Homeಮುಖಪುಟತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ದಲಿತರಾಗಿರದಿದ್ದರೆ ತಮ್ಮ ಮಗನನ್ನು ಕೊಲ್ಲಲಾಗುತ್ತಿರಲಿಲ್ಲ ಎಂದು ಕುಟುಂಬವು ಪ್ರತಿಪಾದಿಸಿದೆ.

- Advertisement -
- Advertisement -

ಜಮ್ಮುವಿನ ಉಧಂಪುರ ಜಿಲ್ಲೆಯ ದಂಡಿಯಾಲ್ ಗ್ರಾಮದಲ್ಲಿ ಜುಲೈ 2 ರಂದು ಹಾಡಹಗಲೆ 26 ವರ್ಷದ ರಾಹುಲ್ ಭಗತ್ ಎಂಬ ದಲಿತ ಯುವಕನನ್ನು ಭೂವಿವಾದಲ್ಲಿ ಹತ್ಯೆ ಮಾಡಲಾಗಿದೆ. ಬೈಕ್ ಮೆಕ್ಯಾನಿಕ್ ಆಗಿದ್ದ ಭಗತ್ ಬೆಳಿಗ್ಗೆ 11 ಗಂಟೆಗೆ ಕೆಲವು ದಾಖಲೆಗಳನ್ನು ತರಲು ಪೊಲೀಸ್ ಠಾಣೆಯಿಂದ ಮನೆಗೆ ತೆರಳುತ್ತಿದ್ದಾಗ  ಬೆನ್ನಟ್ಟಿ ಕೊಲೆ ಮಾಡಲಾಗಿದ್ದು, ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಉದಂಪೂರ್ ಠಾಣಾ ಅಧಿಕಾರಿ ವಿಜಯ್ ಚೌದರಿ, ’ಭಗತ್ ಪ್ರಸ್ತುತ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ಭೂ ವಿವಾದ ಭಾಗಿಯಾಗಿದ್ದು, ಭೂ ವಿವಾದಕ್ಕಾಗಿ ಯುವಕನನ್ನು ಕೊಲ್ಲಲಾಯಿತು. ಇದು ಲ್ಯಾಂಡ್ ಮಾಫಿಯಾದ ಪ್ರಕರಣವಾಗಿದ್ದು, ಈ ಬಗ್ಗೆ ತನಿಖೆ ನಡೆಸಲು ಎಸ್‌ಐಟಿ ರಚಿಸಲಾಗಿದೆ’ ಎಂದು ಹೇಳಿದ್ದಾರೆ.

ಆದರೆ ಗ್ರಾಮದ ನಿವಾಸಿಗಳು, ಸಂತ್ರಸ್ತನು ತನ್ನ ಜಮೀನನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವವರ ಬಗ್ಗೆ ನ್ಯಾಯಾಲಯವನ್ನು ಸಂಪರ್ಕಿಸಿದ ನಂತರ ವಿವಾದ ಉಂಟಾಯಿತು ಎಂದಿದ್ದಾರೆ.

“ಹಲವು ವರ್ಷಗಳ ಹಿಂದೆ ಭಗತ್‌ನ ಅನಕ್ಷರಸ್ಥ ಅಜ್ಜ ಹಳ್ಳಿಯ ಕೆಲವರಿಗೆ ಭೂಮಿಯನ್ನು ಮಾರಿದ್ದು, ಅವರ ಮರಣದ ನಂತರ ಮೇಲ್ಜಾತಿಯ ಜನರನ್ನೊಳಗೊಂಡ ಲ್ಯಾಂಡ್ ಮಾಫಿಯಾವು ಸಂಪೂರ್ಣ ಭೂಮಿಯನ್ನು ಅಕ್ರಮವಾಗಿ ಆಕ್ರಮಿಸಲು ಪ್ರಾರಂಭಿಸಿತು. ಅದಕ್ಕಾಗಿ ನ್ಯಾಯಾಲಯದಲ್ಲಿ ಹೂಡಿದ್ದ ದಾವೆಯನ್ನು ಹಿಂಪಡೆಯುವಂತೆ ಕುಟುಂಬಕ್ಕೆ ಬೆದರಿಕೆ ಹಾಕಿದ್ದರು, ದಾವೆಯನ್ನು ಕುಟುಂಬ ಮುಂದುವರೆಸಿತ್ತು” ಎಂದು ಗ್ರಾಮಸ್ಥರಾದ ಕಬೀರ್ ಸಂಘಟನ್ ಅಧ್ಯಕ್ಷ ರಾಮ್ ಲಾಲ್ ಹೇಳಿದ್ದಾರೆ.

ಪೊಲೀಸರು ಜಾತಿ ಆಧಾರದಲ್ಲಿ ಹತ್ಯೆ ಆಗಿಲ್ಲ ಎಂದು ಹೇಳುತ್ತಿದ್ದರೆ ದಲಿತರಾಗಿರದಿದ್ದರೆ ತಮ್ಮ ಮಗನನ್ನು ಕೊಲ್ಲಲಾಗುತ್ತಿರಲಿಲ್ಲ ಎಂದು ಕುಟುಂಬವು ಪ್ರತಿಪಾದಿಸಿದೆ.

ರಾಹುಲ್ ಭಗತ್‌ಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿ ಜಮ್ಮುವಿನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, “ಜಾತಿ ತಾರತಮ್ಯವನ್ನು ನಿಲ್ಲಿಸಿ”, “ದಲಿತ ಲೈವ್ಸ್ ಮ್ಯಾಟರ್,” “ಜಸ್ಟೀಸ್ ಫಾರ್ ರಾಹುಲ್ ಭಗತ್” ಫಲಕಗಳನ್ನು ಹಿಡಿದು ಪ್ರತಿಭಟನೆಗಳು ನಡೆಯುತ್ತಿದೆ.

ಚಿತ್ರ ಕೃಪೆ: ನ್ಯೂಸ್ ಕ್ಲಿಕ್

“ಇದು ಜಾತಿ ಹಿಂಸಾಚಾರದ ಶುದ್ಧ ಪ್ರಕರಣವಾಗಿದ್ದು. ಮೃತ ದೇಹವನ್ನು ಬಹುತೇಕ ವಿರೂಪಗೊಳಿಸಿ ದಲಿತರಲ್ಲಿ ಭಯ ಹುಟ್ಟಿಸುಂತೆ ಮಾಡಲಾಗಿದೆ. ಅವರು ಯಾವುದೇ ದಲಿತರು ಮತ್ತೆ ಧ್ವನಿ ಎತ್ತದಂತೆ ಬಯಸಿದ್ದರು. ಇದು ಮೊದಲ ಪ್ರಕರಣವಲ್ಲ. ಈ ಹಿಂದೆ ಇದೇ ರೀತಿಯ ಘಟನೆಗಳು ನಡೆದಿವೆ ಹಾಗೂ ಪೊಲೀಸರು ಯಾವಾಗಲೂ ಪ್ರಕರಣಗಳನ್ನು ಭೂ ವಿವಾದಗಳು ಎಂದು ಮುಚ್ಚಿ ಹಾಕುತ್ತಾರೆ. ಈಗ ನಾವು ಸುಮ್ಮನಿರುವುದಿಲ್ಲ” ಎಂದು ಅಂಬೇಡ್ಕರ್ ಯುವ ಸಂಘಟನ್ ಅಧ್ಯಕ್ಷ ಸತೀಶ್ ವಿದ್ರೋಹಿ ಹೇಳಿದ್ದಾರೆ.

ಸ್ಥಳೀಯ ಉಧಂಪುರ್ ಪೊಲೀಸರು  ಆರೋಪಿಗಳ ಪರವಾಗಿದ್ದು ಹಾಗೂ ಹತ್ಯೆಯಲ್ಲಿ ಪೊಲೀಸರು ಕೂಡಾ ಭಾಗಿಯಾಗಿದ್ದಾರೆ ಆದ್ದರಿಂದ ಪ್ರಕರಣವನ್ನು ಹೊರಗಿನಿಂದ ತನಿಖೆ ನಡೆಸಬೇಕೆಂದು ಹತ್ಯಗೀಡಾದ ಭಗತ್ ಕುಟುಂಬ ಹಾಗೂ ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಯಾಕೆಂದರೆ ಪೊಲೀಸ್ ಠಾಣೆಯಿಂದ ಭಗತ್ ಒಬ್ಬಂಟಿಯಾಗಿ ಹೋಗುತ್ತಿದ್ದಾರೆ ಎಂದು ಹಂತಕರಿಗೆ ಹೇಗೆ ಗೊತ್ತಾಯಿತು ಎಂಬ ಪ್ರಶ್ನೆಯನ್ನು ಸಾಮಾಜಿಕ ಕಾರ್ಯಕರ್ತರು ಇಟ್ಟಿದ್ದಾರೆ. 


ಓದಿ: ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...