Homeಮುಖಪುಟತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ದಲಿತರಾಗಿರದಿದ್ದರೆ ತಮ್ಮ ಮಗನನ್ನು ಕೊಲ್ಲಲಾಗುತ್ತಿರಲಿಲ್ಲ ಎಂದು ಕುಟುಂಬವು ಪ್ರತಿಪಾದಿಸಿದೆ.

- Advertisement -
- Advertisement -

ಜಮ್ಮುವಿನ ಉಧಂಪುರ ಜಿಲ್ಲೆಯ ದಂಡಿಯಾಲ್ ಗ್ರಾಮದಲ್ಲಿ ಜುಲೈ 2 ರಂದು ಹಾಡಹಗಲೆ 26 ವರ್ಷದ ರಾಹುಲ್ ಭಗತ್ ಎಂಬ ದಲಿತ ಯುವಕನನ್ನು ಭೂವಿವಾದಲ್ಲಿ ಹತ್ಯೆ ಮಾಡಲಾಗಿದೆ. ಬೈಕ್ ಮೆಕ್ಯಾನಿಕ್ ಆಗಿದ್ದ ಭಗತ್ ಬೆಳಿಗ್ಗೆ 11 ಗಂಟೆಗೆ ಕೆಲವು ದಾಖಲೆಗಳನ್ನು ತರಲು ಪೊಲೀಸ್ ಠಾಣೆಯಿಂದ ಮನೆಗೆ ತೆರಳುತ್ತಿದ್ದಾಗ  ಬೆನ್ನಟ್ಟಿ ಕೊಲೆ ಮಾಡಲಾಗಿದ್ದು, ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಉದಂಪೂರ್ ಠಾಣಾ ಅಧಿಕಾರಿ ವಿಜಯ್ ಚೌದರಿ, ’ಭಗತ್ ಪ್ರಸ್ತುತ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ಭೂ ವಿವಾದ ಭಾಗಿಯಾಗಿದ್ದು, ಭೂ ವಿವಾದಕ್ಕಾಗಿ ಯುವಕನನ್ನು ಕೊಲ್ಲಲಾಯಿತು. ಇದು ಲ್ಯಾಂಡ್ ಮಾಫಿಯಾದ ಪ್ರಕರಣವಾಗಿದ್ದು, ಈ ಬಗ್ಗೆ ತನಿಖೆ ನಡೆಸಲು ಎಸ್‌ಐಟಿ ರಚಿಸಲಾಗಿದೆ’ ಎಂದು ಹೇಳಿದ್ದಾರೆ.

ಆದರೆ ಗ್ರಾಮದ ನಿವಾಸಿಗಳು, ಸಂತ್ರಸ್ತನು ತನ್ನ ಜಮೀನನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವವರ ಬಗ್ಗೆ ನ್ಯಾಯಾಲಯವನ್ನು ಸಂಪರ್ಕಿಸಿದ ನಂತರ ವಿವಾದ ಉಂಟಾಯಿತು ಎಂದಿದ್ದಾರೆ.

“ಹಲವು ವರ್ಷಗಳ ಹಿಂದೆ ಭಗತ್‌ನ ಅನಕ್ಷರಸ್ಥ ಅಜ್ಜ ಹಳ್ಳಿಯ ಕೆಲವರಿಗೆ ಭೂಮಿಯನ್ನು ಮಾರಿದ್ದು, ಅವರ ಮರಣದ ನಂತರ ಮೇಲ್ಜಾತಿಯ ಜನರನ್ನೊಳಗೊಂಡ ಲ್ಯಾಂಡ್ ಮಾಫಿಯಾವು ಸಂಪೂರ್ಣ ಭೂಮಿಯನ್ನು ಅಕ್ರಮವಾಗಿ ಆಕ್ರಮಿಸಲು ಪ್ರಾರಂಭಿಸಿತು. ಅದಕ್ಕಾಗಿ ನ್ಯಾಯಾಲಯದಲ್ಲಿ ಹೂಡಿದ್ದ ದಾವೆಯನ್ನು ಹಿಂಪಡೆಯುವಂತೆ ಕುಟುಂಬಕ್ಕೆ ಬೆದರಿಕೆ ಹಾಕಿದ್ದರು, ದಾವೆಯನ್ನು ಕುಟುಂಬ ಮುಂದುವರೆಸಿತ್ತು” ಎಂದು ಗ್ರಾಮಸ್ಥರಾದ ಕಬೀರ್ ಸಂಘಟನ್ ಅಧ್ಯಕ್ಷ ರಾಮ್ ಲಾಲ್ ಹೇಳಿದ್ದಾರೆ.

ಪೊಲೀಸರು ಜಾತಿ ಆಧಾರದಲ್ಲಿ ಹತ್ಯೆ ಆಗಿಲ್ಲ ಎಂದು ಹೇಳುತ್ತಿದ್ದರೆ ದಲಿತರಾಗಿರದಿದ್ದರೆ ತಮ್ಮ ಮಗನನ್ನು ಕೊಲ್ಲಲಾಗುತ್ತಿರಲಿಲ್ಲ ಎಂದು ಕುಟುಂಬವು ಪ್ರತಿಪಾದಿಸಿದೆ.

ರಾಹುಲ್ ಭಗತ್‌ಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿ ಜಮ್ಮುವಿನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, “ಜಾತಿ ತಾರತಮ್ಯವನ್ನು ನಿಲ್ಲಿಸಿ”, “ದಲಿತ ಲೈವ್ಸ್ ಮ್ಯಾಟರ್,” “ಜಸ್ಟೀಸ್ ಫಾರ್ ರಾಹುಲ್ ಭಗತ್” ಫಲಕಗಳನ್ನು ಹಿಡಿದು ಪ್ರತಿಭಟನೆಗಳು ನಡೆಯುತ್ತಿದೆ.

ಚಿತ್ರ ಕೃಪೆ: ನ್ಯೂಸ್ ಕ್ಲಿಕ್

“ಇದು ಜಾತಿ ಹಿಂಸಾಚಾರದ ಶುದ್ಧ ಪ್ರಕರಣವಾಗಿದ್ದು. ಮೃತ ದೇಹವನ್ನು ಬಹುತೇಕ ವಿರೂಪಗೊಳಿಸಿ ದಲಿತರಲ್ಲಿ ಭಯ ಹುಟ್ಟಿಸುಂತೆ ಮಾಡಲಾಗಿದೆ. ಅವರು ಯಾವುದೇ ದಲಿತರು ಮತ್ತೆ ಧ್ವನಿ ಎತ್ತದಂತೆ ಬಯಸಿದ್ದರು. ಇದು ಮೊದಲ ಪ್ರಕರಣವಲ್ಲ. ಈ ಹಿಂದೆ ಇದೇ ರೀತಿಯ ಘಟನೆಗಳು ನಡೆದಿವೆ ಹಾಗೂ ಪೊಲೀಸರು ಯಾವಾಗಲೂ ಪ್ರಕರಣಗಳನ್ನು ಭೂ ವಿವಾದಗಳು ಎಂದು ಮುಚ್ಚಿ ಹಾಕುತ್ತಾರೆ. ಈಗ ನಾವು ಸುಮ್ಮನಿರುವುದಿಲ್ಲ” ಎಂದು ಅಂಬೇಡ್ಕರ್ ಯುವ ಸಂಘಟನ್ ಅಧ್ಯಕ್ಷ ಸತೀಶ್ ವಿದ್ರೋಹಿ ಹೇಳಿದ್ದಾರೆ.

ಸ್ಥಳೀಯ ಉಧಂಪುರ್ ಪೊಲೀಸರು  ಆರೋಪಿಗಳ ಪರವಾಗಿದ್ದು ಹಾಗೂ ಹತ್ಯೆಯಲ್ಲಿ ಪೊಲೀಸರು ಕೂಡಾ ಭಾಗಿಯಾಗಿದ್ದಾರೆ ಆದ್ದರಿಂದ ಪ್ರಕರಣವನ್ನು ಹೊರಗಿನಿಂದ ತನಿಖೆ ನಡೆಸಬೇಕೆಂದು ಹತ್ಯಗೀಡಾದ ಭಗತ್ ಕುಟುಂಬ ಹಾಗೂ ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಯಾಕೆಂದರೆ ಪೊಲೀಸ್ ಠಾಣೆಯಿಂದ ಭಗತ್ ಒಬ್ಬಂಟಿಯಾಗಿ ಹೋಗುತ್ತಿದ್ದಾರೆ ಎಂದು ಹಂತಕರಿಗೆ ಹೇಗೆ ಗೊತ್ತಾಯಿತು ಎಂಬ ಪ್ರಶ್ನೆಯನ್ನು ಸಾಮಾಜಿಕ ಕಾರ್ಯಕರ್ತರು ಇಟ್ಟಿದ್ದಾರೆ. 


ಓದಿ: ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...