Homeಮುಖಪುಟದೇಶದಲ್ಲಿ ಕೊಲೆ, ಸುಲಿಗೆ, ಅತ್ಯಾಚಾರಗಳು ಹೆಚ್ಚಾಗಿದೆ; ಆದರೆ ಚೌಕಿದಾರ ಕಾಣಿಸುತ್ತಿಲ್ಲ: ಸಿದ್ದರಾಮಯ್ಯ

ದೇಶದಲ್ಲಿ ಕೊಲೆ, ಸುಲಿಗೆ, ಅತ್ಯಾಚಾರಗಳು ಹೆಚ್ಚಾಗಿದೆ; ಆದರೆ ಚೌಕಿದಾರ ಕಾಣಿಸುತ್ತಿಲ್ಲ: ಸಿದ್ದರಾಮಯ್ಯ

ಯೋಗಿ ಆದಿತ್ಯನಾಥ್ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ಸೇರಿದಂತೆ 27 ಪ್ರಕರಣಗಳು ಇದ್ದವು. ಮುಖ್ಯಮಂತ್ರಿಯಾದ ಮೇಲೆ ಆ ಎಲ್ಲಾ ಪ್ರಕರಣಗಳನ್ನು ವಾಪಾಸು ಪಡೆಯುವಂತೆ ಮಾಡಿ, ಸಾತ್ವಿಕನಂತೆ ನಾಟಕ ಮಾಡುತ್ತಿದ್ದಾರೆ

- Advertisement -
- Advertisement -

ಇತ್ತೀಚೆಗೆ ನಡೆದ ಹತ್ರಾಸ್‌ ಕರಾಳ ಘಟನೆ ಮತ್ತು ಬಿಜೆಪಿ ಪ್ರೇರಿತ ಸಿಬಿಐ, ಐಟಿ, ಇಡಿ ದಾಳಿಗಳನ್ನು ದೂಷಿಸಿ, ದೇಶದಲ್ಲಿ ಕೊಲೆ, ಸುಲಿಗೆ, ಅತ್ಯಾಚಾರಗಳು ಹೆಚ್ಚಾಗುತ್ತಿವೆ. ನಾನು ಚೌಕಿದಾರ ಎಂದವರು ಈಗ ಎಲ್ಲಿದ್ದಾರೆ ಎಂದು ಬಿಜೆಪಿ ಮತ್ತು ನರೇಂದ್ರ ಮೊದಿ ಮತ್ತು ಆದಿತ್ಯನಾಥ್ ವಿರುದ್ಧ ವಗ್ದಾಳಿ ನಡೆಸಿ ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

“ದೇಶದಲ್ಲಿ ಮಹಿಳೆಯರಿಗೆ, ಮಕ್ಕಳಿಗೆ, ದಲಿತರಿಗೆ ರಕ್ಷಣೆ ಇಲ್ಲ. ನಿತ್ಯ ಸಾವಿರಾರು ಕೊಲೆ, ಅತ್ಯಾಚಾರ, ಶೋಷಣೆಯ ಪ್ರಕರಣಗಳು ದಾಖಲಾಗ್ತಿವೆ. ಇವರಲ್ಲಿ ಎಷ್ಟು ಜನರಿಗೆ ನ್ಯಾಯ ಸಿಕ್ಕಿದೆ? ನಾನು ಚೌಕಿದಾರ ಅಂತ ಹೇಳಿ ಕುಣಿದಾಡ್ತಿದ್ದವರೆಲ್ಲ ಈಗ ಎಲ್ಲಿದ್ದಾರೆ? ಇದೇನಾ ನರೇಂದ್ರ ಮೊದಿಯವರ ಚೌಕಿದಾರಿಕೆ? ಉತ್ತರ ಪ್ರದೇಶದಲ್ಲಿ ಹೆಣ್ಣೊಬ್ಬಳನ್ನು ಅತ್ಯಾಚಾರ ಮಾಡಿ, ಕೊಲೆ ಮಾಡಲಾಗಿದೆ. ಆಕೆಯ ಕುಟುಂಬದವರಿಗೂ ಶವವನ್ನು ನೋಡಲು ಅವಕಾಶ ನೀಡದೆ ಮಧ್ಯರಾತ್ರಿ ಪೊಲೀಸರೇ ಶವಸಂಸ್ಕಾರ ಮಾಡಿದ್ದಾರೆ. ಸರ್ಕಾರ ಅತ್ಯಾಚಾರಿಗೆ ಶಿಕ್ಷೆ ಕೊಡಿಸುವುದು ಬಿಟ್ಟು, ನೆರವಿಗೆ ನಿಂತಿದೆ ಅಂದ್ರೆ ಯೋಗಿ ಆದಿತ್ಯನಾಥ್‌ರಂಥವರು ಕಾವಿ ಬಟ್ಟೆಗೆ ಕಳಂಕವಲ್ಲದೆ ಇನ್ನೇನು?” ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಸತ್ಯವನ್ನು ಮುಚ್ಚಿಡಬಹುದು, ಆದರೆ ನಾಶ ಮಾಡಲಾಗುವುದಿಲ್ಲ: ಸಿದ್ದರಾಮಯ್ಯ

ಇದನ್ನೂ ಓದಿ: ಡ್ರಗ್ಸ್ ದಂಧೆ: ಜಿಲ್ಲಾವಾರು ಮಾಹಿತಿ ಕೋರಿ ಗೃಹಸಚಿವರಿಗೆ ಪತ್ರ ಬರೆದ ಸಿದ್ಧರಾಮಯ್ಯ

“ಯೋಗಿ ಆದಿತ್ಯನಾಥ್ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ಸೇರಿದಂತೆ 27 ಪ್ರಕರಣಗಳು ಇದ್ದವು. ಮುಖ್ಯಮಂತ್ರಿಯಾದ ಮೇಲೆ ಆ ಎಲ್ಲಾ ಪ್ರಕರಣಗಳನ್ನು ವಾಪಾಸು ಪಡೆಯುವಂತೆ ಮಾಡಿ, ಸಾತ್ವಿಕನಂತೆ ನಾಟಕ ಮಾಡುತ್ತಿದ್ದಾರೆ. ಇಂಥವರ ರಾಜ್ಯದಲ್ಲಿ ಜನಸಾಮಾನ್ಯರಿಗೆ ರಕ್ಷಣೆ ಸಿಗಲು ಹೇಗೆ ಸಾಧ್ಯ? ಐಟಿ, ಇಡಿ, ಸಿಬಿಐ ಇಲಾಖೆಗಳು ತಮ್ಮ ಕರ್ತವ್ಯ ತಾವು ಮಾಡುವ ಬಗ್ಗೆ ನಮ್ಮ ತಕರಾರಿಲ್ಲ. ಆದರೆ ಚುನಾವಣೆಗಳು ಹತ್ತಿರ ಬಂದಾಗ ವಿರೋಧಿಗಳನ್ನು ಹತ್ತಿಕ್ಕಲು ಐಟಿ, ಇಡಿ, ಸಿಬಿಐ ಗಳನ್ನು ದುರ್ಬಳಕೆ ಮಾಡಿಕೊಂಡು ದಾಳಿ ಮಾಡಿಸುವುದಕ್ಕಷ್ಟೇ ನಮ್ಮ ವಿರೋಧ. ಇಂತಹ ದಾಳಿ ಮೂಲಕ ನಮ್ಮ ಬಾಯಿ ಮುಚ್ಚಿಸಬಹುದು ಎಂದುಕೊಂಡಿದ್ದರೆ ಅದು ಬಿಜೆಪಿಯವರ ಭ್ರಮೆ” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: 13 ಕ್ವಿಂಟಾಲ್‌ ಗಾಂಜಾ‌ ವಶ: ಆರೋಪಿ ಬಿಜೆಪಿ ಕಾರ್ಯಕರ್ತನೆಂದು ಕಾಂಗ್ರೆಸ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...