Homeಮುಖಪುಟದೇಶದಲ್ಲಿ ಕೊಲೆ, ಸುಲಿಗೆ, ಅತ್ಯಾಚಾರಗಳು ಹೆಚ್ಚಾಗಿದೆ; ಆದರೆ ಚೌಕಿದಾರ ಕಾಣಿಸುತ್ತಿಲ್ಲ: ಸಿದ್ದರಾಮಯ್ಯ

ದೇಶದಲ್ಲಿ ಕೊಲೆ, ಸುಲಿಗೆ, ಅತ್ಯಾಚಾರಗಳು ಹೆಚ್ಚಾಗಿದೆ; ಆದರೆ ಚೌಕಿದಾರ ಕಾಣಿಸುತ್ತಿಲ್ಲ: ಸಿದ್ದರಾಮಯ್ಯ

ಯೋಗಿ ಆದಿತ್ಯನಾಥ್ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ಸೇರಿದಂತೆ 27 ಪ್ರಕರಣಗಳು ಇದ್ದವು. ಮುಖ್ಯಮಂತ್ರಿಯಾದ ಮೇಲೆ ಆ ಎಲ್ಲಾ ಪ್ರಕರಣಗಳನ್ನು ವಾಪಾಸು ಪಡೆಯುವಂತೆ ಮಾಡಿ, ಸಾತ್ವಿಕನಂತೆ ನಾಟಕ ಮಾಡುತ್ತಿದ್ದಾರೆ

- Advertisement -
- Advertisement -

ಇತ್ತೀಚೆಗೆ ನಡೆದ ಹತ್ರಾಸ್‌ ಕರಾಳ ಘಟನೆ ಮತ್ತು ಬಿಜೆಪಿ ಪ್ರೇರಿತ ಸಿಬಿಐ, ಐಟಿ, ಇಡಿ ದಾಳಿಗಳನ್ನು ದೂಷಿಸಿ, ದೇಶದಲ್ಲಿ ಕೊಲೆ, ಸುಲಿಗೆ, ಅತ್ಯಾಚಾರಗಳು ಹೆಚ್ಚಾಗುತ್ತಿವೆ. ನಾನು ಚೌಕಿದಾರ ಎಂದವರು ಈಗ ಎಲ್ಲಿದ್ದಾರೆ ಎಂದು ಬಿಜೆಪಿ ಮತ್ತು ನರೇಂದ್ರ ಮೊದಿ ಮತ್ತು ಆದಿತ್ಯನಾಥ್ ವಿರುದ್ಧ ವಗ್ದಾಳಿ ನಡೆಸಿ ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

“ದೇಶದಲ್ಲಿ ಮಹಿಳೆಯರಿಗೆ, ಮಕ್ಕಳಿಗೆ, ದಲಿತರಿಗೆ ರಕ್ಷಣೆ ಇಲ್ಲ. ನಿತ್ಯ ಸಾವಿರಾರು ಕೊಲೆ, ಅತ್ಯಾಚಾರ, ಶೋಷಣೆಯ ಪ್ರಕರಣಗಳು ದಾಖಲಾಗ್ತಿವೆ. ಇವರಲ್ಲಿ ಎಷ್ಟು ಜನರಿಗೆ ನ್ಯಾಯ ಸಿಕ್ಕಿದೆ? ನಾನು ಚೌಕಿದಾರ ಅಂತ ಹೇಳಿ ಕುಣಿದಾಡ್ತಿದ್ದವರೆಲ್ಲ ಈಗ ಎಲ್ಲಿದ್ದಾರೆ? ಇದೇನಾ ನರೇಂದ್ರ ಮೊದಿಯವರ ಚೌಕಿದಾರಿಕೆ? ಉತ್ತರ ಪ್ರದೇಶದಲ್ಲಿ ಹೆಣ್ಣೊಬ್ಬಳನ್ನು ಅತ್ಯಾಚಾರ ಮಾಡಿ, ಕೊಲೆ ಮಾಡಲಾಗಿದೆ. ಆಕೆಯ ಕುಟುಂಬದವರಿಗೂ ಶವವನ್ನು ನೋಡಲು ಅವಕಾಶ ನೀಡದೆ ಮಧ್ಯರಾತ್ರಿ ಪೊಲೀಸರೇ ಶವಸಂಸ್ಕಾರ ಮಾಡಿದ್ದಾರೆ. ಸರ್ಕಾರ ಅತ್ಯಾಚಾರಿಗೆ ಶಿಕ್ಷೆ ಕೊಡಿಸುವುದು ಬಿಟ್ಟು, ನೆರವಿಗೆ ನಿಂತಿದೆ ಅಂದ್ರೆ ಯೋಗಿ ಆದಿತ್ಯನಾಥ್‌ರಂಥವರು ಕಾವಿ ಬಟ್ಟೆಗೆ ಕಳಂಕವಲ್ಲದೆ ಇನ್ನೇನು?” ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸತ್ಯವನ್ನು ಮುಚ್ಚಿಡಬಹುದು, ಆದರೆ ನಾಶ ಮಾಡಲಾಗುವುದಿಲ್ಲ: ಸಿದ್ದರಾಮಯ್ಯ

ಇದನ್ನೂ ಓದಿ: ಡ್ರಗ್ಸ್ ದಂಧೆ: ಜಿಲ್ಲಾವಾರು ಮಾಹಿತಿ ಕೋರಿ ಗೃಹಸಚಿವರಿಗೆ ಪತ್ರ ಬರೆದ ಸಿದ್ಧರಾಮಯ್ಯ

“ಯೋಗಿ ಆದಿತ್ಯನಾಥ್ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ಸೇರಿದಂತೆ 27 ಪ್ರಕರಣಗಳು ಇದ್ದವು. ಮುಖ್ಯಮಂತ್ರಿಯಾದ ಮೇಲೆ ಆ ಎಲ್ಲಾ ಪ್ರಕರಣಗಳನ್ನು ವಾಪಾಸು ಪಡೆಯುವಂತೆ ಮಾಡಿ, ಸಾತ್ವಿಕನಂತೆ ನಾಟಕ ಮಾಡುತ್ತಿದ್ದಾರೆ. ಇಂಥವರ ರಾಜ್ಯದಲ್ಲಿ ಜನಸಾಮಾನ್ಯರಿಗೆ ರಕ್ಷಣೆ ಸಿಗಲು ಹೇಗೆ ಸಾಧ್ಯ? ಐಟಿ, ಇಡಿ, ಸಿಬಿಐ ಇಲಾಖೆಗಳು ತಮ್ಮ ಕರ್ತವ್ಯ ತಾವು ಮಾಡುವ ಬಗ್ಗೆ ನಮ್ಮ ತಕರಾರಿಲ್ಲ. ಆದರೆ ಚುನಾವಣೆಗಳು ಹತ್ತಿರ ಬಂದಾಗ ವಿರೋಧಿಗಳನ್ನು ಹತ್ತಿಕ್ಕಲು ಐಟಿ, ಇಡಿ, ಸಿಬಿಐ ಗಳನ್ನು ದುರ್ಬಳಕೆ ಮಾಡಿಕೊಂಡು ದಾಳಿ ಮಾಡಿಸುವುದಕ್ಕಷ್ಟೇ ನಮ್ಮ ವಿರೋಧ. ಇಂತಹ ದಾಳಿ ಮೂಲಕ ನಮ್ಮ ಬಾಯಿ ಮುಚ್ಚಿಸಬಹುದು ಎಂದುಕೊಂಡಿದ್ದರೆ ಅದು ಬಿಜೆಪಿಯವರ ಭ್ರಮೆ” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: 13 ಕ್ವಿಂಟಾಲ್‌ ಗಾಂಜಾ‌ ವಶ: ಆರೋಪಿ ಬಿಜೆಪಿ ಕಾರ್ಯಕರ್ತನೆಂದು ಕಾಂಗ್ರೆಸ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...