Homeಮುಖಪುಟತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ತಮ್ಮ ಭೂಮಿ ಆಕ್ರಮಿಸಿದ್ದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ದಲಿತರಾಗಿರದಿದ್ದರೆ ತಮ್ಮ ಮಗನನ್ನು ಕೊಲ್ಲಲಾಗುತ್ತಿರಲಿಲ್ಲ ಎಂದು ಕುಟುಂಬವು ಪ್ರತಿಪಾದಿಸಿದೆ.

- Advertisement -
- Advertisement -

ಜಮ್ಮುವಿನ ಉಧಂಪುರ ಜಿಲ್ಲೆಯ ದಂಡಿಯಾಲ್ ಗ್ರಾಮದಲ್ಲಿ ಜುಲೈ 2 ರಂದು ಹಾಡಹಗಲೆ 26 ವರ್ಷದ ರಾಹುಲ್ ಭಗತ್ ಎಂಬ ದಲಿತ ಯುವಕನನ್ನು ಭೂವಿವಾದಲ್ಲಿ ಹತ್ಯೆ ಮಾಡಲಾಗಿದೆ. ಬೈಕ್ ಮೆಕ್ಯಾನಿಕ್ ಆಗಿದ್ದ ಭಗತ್ ಬೆಳಿಗ್ಗೆ 11 ಗಂಟೆಗೆ ಕೆಲವು ದಾಖಲೆಗಳನ್ನು ತರಲು ಪೊಲೀಸ್ ಠಾಣೆಯಿಂದ ಮನೆಗೆ ತೆರಳುತ್ತಿದ್ದಾಗ  ಬೆನ್ನಟ್ಟಿ ಕೊಲೆ ಮಾಡಲಾಗಿದ್ದು, ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಉದಂಪೂರ್ ಠಾಣಾ ಅಧಿಕಾರಿ ವಿಜಯ್ ಚೌದರಿ, ’ಭಗತ್ ಪ್ರಸ್ತುತ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವ ಭೂ ವಿವಾದ ಭಾಗಿಯಾಗಿದ್ದು, ಭೂ ವಿವಾದಕ್ಕಾಗಿ ಯುವಕನನ್ನು ಕೊಲ್ಲಲಾಯಿತು. ಇದು ಲ್ಯಾಂಡ್ ಮಾಫಿಯಾದ ಪ್ರಕರಣವಾಗಿದ್ದು, ಈ ಬಗ್ಗೆ ತನಿಖೆ ನಡೆಸಲು ಎಸ್‌ಐಟಿ ರಚಿಸಲಾಗಿದೆ’ ಎಂದು ಹೇಳಿದ್ದಾರೆ.

ಆದರೆ ಗ್ರಾಮದ ನಿವಾಸಿಗಳು, ಸಂತ್ರಸ್ತನು ತನ್ನ ಜಮೀನನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವವರ ಬಗ್ಗೆ ನ್ಯಾಯಾಲಯವನ್ನು ಸಂಪರ್ಕಿಸಿದ ನಂತರ ವಿವಾದ ಉಂಟಾಯಿತು ಎಂದಿದ್ದಾರೆ.

“ಹಲವು ವರ್ಷಗಳ ಹಿಂದೆ ಭಗತ್‌ನ ಅನಕ್ಷರಸ್ಥ ಅಜ್ಜ ಹಳ್ಳಿಯ ಕೆಲವರಿಗೆ ಭೂಮಿಯನ್ನು ಮಾರಿದ್ದು, ಅವರ ಮರಣದ ನಂತರ ಮೇಲ್ಜಾತಿಯ ಜನರನ್ನೊಳಗೊಂಡ ಲ್ಯಾಂಡ್ ಮಾಫಿಯಾವು ಸಂಪೂರ್ಣ ಭೂಮಿಯನ್ನು ಅಕ್ರಮವಾಗಿ ಆಕ್ರಮಿಸಲು ಪ್ರಾರಂಭಿಸಿತು. ಅದಕ್ಕಾಗಿ ನ್ಯಾಯಾಲಯದಲ್ಲಿ ಹೂಡಿದ್ದ ದಾವೆಯನ್ನು ಹಿಂಪಡೆಯುವಂತೆ ಕುಟುಂಬಕ್ಕೆ ಬೆದರಿಕೆ ಹಾಕಿದ್ದರು, ದಾವೆಯನ್ನು ಕುಟುಂಬ ಮುಂದುವರೆಸಿತ್ತು” ಎಂದು ಗ್ರಾಮಸ್ಥರಾದ ಕಬೀರ್ ಸಂಘಟನ್ ಅಧ್ಯಕ್ಷ ರಾಮ್ ಲಾಲ್ ಹೇಳಿದ್ದಾರೆ.

ಪೊಲೀಸರು ಜಾತಿ ಆಧಾರದಲ್ಲಿ ಹತ್ಯೆ ಆಗಿಲ್ಲ ಎಂದು ಹೇಳುತ್ತಿದ್ದರೆ ದಲಿತರಾಗಿರದಿದ್ದರೆ ತಮ್ಮ ಮಗನನ್ನು ಕೊಲ್ಲಲಾಗುತ್ತಿರಲಿಲ್ಲ ಎಂದು ಕುಟುಂಬವು ಪ್ರತಿಪಾದಿಸಿದೆ.

ರಾಹುಲ್ ಭಗತ್‌ಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿ ಜಮ್ಮುವಿನಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, “ಜಾತಿ ತಾರತಮ್ಯವನ್ನು ನಿಲ್ಲಿಸಿ”, “ದಲಿತ ಲೈವ್ಸ್ ಮ್ಯಾಟರ್,” “ಜಸ್ಟೀಸ್ ಫಾರ್ ರಾಹುಲ್ ಭಗತ್” ಫಲಕಗಳನ್ನು ಹಿಡಿದು ಪ್ರತಿಭಟನೆಗಳು ನಡೆಯುತ್ತಿದೆ.

ಚಿತ್ರ ಕೃಪೆ: ನ್ಯೂಸ್ ಕ್ಲಿಕ್

“ಇದು ಜಾತಿ ಹಿಂಸಾಚಾರದ ಶುದ್ಧ ಪ್ರಕರಣವಾಗಿದ್ದು. ಮೃತ ದೇಹವನ್ನು ಬಹುತೇಕ ವಿರೂಪಗೊಳಿಸಿ ದಲಿತರಲ್ಲಿ ಭಯ ಹುಟ್ಟಿಸುಂತೆ ಮಾಡಲಾಗಿದೆ. ಅವರು ಯಾವುದೇ ದಲಿತರು ಮತ್ತೆ ಧ್ವನಿ ಎತ್ತದಂತೆ ಬಯಸಿದ್ದರು. ಇದು ಮೊದಲ ಪ್ರಕರಣವಲ್ಲ. ಈ ಹಿಂದೆ ಇದೇ ರೀತಿಯ ಘಟನೆಗಳು ನಡೆದಿವೆ ಹಾಗೂ ಪೊಲೀಸರು ಯಾವಾಗಲೂ ಪ್ರಕರಣಗಳನ್ನು ಭೂ ವಿವಾದಗಳು ಎಂದು ಮುಚ್ಚಿ ಹಾಕುತ್ತಾರೆ. ಈಗ ನಾವು ಸುಮ್ಮನಿರುವುದಿಲ್ಲ” ಎಂದು ಅಂಬೇಡ್ಕರ್ ಯುವ ಸಂಘಟನ್ ಅಧ್ಯಕ್ಷ ಸತೀಶ್ ವಿದ್ರೋಹಿ ಹೇಳಿದ್ದಾರೆ.

ಸ್ಥಳೀಯ ಉಧಂಪುರ್ ಪೊಲೀಸರು  ಆರೋಪಿಗಳ ಪರವಾಗಿದ್ದು ಹಾಗೂ ಹತ್ಯೆಯಲ್ಲಿ ಪೊಲೀಸರು ಕೂಡಾ ಭಾಗಿಯಾಗಿದ್ದಾರೆ ಆದ್ದರಿಂದ ಪ್ರಕರಣವನ್ನು ಹೊರಗಿನಿಂದ ತನಿಖೆ ನಡೆಸಬೇಕೆಂದು ಹತ್ಯಗೀಡಾದ ಭಗತ್ ಕುಟುಂಬ ಹಾಗೂ ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಯಾಕೆಂದರೆ ಪೊಲೀಸ್ ಠಾಣೆಯಿಂದ ಭಗತ್ ಒಬ್ಬಂಟಿಯಾಗಿ ಹೋಗುತ್ತಿದ್ದಾರೆ ಎಂದು ಹಂತಕರಿಗೆ ಹೇಗೆ ಗೊತ್ತಾಯಿತು ಎಂಬ ಪ್ರಶ್ನೆಯನ್ನು ಸಾಮಾಜಿಕ ಕಾರ್ಯಕರ್ತರು ಇಟ್ಟಿದ್ದಾರೆ. 


ಓದಿ: ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...