Homeಮುಖಪುಟತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ದಲಿತರಾಗಿರದಿದ್ದರೆ ತಮ್ಮ ಮಗನನ್ನು ಕೊಲ್ಲಲಾಗುತ್ತಿರಲಿಲ್ಲ ಎಂದು ಕುಟುಂಬವು ಪ್ರತಿಪಾದಿಸಿದೆ.

- Advertisement -
- Advertisement -

ಜಮ್ಮುವಿನ ಉಧಂಪುರ ಜಿಲ್ಲೆಯ ದಂಡಿಯಾಲ್ ಗ್ರಾಮದಲ್ಲಿ ಜುಲೈ 2 ರಂದು ಹಾಡಹಗಲೆ 26 ವರ್ಷದ ರಾಹುಲ್ ಭಗತ್ ಎಂಬ ದಲಿತ ಯುವಕನನ್ನು ಭೂವಿವಾದಲ್ಲಿ ಹತ್ಯೆ ಮಾಡಲಾಗಿದೆ. ಬೈಕ್ ಮೆಕ್ಯಾನಿಕ್ ಆಗಿದ್ದ ಭಗತ್ ಬೆಳಿಗ್ಗೆ 11 ಗಂಟೆಗೆ ಕೆಲವು ದಾಖಲೆಗಳನ್ನು ತರಲು ಪೊಲೀಸ್ ಠಾಣೆಯಿಂದ ಮನೆಗೆ ತೆರಳುತ್ತಿದ್ದಾಗ  ಬೆನ್ನಟ್ಟಿ ಕೊಲೆ ಮಾಡಲಾಗಿದ್ದು, ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಉದಂಪೂರ್ ಠಾಣಾ ಅಧಿಕಾರಿ ವಿಜಯ್ ಚೌದರಿ, ’ಭಗತ್ ಪ್ರಸ್ತುತ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ಭೂ ವಿವಾದ ಭಾಗಿಯಾಗಿದ್ದು, ಭೂ ವಿವಾದಕ್ಕಾಗಿ ಯುವಕನನ್ನು ಕೊಲ್ಲಲಾಯಿತು. ಇದು ಲ್ಯಾಂಡ್ ಮಾಫಿಯಾದ ಪ್ರಕರಣವಾಗಿದ್ದು, ಈ ಬಗ್ಗೆ ತನಿಖೆ ನಡೆಸಲು ಎಸ್‌ಐಟಿ ರಚಿಸಲಾಗಿದೆ’ ಎಂದು ಹೇಳಿದ್ದಾರೆ.

ಆದರೆ ಗ್ರಾಮದ ನಿವಾಸಿಗಳು, ಸಂತ್ರಸ್ತನು ತನ್ನ ಜಮೀನನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವವರ ಬಗ್ಗೆ ನ್ಯಾಯಾಲಯವನ್ನು ಸಂಪರ್ಕಿಸಿದ ನಂತರ ವಿವಾದ ಉಂಟಾಯಿತು ಎಂದಿದ್ದಾರೆ.

“ಹಲವು ವರ್ಷಗಳ ಹಿಂದೆ ಭಗತ್‌ನ ಅನಕ್ಷರಸ್ಥ ಅಜ್ಜ ಹಳ್ಳಿಯ ಕೆಲವರಿಗೆ ಭೂಮಿಯನ್ನು ಮಾರಿದ್ದು, ಅವರ ಮರಣದ ನಂತರ ಮೇಲ್ಜಾತಿಯ ಜನರನ್ನೊಳಗೊಂಡ ಲ್ಯಾಂಡ್ ಮಾಫಿಯಾವು ಸಂಪೂರ್ಣ ಭೂಮಿಯನ್ನು ಅಕ್ರಮವಾಗಿ ಆಕ್ರಮಿಸಲು ಪ್ರಾರಂಭಿಸಿತು. ಅದಕ್ಕಾಗಿ ನ್ಯಾಯಾಲಯದಲ್ಲಿ ಹೂಡಿದ್ದ ದಾವೆಯನ್ನು ಹಿಂಪಡೆಯುವಂತೆ ಕುಟುಂಬಕ್ಕೆ ಬೆದರಿಕೆ ಹಾಕಿದ್ದರು, ದಾವೆಯನ್ನು ಕುಟುಂಬ ಮುಂದುವರೆಸಿತ್ತು” ಎಂದು ಗ್ರಾಮಸ್ಥರಾದ ಕಬೀರ್ ಸಂಘಟನ್ ಅಧ್ಯಕ್ಷ ರಾಮ್ ಲಾಲ್ ಹೇಳಿದ್ದಾರೆ.

ಪೊಲೀಸರು ಜಾತಿ ಆಧಾರದಲ್ಲಿ ಹತ್ಯೆ ಆಗಿಲ್ಲ ಎಂದು ಹೇಳುತ್ತಿದ್ದರೆ ದಲಿತರಾಗಿರದಿದ್ದರೆ ತಮ್ಮ ಮಗನನ್ನು ಕೊಲ್ಲಲಾಗುತ್ತಿರಲಿಲ್ಲ ಎಂದು ಕುಟುಂಬವು ಪ್ರತಿಪಾದಿಸಿದೆ.

ರಾಹುಲ್ ಭಗತ್‌ಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿ ಜಮ್ಮುವಿನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, “ಜಾತಿ ತಾರತಮ್ಯವನ್ನು ನಿಲ್ಲಿಸಿ”, “ದಲಿತ ಲೈವ್ಸ್ ಮ್ಯಾಟರ್,” “ಜಸ್ಟೀಸ್ ಫಾರ್ ರಾಹುಲ್ ಭಗತ್” ಫಲಕಗಳನ್ನು ಹಿಡಿದು ಪ್ರತಿಭಟನೆಗಳು ನಡೆಯುತ್ತಿದೆ.

ಚಿತ್ರ ಕೃಪೆ: ನ್ಯೂಸ್ ಕ್ಲಿಕ್

“ಇದು ಜಾತಿ ಹಿಂಸಾಚಾರದ ಶುದ್ಧ ಪ್ರಕರಣವಾಗಿದ್ದು. ಮೃತ ದೇಹವನ್ನು ಬಹುತೇಕ ವಿರೂಪಗೊಳಿಸಿ ದಲಿತರಲ್ಲಿ ಭಯ ಹುಟ್ಟಿಸುಂತೆ ಮಾಡಲಾಗಿದೆ. ಅವರು ಯಾವುದೇ ದಲಿತರು ಮತ್ತೆ ಧ್ವನಿ ಎತ್ತದಂತೆ ಬಯಸಿದ್ದರು. ಇದು ಮೊದಲ ಪ್ರಕರಣವಲ್ಲ. ಈ ಹಿಂದೆ ಇದೇ ರೀತಿಯ ಘಟನೆಗಳು ನಡೆದಿವೆ ಹಾಗೂ ಪೊಲೀಸರು ಯಾವಾಗಲೂ ಪ್ರಕರಣಗಳನ್ನು ಭೂ ವಿವಾದಗಳು ಎಂದು ಮುಚ್ಚಿ ಹಾಕುತ್ತಾರೆ. ಈಗ ನಾವು ಸುಮ್ಮನಿರುವುದಿಲ್ಲ” ಎಂದು ಅಂಬೇಡ್ಕರ್ ಯುವ ಸಂಘಟನ್ ಅಧ್ಯಕ್ಷ ಸತೀಶ್ ವಿದ್ರೋಹಿ ಹೇಳಿದ್ದಾರೆ.

ಸ್ಥಳೀಯ ಉಧಂಪುರ್ ಪೊಲೀಸರು  ಆರೋಪಿಗಳ ಪರವಾಗಿದ್ದು ಹಾಗೂ ಹತ್ಯೆಯಲ್ಲಿ ಪೊಲೀಸರು ಕೂಡಾ ಭಾಗಿಯಾಗಿದ್ದಾರೆ ಆದ್ದರಿಂದ ಪ್ರಕರಣವನ್ನು ಹೊರಗಿನಿಂದ ತನಿಖೆ ನಡೆಸಬೇಕೆಂದು ಹತ್ಯಗೀಡಾದ ಭಗತ್ ಕುಟುಂಬ ಹಾಗೂ ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಯಾಕೆಂದರೆ ಪೊಲೀಸ್ ಠಾಣೆಯಿಂದ ಭಗತ್ ಒಬ್ಬಂಟಿಯಾಗಿ ಹೋಗುತ್ತಿದ್ದಾರೆ ಎಂದು ಹಂತಕರಿಗೆ ಹೇಗೆ ಗೊತ್ತಾಯಿತು ಎಂಬ ಪ್ರಶ್ನೆಯನ್ನು ಸಾಮಾಜಿಕ ಕಾರ್ಯಕರ್ತರು ಇಟ್ಟಿದ್ದಾರೆ. 


ಓದಿ: ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...