತ್ಯ ಬಿದ್ದರೆ ಬಿ.ಎಸ್.ಯಡಿಯೂರಪ್ಪ ಬಂಧನ: ಡಾ.ಜಿ.ಪರಮೇಶ್ವರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...