Homeಮುಖಪುಟಜಮ್ಮು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿಯ ಕೊಲೆ: ಡೈರಿ ಬಿಟ್ಟು ಹೋದ ಶಂಕಿತ ಆರೋಪಿ

ಜಮ್ಮು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿಯ ಕೊಲೆ: ಡೈರಿ ಬಿಟ್ಟು ಹೋದ ಶಂಕಿತ ಆರೋಪಿ

- Advertisement -
- Advertisement -

ಜಮ್ಮು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ ಹೇಮಂತ್ ಕುಮಾರ್ ಲೋಹಿಯಾ ಅವರನ್ನು ಸ್ನೇಹಿತರ ಮನೆಯಲ್ಲಿ ಕೊಲೆಗೈಯಲಾಗಿದೆ. ಅವರ ಕುತ್ತಿಗೆ ಸೀಳಿ, ದೇಹಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ವರದಿಯಾಗಿದೆ.

ಜಮ್ಮು ಕಾಶ್ಮೀರದ ಕಾರಾಗೃಹಗಳ ಉಸ್ತುವಾರಿ ಅಧಿಕಾರಿಯಾಗಿದ್ದ ಅವರು ತಮ್ಮ ಮನೆಯನ್ನು ರಿಪೇರಿ ಮಾಡಿಸುತ್ತಿದ್ದ ಕಾರಣ ಜಮ್ಮು ಹೊರವಲಯದ ಸ್ನೇಹಿತರ ಮನೆಯಲ್ಲಿ ಉಳಿದುಕೊಂಡಿದ್ದರು. ಈ ಸಂದರ್ಭದಲ್ಲಿ ಅವರ ಸಹಾಯಕ ಕೊಲೆಗೈದಿರಬಹುದು ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ.

ಇಂದಿನಿಂದ ಮೂರು ದಿನಗಳ ಕಾಲ ಜಮ್ಮು ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾರವರೆ ಕೊಲೆಯ ಹೊಣೆ ಹೊರಬೇಕೆಂದು ಪೀಪಲ್ಸ್ ಆಂಟಿ ಫ್ಯಾಸಿಸ್ಟ್ ಫ್ರಂಟ್ ಎಂಬ ತೀವ್ರವಾದಿ ಸಂಘಟನೆ ಹೇಳಿಕೆ ನೀಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪ್ರಾಥಮಿಕ ವಿಚಾರಣೆ ಮತ್ತು ಸಿಸಿಟಿವಿ ದಾಖಲೆಗಳ ಪ್ರಕಾರ 57 ವರ್ಷದ ಪೊಲೀಸ್ ಅಧಿಕಾರಿಯ ಸಹಾಯಕನಾಗಿದ್ದ 23 ವರ್ಷದ ಯಾಸಿರ್ ಅಹಮದ್ ಕಣ್ಮರೆಯಾಗಿದ್ದು, ಆತನೆ ಕೊಲೆಗೈದಿರಬೇಕು ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ ಕೊಲೆ ಹಿಂದೆ ಭಯೋತ್ಪಾದನಾ ನಂಟನ್ನು ತಳ್ಳಿ ಹಾಕಿದ್ದಾರೆ.

ಘಟನಾ ಸ್ಥಳದಲ್ಲಿ ಹೊಡೆದ ಕೆಚಪ್ ಬಾಟೆಲ್ ಪತ್ತೆಯಾಗಿದ್ದು, ಅದರಿಂದ ಕತ್ತು ಸೀಳಿರಬೇಕೆಂದು ಪೊಲೀಸರು ಊಹಿಸಿದ್ದಾರೆ. ಅಲ್ಲದೆ ಯಾಸಿರ್ ಅಹಮದ್‌ನ ಡೈರಿಯೊಂದು ದೊರಕಿದ್ದು ಆತ ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿ ಮುಖೇಶ್ ಸಿಂಗ್ ಎಂಬುವವರು ಮಾತನಾಡಿ, “ಲೋಹಿಯಾರವರ ಕಾಲಿಗೆ ಎಣ್ಣೆ ಹಚ್ಚುವಾಗ ಅವರ ಮೇಲೆ ದಾಳಿ ನಡೆದಿದೆ. ಕೆಚಪ್ ಬಾಟೆಲ್‌ನಿಂದ ಕತ್ತು ಸೀಳಿ ನಂತರ ಬೆಂಕಿ ಹಚ್ಚಲಾಗಿದೆ. ಲೋಹಿಯಾ ಇದ್ದ ಕೊಠಡಿಯು ಒಳಗಿನಿಂದ ಚಿಲಕ ಹಾಕಲಾಗಿತ್ತು. ಬೆಂಕಿ ಕಾಣಿಸಿಕೊಂಡ ನಂತರ ರಕ್ಷಣಾ ಸಿಬ್ಬಂದಿ ಬಾಗಿಲು ಮುರಿದು ಒಳ ಪ್ರವೇಶಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಯಾಸಿರ್ ಅಹಮದ್ ಆರು ತಿಂಗಳಿನಿಂದ ಲೋಹಿಯಾರವರ ಮನೆಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ಆತ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ. ಆತನು ಓಡಿ ಹೋಗಿರುವುದು ಸಿಸಿಟಿವಿ ಯಲ್ಲಿ ದಾಖಲಾಗಿದೆ. ಆತನ ಬಂಧನಕ್ಕಾಗಿ ಫೋಟೊವನ್ನು ಎಲ್ಲಾ ಕಡೆ ಕಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ವಶಪಡಿಸಿಕೊಂಡಿರುವ ಡೈರಿಯಲ್ಲಿ “ಆತ್ಮೀಯ ಸಾವೆ ನನ್ನ ಜೀವನದಲ್ಲಿಯೂ ಬಾ, ದಯವಿಟ್ಟು ಕ್ಷಮಿಸಿ, ಇದು ನನ್ನ ಕೆಟ್ಟ ದಿನ, ತಿಂಗಳು, ವರ್ಷ. ನನ್ನ ಜೀವನವನ್ನು ನಾನು ದ್ವೇಷಿಸುತ್ತೇನೆ. ನನ್ನ ಜೀವನ 1%, ಪ್ರೀತಿ 0%, ಒತ್ತಡ 90%, ದುಃಖ 99%, ನಾಟಕೀಯ ನಗು 100%” ಎಂದೆಲ್ಲ ಬರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: FLASHBACK| ಪರೇಶ್ ಮೇಸ್ತಾ ಸಾವಾದಾಗ ಬಿಜೆಪಿ ನಾಯಕರು ವರ್ತಿಸಿದ್ದು‌ ಹೀಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...