Homeಮುಖಪುಟಬೆಳಗಾವಿ ಮುಸ್ಲಿಂ ಯುವಕನ ಕೊಲೆ ಪ್ರಕರಣ: ಶ್ರೀರಾಮ ಸೇನೆ ಮುಖಂಡ ಸೇರಿ 10 ಜನರ ಬಂಧನ

ಬೆಳಗಾವಿ ಮುಸ್ಲಿಂ ಯುವಕನ ಕೊಲೆ ಪ್ರಕರಣ: ಶ್ರೀರಾಮ ಸೇನೆ ಮುಖಂಡ ಸೇರಿ 10 ಜನರ ಬಂಧನ

ಹಿಂದೂ ಯುವತಿಯನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಆತನನ್ನು ಕೊಲೆಗೈಯಲಾಗಿದೆ ಮತ್ತು ಹುಡುಗಿಯ ಕುಟುಂಬಸ್ಥರು ಕೊಲೆಗೆ ಸುಪಾರಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

ಅರ್ಬಾಜ್ ಮುಲ್ಲಾ ಎಂಬ ಮುಸ್ಲಿಂ ಯುವಕನನ್ನು ಬರ್ಬರವಾಗಿ ಕೊಲೆಗೈದು, ತಲೆ ಮತ್ತು ಕಾಲುಗಳನ್ನು ಕತ್ತರಿಸಿ ಬೆಳಗಾವಿ ಜಿಲ್ಲೆಯ ಖಾನಪುರದ ರೈಲ್ವೆ ಹಳಿ ಮೇಲೆ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಹಿಂದೂಸ್ತಾನ್ ಸಂಘಟನೆಯ ಮುಖ್ಯಸ್ಥ ಪುಂಡಲಿಕ್ ಮಹಾರಾಜ್ ಮುಟ್ಗೇಕರ್ ಸೇರಿದಂತೆ ಒಟ್ಟು 10 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅವರಲ್ಲಿ ಅರ್ಬಾಜ್ ಪ್ರೀತಿಸುತ್ತಿದ್ದ ಹುಡುಗಿಯ ಕುಟುಂಬಸ್ಥರು ಸೇರಿದ್ದಾರೆ.

ಸೆಪ್ಟಂಬರ್ 29 ರಂದು ಅರ್ಬಾಜ್ ಮುಲ್ಲಾ ಎಂಬ ಯುವಕನ ಛಿದ್ರವಾದ ಶವ ಪತ್ತೆಯಾಗಿತ್ತು. ಹಿಂದೂ ಯುವತಿಯನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಅವರನ್ನು ಕೊಲೆಗೈಯಲಾಗಿದೆ ಮತ್ತು ಹುಡುಗಿಯ ಕುಟುಂಬಸ್ಥರು ಕೊಲೆಗೆ ಸುಪಾರಿ ನೀಡಿದ್ದಾರೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದೇ ಆರೋಪವನ್ನು ಕೊಲೆ ನಡೆದ ದಿನದಿಂದಲೇ ಅರ್ಬಾಜ್ ತಾಯಿ ನಜೀಮ ಶೇಖ್ ಮಾಡಿದ್ದರು.

ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ನಿವಾಸಿ ಅರ್ಬಾಜ್ ಅಫ್ತಾಬ್ ಮುಲ್ಲಾ (24) ಸೆಪ್ಟಂಬರ್ 28 ರಿಂದ ಕಾಣೆಯಾಗಿದ್ದನು ಎಂದು ಅವರ ಪೋಷಕರು ದೂರಿದ್ದರು. ಅವರ ತಾಯಿ ನಜೀಮ ಶೇಖ್ ‘ಶ್ರೀರಾಮಸೇನೆ ಹಿಂದೂಸ್ತಾನ್’ ಎನ್ನುವ ಸಂಘಟನೆಯ ಯುವಕರು ನನ್ನ ಮಗನಿಗೆ ಬೆದರಿಕೆ ಹಾಕಿದ್ದರು. ಹುಡುಗಿಯೊಂದಿಗೆ ಸೇರಿ ಹಣ ವಸೂಲಿ ಮಾಡಿದ್ದರು ಎಂದು ದೂರಿದ್ದರು.

2018ರಲ್ಲಿ ಶ್ರೀರಾಮ ಸೇನೆಯಿಂದ ಹೊರಬಂದು ಶ್ರೀರಾಮಸೇನೆ ಹಿಂದೂಸ್ತಾನ್ ಎಂಬ ಸಂಘಟನೆ ಕಟ್ಟಿಕೊಂಡಿದ್ದ ಪುಂಡಲಿಕ್ ಮಹಾರಾಜ್ ಮುಟ್ಗೇಕರ್ ಈ ಪ್ರಕರಣದ ಪ್ರಮುಖ ಆರೋಪಿ ಎನ್ನಲಾಗಿದೆ. ಹುಡುಗಿಯ ಪೋಷಕರಾದ ಶುಶೀಲ ಈರಪ್ಪ (42) ಮತ್ತು ಈರಪ್ಪ ಬಸವಣ್ಣಿ ಕುಂಬಾರ (54) ಅರ್ಬಾಜ್‌ನನ್ನು ಕೊಲೆಗೈಯಲು ಗುತ್ತಿಗೆ ಕೊಲೆಗಾರರನ್ನು ನೇಮಿಸಿಕೊಂಡಿದ್ದಾರೆ ಎಂದು ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುಥಬುದ್ಧಿನ್ ಅಲ್ಲಾಬಕ್ಷ್ (36), ಮಾರುತಿ ಪ್ರಹ್ಲಾದ್ (30), ಮಂಜುನಾಥ್ ತುಕಾರಾಂ (25), ಗಣಪತಿ ಜ್ಞಾನೇಶ್ವರ (27), ಪ್ರಶಾಂತ್ ಕಲ್ಲಪ್ಪ (28) ಮತ್ತು ಪ್ರವೀಣ್ ಶಂಕರ್ (28)  ಮತ್ತು ಶ್ರೀಧರ್ ಮಹದೇವದೋಣಿ (30) ಇತರ ಬಂಧಿತರಾಗಿದ್ದಾರೆ.

ದಿ ಟೆಲಿಗ್ರಾಫ್‌ನೊಂದಿಗೆ ಮಾತನಾಡಿರುವ ಉರ್ದು ಶಾಲೆಯ ಶಿಕ್ಷಕಿಯಾಗಿರುವ ನಜೀಮ ಶೇಖ್ “ನನ್ನ ಮಗ ಅರ್ಬಾಜ್, ಕುಂಬಾರ್ ಎಂಬುವವರ ಮಗಳನ್ನು ಪ್ರೀತಿಸುತ್ತಿರುವುದು ತಿಳಿದುಬಂದಿತ್ತು. ಆಗ ನಾನು ಅದನ್ನು ತಪ್ಪಿಸಲು ನಮ್ಮ ಮನೆಯಿಂದ ಖಾನಪುರದಿಂದ ಬೆಳಗಾವಿಗೆ ಬದಲಿಸಿದ್ದೆ. ಇದೆಲ್ಲ ಸರಿ ಬರುವುದಿಲ್ಲವೆಂದು ಬುದ್ದಿವಾದ ಹೇಳಿದ್ದೆ. ಆದರೆ ಒಂದು ದಿನ ಕುಂಬಾರ್‌ನೊಂದಿಗೆ ಶ್ರೀರಾಮ ಸೇನೆಯ ಪುಂಡಲಿಕ್ ಮಹಾರಾಜ್, ಬಿರ್ಜೆ ಎಂಬುವವರ ಬಂದು ನಮಗೆ ಧಮಕಿ ಹಾಕಿದರು. ಕೊಲೆ ಬೆದರಿಕೆ ಹಾಕಿದರು. ನನ್ನ ಮಗನ ಫೋನ್ ಕಿತ್ತುಕೊಂಡು ಎಲ್ಲಾ ನಂಬರ್ ಗಳನ್ನು ಡಿಲೀಟ್ ಮಾಡಿದ್ದರು” ಎಂದಿದ್ದಾರೆ.

ಆಗ ನನ್ನ ಮಗ ಆ ಹುಡುಗಿಯನ್ನು ಮರೆತಿದ್ದ. ಆದರೆ ಸೆಪ್ಟಂಬರ್ 26 ರಂದು ಪುಂಡಲಿಕ್ ಮಹಾರಾಜ್ ಬಂದು ನಮ್ಮಲ್ಲಿ ಮತ್ತೆ ಜಗಳ ಮಾಡಿದ್ದರು. ಈಗಾಗಲೇ ನನ್ನ ಮೇಲೆ 40 ಪ್ರಕರಣಗಳಿವೆ. ಇನ್ನೊಂದು ಆದರೆ ದೊಡ್ಡದೇನಲ್ಲ ಎಂದು ಬೆದರಿಸಿದ್ದ. ಅದೇ ಸಮಯಕ್ಕೆ ಆ ಹುಡುಗಿ ಫೋನ್ ಮಾಡಿ 7,000 ಹಣದ ಬೇಡಿಕೆ ಇಟ್ಟಿದ್ದಳು. ನಾವದನ್ನು ಪಾವತಿಸಿದೆವು. ನಂತರ ಮತ್ತೆ 90,000 ಬೇಡಿಕೆ ಇಟ್ಟಿದ್ದಳು. ಆಗ ನನ್ನ ಮಗ ತನ್ನ ಕಾರನ್ನು 70,000 ರೂಗೆ ಮಾರಿದ್ದ. ಆ ಹಣ ಎಲ್ಲಿಗೆ ಹೋಯಿತು ಎಂದು ತಿಳಿದಿಲ್ಲ, ನನ್ನ ಮಗನನ್ನೂ ಕಳೆದುಕೊಂಡೆ ಎಂದು ಅವರು ಕಣ್ಣೀರು ಹಾಕಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶ: ದಲಿತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ, ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...